AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swapna Shastra: ಕನಸಿನಲ್ಲಿ ನವಿಲು ಕಂಡರೆ ಏನರ್ಥ? ಶುಭವೋ, ಅಶುಭವೋ?

ಸ್ವಪ್ನಶಾಸ್ತ್ರದ ಪ್ರಕಾರ, ಕನಸಿನಲ್ಲಿ ನವಿಲು ಕಾಣುವುದು ಅತ್ಯಂತ ಶುಭ ಸೂಚನೆ. ಇದು ಸಂತೋಷ, ಸಂಪತ್ತು ಮತ್ತು ಹಣದ ಲಾಭವನ್ನು ಸೂಚಿಸುತ್ತದೆ. ನವಿಲುಗಳ ಜೋಡಿ ಕಂಡರೆ ಮದುವೆ ಅಥವಾ ವೈವಾಹಿಕ ಜೀವನದಲ್ಲಿ ಸುಧಾರಣೆ ಆಗಲಿದೆ. ಬಿಳಿ ನವಿಲು ಲಕ್ಷ್ಮೀ ದೇವಿಯ ಆಶೀರ್ವಾದ ಮತ್ತು ಆರ್ಥಿಕ ಏಳಿಗೆಯ ಸಂಕೇತ. ಈ ಲೇಖನದಲ್ಲಿ ನವಿಲು ಕನಸಿನ ವಿವಿಧ ಅರ್ಥಗಳನ್ನು ವಿವರಿಸಲಾಗಿದೆ.

Swapna Shastra: ಕನಸಿನಲ್ಲಿ ನವಿಲು ಕಂಡರೆ ಏನರ್ಥ? ಶುಭವೋ, ಅಶುಭವೋ?
Peacock Dream
ಅಕ್ಷತಾ ವರ್ಕಾಡಿ
|

Updated on: Apr 01, 2025 | 8:55 AM

Share

ನಿದ್ದೆ ಮಾಡುವಾಗ ಕನಸು ಬೀಳುವುದು ಸಹಜ. ಜನರು ಗಾಢ ನಿದ್ರೆಯಲ್ಲಿ ವಿಭಿನ್ನ ಕನಸುಗಳನ್ನು ಕಾಣುತ್ತಾರೆ. ಕೆಲವು ಕನಸುಗಳು ಸಂತೋಷವನ್ನು ನೀಡಿದರೆ ಇನ್ನೂ ಕೆಲವು ಕನಸುಗಳು ಭಯ ಹುಟ್ಟಿಸುತ್ತವೆ. ಸ್ವಪ್ನ ಶಾಸ್ತ್ರದ ಪ್ರಕಾರ ಪ್ರತಿಯೊಂದು ಕನಸಿಗೂ ಒಂದು ಅರ್ಥವಿದೆ. ಅದರಂತೆ ನೀವು ನಿಮ್ಮ ಕನಸಿನಲ್ಲಿ ನವಿಲು ನೋಡಿದರೆ, ಅದರ ಅರ್ಥವೇನು ಮತ್ತು ಅದು ಭವಿಷ್ಯದ ಬಗ್ಗೆ ಏನನ್ನು ಸೂಚಿಸುತ್ತದೆ? ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಸ್ವಪ್ನ ಶಾಸ್ತ್ರದ ಪ್ರಕಾರ, ನವಿಲನ್ನು ನೋಡುವುದು ತುಂಬಾ ಶುಭವೆಂದು ಪರಿಗಣಿಸಲಾಗಿದೆ. ಇದರರ್ಥ ಜೀವನದಲ್ಲಿ ಸಂತೋಷವು ಬರಲಿದೆ. ಈ ಕನಸು ಹಣ ಗಳಿಸುವ ಮಾರ್ಗಗಳಿವೆ ಎಂದು ಸೂಚಿಸುತ್ತದೆ. ಇದಲ್ಲದೇ ಕನಸಿನಲ್ಲಿ ನವಿಲುಗಳ ಜೋಡಿ ಒಟ್ಟಿಗೆ ಕಂಡರೆ ಶುಭ. ಗಂಡು ಮತ್ತು ಹೆಣ್ಣು ನವಿಲುಗಳು ಕಂಡರೆ, ನೀವು ಶೀಘ್ರದಲ್ಲೇ ಮದುವೆಯಾಗಲಿದ್ದೀರಿ ಎಂದರ್ಥ. ನೀವು ಈಗಾಗಲೇ ಮದುವೆಯಾಗಿದ್ದರೆ, ನಿಮ್ಮ ವೈವಾಹಿಕ ಜೀವನದಲ್ಲಿ ಸಂತೋಷ ಬರುತ್ತಿದೆ ಎಂದರ್ಥ. ಗಂಡ ಹೆಂಡತಿಯ ನಡುವಿನ ಪ್ರೀತಿ ಮತ್ತು ವಾತ್ಸಲ್ಯ ಹೆಚ್ಚಾಗುತ್ತದೆ ಎಂಬ ಅರ್ಥವನ್ನು ನೀಡುತ್ತದೆ.

ಇದನ್ನೂ ಓದಿ: ಮನೆಗೆ ಪದೇ ಪದೇ ಕಪ್ಪು ಇರುವೆ ಬರುತ್ತಿದ್ದರೆ ಏನರ್ಥ? ಶುಭವೋ, ಅಶುಭವೋ?

ಇದನ್ನೂ ಓದಿ
Image
ಬೆಳಿಗ್ಗೆ ಎದ್ದ ತಕ್ಷಣ ತಪ್ಪಿಯೂ ಈ ಕೆಲಸ ಮಾಡಬೇಡಿ!
Image
ಕನಸಿನಲ್ಲಿ ಬಾವಲಿ ಕಂಡರೆ ಶುಭವೋ, ಅಶುಭವೋ? ಸ್ವಪ್ನ ಶಾಸ್ತ್ರ ಹೇಳುವುದೇನು?
Image
ಜಾತಕದಲ್ಲಿ ಮಂಗಳ ದೋಷ ಇದ್ದರೆ ತಿಳಿಯುವುದು ಹೇಗೆ? ಅದಕ್ಕೆ ಪರಿಹಾರಗಳೇನು?
Image
ಹನುಮ ಜಯಂತಿ ಯಾವಾಗ? ಸರಿಯಾದ ದಿನಾಂಕ ಮತ್ತು ಪೂಜಾ ವಿಧಾನ

ನಿಮ್ಮ ಕನಸಿನಲ್ಲಿ ಬಿಳಿ ನವಿಲು ಕಾಣಿಸಿಕೊಂಡರೆ, ಲಕ್ಷ್ಮಿ ದೇವಿಯು ನಿಮ್ಮನ್ನು ನೋಡುತ್ತಿದ್ದಾಳೆ ಮತ್ತು ನಿಮ್ಮ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಸಂಪತ್ತು ಹರಿಯಲಿದೆ ಎಂದರ್ಥ. ಕನಸಿನ ವಿಜ್ಞಾನದಲ್ಲಿ, ಬಿಳಿ ನವಿಲುಗಳನ್ನು ಆರ್ಥಿಕ ಸ್ಥಿತಿಯ ಸೂಚಕವೆಂದು ಪರಿಗಣಿಸಲಾಗುತ್ತದೆ. ಕನಸಿನಲ್ಲಿ ಬಿಳಿ ನವಿಲನ್ನು ನೋಡಿದರೆ ಬಡತನ ನಿವಾರಣೆಯಾಗುತ್ತದೆ ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ