AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Drusti Dosha: ದೃಷ್ಟಿ ದೋಷ ನಿವಾರಣೆ ಮಾಡಲು ಕಲ್ಲು ಉಪ್ಪನ್ನು ಈ ರೀತಿ ಬಳಸಿ

ನೀಚ ನೋಟ, ಅಸೂಯೆಯ ಭಾವನೆಯಿಂದ ದೃಷ್ಟಿದೋಷ ಉಂಟಾಗುತ್ತದೆ. ಇದರಿಂದ ಯಾವುದೇ ಕೆಲಸ ಕಾರ್ಯಗಳಿಗೆ ಕೈ ಹಾಕಿದರೂ ಅವು ಯಶಸ್ಸು ಕಾಣುವುದಿಲ್ಲ. ಅಂಥ ಸಮಯದಲ್ಲಿ ಬಲ್ಲವರಿಂದ ದೃಷ್ಟಿದೋಷವನ್ನು ನಿವಾರಿಸಿಕೊಳ್ಳುವುದೇ ಸೂಕ್ತ. ಹಾಗಾದರೆ ದೃಷ್ಟಿದೋಷ ನಿವಾರಣೆ ಮಾಡಿಕೊಳ್ಳುವುದು ಹೇಗೆ? ಇದಕ್ಕೆ ಕಲ್ಲು ಉಪ್ಪು ಹೇಗೆ ಸಹಕಾರಿ? ಇಲ್ಲಿದೆ ಮಾಹಿತಿ.

Drusti Dosha: ದೃಷ್ಟಿ ದೋಷ ನಿವಾರಣೆ ಮಾಡಲು ಕಲ್ಲು ಉಪ್ಪನ್ನು ಈ ರೀತಿ ಬಳಸಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: May 18, 2024 | 12:06 PM

Share

ನರದೃಷ್ಟಿಗೆ ಕಲ್ಲು ಕೂಡಾ ಸಿಡಿದು ಚೂರಾಗುತ್ತದೆ ಎಂಬ ಮಾತನ್ನು ನೀವು ಕೇಳಿರಬಹುದು. ನೀಚ ನೋಟ, ಅಸೂಯೆಯ ಭಾವನೆಯಿಂದ ದೃಷ್ಟಿದೋಷ ಉಂಟಾಗುತ್ತದೆ. ಇದರಿಂದ ಯಾವುದೇ ಕೆಲಸ ಕಾರ್ಯಗಳಿಗೆ ಕೈ ಹಾಕಿದರೂ ಅವು ಯಶಸ್ಸು ಕಾಣುವುದಿಲ್ಲ. ಅಂಥ ಸಮಯದಲ್ಲಿ ಬಲ್ಲವರಿಂದ ದೃಷ್ಠಿದೋಷವನ್ನು ನಿವಾರಿಸಿಕೊಳ್ಳುವುದೇ ಸೂಕ್ತ ಪರಿಹಾರ. ಇದನ್ನು ಆಡು ಭಾಷೆಯಲ್ಲಿ ದೃಷ್ಟಿ ತೆಗೆಯುವುದು ಎನ್ನುತ್ತೇವೆ. ಕೆಲವು ಊರುಗಳಲ್ಲಿ ಮಹಿಳೆಯರು ಈ ಕೆಲಸವನ್ನು ವಿವಿಧ ರೀತಿಯಲ್ಲಿ ಮಾಡುತ್ತಾರೆ. ಇದು ಕೆಲವರಿಗೆ ಮೂಢನಂಬಿಕೆ ಎನಿಸಬಹುದು ಆದರೆ ಈ ದೋಷವನ್ನು ಕಡೆಗಣಿಸುವಂತಿಲ್ಲ.

ದೃಷ್ಟಿದೋಷದ ಲಕ್ಷಣಗಳೇನು?

ಯಾವುದೇ ವ್ಯಕ್ತಿಗೆ ದೃಷ್ಟಿದೋಷ ತಗಲಿದ್ದರೆ ಆತನ ಆರೋಗ್ಯ ಹಾಳಾಗುತ್ತದೆ. ಕಣ್ಣು ಮತ್ತು ತಲೆ ಭಾರವಾಗುತ್ತದೆ. ಕಣ್ಣಿನಲ್ಲಿ ನೀರು ಸುರಿಯುತ್ತದೆ. ಜೊತೆಗೆ ಊಟ ಅಥವಾ ತಿಂಡಿ ತಿನ್ನಲು ಮನಸ್ಸಿರುವುದಿಲ್ಲ. ನಿದ್ದೆಯೂ ಸರಿಯಾಗಿ ಬರುವುದಿಲ್ಲ. ಅಂಗಡಿ ಅಥವಾ ವ್ಯಾಪಾರ ಸಂಸ್ಥೆಗೆ ದೃಷ್ಟಿ ತಗುಲಿದರೆ ವ್ಯಾಪಾರ ಕಡಿಮೆಯಾಗುತ್ತದೆ. ಮನೆಗೆ ದೃಷ್ಟಿ ತಗುಲಿದಾಗ ಗೋಡೆಗಳಿಗೆ ಬಿರುಕು ಕಾಣಿಸಿಕೊಳ್ಳುತ್ತವೆ. ಗಿಡ ಮರಗಳಿಗೆ ದೃಷ್ಟಿದೋಷ ತಗುಲಿದಾಗ ಅವು ಒಣಗಲು ಪ್ರಾರಂಭಿಸುತ್ತವೆ. ಕೆಲವೊಮ್ಮೆ ಫಸಲು ನಿಂತು ಹೋಗಬಹುದು. ಚಿಕ್ಕ ಮಕ್ಕಳಿಗೆ ದೃಷ್ಟಿದೋಷ ಆದರೆ ದಿನಪೂರ್ತಿ ಅಳುವುದು, ವಾಂತಿ ಇನ್ನಿತರ ಲಕ್ಷಣಗಳು ಕಾಣಿಸಿಕೊಳ್ಳಬಹುದು.

ಇದನ್ನೂ ಓದಿ: ಜಾತಕದಲ್ಲಿ ಮಂಗಳ ದೋಷವಿದ್ದರೆ ವಿವಾಹದಲ್ಲಿ ಅಡೆತಡೆ ತಪ್ಪಿದ್ದಲ್ಲ! ಇದಕ್ಕೆ ಪರಿಹಾರವೇನು?

ಇದಕ್ಕೆ ಪರಿಹಾರವೇನು?

ಮನೆಯಲ್ಲಿಯೇ ಕಲ್ಲು ಉಪ್ಪನ್ನು ಬಳಸಿಕೊಂಡು ದೃಷ್ಟಿದೋಷದಿಂದ ಮುಕ್ತಿ ಪಡೆದುಕೊಳ್ಳಬಹುದು. ಹೊರಗೆ ಹೋಗಿ ಬಂದ ಸಂದರ್ಭದಲ್ಲಿ ಒಂದು ಗಾಜಿನ ಲೋಟಕ್ಕೆ ನೀರನ್ನು ಹಾಕಿ ಅದಕ್ಕೆ ಎರಡು ಚಮಚ ಕಲ್ಲು ಉಪ್ಪನ್ನು ಸೇರಿಸಿ ಅದಾದ ನಂತರ ನಿಮ್ಮ ಅಜ್ಜಿ ಅಥವಾ ಅಮ್ಮನ ಹತ್ತಿರ ಕೊಟ್ಟು ಅದನ್ನು ಎಡಗೈಯಲ್ಲಿ ಇಟ್ಟುಕೊಂಡು ಏಳು ಬಾರಿ ತಲೆಯಿಂದ ಕಾಲಿನವರೆಗೆ ನಿವಾಳಿಸಿ ಬಳಿಕ ಅದನ್ನು ಮೂರು ದಾರಿ ಕೂಡುವಲ್ಲಿ, ಇಲ್ಲವಾದಲ್ಲಿ ನಿಮ್ಮ ಮನೆಯ ಸಿಂಕ್ ಗಳಲ್ಲಿ ಚೆಲ್ಲಿರಿ. ಇದರಿಂದ ದೃಷ್ಠಿ ದೋಷ, ಶತ್ರು ಬಾಧೆ ಇದ್ದಲ್ಲಿ ನಿವಾರಣೆಯಾಗುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ