AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepavali 2025: ನಕಾರಾತ್ಮಕ ಶಕ್ತಿ ಹೊರಹಾಕಲು ದೀಪಾವಳಿಯಂದು ಮನೆಯ ಈ ಭಾಗಗಳಲ್ಲಿ ದೀಪ ಬೆಳಗಿಸಿ!

ಈ ದೀಪಾವಳಿಯಂದು ಮನೆಯ ಯಾವ ಭಾಗದಲ್ಲಿ ದೀಪಗಳನ್ನು ಹಚ್ಚಬೇಕು ಎಂಬುದನ್ನು ಇಲ್ಲಿ ವಿವರಿಸಲಾಗಿದೆ. ದೀಪಾವಳಿಯಂದು ದೀಪ ಬೆಳಗಿಸುವುದು ಲಕ್ಷ್ಮಿ ಪೂಜೆಯ ಜೊತೆಗೆ ಮನೆಯಿಂದ ನಕಾರಾತ್ಮಕ ಶಕ್ತಿಯನ್ನು ಹೊರಹಾಕಿ ಸಕಾರಾತ್ಮಕತೆಯನ್ನು ಆಕರ್ಷಿಸುತ್ತದೆ. ಅಂಗಳ, ಮುಖ್ಯ ದ್ವಾರ, ಅಡುಗೆಮನೆ ಮತ್ತು ತುಳಸಿ ಕಟ್ಟೆಯಂತಹ ಶುಭ ಸ್ಥಳಗಳಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ಸಂಪತ್ತು, ಸಮೃದ್ಧಿ, ಸಂತೋಷ ಮತ್ತು ಅನ್ನಪೂರ್ಣೇಶ್ವರಿಯ ಆಶೀರ್ವಾದ ಪಡೆಯಿರಿ.

Deepavali 2025: ನಕಾರಾತ್ಮಕ ಶಕ್ತಿ ಹೊರಹಾಕಲು ದೀಪಾವಳಿಯಂದು ಮನೆಯ ಈ ಭಾಗಗಳಲ್ಲಿ ದೀಪ ಬೆಳಗಿಸಿ!
ದೀಪಾವಳಿ
ಅಕ್ಷತಾ ವರ್ಕಾಡಿ
|

Updated on:Oct 17, 2025 | 1:39 PM

Share

ಈ ವರ್ಷ ದೀಪಾವಳಿ ಅಕ್ಟೋಬರ್ 20 ರಂದು ಆಚರಿಸಲಾಗುತ್ತದೆ. ದೀಪಾವಳಿಯಂದು ಲಕ್ಷ್ಮೀ ದೇವಿಯ ಪೂಜೆ ಮಾಡುವುದರ ಜೊತೆಗೆ, ದೀಪಗಳನ್ನು ಬೆಳಗಿಸುವುದು ಸಹ ಬಹಳ ಶುಭವೆಂದು ಪರಿಗಣಿಸಲಾಗಿದೆ. ಈ ದಿನದಂದು ದೀಪಗಳನ್ನು ಬೆಳಗಿಸುವುದರಿಂದ ಮನೆಯಿಂದ ನಕಾರಾತ್ಮಕ ಶಕ್ತಿಯನ್ನು ಹೊರಹಾಕಲು ಮತ್ತು ಸಕಾರಾತ್ಮಕ ಶಕ್ತಿಯನ್ನು ತರಲು ಸಹಾಯ ಮಾಡುತ್ತದೆ ಎಂದು ನಂಬಲಾಗಿದೆ. ಆದ್ದರಿಂದ, ದೀಪಾವಳಿಯಂದು ಮನೆಯಲ್ಲಿ ಯಾವ ಭಾಗಗಳಲ್ಲಿ ದೀಪ ಹಚ್ಚುವುದು ಶುಭ ಎಂದು ತಿಳಿದುಕೊಳ್ಳಿ.

ದೀಪಾವಳಿಯಂದು ನಿಮ್ಮ ಮನೆಯ ಈ ಸ್ಥಳಗಳಲ್ಲಿ ದೀಪ ಬೆಳಗಿಸಿ:

ಮನೆಯ ಅಂಗಳದಲ್ಲಿ:

ದೀಪಾವಳಿಯಂದು ಮನೆಯ ಅಂಗಳದಲ್ಲಿ ದೀಪ ಹಚ್ಚಬೇಕು. ಇದು ಮನೆಯಿಂದ ನಕಾರಾತ್ಮಕ ಶಕ್ತಿಯನ್ನು ದೂರವಿಡಲು ಸಹಾಯ ಮಾಡುತ್ತದೆ. ಇದು ಸುರಕ್ಷಿತ ಮತ್ತು ಸುಭದ್ರ ಆರ್ಥಿಕ ಪರಿಸ್ಥಿತಿಯನ್ನು ಖಾತ್ರಿಪಡಿಸುತ್ತದೆ ಮತ್ತು ಜೀವನದಲ್ಲಿ ಸಂತೋಷವನ್ನು ತರುತ್ತದೆ ಎಂದು ನಂಬಲಾಗಿದೆ.

ಮನೆಯ ಮುಖ್ಯ ದ್ವಾರ:

ದೀಪಾವಳಿಯಂದು ಮನೆಯ ಮುಖ್ಯ ದ್ವಾರದಲ್ಲಿ ದೀಪ ಹಚ್ಚುವುದರಿಂದ ವಿಶೇಷ ಮಹತ್ವವಿದೆ ಎಂದು ಪರಿಗಣಿಸಲಾಗಿದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಹಾಗೆ ಮಾಡುವುದರಿಂದ ಮನೆಗೆ ಸಂಪತ್ತು ಮತ್ತು ಸಮೃದ್ಧಿ ಹೆಚ್ಚಾಗುತ್ತದೆ ಮತ್ತು ಮನೆಗೆ ಸಕಾರಾತ್ಮಕ ಶಕ್ತಿ ಬರುತ್ತದೆ.

ಇದನ್ನೂ ಓದಿ: ದೀಪಾವಳಿಯ ಮುಂದಿನ 6 ತಿಂಗಳು ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ

ಅಡುಗೆ ಮನೆಯಲ್ಲಿ:

ದೀಪಾವಳಿಯಂದು ಅಡುಗೆಮನೆಯಲ್ಲಿ ದೀಪ ಹಚ್ಚುವುದು ಬಹಳ ಶುಭವೆಂದು ಪರಿಗಣಿಸಲಾಗಿದೆ. ಅಡುಗೆ ಕೋಣೆಯಲ್ಲಿ ದೀಪ ಹಚ್ಚುವ ಮೂಲಕ ನೀವು ಅನ್ನಪೂರ್ಣೇಶ್ವರಿಯ ಆಶೀರ್ವಾದವನ್ನು ಪಡೆಯಬಹುದು.

ತುಳಸಿ ಕಟ್ಟೆ:

ದೀಪಾವಳಿಯಂದು ತುಳಸಿ ಗಿಡದ ಬಳಿ ದೀಪ ಹಚ್ಚಬೇಕು. ತುಳಸಿ ಗಿಡದ ಬಳಿ ದೀಪ ಹಚ್ಚುವುದರಿಂದ ಲಕ್ಷ್ಮಿ ದೇವಿಗೆ ಆಶೀರ್ವಾದವನ್ನು ನೀವು ಪಡೆಯಬಹುದು. ಇದು ಜೀವನದಲ್ಲಿ ಸಂತೋಷ ಮತ್ತು ಶಾಂತಿಯನ್ನು ತರುತ್ತದೆ ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:36 pm, Fri, 17 October 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!