AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಂಪತಿ ಸಮೇತ ಬ್ರಹ್ಮೋತ್ಸವದಲ್ಲಿ ಪಾಲ್ಗೊಂಡು ಜಗನ್ ಸರಕಾರದ ತಪ್ಪಿಗೆ ಹರಕೆ ತೀರಿಸಿದ್ರಾ ಸಿಎಂ ಚಂದ್ರಬಾಬು

ನಿನ್ನೆ ಶುಕ್ರವಾರ ತಿರುಮಲ ಬೆಟ್ಟದಲ್ಲಿ ವಾರ್ಷಿಕ ಬ್ರಹ್ಮೋತ್ಸವ ಕಾರ್ಯಕ್ರಮಗಳ ಸಂಭ್ರಮ ಸಡಗರ ಮುಗಿಲುಮುಟ್ಟಿತ್ತು. ಸಿಎಂ ಚಂದ್ರಬಾಬು ನಾಯ್ಡು ಅವರು ದಾಖಲೆಯ ಪ್ರಮಾಣದಲ್ಲಿ 14ನೇ ಬಾರಿಗೆ ಶ್ರೀ ವೆಂಕಟೇಶ್ವರ ಸ್ವಾಮಿ ಬ್ರಹ್ಮೋತ್ಸವ ಸೇವೆಗಳಲ್ಲಿ ಪಾಲ್ಗೊಂಡಿದ್ದರು. ತನ್ಮೂಲಕ ಹಿಂದಿನ ಸರ್ಕಾರದಲ್ಲಿ ಜರುಗಿತ್ತು ಎನ್ನಲಾದ ಪ್ರಮಾದಕ್ಕೆ ಪ್ರಾಯಶ್ಚಿತ್ತ ಮಾಡಿಕೊಂಡಂತಿತ್ತು ಅವರು ನಿನ್ನೆ ಸಲ್ಲಿಸಿದ ಸೇವೆಗಳನ್ನು ನೋಡಿದಾಗ.

ದಂಪತಿ ಸಮೇತ ಬ್ರಹ್ಮೋತ್ಸವದಲ್ಲಿ ಪಾಲ್ಗೊಂಡು ಜಗನ್ ಸರಕಾರದ ತಪ್ಪಿಗೆ ಹರಕೆ ತೀರಿಸಿದ್ರಾ ಸಿಎಂ ಚಂದ್ರಬಾಬು
ದಂಪತಿ ಸಮೇತ ಬ್ರಹ್ಮೋತ್ಸವದಲ್ಲಿ ಪಾಲ್ಗೊಂಡ ಸಿಎಂ ಚಂದ್ರಬಾಬು
Follow us
ಸಾಧು ಶ್ರೀನಾಥ್​
|

Updated on:Oct 05, 2024 | 9:20 AM

ಆಂಧ್ರದ ಹಿಂದಿನ ಮುಖ್ಯಮಂತ್ರಿ ಜಗನ್​ ಬಾಬು ಸರ್ಕಾರದ ಅವಧಿಯಲ್ಲಿ ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಕಲಬೆರಕೆ ಮಾಡಲಾಗುತ್ತಿತ್ತು ಎಂದು ಸಾರಿದ್ದ ಹಾಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ನಿನ್ನೆ ಶುಕ್ರವಾರ ದಂಪತಿ ಸಮೇತ ತಿರುಮಲ ಬೆಟ್ಟದಲ್ಲಿ ಪ್ರಾರಂಭವಾದ ಬ್ರಹ್ಮೋತ್ಸವಗಳಲ್ಲಿ ಪಾಲ್ಗೊಂಡಿದ್ದರು. ಶ್ರೀ ವೆಂಕಟೇಶ್ವರ ದೇವರಿಗೆ ಹತ್ತು ವಸ್ತ್ರಗಳನ್ನು ಅರ್ಪಿಸಿದರು. ತನ್ಮೂಲಕ ಹಿಂದಿನ ಸರ್ಕಾರದಲ್ಲಿ ಜರುಗಿತ್ತು ಎನ್ನಲಾದ ಪ್ರಮಾದಕ್ಕೆ ಪ್ರಾಯಶ್ಚಿತ್ತ ಮಾಡಿಕೊಂಡಂತಿತ್ತು ಸಿಎಂ ಚಂದ್ರಬಾಬು ನಾಯ್ಡು ಅವರು ನಿನ್ನೆ ಸಲ್ಲಿಸಿದ ಸೇವೆಗಳನ್ನು ನೋಡಿದಾಗ.

ಇದೇ ವೇಳೆ, ತಿರುಪತಿ ತಿರುಮಲ ಬೆಟ್ಟದಲ್ಲಿ ನಿನ್ನೆ ಶುಕ್ರವಾರ ಶ್ರೀವಾರಿ ಬ್ರಹ್ಮೋತ್ಸವ ಕಾರ್ಯಕ್ರಮಗಳು ಭಕ್ತರ ಸಂಭ್ರಮ ಸಡಗರಗಳ ಮಧ್ಯೆ ವಿಜೃಂಭಣೆಯಿಂದ ಪ್ರತಿವರ್ಷದಂತೆ ಆರಂಭವಾದವು. ಆಂಧ್ರಪ್ರದೇಶ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ಅವರು ರಾಜ್ಯ ಸರ್ಕಾರದ ಪರವಾಗಿ ತಿರುಮಲ ವೇಂಕಟೇಶ್ವರನಿಗೆ ದಶ ರೇಷ್ಮೆ ವಸ್ತ್ರಗಳನ್ನು ಅರ್ಪಿಸಿದರು.

Also Readತಿರುಪತಿ ತಿಮ್ಮಪ್ಪನಿಗೆ ಕಲಿಯುಗದ ಭಕ್ತರು ಮುಡಿ ಕೊಡುತ್ತಾರೆ, ಏಕೆ? ಪುರಾಣ ಐತಿಹ್ಯ ಏನು?

ಶ್ರೀವಾರಿ ಸಾಲಕಟ್ಲ ಬ್ರಹ್ಮೋತ್ಸವದ ಅಂಗವಾಗಿ ಸಂಜೆ 5.45ರಿಂದ 6ರ ನಡುವೆ ಮೀನ ಲಗ್ನದಲ್ಲಿ ಶಾಸ್ತ್ರೋಕ್ತವಾಗಿ ಧ್ವಜಾರೋಹಣ ನೆರವೇರಿಸಿದರು. ಆಂಧ್ರ ಸಿಎಂ ಚಂದ್ರಬಾಬು ದಂಪತಿ ವೇಂಕಣ್ಣನಿಗೆ ರೇಷ್ಮೆ ವಸ್ತ್ರ ಸಮರ್ಪಿಸಿದರು. ರಾತ್ರಿ 7.55ಕ್ಕೆ ಬೇಡಿ ಆಂಜನೇಯಸ್ವಾಮಿ ದೇವಸ್ಥಾನ ತಲುಪಿದ ಚಂದ್ರಬಾಬು ದಂಪತಿ ರಾಜ್ಯ ಸರ್ಕಾರದ ಪರವಾಗಿ 14ನೇ ಬಾರಿಗೆ ಶ್ರೀ ವೆಂಕಟೇಶ್ವರ ಸ್ವಾಮಿಗೆ ರೇಷ್ಮೆ ವಸ್ತ್ರಗಳನ್ನು ಅರ್ಪಿಸಿದರು.

ಬೇಡಿ ಆಂಜನೇಯಸ್ವಾಮಿ ದೇವಸ್ಥಾನದಿಂದ ಮಂಗಳವಾದ್ಯಗಳ ಮೆರವಣಿಗೆಯಲ್ಲಿ ಸಾಗಿಬಂದು ಶ್ರೀವಾರಿ ದೇವಸ್ಥಾನ ತಲುಪಿದರು. ದೇವಸ್ಥಾನದ ಮುಖ್ಯದ್ವಾರದಲ್ಲಿ ಟಿಟಿಡಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೆ. ಶ್ಯಾಮಲಾ ರಾವ್ ಹಾಗೂ ಹೆಚ್ಚುವರಿ ಇಒ ಸಿ.ಎಚ್. ವೆಂಕಯ್ಯ ಚೌಧರಿ ಬಾಬು ದಂಪತಿಯನ್ನು ಸ್ವಾಗತಿಸಿದರು.

ಬಳಿಕ ಧ್ವಜಸ್ತಂಭಕ್ಕೆ ನಮಿಸಿ ವೇಂಕಟೇಶ್ವರನ ದರ್ಶನ ಪಡೆದರು. ವಕುಳಳಾಮಾತ, ವಿಮಾನ ವೇಂಕಟೇಶ್ವರಸ್ವಾಮಿ, ಭಾಷ್ಯಕರ್ಲ ಸನ್ನಿಧಿ, ಯೋಗ ನರಸಿಂಹಸ್ವಾಮಿ ದರ್ಶನ ಪಡೆದರು. ನಂತರ ರಂಗನಾಯಕ ಮಂಟಪದಲ್ಲಿ ವೈದಿಕರು ವೇದ ಮಂತ್ರ ಪಠಿಸುವ ಮೂಲಕ ದಂಪತಿಗೆ ಆಶೀರ್ವಚನ ನೀಡಿದರು. ಇಒ ಶ್ಯಾಮಲಾ ರಾವ್ ಅವರು ಶ್ರೀವಾರಿಯ ತೀರ್ಥ ಪ್ರಸಾದವನ್ನು ಸಿಎಂಗೆ ಹಸ್ತಾಂತರಿಸಿದರು. ಸಿಎಂ ಜತೆ ರಾಜ್ಯ ಸಾಲ ಮತ್ತು ದತ್ತಿ ಇಲಾಖೆಯ ಸಚಿವ ಅನಂ ರಾಮ್ ನಾರಾಯಣ ರೆಡ್ಡಿ ಸೇರಿದಂತೆ ಹಲವು ಅಧಿಕಾರಿಗಳು, ಶಾಸಕರು ಇದ್ದರು.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:34 am, Sat, 5 October 24

ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ದೆಹಲಿ ಮೆಟ್ರೋದೊಳಗೆ ಬಂದಿತ್ತೇ ಹಾವು?
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ