AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪಿತಪ್ಪಿಯೂ ಶುಕ್ರವಾರದಂದು ಈ ಕೆಲಸ ಮಾಡಬೇಡಿ; ಇಲ್ಲ ಅಂದ್ರೆ ಶುಕ್ರ, ಲಕ್ಷ್ಮೀ ಮತ್ತು ಸಂತೋಷಿ ಮಾತಾಳ ಕೋಪಕ್ಕೆ ಗುರಿಯಾಗುತ್ತೀರಿ

ಶುಕ್ರವಾರವಾದ ಇಂದು ಶುಕ್ರ ಗ್ರಹ, ಮಾತೆ ಲಕ್ಷ್ಮೀ ದೇವಿ ಮತ್ತು ಸಂತೋಷಿ ಮಾತಾಳನ್ನು ಪೂಜಿಸಲಾಗುತ್ತದೆ. ಈ ದಿನ 3 ಪ್ರಬಲ ಶಕ್ತಿಗಳನ್ನು ಪ್ರತಿನಿಧಿಸುತ್ತದೆ. ಶುಭ ಶುಕ್ರವಾರದಂದು ಉಪವಾಸ ಮಾಡಿ ಲಕ್ಷ್ಮೀ ದೇವಿಯನ್ನು ಪೂಜಿಸುವುದರಿಂದ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ಹೆಚ್ಚುತ್ತದೆ.

ಅಪ್ಪಿತಪ್ಪಿಯೂ ಶುಕ್ರವಾರದಂದು ಈ ಕೆಲಸ ಮಾಡಬೇಡಿ; ಇಲ್ಲ ಅಂದ್ರೆ ಶುಕ್ರ, ಲಕ್ಷ್ಮೀ ಮತ್ತು ಸಂತೋಷಿ ಮಾತಾಳ ಕೋಪಕ್ಕೆ ಗುರಿಯಾಗುತ್ತೀರಿ
ಲಕ್ಷ್ಮೀ ದೇವಿ
TV9 Web
| Updated By: ಆಯೇಷಾ ಬಾನು|

Updated on:Sep 24, 2021 | 7:31 AM

Share

ಹಿಂದೂ ಧರ್ಮದಲ್ಲಿ ಪ್ರತಿಯೊಂದು ದಿನಕ್ಕೂ ಒಂದು ದೇವರ ದಿನವಾಗಿ ಪರಿಗಣಿಸಿ ಪೂಜಿಸಲಾಗುತ್ತದೆ. ಈ ಪೈಕಿ ಶುಭ ಶುಕ್ರವಾರವಾದ ಇಂದು ಶುಕ್ರ ಗ್ರಹ, ಮಾತೆ ಲಕ್ಷ್ಮೀ ದೇವಿ ಮತ್ತು ಸಂತೋಷಿ ಮಾತಾಳನ್ನು ಪೂಜಿಸಲಾಗುತ್ತದೆ. ಈ ದಿನ 3 ಪ್ರಬಲ ಶಕ್ತಿಗಳನ್ನು ಪ್ರತಿನಿಧಿಸುತ್ತದೆ. ಶುಭ ಶುಕ್ರವಾರದಂದು ಉಪವಾಸ ಮಾಡಿ ಲಕ್ಷ್ಮೀ ದೇವಿಯನ್ನು ಪೂಜಿಸುವುದರಿಂದ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ಹೆಚ್ಚುತ್ತದೆ. ಅವಿವಾಹಿತ ಹುಡುಗಿಯರು ಬಯಸಿದ ವರನನ್ನು ಪಡೆಯಲು, ಬಡತನ ದೂರುವಾಗಲು, ಪುಣ್ಯ ಪ್ರಾಪ್ತಿಗಾಗಿ ಲಕ್ಷ್ಮಿ ದೇವಿಯನ್ನು ಪೂಜಿಸುತ್ತಾರೆ. ಶುಕ್ರವಾರದ ಶುಭ ದಿನವನ್ನು ಲಕ್ಷ್ಮಿ ದೇವಿಗೆ ಅರ್ಪಿಸಿದರೆ. ಮತ್ತೊಂದೆಡೆ ಶುಕ್ರ ಗ್ರಹಕ್ಕೆ ಅರ್ಪಿಸಲಾಗಿದೆ. ಹೀಗಾಗಿ ನಾವು ಈ ದಿನ ಮಾಡುವ ಕೆಲವೊಂದು ಸಣ್ಣ ತಪ್ಪುಗಳು ಶುಕ್ರ ಮತ್ತು ಮಾತೆ ಲಕ್ಷ್ಮಿಯ ಕೋಪಕ್ಕೆ ಕಾರಣವಾಗುತ್ತದೆ. ಆಗ ಜೀವನದಲ್ಲಿ ನಷ್ಟ, ಹಣದ ಸಮಸ್ಯೆ, ದುಃಖ ಆವರಿಸುತ್ತದೆ.

ಶುಕ್ರವಾರ ಶುಕ್ರನ ಕೋಪಕ್ಕೆ ಕಾರಣರಾಗಬೇಡಿ ಇಂದು ಶುಕ್ರವಾರ. ಈ ದಿನ ಕೆಲವು ವಿಶೇಷ ಪರಿಹಾರಗಳನ್ನು ಮಾಡುವ ಮೂಲಕ ಜಾತಕದಲ್ಲಿ ಶುಕ್ರ ಗ್ರಹವನ್ನು ಬಲಪಡಿಸಿಕೊಳ್ಳಬಹುದು. ಆದ್ರೆ ಅಪ್ಪಿತಪ್ಪಿ ಈ ದಿನ ತಪ್ಪು ಮಾಡಿದ್ರೆ, ಶುಕ್ರನನ್ನು ಕೋಪಕ್ಕೆ ಗುರಿ ಮಾಡಿದ್ರೆ ಜಾತಕದಲ್ಲಿ ಶುಕ್ರ ದುರ್ಬಲನಾಗುತ್ತಾನೆ. ಇದರಿಂದ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತೆ.

ಶುಕ್ರವಾರದಂದು ಹಣದ ವಹಿವಾಟು ಬೇಡ ಧಾರ್ಮಿಕ ನಂಬಿಕೆಯ ಪ್ರಕಾರ, ಹಣದ ವಹಿವಾಟುಗಳನ್ನು ಶುಕ್ರವಾರ ಮಾಡಬಾರದು. ಏಕೆಂದರೆ ಶುಭ ಶುಕ್ರವಾರವನ್ನು ಲಕ್ಷ್ಮಿ ದೇವಿಗೆ ಮೀಸಲಿಡಲಾಗಿದೆ. ಹಣ ಲಕ್ಷ್ಮಿಯ ಸ್ವರೂಪ. ಹೀಗಾಗಿ ಈ ದಿನ ಹಣವ ವಹಿವಾಟು ಮಾಡಬಾರದು. ಈ ದಿನ ನಾವು ಯಾರಿಗಾದ್ರು ಹಣ ನೀಡಿದರೆ ಲಕ್ಷ್ಮಿ ನಮಿಂದ ದೂರ ಹೋಗುತ್ತಾಳೆ ಕೋಪಗೊಳ್ಳುತ್ತಾಳೆ ಎಂದು ಹೇಳಲಾಗುತ್ತೆ.

ಹುಡುಗಿಯರು, ಮಹಿಳೆಯರು ಮತ್ತು ನಪುಂಸಕರನ್ನು ಅವಮಾನಿಸಬೇಡಿ ಭಾರತೀಯ ಸಂಪ್ರದಾಯದ ಪ್ರಕಾರ, ಪ್ರತಿಯೊಬ್ಬ ಹುಡುಗಿ ಅಥವಾ ಮಹಿಳೆಯನ್ನು ದೇವಿಯ ರೂಪವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಶುಕ್ರವಾರದಂದು ಹುಡುಗಿ, ಮಹಿಳೆ, ಅಥವಾ ನಪುಂಸಕರನ್ನು ಅವಮಾನಿಸಬಾರದು. ಅವರಿಗೆ ಉಡುಗೊರೆ ನೀಡಿ ಖುಷಿ ಪಡಿಸಬೇಕು. ಅವರಿಂದ ಆಶೀರ್ವಾದ ಪಡೆಯಬೇಕು. ಇನ್ನು ಶುಕ್ರವಾರ ಮನೆಯಲ್ಲಿ ಹೆಣ್ಣು ಮಕ್ಕಳು ಅತ್ತರೆ ಮನೆಗೆ ಒಳ್ಳೆಯದಾಗಲ್ಲ ಎಂದು ಹಿರಿಯರು ಹೇಳುತ್ತಿರುತ್ತಾರೆ.

ಸಕ್ಕರೆ ನೀಡುವುದನ್ನು ತಪ್ಪಿಸಿ ಧರ್ಮಗ್ರಂಥಗಳ ಪ್ರಕಾರ, ಸಕ್ಕರೆ ಚಂದ್ರ ಮತ್ತು ಶುಕ್ರ ಗ್ರಹಕ್ಕೆ ಸಂಬಂಧಿಸಿದೆ, ಆದ್ದರಿಂದ ಶುಕ್ರವಾರ ಯಾರಿಗಾದರೂ ಸಕ್ಕರೆ ನೀಡಿದರೆ ಆ ವ್ಯಕ್ತಿಯ ಜಾತಕದಲ್ಲಿ ಶುಕ್ರ ದುರ್ಬಲನಾಗುತ್ತಾನಂತೆ. ಆ ವ್ಯಕ್ತಿಯ ಜೀವನದಲ್ಲಿ ಸಂತೋಷ, ಆರ್ಥಿಕ ಸಮೃದ್ಧಿ ಕಡಿಮೆಯಾಗುತ್ತದೆ.

ಹುಳಿ ತಿನ್ನಬಾರದು ಶುಕ್ರವಾರ ಉಪವಾಸ ಮಾಡುವವರು ಹುಳಿ ಪದಾರ್ಥಗಳನ್ನು ಸೇವಿಸಬಾರದು. ಇದನ್ನು ಮಾಡುವುದರಿಂದ, ಅವರು ಉಪವಾಸದ ಪೂರ್ಣ ಫಲವನ್ನು ಪಡೆಯುವುದಿಲ್ಲ. ಜೊತೆಗೆ ಶುಕ್ರವಾರ ಯಾವುದೇ ಹುಳಿ ಪದಾರ್ಥವನ್ನು ಸೇವಿಸುವುದನ್ನು ತಪ್ಪಿಸಬೇಕು. ಏಕೆಂದರೆ ಇದರಿಂದ ತಾಯಿ ಸಂತೋಷಿ ಮಾತ ಸಿಟ್ಟಿಗೇಳುತ್ತಾಳೆ.

ಶುಕ್ರವಾರಗಳಲ್ಲಿ ಮನೆಯನ್ನು ಸ್ವಚ್ಛವಾಗಿಟ್ಟುಕೊಳ್ಳಿ ಶುಕ್ರವಾರದಂದು ಮನೆಯನ್ನು ಸ್ವಚ್ಛವಾಗಿಟ್ಟುಕೊಂಡರೆ ದೇವತೆಗಳು ಸಂತೋಷಗೊಂಡು ಅವರ ಕೃಪೆಗೆ ಪಾತ್ರರಾಗುತ್ತೀರಿ. ಲಕ್ಷ್ಮಿ ದೇವಿಯ ಕೃಪೆ ಜೀವನದಲ್ಲಿ ಉಳಿಯುತ್ತದೆ. ಐಶ್ವರ್ಯ ವೃದ್ಧಿಯಾಗುತ್ತದೆ. ಹಾಗೂ ಸಂತೋಷಿ ಮಾತಾ ಕೃಪೆಯಿಂದ ಸಂತೋಷ, ನೆಮ್ಮದಿ ನೆಲೆಸುತ್ತದೆ.

ಇದನ್ನೂ ಓದಿ: Sri Guru Raghavendra Swamiji: ಗುರುವಾರದಂದು ಗುರುರಾಯರ ಪೂಜೆ ಹೇಗೆ ಮಾಡಬೇಕು?

Published On - 7:19 am, Fri, 24 September 21

ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು