AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ದೇವರು ಮೆಚ್ಚಿ ಸಹಾಯ ಮಾಡಬೇಕೆಂದರೆ ನಿಮ್ಮಲ್ಲಿ ಇರಬೇಕಾದ ಗುಣಗಳೇನು?

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ ಬಸವರಾಜ ಗುರೂಜಿಯವರು "ದೇವರು ಯಾರಿಗೆ ಸಹಾಯ ಮಾಡುತ್ತಾನೆ?" ಎಂಬ ಪ್ರಮುಖ ಪ್ರಶ್ನೆಗೆ ಉತ್ತರಿಸಿದ್ದಾರೆ. ಶ್ಲೋಕದ ಪ್ರಕಾರ, ಉದ್ಯಮ, ಸಾಹಸ, ಧೈರ್ಯ, ಬುದ್ಧಿ, ಶಕ್ತಿ ಮತ್ತು ಪರಾಕ್ರಮ ಇರುವವರಿಗೆ ದೇವರ ಅನುಗ್ರಹ ಲಭ್ಯವಾಗುತ್ತದೆ. ಕಷ್ಟಪಟ್ಟು ಕೆಲಸ ಮಾಡುವವರು ಮತ್ತು ದಾನ ಧರ್ಮಗಳಲ್ಲಿ ತೊಡಗುವವರಿಗೆ ದೇವರು ಸಹಾಯ ಮಾಡುತ್ತಾನೆ ಎಂದು ಅವರು ಹೇಳಿದ್ದಾರೆ.

Daily Devotional: ದೇವರು ಮೆಚ್ಚಿ ಸಹಾಯ ಮಾಡಬೇಕೆಂದರೆ ನಿಮ್ಮಲ್ಲಿ ಇರಬೇಕಾದ ಗುಣಗಳೇನು?
Divine Assistance
ಅಕ್ಷತಾ ವರ್ಕಾಡಿ
|

Updated on:Jun 18, 2025 | 8:49 AM

Share

ಸಾಕಷ್ಟು ಜನರು ತಮ್ಮ ಆಸೆ ಕನಸನ್ನು ಈಡೇರಿಸಿಕೊಳ್ಳಲು ದೇವರ ಮೊರೆ ಹೋಗುತ್ತಾರೆ. ದೇವರನ್ನು ಮೆಚ್ಚಿಸಲು ವಿವಿಧ ರೀತಿಯ ಪೂಜೆ ಪರಿಹಾರಗಳನ್ನೂ ಮಾಡುವುದುಂಟು. ಇದಕ್ಕಾಗಿ ಸಾಕಷ್ಟು ಹಣವನ್ನೂ ಸುರಿಯುವವರಿದ್ದಾರೆ. ಆದರೆ “ದೇವರು ಯಾರಿಗೆ ಸಹಾಯ ಮಾಡುತ್ತಾನೆ?” ಎಂಬ ಪ್ರಮುಖ ಪ್ರಶ್ನೆಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ ಬಸವರಾಜ ಗುರೂಜಿಯವರು ತಮ್ಮ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಉತ್ತರಿಸಿದ್ದಾರೆ.

ಅನೇಕ ಜನರು ದೇವರು ತಮ್ಮನ್ನು ಕೈಬಿಟ್ಟಿದ್ದಾನೆ ಎಂದು ಭಾವಿಸುತ್ತಾರೆ. ಆದರೆ ಧರ್ಮಗ್ರಂಥಗಳು ಮತ್ತು ಧರ್ಮಶಾಸ್ತ್ರಗಳು ದೇವರು ಎಲ್ಲರನ್ನೂ ಸಮಾನವಾಗಿ ನೋಡುತ್ತಾನೆ ಎಂದು ಹೇಳುತ್ತವೆ. ದೇವರ ಅನುಗ್ರಹವು ಶಾಶ್ವತವಾಗಿದ್ದು ಅದು ಮನುಷ್ಯನ ಪ್ರಯತ್ನಗಳಿಗೆ ಅನುಗುಣವಾಗಿರುತ್ತದೆ ಎಂದು ಗುರೂಜಿ ಹೇಳುತ್ತಾರೆ.

ಶ್ಲೋಕದಲ್ಲಿ ಉಲ್ಲೇಖಿಸಿರುವಂತೆ, “ಉದ್ಯಮ, ಸಾಹಸ, ಧೈರ್ಯ, ಬುದ್ಧಿ, ಶಕ್ತಿ ಮತ್ತು ಪರಾಕ್ರಮ” ಇರುವವರಿಗೆ ದೇವರ ಸಹಾಯ ಸಿಗುತ್ತದೆ. ಉದ್ಯಮ ಎಂದರೆ ಚುರುಕುತನ ಮತ್ತು ಬುದ್ಧಿಶಕ್ತಿ. ಸಾಹಸ ಎಂದರೆ ಆತ್ಮವಿಶ್ವಾಸ ಮತ್ತು ಗಟ್ಟಿತನ. ಧೈರ್ಯ ಎಂದರೆ ಕಷ್ಟದ ಸಮಯದಲ್ಲಿ ಸಹಾಯ ಮಾಡುವ ಮನೋಭಾವ. ಶಕ್ತಿ ಎಂದರೆ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ. ಪರಾಕ್ರಮ ಎಂದರೆ ಕೆಲಸದಲ್ಲಿ ನಿರತರಾಗಿರುವುದು ಮತ್ತು ಕಾಯಕಯೋಗಿಯಾಗಿರುವುದು.

ಇದನ್ನೂ ಓದಿ
Image
ಈ ದೇವಾಲಯಕ್ಕೆ ಗಂಡ ಹೆಂಡತಿ ಒಟ್ಟಿಗೆ ಹೋಗುವಂತಿಲ್ಲ, ಯಾಕೆ ಗೊತ್ತಾ?
Image
ಈ ಪ್ರಾಣಿಗಳು ನಿಮ್ಮ ಕನಸಿನಲ್ಲಿ ಪದೇ ಪದೇ ಕಾಣಿಸಿಕೊಂಡರೆ ಅದೃಷ್ಟದ ಸೂಚನೆ
Image
ಕೇದಾರನಾಥ ಯಾತ್ರೆಯ ಸಮಯದಲ್ಲಿ ಈ ವಸ್ತುಗಳನ್ನು ತೆಗೆದುಕೊಂಡು ಹೋಗಲೇಬಾರದು
Image
ವಾರದಲ್ಲಿ ಈ ಎರಡು ದಿನ ಬಟ್ಟೆ ಒಗೆಯಲೇಬೇಡಿ; ಕಷ್ಟಗಳು ತಪ್ಪಿದಲ್ಲ!

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಸಂಖ್ಯೆ 7ರ ಹಿಂದಿನ ರಹಸ್ಯಗಳು; ಇದು ಶುಭವೋ, ಅಶುಭವೋ?

ಕಲಿಯುಗದಲ್ಲಿ, ರೈತರು ಮತ್ತು ಕಷ್ಟಪಡುವವರಿಗೆ ದೇವರು ಯಾವಾಗಲೂ ಸಹಾಯ ಮಾಡುತ್ತಾನೆ ಎಂದು ಹೇಳಲಾಗುತ್ತದೆ. ಬೆಳೆ ನಷ್ಟದ ಸಮಯದಲ್ಲಿ, ಭಗವಂತನ ಕೃಪೆಯಿಂದ ಮಳೆ ಬರುವುದು ಅನೇಕ ಬಾರಿ ಕಂಡುಬಂದಿದೆ. ಆದ್ದರಿಂದ, ಕೇವಲ ದೇವರನ್ನು ನಂಬುವುದಲ್ಲದೆ, ಪ್ರಯತ್ನ, ಸಂಕಲ್ಪ ಮತ್ತು ಕಾಯಕಯೋಗಿಗಳಾಗಿರುವುದು ಮುಖ್ಯವಾಗಿದೆ. ದೇವರ ಪೂಜೆ, ಸ್ಮರಣೆ, ದಾನ ಧರ್ಮಗಳು ಮತ್ತು ಸಹಾಯ ಮಾಡುವ ಮನೋಭಾವವು ದೇವರ ಅನುಗ್ರಹವನ್ನು ಪಡೆಯಲು ಸಹಾಯ ಮಾಡುತ್ತದೆ. ನಿಮ್ಮ ಪ್ರಯತ್ನಗಳು ಮತ್ತು ಸಂಕಲ್ಪಗಳು ಸರಿಯಾಗಿರುವಾಗ, ದೇವರ ಸಹಾಯ ಖಚಿತವಾಗಿ ಸಿಗುತ್ತದೆ ಎಂದು ಗುರೂಜಿ ವಿವರಿಸಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:49 am, Wed, 18 June 25

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ