AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Somvati Amavasya 2024: ದಾಂಪತ್ಯದಲ್ಲಿ ಸದಾಕಾಲ ಸಂತೋಷ ನೆಲೆಸಲು ವರ್ಷದ ಕೊನೆಯಲ್ಲಿ ಈ ರೀತಿ ಮಾಡಿ

ಪಂಚಾಂಗದ ಪ್ರಕಾರ, ಸೋಮವಾರ ಬರುವ ಸೋಮಾವತಿ ಅಮಾವಾಸ್ಯೆ ಅತ್ಯಂತ ಶುಭ ದಿನ. ಈ ದಿನ ಗಂಡ- ಹೆಂಡತಿ ಇಬ್ಬರೂ ಒಟ್ಟಿಗೆ ಅಶ್ವತ್ಥ ಮರಕ್ಕೆ ನೀರನ್ನು ಅರ್ಪಿಸುವುದರಿಂದ ದಾಂಪತ್ಯದಲ್ಲಿ ಸದಾಕಾಲ ಸಂತೋಷ ನೆಲೆಸುತ್ತದೆ ಎಂದು ನಂಬಲಾಗಿದೆ. ಇದಲ್ಲದೇ ಕಾಲಸರ್ಪ ದೋಷ ನಿವಾರಣೆಗೂ ಇದು ಸೂಕ್ತ ಸಮಯ.

Somvati Amavasya 2024: ದಾಂಪತ್ಯದಲ್ಲಿ ಸದಾಕಾಲ ಸಂತೋಷ ನೆಲೆಸಲು ವರ್ಷದ ಕೊನೆಯಲ್ಲಿ ಈ ರೀತಿ ಮಾಡಿ
Somavati Amavasya
ಅಕ್ಷತಾ ವರ್ಕಾಡಿ
|

Updated on:Dec 01, 2024 | 5:58 PM

Share

ಪಂಚಾಂಗದ ಪ್ರಕಾರ, ಸೋಮಾವತಿ ಅಮಾವಾಸ್ಯೆಯು ಸೋಮವಾರದಂದು ಬರುವ ವಿಶಿಷ್ಟ ಅಮಾವಾಸ್ಯೆಯಾಗಿದೆ. ಆಧ್ಯಾತ್ಮಿಕ ವಿಧಿಗಳು ಮತ್ತು ಸಮಾರಂಭಗಳಿಗೆ, ಸೋಮವಾರ ಮತ್ತು ಚಂದ್ರನ ಈ ಸಂಯೋಗವನ್ನು ಸಾಕಷ್ಟು ಅದೃಷ್ಟವೆಂದು ಪರಿಗಣಿಸಲಾಗುತ್ತದೆ. ಸೋಮಾವತಿ ಅಮಾವಾಸ್ಯೆಯಂದು ಉಪವಾಸ ಮಾಡುವುದರಿಂದ ಪತಿ ದೀರ್ಘಾಯುಷ್ಯ, ಮಕ್ಕಳ ಸಂತತಿ ಮತ್ತು ಪೂರ್ವಜರ ಆಶೀರ್ವಾದಂತಹ ಸಾಕಷ್ಟು ಲಾಭಗಳನ್ನು ಪಡೆಯಬಹುದು.

ಸೋಮಾವತಿ ಅಮಾವಾಸ್ಯೆಯಂದು ಪೂರ್ವಜರ ಶ್ರಾದ್ಧ, ತರ್ಪಣ ಮತ್ತು ಪಿಂಡ ದಾನ ಮಾಡಿದರೆ, ಜೀವನದಲ್ಲಿ ಎಲ್ಲಾ ದುಃಖಗಳು ಮತ್ತು ತೊಂದರೆಗಳು ದೂರವಾಗುತ್ತವೆ ಎಂದು ಹೇಳಲಾಗುತ್ತದೆ. ಡಿಸೆಂಬರ್ 2024 ರಲ್ಲಿ ಸೋಮವತಿ ಅಮವಾಸ್ಯೆ ಯಾವಾಗ ಬರುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಸೋಮಾವತಿ ಅಮವಾಸ್ಯೆ ಯಾವಾಗ?

ವರ್ಷದ ಕೊನೆಯ ಸೋಮಾವತಿ ಅಮವಾಸ್ಯೆ ಡಿಸೆಂಬರ್ 30 ರಂದು ಬರುತ್ತದೆ. ಈ ದಿನ ಪೂರ್ವಜರ ಆತ್ಮದ ತೃಪ್ತಿಗಾಗಿ ಶ್ರಾದ್ಧ ಆಚರಣೆಗಳನ್ನು ಮಾಡಲು ಮತ್ತು ಕಲಸರ್ಪ ದೋಷ ನಿವಾರಣೆಗೆ ಸೂಕ್ತವಾಗಿದೆ.

ವರ್ಷದ ಕೊನೆಯ ಸೋಮಾವತಿ ಅಮವಾಸ್ಯೆಯ ಮುಹೂರ್ತ:

ಪೌಷ ಅಮಾವಾಸ್ಯೆ ತಿಥಿಯು 30ನೇ ಡಿಸೆಂಬರ್ ಬೆಳಿಗ್ಗೆ 04:01 ಕ್ಕೆ ಪ್ರಾರಂಭವಾಗುತ್ತದೆ ಮತ್ತು ಮರುದಿನ 31ನೇ ಡಿಸೆಂಬರ್ 03:56 ಕ್ಕೆ ಮುಕ್ತಾಯವಾಗುತ್ತದೆ.

ಇದನ್ನೂ ಓದಿ: ಡಿಸೆಂಬರ್‌ ತಿಂಗಳಿನಲ್ಲಿ ಆಚರಿಸಲಾಗುವ ಹಬ್ಬಗಳು ಯಾವುವು? ಇಲ್ಲಿದೆ ಮಾಹಿತಿ

ಸೋಮಾವತಿ ಅಮಾವಾಸ್ಯೆ ಏಕೆ ವಿಶೇಷ?

ಸೋಮಾವತಿ ಅಮಾವಾಸ್ಯೆಯ ದಿನದಂದು ಶನಿಯು ಕಾಲಸರ್ಪ ದೋಷದಿಂದ ಮುಕ್ತಿ ಪಡೆಯಲು ಅತ್ಯಂತ ವಿಶೇಷವಾಗಿದೆ. ಶನಿಯ ಸಾಡೆ ಸತಿ ಮತ್ತು ಧೈಯ ದುಷ್ಪರಿಣಾಮಗಳನ್ನು ತಪ್ಪಿಸಲು, ಸೋಮಾವತಿ ಅಮಾವಾಸ್ಯೆಯಂದು ಶನಿ ದೇವರಿಗೆ ಸಾಸಿವೆ ಎಣ್ಣೆಯನ್ನು ಅರ್ಪಿಸಿ.

ಈ ದಿನ, ವೈವಾಹಿಕ ಜೀವನಕ್ಕಾಗಿ, ಪತಿ ಮತ್ತು ಹೆಂಡತಿ ಇಬ್ಬರೂ ಒಟ್ಟಿಗೆ ಅಶ್ವತ್ಥ ಮರಕ್ಕೆ ನೀರನ್ನು ಅರ್ಪಿಸಬೇಕು. ಅಲ್ಲದೆ, ‘ಓಂ ಪಿತೃಭ್ಯ: ನಮಃ’ ಮಂತ್ರವನ್ನು ಕನಿಷ್ಠ 108 ಬಾರಿ ಜಪಿಸಿ. ಇದರಿಂದ ಪತಿ-ಪತ್ನಿಯರ ಸಂಬಂಧ ಉತ್ತಮವಾಗಿರುತ್ತವೆ ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 5:55 pm, Sun, 1 December 24

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ