AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fallen Hair: ನೆಲದ ಮೇಲೆ ಬಿದ್ದಿರುವ ತಲೆ ಕೂದಲನ್ನು ತುಳಿಯಬಾರದು ಯಾಕೆ? ಶಾಸ್ತ್ರಗಳು ಹೇಳುವುದೇನು?

ನೆಲದ ಮೇಲೆ ಬಿದ್ದ ಕೂದಲನ್ನು ತುಳಿಯಬಾರದು ಎಂಬುದು ಕೇವಲ ಮೂಢನಂಬಿಕೆಯಲ್ಲ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇದು ಶುಕ್ರ, ಚಂದ್ರ, ಸೂರ್ಯ, ಮಂಗಳ ಮತ್ತು ಗುರು ಗ್ರಹಗಳನ್ನು ದುರ್ಬಲಗೊಳಿಸುತ್ತದೆ. ಇದು ಆರ್ಥಿಕ ಸ್ಥಿತಿ, ಆರೋಗ್ಯ ಮತ್ತು ಸೌಂದರ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಕೂದಲನ್ನು ತುಳಿಯುವುದರಿಂದ ಜೀವನದಲ್ಲಿ ಅನೇಕ ಸಮಸ್ಯೆಗಳು ಎದುರಾಗಬಹುದು ಎಂದು ಶಾಸ್ತ್ರಗಳು ಹೇಳುತ್ತವೆ.

Fallen Hair: ನೆಲದ ಮೇಲೆ ಬಿದ್ದಿರುವ ತಲೆ ಕೂದಲನ್ನು ತುಳಿಯಬಾರದು ಯಾಕೆ? ಶಾಸ್ತ್ರಗಳು ಹೇಳುವುದೇನು?
ಉದುರಿದ ಕೂದಲನ್ನು ತುಳಿಯಬಾರದುImage Credit source: Getty Images
ಅಕ್ಷತಾ ವರ್ಕಾಡಿ
|

Updated on: Jul 05, 2026 | 4:57 PM

Share

ದೈನಂದಿನ ಜೀವನದಲ್ಲಿ ನಾವೆಲ್ಲರೂ ಕೂದಲು ಬಾಚುವಾಗ ಒಂದಲ್ಲ ಒಂದು ಕೂದಲು ನೆಲದ ಮೇಲೆ ಬೀಳುವುದನ್ನು ನೋಡೇ ಇರುತ್ತೇವೆ. ಸಾಮಾನ್ಯವಾಗಿ ಹಿರಿಯರು “ನೆಲದ ಮೇಲೆ ಬಿದ್ದಿರುವ ಕೂದಲನ್ನು ತುಳಿಯಬೇಡ, ಅದು ಅಪಶಕುನ” ಎಂದು ಹೇಳುವುದನ್ನು ನೀವು ಕೇಳಿರಬಹುದು. ಇದು ಕೇವಲ ಮೂಢನಂಬಿಕೆಯಲ್ಲ, ಇದರ ಹಿಂದೆ ಆಳವಾದ ಧಾರ್ಮಿಕ ಹಾಗೂ ಜ್ಯೋತಿಷ್ಯ ಶಾಸ್ತ್ರದ ಕಾರಣಗಳಿವೆ. ಉದುರಿದ ಕೂದಲಿನ ಮೇಲೆ ಅಪ್ಪಿತಪ್ಪಿ ಕಾಲಿಟ್ಟರೆ ಬದುಕಿನಲ್ಲಿ ಯಾವ ರೀತಿಯ ಪ್ರಭಾವ ಬೀರುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಕೂದಲು ಮತ್ತು ಶುಕ್ರ ಗ್ರಹ:

ಹಿಂದೂ ಜ್ಯೋತಿಷ್ಯ ಶಾಸ್ತ್ರದಲ್ಲಿ ಕೂದಲನ್ನು ಶುಕ್ರ ಗ್ರಹಕ್ಕೆ ಹೋಲಿಸಲಾಗುತ್ತದೆ. ಶುಕ್ರ ಗ್ರಹವು ಮನುಷ್ಯನ ಜೀವನದ ಸೌಂದರ್ಯ, ಐಶ್ವರ್ಯ ಮತ್ತು ಭೌತಿಕ ಸುಖಗಳನ್ನು ನಿಯಂತ್ರಿಸುವ ಶಕ್ತಿಯಾಗಿದೆ. ಯಾವಾಗ ಕೂದಲು ತಲೆಯಿಂದ ಉದುರಿ ನೆಲಕ್ಕೆ ಬೀಳುತ್ತದೆಯೋ, ಆಗಲೇ ಜ್ಯೋತಿಷ್ಯದ ಪ್ರಕಾರ ಶುಕ್ರ ಗ್ರಹ ದುರ್ಬಲಗೊಳ್ಳುತ್ತಿದ್ದಾನೆ ಎಂದರ್ಥ. ಇಂತಹ ಪರಿಸ್ಥಿತಿಯಲ್ಲಿ ಆ ಕೂದಲನ್ನು ಕಾಲಿನಿಂದ ತುಳಿದರೆ ನಮ್ಮ ಜೀವನದ ಸುಖ-ಸಂತೋಷಗಳಿಗೆ ಧಕ್ಕೆಯಾಗುತ್ತದೆ ಎಂದು ನಂಬಲಾಗಿದೆ.

ಮಹಿಳೆಯರ ಕೂದಲು:

ಯಾವುದೇ ಒಬ್ಬ ಮಹಿಳೆಯ ತಲೆಯಿಂದ ಉದುರಿದ ಕೂದಲು ಯಾರದೇ ಕಾಲಿನ ಕೆಳಗೆ ಬಂದರೆ, ಅದು ಆ ಮಹಿಳೆಗೂ ಒಳ್ಳೆಯದಲ್ಲ ಮತ್ತು ಅದನ್ನು ತುಳಿದ ವ್ಯಕ್ತಿಗೂ ಶುಭವಲ್ಲ. ಶಾಸ್ತ್ರಗಳ ಪ್ರಕಾರ, ಮಹಿಳೆಯರ ಉದುರಿದ ಕೂದಲನ್ನು ತುಳಿಯುವುದರಿಂದ ಆ ವ್ಯಕ್ತಿಯ ಆರ್ಥಿಕ ಪರಿಸ್ಥಿತಿ ಹದಗೆಡುತ್ತದೆ, ಭೌತಿಕ ಸುಖಗಳು ದೂರವಾಗುತ್ತವೆ ಮತ್ತು ಅವರ ದೈಹಿಕ ಸೌಂದರ್ಯಕ್ಕೆ ಹಾನಿ ಉಂಟಾಗುತ್ತದೆ.

ಇದನ್ನೂ ಓದಿ: ಗರುಡ ಪುರಾಣದ ಪ್ರಕಾರ ಈ 4 ಕೆಟ್ಟ ಅಭ್ಯಾಸಗಳಿದ್ದರೆ ಕೋಟ್ಯಧಿಪತಿಯೂ ಭಿಕ್ಷುಕನಾಗುತ್ತಾನೆ!

ಪುರುಷರ ಕೂದಲು ತುಳಿದರೆ ಆರೋಗ್ಯಕ್ಕೆ ಕುತ್ತು!

ಕೇವಲ ಮಹಿಳೆಯರಷ್ಟೇ ಅಲ್ಲ, ಪುರುಷರು ಸಹ ತಾವೂ ಕೂದಲು ಬಾಚಿದಾಗ ಅಥವಾ ಶೇವ್ ಮಾಡಿದಾಗ ಉದುರುವ ಕೂದಲನ್ನು ತಕ್ಷಣವೇ ಕಸದ ಬುಟ್ಟಿಗೆ ಹಾಕಬೇಕು. ಪುರುಷರ ಕೂದಲು ತುಳಿದರೆ ಆ ವ್ಯಕ್ತಿಯ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತದೆ. ಅಷ್ಟೇ ಅಲ್ಲದೆ, ಇದರಿಂದ ಜಾತಕದಲ್ಲಿರುವ ಸೂರ್ಯ, ಮಂಗಳ ಮತ್ತು ಬೃಹಸ್ಪತಿ (ಗುರು) ಗ್ರಹಗಳು ದುರ್ಬಲಗೊಳ್ಳುತ್ತವೆ. ಇದರ ಪರಿಣಾಮವಾಗಿ ವ್ಯಕ್ತಿಯ ನಾಯಕತ್ವ ಗುಣ, ಶಕ್ತಿ, ಮತ್ತು ಧೈರ್ಯ ಕುಂದುತ್ತಾ ಹೋಗುತ್ತದೆ ಎಂದು ನಂಬಲಾಗಿದೆ.

ಪುಟಾಣಿ ಮಕ್ಕಳ ಕೂದಲು ಮತ್ತು ಚಂದ್ರ ಗ್ರಹದ ಪ್ರಭಾವ:

ಮಕ್ಕಳು ಜನಿಸಿದಾಗ ಅವರ ತಲೆಯ ಮೇಲಿರುವ ಮೃದುವಾದ ಕೂದಲನ್ನು (ಹುಟ್ಟು ಕೂದಲು ಅಥವಾ ಹೊಟ್ಟೆ ಕೂದಲು) ತುಂಬಾ ಜಾಗರೂಕತೆಯಿಂದ ನೋಡಿಕೊಳ್ಳಬೇಕು. ಈ ಕೂದಲು ಉದುರಿ ಯಾರಾದರೂ ಅದರ ಮೇಲೆ ಕಾಲಿಟ್ಟರೆ, ಮಗುವಿನ ಜಾತಕದಲ್ಲಿ ಚಂದ್ರ ಗ್ರಹ ದುರ್ಬಲನಾಗುತ್ತಾನೆ. ಚಂದ್ರನು ಮನಸ್ಸು ಮತ್ತು ಆರೋಗ್ಯಕ್ಕೆ ಕಾರಕನಾಗಿರುವುದರಿಂದ ಮಗುವಿನ ಆರೋಗ್ಯ ಪದೇ ಪದೇ ಕ್ಷೀಣಿಸಬಹುದು ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ರೈಲಿಗೆ ಬಾಂಬ್ ಬೆದರಿಕೆ: ಪ್ರಯಾಣಿಕರನ್ನ ಕೆಳಗಿಳಿಸಿ ತಪಾಸಣೆ, ಓರ್ವ ವಶಕ್ಕೆ!
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾದ ನಟ ರಿಷಬ್ ಶೆಟ್ಟಿ; ಕಾರಣ ಏನು?
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಮನಮೋಹಕವಾಗಿ ಕಾಣುವ ಕೂಡ್ಲು ಫಾಲ್ಸ್ ಅಷ್ಟೇ ಅಪಾಯಕಾರಿ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಕೊನೆಗೂ ತುಂಬಿದ ತುಂಗಾ ಜಲಾಶಯ, ತುಂಗಭದ್ರ ನದಿ ಪಾತ್ರದಲ್ಲಿ ಸಂಭ್ರಮ
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಪಶ್ಚಿಮ ಘಟ್ಟ ಭಾಗದಲ್ಲಿ ಮಳೆ; ಮಲಪ್ರಭಾ ನದಿ ತಟದ ಮಾರುತಿ ಮಂದಿರ ಮುಳುಗಡೆ!
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮಹಾರಾಷ್ಟ್ರದದಲ್ಲಿ ಮಳೆ ಆರ್ಭಟಕ್ಕೆ ನಿಪ್ಪಾಣಿಯಲ್ಲಿ ಸೇತುವೆಗಳು ಜಲಾವೃತ
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಿದ ಡ್ರೈವರ್!
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ವಿಎಒ ಭುವನಾ ದುರ್ಮರಣ: ಮಗಳ ಮದುವೆ ಕನಸು ಕಂಡಿದ್ದ ಕುಟುಂಬಕ್ಕೆ ಬರಸಿಡಿಲು
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು, ಧಾರಾಕಾರ ಮಳೆ: ಪ್ರವಾಸಿಗರು ಫುಲ್ ಖುಷ್!
ಜುಲೈ 6 ರಿಂದ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿವೆ
ಜುಲೈ 6 ರಿಂದ 12 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿವೆ