AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ 5 ವಸ್ತುಗಳನ್ನು ಯಾವತ್ತೂ ದಾನ ಮಾಡಬೇಡಿ.. ಇಲ್ಲವಾದರೆ ನಿಮಗೆ ಬಡತನ ಕಾಡುತ್ತದೆ

Astrology Tips: ಪ್ಲಾಸ್ಟಿಕ್ ವಸ್ತುಗಳು ಮತ್ತು ಪಾತ್ರೆಗಳನ್ನು ದಾನ ಮಾಡುವುದನ್ನು ಸಹ ಧರ್ಮಗ್ರಂಥಗಳಲ್ಲಿ ನಿಷೇಧಿಸಲಾಗಿದೆ. ಇದರಿಂದ ಉದ್ಯೋಗ ಮತ್ತು ವ್ಯಾಪಾರದಲ್ಲಿ ನಷ್ಟ ಉಂಟಾಗುತ್ತದೆ. ಹಾಗೆಯೇ ಗಾಜು, ಅಲ್ಯೂಮಿನಿಯಂ ಮತ್ತು ಸ್ಟೀಲ್ ವಸ್ತುಗಳನ್ನು ಸಹ ದಾನ ಮಾಡಬಾರದು.

ಈ 5 ವಸ್ತುಗಳನ್ನು ಯಾವತ್ತೂ ದಾನ ಮಾಡಬೇಡಿ.. ಇಲ್ಲವಾದರೆ ನಿಮಗೆ ಬಡತನ ಕಾಡುತ್ತದೆ
ಈ 5 ವಸ್ತುಗಳನ್ನು ಯಾವತ್ತೂ ದಾನ ಮಾಡಬೇಡಿ..
Follow us
ಸಾಧು ಶ್ರೀನಾಥ್​
|

Updated on: Sep 28, 2023 | 6:27 PM

ಜ್ಯೋತಿಷ್ಯ ಸಲಹೆಗಳು: ಸಾಮಾನ್ಯವಾಗಿ ಎಲ್ಲರೂ ದಾನ ಮಾಡಲು ಹೇಳುತ್ತಾರೆ. ದಾನ ಮಾಡುವುದರಿಂದ ಸಾಕಷ್ಟು ಪುಣ್ಯ ಪ್ರಾಪ್ತಿಯಾಗುತ್ತದೆ ಹಾಗೂ ಭಗವಂತನ ಆಶೀರ್ವಾದ ಸಿಗುತ್ತದೆ ಎಂದು ಹೇಳಲಾಗುತ್ತದೆ. ದಾನವನ್ನು (Donation) ಒಂದು ಮಹಾನ್ ಸತ್ಕಾರ್ಯವೆಂದು ಪರಿಗಣಿಸಲಾಗಿದೆ. ಯಾರಾದರೂ ತಮ್ಮ ಬಳಿ ಬಂದು ದಾನ ನೀಡಲು ಬಯಸಿದರೆ ಅಥವಾ ನಾವೇ ಏನಾದರೂ ದಾನ ಮಾಡಲು ಬಯಸಿದರೂ ಹಾಗೆ ಮಾಡಬಹುದು ಎನ್ನುತ್ತಾರೆ. ಇದು ಕರ್ಮಫಲದಿಂದ ಮುಕ್ತಿ ನೀಡುತ್ತದೆ ಎಂದು ವೇದ ವಿದ್ವಾಂಸರು ಹೇಳುತ್ತಾರೆ (Spiritual, Astrology).

ಹೀಗೆ ಮಾಡುವುದರಿಂದ ಕರ್ಮಫಲದಿಂದ ಮುಕ್ತಿ ಸಿಗುತ್ತದೆ ಎಂದು ವೇದ ವಿದ್ವಾಂಸರು ಹೇಳುತ್ತಾರೆ. ಆದರೆ, ದಾನ ಮಾಡಲು ಕೆಲವು ನಿಯಮಗಳಿವೆ ಎಂದು ಹಿಂದೂ ಧರ್ಮಗ್ರಂಥಗಳೂ ಹೇಳುತ್ತವೆ. ಅವರ ಪ್ರಕಾರ.. ಏನು ದಾನ ಮಾಡಬೇಕು? ಏನು ದಾನ ಮಾಡಬಾರದು? ಯಾವಾಗ ದಾನ ಮಾಡಬೇಕು? ಯಾವ ಸಮಯದಲ್ಲಿ ಏನು ಮಾಡಬಾರದು ಎಂದು ವೇದ ಪಂಡಿತರು ಹೇಳುತ್ತಾರೆ. ಇವುಗಳನ್ನು ಅನುಸರಿಸುವುದರಿಂದ ಜೀವನದಲ್ಲಿ ಸಮಸ್ಯೆಗಳು ಉದ್ಭವಿಸುವುದಿಲ್ಲ ಎಂದು ಹೇಳಲಾಗುತ್ತದೆ.

ದಾನ ಮಾಡವುದು ಪುಣ್ಯವಾಗಿದೆ ಮತ್ತು ಪ್ರತಿಯೊಬ್ಬ ವ್ಯಕ್ತಿಯು ತನ್ನ ಸಾಮರ್ಥ್ಯಕ್ಕೆ ಅನುಗುಣವಾಗಿ ದಾನ ಮಾಡಬೇಕು. ಆದರೆ ಕೆಲವು ವಸ್ತುಗಳನ್ನು ದಾನ ಮಾಡುವುದು ಅಶುಭ ಎಂದು ಹೇಳಲಾಗುತ್ತದೆ. ಈ ವಸ್ತುಗಳನ್ನು ದಾನ ಮಾಡಿದರೆ ಅಂತಹ ವ್ಯಕ್ತಿಗಳ ಮೇಲೆ ಲಕ್ಷ್ಮಿ ದೇವಿ ಮತ್ತು ಶನಿ ದೇವರು ಕೋಪಗೊಳ್ಳುತ್ತಾರೆ. ಅದರಿಂದ ಅಂತಹ ದಾನಿಗಳು ತಮ್ಮ ಜೀವನದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತಾರೆ. ಯಾವತ್ತೂ ದಾನ ಮಾಡಬಾರದ ವಸ್ತುಗಳು ಯಾವುವು ಎಂದು ಈಗ ತಿಳಿಯೋಣ..

ಪೊರಕೆ: ಯಾವುದೇ ಹೊಸ ಅಥವಾ ಹಳೆಯ ಪೊರಕೆಯನ್ನು ದಾನ ಮಾಡಿದರೆ ಆರ್ಥಿಕ ಮುಗ್ಗಟ್ಟು ಎದುರಿಸಬೇಕಾಗುತ್ತದೆ. ಪೊರಕೆಯನ್ನು ಲಕ್ಷ್ಮಿ ದೇವಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಹಾಗಾಗಿ ಪೊರಕೆ ದಾನ ಮಾಡುವುದರಿಂದ ಲಕ್ಷ್ಮಿ ದೇವಿ ಕೋಪಗೊಳ್ಳುತ್ತಾಳೆ. ಆದ್ದರಿಂದ ಪೊರಕೆ ದಾನ ಮಾಡುವುದನ್ನು ತಪ್ಪಿಸಿ.

ಚೂಪಾದ ವಸ್ತುಗಳು: ಚಾಕು, ಕತ್ತರಿ, ಸೂಜಿಯಂತಹ ಹರಿತವಾದ ವಸ್ತುಗಳನ್ನು ದಾನ ಮಾಡುವುದರಿಂದ ಮನೆಯಲ್ಲಿ ಅಪಶ್ರುತಿ ಉಂಟಾಗುತ್ತದೆ. ಇದು ಕುಟುಂಬ ಸದಸ್ಯರ ನಡುವೆ ಕಲಹಕ್ಕೆ ಕಾರಣವಾಗುತ್ತದೆ. ಇದು ನಿಮ್ಮ ಅದೃಷ್ಟದ ಮೇಲೂ ಪರಿಣಾಮ ಬೀರುತ್ತದೆ. ಆದ್ದರಿಂದ ಈ ವಸ್ತುಗಳನ್ನು ದಾನ ಮಾಡುವುದನ್ನು ತಪ್ಪಿಸಿ.

Also Read: ರಾಘವೇಂದ್ರಸ್ವಾಮಿ ಮತ್ತು ಗ್ರಾಮ ದೇವತೆ ಮಂಚಾಲಮ್ಮ ದರ್ಶನಕ್ಕೆ ಹರಿದುಬರುತ್ತಿರುವ ಭಕ್ತರು: ತುಂಬಿತುಳುಕಿದ ಮಠದ ಹುಂಡಿ

ಎಣ್ಣೆ: ಎಣ್ಣೆಯನ್ನು ದಾನ ಮಾಡುವುದರಿಂದ ಶನಿ ದೇವರು ಪ್ರಸನ್ನನಾಗುತ್ತಾನೆ. ಆದರೆ ಬಳಸಿದ, ಉಳಿದ ಅಥವಾ ಹಾಳಾದ ಎಣ್ಣೆಯನ್ನು ಎಂದಿಗೂ ದಾನ ಮಾಡಬೇಡಿ. ಅಂತಹ ಎಣ್ಣೆಯನ್ನು ದಾನ ಮಾಡುವುದರಿಂದ ಶನಿ ದೇವರ ದುಷ್ಪರಿಣಾಮಗಳು ಎದುರಿಸಬೇಕಾಗುತ್ತದೆ. ಶನಿ ದೇವರನ್ನು ಮೆಚ್ಚಿಸಲು ಎಳ್ಳೆಣ್ಣೆ ಅಥವಾ ಸಾಸಿವೆ ಎಣ್ಣೆಯನ್ನು ದಾನ ಮಾಡಿ.

ಆಹಾರ: ಬಡವರಿಗೆ ಮತ್ತು ಹಸಿದವರಿಗೆ ಅನ್ನ ನೀಡುವುದು ಬಹಳ ಪುಣ್ಯ. ಆದರೆ ಆಹಾರವು ಹಳಸದಂತೆ ಅಥವಾ ಹಾಳಾಗದಂತೆ ನೋಡಿಕೊಳ್ಳಬೇಕು. ಇಂತಹ ಅನ್ನದಾನ ಮಾಡುವುದರಿಂದ ಪುಣ್ಯದ ಬದಲು ಪಾಪ ಆವರಿಸುತ್ತದೆ. ಜೀವನದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಪ್ಲಾಸ್ಟಿಕ್ ವಸ್ತುಗಳು ಮತ್ತು ಪಾತ್ರೆಗಳನ್ನು ದಾನ ಮಾಡುವುದನ್ನು ಸಹ ಧರ್ಮಗ್ರಂಥಗಳಲ್ಲಿ ನಿಷೇಧಿಸಲಾಗಿದೆ. ಇದರಿಂದ ಉದ್ಯೋಗ ಮತ್ತು ವ್ಯಾಪಾರದಲ್ಲಿ ನಷ್ಟ ಉಂಟಾಗುತ್ತದೆ. ಹಾಗೆಯೇ ಗಾಜು, ಅಲ್ಯೂಮಿನಿಯಂ ಮತ್ತು ಸ್ಟೀಲ್ ವಸ್ತುಗಳನ್ನು ಸಹ ದಾನ ಮಾಡಬಾರದು.

ಹೆಚ್ಚಿನ ಆಧ್ಯಾತ್ಮಿಕ ಸುದ್ದಿಗಳಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ

(ಗಮನಿಸಿ: ಇಲ್ಲಿ ನೀಡಿರುವ ಮಾಹಿತಿಯು ನಂಬಿಕೆಯನ್ನು ಆಧರಿಸಿದೆ. ಇದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ. ಜನರ ಆಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಇಲ್ಲಿ ನೀಡಿದ್ದೇವೆ)

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ