AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysterious temple: ಈ ನಿಗೂಢ ದೇವಾಲಯದಲ್ಲಿ ದೇವಿಯ ವಿಗ್ರಹ ದಿನಕ್ಕೆ ಮೂರು ಬಾರಿ ರೂಪ ಬದಲಾಯಿಸುತ್ತದೆ!

ಕಾಳಿ ದೇವಿಗೆ ಅರ್ಪಿತವಾಗಿರುವ ದೇವಾಲಯವು ಉತ್ತರಾಖಂಡದ ಗರ್ವಾಲ್ ಪ್ರದೇಶದಲ್ಲಿ, ಶ್ರೀನಗರ ಮತ್ತು ರುದ್ರಪ್ರಯಾಗ್ ನಡುವೆ ಅಲಕನಂದಾ ನದಿಯ ದಡದಲ್ಲಿದೆ. ಈ ಮಂದಿರವು ಶ್ರೀನಗರದಿಂದ 14 ಕಿ. ಮೀ. ದೂರದಲ್ಲಿದೆ. ಈ ದೇವಿಯ ಪವಾಡಗಳನ್ನು ನೋಡಲು ಭಕ್ತರು ಪ್ರತಿದಿನ ಈ ದೇವಾಲಯಕ್ಕೆ ಬರುತ್ತಾರೆ.

Mysterious temple: ಈ ನಿಗೂಢ ದೇವಾಲಯದಲ್ಲಿ ದೇವಿಯ ವಿಗ್ರಹ ದಿನಕ್ಕೆ ಮೂರು ಬಾರಿ ರೂಪ ಬದಲಾಯಿಸುತ್ತದೆ!
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 16, 2024 | 5:20 PM

Share

ಭಾರತವು ದೇವಾಲಯಗಳ ಬೀಡು. ಅನೇಕ ರೀತಿಯ ದೇವಾಲಯಗಳು ಇಲ್ಲಿವೆ. ಕೆಲವು ಮಂದಿರಗಳು ಅದರ ವೈಶಿಷ್ಟ್ಯಗಳಿಗೆ ಸುದ್ದಿಯಾಗಿದ್ದರೆ ಇನ್ನು ಕೆಲವು ಪವಾಡಗಳಿಗೆ ಹೆಸರುವಾಸಿಯಾಗಿವೆ, ಇಂತಹ ಒಂದು ಪವಾಡಸದೃಶ, ಕಾಳಿ ದೇವಿಗೆ ಅರ್ಪಿತವಾಗಿರುವ ದೇವಾಲಯವು ಉತ್ತರಾಖಂಡದ ಗರ್ವಾಲ್ ಪ್ರದೇಶದಲ್ಲಿ, ಶ್ರೀನಗರ ಮತ್ತು ರುದ್ರಪ್ರಯಾಗ್ ನಡುವೆ ಅಲಕನಂದಾ ನದಿಯ ದಡದಲ್ಲಿದೆ. ಈ ಮಂದಿರವು ಶ್ರೀನಗರದಿಂದ 14 ಕಿ. ಮೀ. ದೂರದಲ್ಲಿದೆ. ಈ ದೇವಿಯ ಪವಾಡಗಳನ್ನು ನೋಡಲು ಭಕ್ತರು ಪ್ರತಿದಿನ ಈ ದೇವಾಲಯಕ್ಕೆ ಬರುತ್ತಾರೆ. ಇಲ್ಲಿರುವ ಧಾರಿ ದೇವಿಯು ಉತ್ತರಾಖಂಡವನ್ನು ರಕ್ಷಿಸುತ್ತಾಳೆ ಎಂಬ ನಂಬಿಕೆ ಇದೆ. ಆದ್ದರಿಂದ, ಈ ದೇವಿಯನ್ನು ಪರ್ವತ ಮತ್ತು ಯಾತ್ರಾರ್ಥಿಗಳನ್ನು ರಕ್ಷಿಸುವ ದೇವತೆ ಎಂದು ಹೇಳಲಾಗುತ್ತದೆ. ಧಾರಿ ದೇವಿಯ ವಿಗ್ರಹದ ಮೇಲಿನ ಅರ್ಧ ಭಾಗವು ಈ ದೇವಾಲಯದಲ್ಲಿದೆ, ಆದರೆ ವಿಗ್ರಹದ ಕೆಳಗಿನ ಅರ್ಧ ಭಾಗ ಕಾಳಿಮಠದಲ್ಲಿದೆ, ಅಲ್ಲಿ ಅವಳನ್ನು ಕಾಳಿ ದೇವಿಯ ರೂಪವಾಗಿ ಪೂಜಿಸಲಾಗುತ್ತದೆ ಎಂಬ ಪ್ರತೀತಿ ಇದೆ.

ಈ ವಿಗ್ರಹ ದಿನಕ್ಕೆ ಮೂರು ಬಾರಿ ರೂಪ ಬದಲಾಯಿಸುತ್ತದೆ!

ನಂಬಿಕೆಯ ಪ್ರಕಾರ, ಈ ದೇವಾಲಯದಲ್ಲಿರುವ ಮಾತೆ ಧಾರಿಯ ವಿಗ್ರಹವು ದಿನಕ್ಕೆ ಮೂರು ಬಾರಿ ತನ್ನ ರೂಪವನ್ನು ಬದಲಾಯಿಸುತ್ತದೆ. ಈ ದೇವಿಯ ವಿಗ್ರಹವು ಬೆಳಿಗ್ಗೆ ಹುಡುಗಿಯಂತೆ, ನಂತರ ಮಧ್ಯಾಹ್ನ ಚಿಕ್ಕ ಹುಡುಗಿಯಂತೆ ಮತ್ತು ಸಂಜೆ ಮುದುಕಿಯಂತೆ ಕಾಣುತ್ತದೆ. ವಿಗ್ರಹ ದಿನಕ್ಕೆ ಮೂರು ಬಾರಿ ರೂಪ ಬದಲಾಯಿಸುವ ದೃಶ್ಯವು ನಿಜವಾಗಿಯೂ ಆಶ್ಚರ್ಯಕರವಾಗಿರುತ್ತದೆ.

ದೇವಾಲಯದ ಇತಿಹಾಸವೇನು?

ದಂತಕಥೆಯ ಪ್ರಕಾರ, ಒಮ್ಮೆ ಮಾತೆಯ ದೇವಾಲಯವು ತೀವ್ರ ಪ್ರವಾಹದಿಂದ ಕೊಚ್ಚಿ ಹೋಯಿತು. ಬಳಿಕ ಧರೋ ಎಂಬ ಗ್ರಾಮದ ಬಳಿ ಬಂಡೆಗೆ ಡಿಕ್ಕಿ ಹೊಡೆದು ಪ್ರತಿಮೆ ಅಲ್ಲಿಯೇ ನಿಂತಿತು. ಆಗ ಆ ವಿಗ್ರಹದಿಂದ ಒಂದು ದೈವಿಕ ಧ್ವನಿ ಕೇಳಿಸಿತು ಎಂದು ಹೇಳಲಾಗುತ್ತದೆ, ಇದು ಗ್ರಾಮಸ್ಥರಿಗೆ ವಿಗ್ರಹವನ್ನು ಅದೇ ಸ್ಥಳದಲ್ಲಿ ಪ್ರತಿಷ್ಠಾಪನೆ ಮಾಡಲು ಸೂಚನೆ ನೀಡಿತು. ಇದರ ನಂತರ, ಧರೋ ಗ್ರಾಮದ ಜನರು ಒಟ್ಟಾಗಿ ಅಲ್ಲಿ ಮಾತಾ ದೇವಾಲಯವನ್ನು ನಿರ್ಮಿಸಿದರು. ಪುರೋಹಿತರ ಪ್ರಕಾರ, ದ್ವಾಪರಯುಗದಲ್ಲಿಯೇ ಈ ದೇವಾಲಯವನ್ನು ನಿರ್ಮಾಣ ಮಾಡಲಾಗಿದೆ. ಅಂದಿನಿಂದ ಇಲ್ಲಿಯವರೆಗೂ ಈ ತಾಯಿ ಅಲ್ಲಿನ ಜನರನ್ನು ರಕ್ಷಿಸುತ್ತಾ ಬಂದಿದ್ದಾಳಂತೆ.

ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರದಲ್ಲಿ ಸೂರ್ಯರಶ್ಮಿ ಪ್ರಯೋಗ, ಎಲ್ಲೆಲ್ಲಿ ನಡೆದಿದೆ ಈ ಪ್ರಯೋಗ?

ದೇವಾಲಯ ನೆಲಸಮಗೊಳಿಸಿದಾಗ ಬಂತು ಭೀಕರ ಪ್ರವಾಹ!

2013 ರಲ್ಲಿ ಮಾತೆ ಧಾರಿ ದೇವಾಲಯವನ್ನು ನೆಲಸಮಗೊಳಿಸಲಾಯಿತು ಬಳಿಕ ಅಲ್ಲಿದ್ದ ವಿಗ್ರಹವನ್ನು ಮೂಲ ಸ್ಥಾನದಿಂದ ತೆಗೆಯಲಾಯಿತು. ಈ ಕಾರಣದಿಂದಾಗಿ 2013 ರಲ್ಲಿ ಉತ್ತರಾಖಂಡದಲ್ಲಿ ಭೀಕರ ಪ್ರವಾಹ ಸಂಭವಿಸಿತು, ಇದರಲ್ಲಿ ಸಾವಿರಾರು ಜನರು ಸಾವನ್ನಪ್ಪಿದರು. ದೇವಿಯ ಪ್ರತಿಮೆಯನ್ನು 2013 ಜೂನ್ 16ರ ಸಂಜೆ ತೆಗೆಯಲಾಯಿತು ಅದಾದ ಕೆಲವೇ ಗಂಟೆಗಳ ನಂತರ ಪ್ರವಾಹ ದುರಂತ ರಾಜ್ಯವನ್ನು ಅಪ್ಪಳಿಸಿತು. ನಂತರ ಅದೇ ಸ್ಥಳದಲ್ಲಿ ಈ ದೇವಾಲಯವನ್ನು ಮತ್ತೆ ನಿರ್ಮಿಸಲಾಯಿತು.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ