AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷ್ಮೀ ಮಂತ್ರ ಪಠಿಣ ಮಾಡುವುದರಿಂದ ಯಾವ ರೀತಿಯ ಭೋಗ – ಭಾಗ್ಯಗಳು ಪ್ರಾಪ್ತಿಯಾಗುತ್ತೆ? 

ದೇವಿಯ ಆಶೀರ್ವಾದ ಪಡೆಯಬೇಕೆನ್ನುವವರು ಮೊದಲು ಆಕೆಯನ್ನು ಭಕ್ತಿ -ಭಾವದಿಂದ ಪೂಜಿಸಬೇಕಾಗುತ್ತದೆ. ಲಕ್ಷ್ಮೀ ದೇವಿಯನ್ನು ಪೂಜಿಸುವುದರಿಂದ ಜೀವನದಲ್ಲಿ ಸಮೃದ್ಧಿ, ಅದೃಷ್ಟ ಮತ್ತು ಸಂಪತ್ತು ಸಿಗುತ್ತದೆ ಮತ್ತು ಭಕ್ತರಿಗೆ ಸಂತೋಷ ಮತ್ತು ಶಾಂತಿಯನ್ನು ನೀಡುತ್ತಾಳೆ ಎಂಬ ನಂಬಿಕೆಯಿದೆ. ನಿಮ್ಮ ಎಲ್ಲಾ ಋಣಭಾರಗಳು ಶೀಘ್ರದಲ್ಲೇ ತೀರಿಹೋಗಬೇಕು ಮತ್ತು ಶಾಂತಿ ಮತ್ತು ಸಮೃದ್ಧಿ ಬಯಸುವವರು ಈ ಶಕ್ತಿಯುತ ಮಂತ್ರಗಳನ್ನು ಪಠಿಸಿ.

ಲಕ್ಷ್ಮೀ ಮಂತ್ರ ಪಠಿಣ ಮಾಡುವುದರಿಂದ ಯಾವ ರೀತಿಯ ಭೋಗ - ಭಾಗ್ಯಗಳು ಪ್ರಾಪ್ತಿಯಾಗುತ್ತೆ? 
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jan 16, 2024 | 4:27 PM

Share

ಹಿಂದೂ ಧರ್ಮದಲ್ಲಿ ಲಕ್ಷ್ಮೀ ದೇವಿಯನ್ನು ಸಂಪತ್ತಿನ ದೇವತೆ ಎಂದು ಪರಿಗಣಿಸಲಾಗುತ್ತದೆ. ಲಕ್ಷ್ಮಿ ದೇವಿಯ ಆರಾಧನೆಯು ಪ್ರಾಚೀನ ಕಾಲದಿಂದಲೂ ಭಾರತೀಯ ಸಂಪ್ರದಾಯದ ಒಂದು ಭಾಗವಾಗಿದೆ. ದೇವಿಯ ಆಶೀರ್ವಾದ ಪಡೆಯಬೇಕೆನ್ನುವವರು ಮೊದಲು ಆಕೆಯನ್ನು ಭಕ್ತಿ -ಭಾವದಿಂದ ಪೂಜಿಸಬೇಕಾಗುತ್ತದೆ. ಲಕ್ಷ್ಮೀ ದೇವಿಯನ್ನು ಪೂಜಿಸುವುದರಿಂದ ಜೀವನದಲ್ಲಿ ಸಮೃದ್ಧಿ, ಅದೃಷ್ಟ ಮತ್ತು ಸಂಪತ್ತು ಸಿಗುತ್ತದೆ ಮತ್ತು ಭಕ್ತರಿಗೆ ಸಂತೋಷ ಮತ್ತು ಶಾಂತಿಯನ್ನು ನೀಡುತ್ತಾಳೆ ಎಂಬ ನಂಬಿಕೆಯಿದೆ. ನಿಮ್ಮ ಎಲ್ಲಾ ಋಣಭಾರಗಳು ಶೀಘ್ರದಲ್ಲೇ ತೀರಿಹೋಗಬೇಕು ಮತ್ತು ಶಾಂತಿ ಮತ್ತು ಸಮೃದ್ಧಿ ಬಯಸುವವರು ಈ ಶಕ್ತಿಯುತ ಮಂತ್ರಗಳನ್ನು ಪಠಿಸಿ.

ಶಾಂತಿ, ಸಂಪತ್ತು ಮತ್ತು ಸಮೃದ್ಧಿಗಾಗಿ;

1. ಲಕ್ಷ್ಮೀ ಬೀಜ ಮಂತ್ರ:

– ಓಂ ಹ್ರೀಂ ಶ್ರೀಂ ಲಕ್ಷ್ಮೀಭಯೋ ನಮಃ

2. ಮಹಾಲಕ್ಷ್ಮೀ ಮಂತ್ರ:

-ಓಂ ಶ್ರೀಂ ಹ್ರೀಂ ಶ್ರೀಂ ಕಮಲೇ ಕಮಲಾಲಯೇ ಪ್ರಸೀದ್ ಪ್ರಸೀದ್, ಓಂ ಶ್ರೀಂ ಹ್ರೀಂ ಶ್ರೀಂ ಮಹಾಲಕ್ಷ್ಮಯೈ ನಮಃ – ”ಓಂ ಮಹಾ ಲಕ್ಷ್ಮಯೈ ನಮೋ ನಮಃ” – ”ಓಂ ವಿಷ್ಣು ಪ್ರಿಯಾಯೀ ನಮೋ ನಮಃ” – ” ಓಂ ಧನ ಪ್ರದಾಯೀ ನಮೋ ನಮಃ” – ”ಓಂ ವಿಶ್ವ ಜನನಯೀ ನಮೋ ನಮಃ”

3. ಲಕ್ಷ್ಮೀ ಗಾಯತ್ರಿ ಮಂತ್ರ

” ಓಂ ಶ್ರೀ ಮಹಾಲಕ್ಷ್ಮಯೈ ಚ ವಿದ್ಮಹೇ ವಿಷ್ಣು ಪತ್ನ್ಯೈ ಚ ಧೀಮಹಿ ತನ್ನೋ ಲಕ್ಷ್ಮೀ ಪ್ರಚೋದಯಾತ್‌ ಓಂ”

ಇದನ್ನೂ ಓದಿ: ಗಣೇಶನ ಪೂಜೆಗೆ ಯಾವ ವಸ್ತುಗಳನ್ನು ಅರ್ಪಿಸಬೇಕು, ಅರ್ಪಿಸಬಾರದು?

4. ಮಹಾಲಕ್ಷ್ಮೀ ಬೀಜ ಮಂತ್ರ

-ಓಂ ಹ್ರೀಂ ಶ್ರೀಂ ಲಕ್ಷ್ಮಿಭ್ಯೋ ನಮಃ”

ಲಕ್ಷ್ಮೀ ಮಂತ್ರಗಳನ್ನು ಪಠಿಸುವುದರಿಂದ ಸಿಗುವ ಪ್ರಯೋಜನಗಳೇನು?

1. ಈ ಮಂತ್ರಗಳನ್ನು ಪಠಿಸುವ ಮೂಲಕ ಜನರು ಸಮೃದ್ಧಿ, ಅದೃಷ್ಟ ಮತ್ತು ಸಂಪತ್ತನ್ನು ಪಡೆಯಬಹುದು.

2. ಶುಕ್ರವಾರ ಮತ್ತು ಮಂಗಳವಾರದ ಸಂಜೆ ಸಮಯದಲ್ಲಿ ಅಂದರೆ ಸೂರ್ಯ ಮುಳುಗುವ ವೇಳೆಯಲ್ಲಿ ಈ ಮಂತ್ರಗಳನ್ನು 108 ಬಾರಿ ಪಠಿಸಿದರೆ, ಅಪೇಕ್ಷಿತ ಬಯಕೆಗಳು ಈಡೇರುತ್ತವೆ ಎನ್ನಲಾಗುತ್ತದೆ.

3. ಈ ಮಂತ್ರಗಳನ್ನು ಪಠಿಸುವ ಮೂಲಕ ಜನರು ಶಾಂತಿ, ಸಮೃದ್ಧಿಯನ್ನು ಕೂಡ ಪಡೆಯಬಹುದು.

4. ಈ ಮಂತ್ರಗಳನ್ನು ಅಪಾರ ಭಕ್ತಿಯಿಂದ ಪಠಿಸುವ ಭಕ್ತರು ಆರ್ಥಿಕ ಪ್ರಗತಿಯನ್ನು ಪಡೆಯುತ್ತಾರೆ ಎಂದು ಪುರಾಣಗಳು ಹೇಳುತ್ತದೆ.

5. ಯಾವುದೇ ಉದ್ಯೋಗವನ್ನು ಪಡೆಯಲು ಸಾಧ್ಯವಾಗದವರು, ಅಪೇಕ್ಷಿತ ಉದ್ಯೋಗವನ್ನು ಪಡೆಯಲು ಈ ಮಂತ್ರಗಳನ್ನು ಪಠಿಸಬೇಕು.

6. ಲಕ್ಷ್ಮೀ ದೇವಿಯು ಆಶೀರ್ವಾದ ಪಡೆಯಲು ಈ ಮಂತ್ರಗಳ ಪಠಣ ಮಾಡಿ.

ಲಕ್ಷ್ಮೀ ದೇವಿಗೆ ಈ ಮಂತ್ರ ಪ್ರಿಯವಾಗಿದ್ದು, ಇದನ್ನು ಪ್ರತಿನಿತ್ಯ ಪೂಜೆ ಮಾಡುವಾಗ ಪಠಣ ಮಾಡುವುದರಿಂದ ಲಕ್ಷ್ಮೀ ದೇವಿಯ ಅನುಗ್ರಹವನ್ನು ಪಡೆಯಬಹುದಾಗಿದೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ