AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಸ್ಥಾನದಲ್ಲಿ ದೇವರ ದರ್ಶನ ಪಡೆದ ನಂತರ ಭಕ್ತರು ಹೊರಗಡೆ ಕಟ್ಟೆ ಮೇಲೆ ಕೆಲ ಹೊತ್ತು ಕುಳಿತುಕೊಳ್ಳಬೇಕು, ಏಕೆ?

ನಿಮ್ಮ ಕಣ್ಣುಗಳನ್ನು ದೇವರ ಸ್ವರೂಪದಿಂದ ತುಂಬಿಸಿಕೊಳೀ. ನೀವು ದರ್ಶನದ ನಂತರ ಹೊರಗೆ ಬಂದು ಕುಳಿತಾಗ ಕಣ್ಣು ಮುಚ್ಚಿಕೊಂಡು ನೀವು ನೋಡಿದ ದೇವರ ಆ ಸ್ವರೂಪವನ್ನು ಸ್ಮರಿಸಿ, ಧ್ಯಾನಿಸಿ.

ದೇವಸ್ಥಾನದಲ್ಲಿ ದೇವರ ದರ್ಶನ ಪಡೆದ ನಂತರ ಭಕ್ತರು ಹೊರಗಡೆ ಕಟ್ಟೆ ಮೇಲೆ ಕೆಲ ಹೊತ್ತು ಕುಳಿತುಕೊಳ್ಳಬೇಕು, ಏಕೆ?
ದೇವಸ್ಥಾನದಲ್ಲಿ ದೇವರ ದರ್ಶನದ ನಂತರ, ಹೊರಗಡೆ ಕಟ್ಟೆ ಮೇಲೆ ಭಕ್ತರು ಕೆಲ ಹೊತ್ತು ಕುಳಿತುಕೊಳ್ಳಬೇಕು, ಏಕೆ?
TV9 Web
| Edited By: |

Updated on: Sep 30, 2021 | 8:17 AM

Share

ದೇವಸ್ಥಾನಗಳಿಗೆ ಹೋದಾಗ ದೇವರ ದರುಶನ ಮುಗಿಸಿ ನಮಸ್ಕಾರ ಹಾಕಿದ ನಂತರ ದೇಗುಲದ ಹೊರಗೆ ಬಂದು ಸ್ವಲ್ಪಹೊತ್ತು ಹೊರಗಡೆ ಕಟ್ಟೆಯ ಮೇಲೋ ಅಥವಾ ದೇಗಿಲದ ಮೆಟ್ಟಿಲುಗಳ ಮೇಲೆಯೋ ಕುಳಿತು ಕೊಳ್ಳುವುದು ವಾಡಿಕೆ. ಆದರೆ ಕುಳಿತಾಗ ನಾವು ದರ್ಶನ ಮಾಡಿದ ದೇವರನ್ನು ನೆನಸಿಕೊಂಡು ಈ ಕೆಳಗಿನ ಶ್ಲೋಕ ಹೇಳಿಕೊಂಡು ಪ್ರಾರ್ಥಿಸಬೇಕು. ಇದನ್ನು ನಿರ್ದಿಷ್ಟ ಉದ್ದೇಶಕ್ಕಾಗಿ ಮಾಡಲಾಗಿದೆ.

ಶ್ಲೋಕ: 1. ಅನಾಯಾಸೇನ ಮರಣಂ 2. ವಿನಾ ದೈನೇನ ಜೀವನಂ 3. ದೇಹಾಂತ ತವ ಸಾನಿಧ್ಯಂ 4. ದೇಹಿಮೇ ಪರಮೇಶ್ವರಂ

ಈ ಶ್ಲೋಕದ ಅರ್ಥ: 1. ಅನಾಯಾಸೇನ ಮರಣಂ – ಅಂದರೆ ನಮ್ಮ ಜೀವನದ ಅಂತ್ಯ ಕಾಲದಲ್ಲಿ ಯಾವುದೇ ತೊಂದರೆಯಿಲ್ಲದೆ, ಅನಾಯಾಸವಾಗಿ ಸಾಯಬೇಕು. ಯಾವುದೇ ರೋಗರುಜಿನಗಳಿಂದ ನರಳದೆ, ಹಾಸಿಗೆಯ ಹಿಡಿಯುವಂತೆ ಆಗಬಾರದು. ದುಃಖದಿಂದ ಸಾಯಬಾರದು. ನಾವು ನಡೆದಾಡುವಾಗಲೇ ನಮ್ಮ ಜೀವನದ ಅಂತ್ಯ ಆಗಬೇಕು ಎಂಬ ಪ್ರಾರ್ಥನೆ ಇದಾಗಿದೆ.

2. ವಿನಾ ದೈನೇನ ಜೀವನಂ – ಅಂದರೆ ಎಂದಿಗೂ ಯಾರೊಂದಿಗೂ ಪರಾವಲಂಬಿಯಾಗಿ ಜೀವನ ನಡೆಸುವಂತಾಗಬಾರದು. ಒಬ್ಬ ವ್ಯಕ್ತಿಯು ಪಾರ್ಶ್ವವಾಯುವಿಗೆ ಒಳಗಾದಾಗ ಇತರರ ಮೇಲೆ ಅವಲಂಬಿತನಾಗುವಂತೆ ಅಸಹಾಯಕನಾಗಿರಬಾರದು. ದೇವರ ಕೃಪೆಯಿಂದ ಭಿಕ್ಷೆ ಬೇಡದೆ ಜೀವನ ನಡೆಸಬೇಕು ಎಂಬ ಪ್ರಾರ್ಥನೆ ಇದಾಗಿದೆ.

3. ದೇಹಾಂತ ತವ ಸಾನಿಧ್ಯಂ – ಅಂದರೆ ಸಾವು ಬಂದಾಗ ದೇವರು ಮುಂದೆ ಇರಬೇಕು. ಭೀಷ್ಮ ಪಿತಾಮಹ ಮರಣಶಯ್ಯೆಯಲ್ಲಿದ್ದಾಗ ಅಂದರೆ ತನ್ನ ಮರಣದ ಸಮಯದಲ್ಲಿ ದೇವರು (ಶ್ರೀಕೃಷ್ಣ) ಅವರ ಮುಂದೆ ನಿಂತಿದ್ದರು.  ಕೃಷ್ಣನನ್ನು ನೋಡಿಯೇ ಭೀಷ್ಮ ಪ್ರಾಣ ಬಿಟ್ಟರು.

4. ದೇಹಿಮೇ ಪರಮೇಶ್ವರಂ – ಅಂದರೆ ಓ ದೇವರೇ ನಮಗೆ ಇಂತಹ ವರವನ್ನು ಕರುಣಿಸು. ಹೀಗೆ ದೇಗುಲದ ಮುಂದೆ ಕುಳಿತು ದೇವರನ್ನು ಪ್ರಾರ್ಥಿಸುವಾಗ ನಾಲ್ಕು ಸಾಲಿನ ಮೇಲಿನ ಶ್ಲೋಕವನ್ನು ಪಠಿಸಬೇಕು.

ಕಾರು, ಬಂಗಲೆ, ಹುಡುಗ, ಹುಡುಗಿ, ಗಂಡ, ಹೆಂಡತಿ, ಮನೆ, ಹಣ ಇತ್ಯಾದಿಗಳನ್ನು ಕೇಳಬೇಡಿ (ಸಾಂಸಾರಿಕ ವಿಷಯಗಳು). ಇದನ್ನೆಲ್ಲ ನಿಮ್ಮ ಅರ್ಹತೆಗೆ ಅನುಗುಣವಾಗಿ ಈ ದೇವರು ನಿಮಗೆ ನೀಡುತ್ತಾನೆ. ಅದಕ್ಕಾಗಿಯೇ ದರ್ಶನ ಮಾಡಿದ ನಂತರ ಪ್ರತಿಯೊಬ್ಬರು ದೇಗುಲದ ಹೊರಗೆ ಕುಳಿತುಕೊಂಡು ಪ್ರಾರ್ಥಿಸಬೇಕು.

ಇದು ಪ್ರಾರ್ಥನೆ, ವಿಜ್ಞಾಪನೆ ಅಲ್ಲ. ವಿಜ್ಞಾಪನೆ ಅಂದರೆ ಅದು ಲೌಕಿಕ ವಿಷಯಗಳಿಗಾಗಿ ಇರುವುದು.  ಉದಾಹರಣೆಗೆ ಮನೆ, ವ್ಯವಹಾರ, ಉದ್ಯೋಗ, ಮಗ, ಮಗಳು, ಲೌಕಿಕ ಸುಖ, ಸಂಪತ್ತು ಅಥವಾ ಇತರ ವಿಷಯಗಳಿಗಾಗಿ ಮೊರೆಯಿಡುವುದು.

ಪ್ರಾರ್ಥನೆ ಎಂಬ ಪದದ ಅರ್ಥ ಬಿಡಿಸಿ ಹೇಳುವುದಾದರೆ ‘ಪ್ರಾ’ ಎಂದರೆ ‘ವಿಶೇಷ’, ವಿಶಿಷ್ಟ, ಉತ್ತಮ ಎಂದರ್ಥ. ಇನ್ನು ‘ಆರ್ಥನಾ’ ಎಂದರೆ ವಿನಂತಿ ಮಾಡುವುದು.  ಪ್ರಾರ್ಥನೆ ಎಂದರೆ ವಿಶೇಷ ವಿನಂತಿ.

ದೇವಾಲಯದಲ್ಲಿ ದೇವರ ದರ್ಶನವನ್ನು ಯಾವಾಗಲೂ ತೆರೆದ ಕಣ್ಣುಗಳಿಂದ ಮಾಡಬೇಕು. ಕೆಲವರು ಕಣ್ಣು ಮುಚ್ಚಿಕೊಂಡು ಅಲ್ಲಿ ನಿಲ್ಲುತ್ತಾರೆ.  ಏಕೆ ನಮ್ಮ ಕಣ್ಣುಗಳನ್ನು ಮುಚ್ಚಬೇಕು? ನಾವು ದೇವರ ದರ್ಶನಕ್ಕೆ ಬಂದಿದ್ದೇವೆ.  ದೇವರ ಸ್ವರೂಪವನ್ನು, ಪಾದಗಳಿಂದ ಮುಖದವರೆಗಿನ ಸೌಂದರ್ಯದ ಪೂರ್ಣ ಆನಂದವನ್ನು ಪಡೆಯಿರಿ.

ನಿಮ್ಮ ಕಣ್ಣುಗಳನ್ನು ದೇವರ ಸ್ವರೂಪದಿಂದ ತುಂಬಿಸಿಕೊಳೀ. ನೀವು ದರ್ಶನದ ನಂತರ ಹೊರಗೆ ಬಂದು ಕುಳಿತಾಗ ಕಣ್ಣು ಮುಚ್ಚಿಕೊಂಡು ನೀವು ನೋಡಿದ ದೇವರ ಆ ಸ್ವರೂಪವನ್ನು ಸ್ಮರಿಸಿ, ಧ್ಯಾನಿಸಿ.

(ಇಲ್ಲಿ ನೀಡಿರುವ ಮಾಹಿತಿಯು ಧಾರ್ಮಿಕ ಶ್ರದ್ಧಾಭಕ್ತಿಗೆ ಅನುಗುಣವಾಗಿ ಲೋಕಮಾನ್ಯ ರೀತಿಯಲ್ಲಿ ನೀಡಲಾಗಿದೆ. ಇದಕ್ಕೆ ಯಾವುದೇ ವೈಜ್ಞಾನಿಕ ಆಧಾರ ಇರುವುದಿಲ್ಲ. ಜನಸಾಮಾನ್ಯರನ್ನು ದೃಷ್ಟಿಯಲ್ಲಿಟ್ಟುಕೊಂಡು ಪ್ರಸ್ತುತ ಪಡಿಸಲಾಗಿದೆ)

Follow Us
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ