AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ekadashi in March 2024: ಮಾರ್ಚ್ ತಿಂಗಳಿನಲ್ಲಿ ಬರುವ ಏಕಾದಶಿಯನ್ನು ಯಾವ ದಿನ, ಹೇಗೆ ಆಚರಿಸಬೇಕು ತಿಳಿಯಿರಿ

ಈ ದಿನ ವಿಷ್ಣುವನ್ನು ಭಕ್ತಿಯಿಂದ ಪೂಜಿಸಲಾಗುತ್ತದೆ ಜೊತೆಗೆ ವಿಷ್ಣು ಭಕ್ತರು ದೇವರಿಗೆ ಪ್ರಾರ್ಥನೆ ಸಲ್ಲಿಸಿ ಕಟ್ಟುನಿಟ್ಟಾದ ಉಪವಾಸವನ್ನು ಆಚರಿಸುತ್ತಾರೆ. ಈ ಉಪವಾಸವು ಸೂರ್ಯೋದಯದಿಂದ ಪ್ರಾರಂಭ ಮಾಡಿ ಮರುದಿನ ಅಂದರೆ ದ್ವಾದಶಿಯಂದು ತಮ್ಮ ಉಪವಾಸವನ್ನು ಅಂತ್ಯಗೊಳಿಸುತ್ತಾರೆ. ಏಕಾದಶಿ ಶುಕ್ಲ ಪಕ್ಷ ಮತ್ತು ಕೃಷ್ಣ ಪಕ್ಷದ ಸಮಯದಲ್ಲಿ ಅಂದರೆ ತಿಂಗಳಿಗೆ ಎರಡು ಬಾರಿ ಬರುತ್ತದೆ.

Ekadashi in March 2024: ಮಾರ್ಚ್ ತಿಂಗಳಿನಲ್ಲಿ ಬರುವ ಏಕಾದಶಿಯನ್ನು ಯಾವ ದಿನ, ಹೇಗೆ ಆಚರಿಸಬೇಕು ತಿಳಿಯಿರಿ
Ekadashi in March 2024
ಪ್ರೀತಿ ಭಟ್​, ಗುಣವಂತೆ
| Edited By: |

Updated on: Feb 29, 2024 | 3:37 PM

Share

ಏಕಾದಶಿ ವರ್ಷದ ಪ್ರಮುಖ ಆಚರಣೆಗಳಲ್ಲಿ ಒಂದಾಗಿದ್ದು, ಈ ದಿನ ವಿಷ್ಣುವನ್ನು ಭಕ್ತಿಯಿಂದ ಪೂಜಿಸಲಾಗುತ್ತದೆ ಜೊತೆಗೆ ವಿಷ್ಣು ಭಕ್ತರು ದೇವರಿಗೆ ಪ್ರಾರ್ಥನೆ ಸಲ್ಲಿಸಿ ಕಟ್ಟುನಿಟ್ಟಾದ ಉಪವಾಸವನ್ನು ಆಚರಿಸುತ್ತಾರೆ. ಈ ಉಪವಾಸವು ಸೂರ್ಯೋದಯದಿಂದ ಪ್ರಾರಂಭ ಮಾಡಿ ಮರುದಿನ ಅಂದರೆ ದ್ವಾದಶಿಯಂದು ತಮ್ಮ ಉಪವಾಸವನ್ನು ಅಂತ್ಯಗೊಳಿಸುತ್ತಾರೆ. ಏಕಾದಶಿ ಶುಕ್ಲ ಪಕ್ಷ ಮತ್ತು ಕೃಷ್ಣ ಪಕ್ಷದ ಸಮಯದಲ್ಲಿ ಅಂದರೆ ತಿಂಗಳಿಗೆ ಎರಡು ಬಾರಿ ಬರುತ್ತದೆ. ಹಾಗಾಗಿ ಮಾರ್ಚ್ ತಿಂಗಳಲ್ಲಿ ಆಚರಿಸುವ ಏಕಾದಶಿ ವ್ರತದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದ್ದು, ಸಮಯ? ಮಹತ್ವ ಮತ್ತು ಆಚರಣೆಯ ವಿಧಾನಗಳ ಬಗ್ಗೆ ತಿಳಿಯಿರಿ.

ಏಕಾದಶಿ ದಿನದ ಆಚರಣೆಯ ಸಮಯ?

2024 ಮಾರ್ಚ್ ತಿಂಗಳ ಮೊದಲ ಏಕಾದಶಿ: ವಿಜಯ ಏಕಾದಶಿ (ಕೃಷ್ಣ ಪಕ್ಷ) ತಿಥಿಯು ಮಾ. 6 ರಂದು ಬೆಳಿಗ್ಗೆ 06:30 ಕ್ಕೆ ಪ್ರಾರಂಭವಾಗಿ, ಮಾ. 7 ರಂದು ಬೆಳಿಗ್ಗೆ 04:13ಕ್ಕೆ ತಿಥಿ ಮುಕ್ತಾಯವಾಗುತ್ತದೆ. ಹಾಗಾಗಿ ಮಾರ್ಚ್ 6 ಬುಧವಾರ ದಂದು ವಿಜಯ ಏಕಾದಶಿಯನ್ನು ಆಚರಣೆ ಮಾಡಲಾಗುತ್ತದೆ.

2024 ಮಾರ್ಚ್ ತಿಂಗಳ ಎರಡನೇ ಏಕಾದಶಿ:

ಅಮಲಕಿ ಏಕಾದಶಿ (ಶುಕ್ಲ ಪಕ್ಷ) ತಿಥಿಯು ಮಾ. 20 ರಂದು ಬೆಳಿಗ್ಗೆ 12:21 ಕ್ಕೆ ಪ್ರಾರಂಭವಾಗುತ್ತದೆ. ಮಾ. 21 ರಂದು ಬೆಳಿಗ್ಗೆ 02:22 ಕ್ಕೆ ತಿಥಿ ಮುಕ್ತಾಯವಾಗುತ್ತದೆ. ಹಾಗಾಗಿ ಮಾರ್ಚ್ 20 ರಂದು ಬುಧವಾರ ಅಮಲಕಿ ಏಕಾದಶಿಯನ್ನು ಆಚರಿಸಲಾಗುತ್ತದೆ.

ಏಕಾದಶಿ ದಿನದ ಮಹತ್ವ:

ಏಕಾದಶಿ ಹಿಂದೂಗಳಲ್ಲಿ ಹೆಚ್ಚಿನ ಧಾರ್ಮಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಹೊಂದಿದೆ. ವಿಷ್ಣು ಭಕ್ತರು ಈ ಉಪವಾಸವನ್ನು ಆಚರಿಸಿಸುತ್ತಾರೆ. ಈ ದಿನ ವಿಷ್ಣು ದೇವರ ಮಂತ್ರಗಳನ್ನು ಪಠಿಸುವ ಮೂಲಕ, ದೇವರಿಗೆ ನೈವೇದ್ಯವನ್ನು ಅರ್ಪಿಸಿ, ಏಕಾದಶಿ ವ್ರತ ಕಥೆಯನ್ನು ಕೇಳುವ ಮೂಲಕ ಭಗವಂತನ ಆಶೀರ್ವಾದವನ್ನು ಪಡೆಯುತ್ತಾರೆ.

ಏಕಾದಶಿ ದಿನದ ಪೂಜಾ ವಿಧಿ:

  1. ಬೆಳಿಗ್ಗೆ ಬೇಗನೆ ಎದ್ದು ಸ್ನಾನ ಮಾಡಿ.
  2. ಪೂಜಾ ಸ್ಥಳವನ್ನು ಸ್ವಚ್ಛಗೊಳಿಸಿ
  3. ವಿಷ್ಣು ಮತ್ತು ಲಕ್ಷ್ಮಿ ದೇವಿಯ ವಿಗ್ರಹ ಅಥವಾ ಫೋಟೋವನ್ನು ಮಣೆಯ ಮೇಲೆ ಇಡಿ.
  4. ದೇವರ ಮುಂದೆ ತುಪ್ಪದಿಂದ ದೀಪವನ್ನು ಬೆಳಗಿಸಿ, ವಿಗ್ರಹಗಳನ್ನು ಹೂವುಗಳಿಂದ ಅಲಂಕರಿಸಿ ಮತ್ತು ಮನೆಯಲ್ಲಿ ತಯಾರಿಸಿದ ನೈವೇದ್ಯಗಳನ್ನು ಅರ್ಪಿಸಿ.
  5. “ಓಂ ನಮೋ ಭಗವತೇ ವಾಸುದೇವಾಯ” ಎಂಬ ಮಂತ್ರವನ್ನು 108 ಬಾರಿ ಪಠಿಸಿ.
  6. ಏಕಾದಶಿ ವ್ರತದ ಕಥೆಯನ್ನು ಪಠಿಸಿ.
  7. ದೇವರಿಗೆ ಆರತಿ ಮಾಡಿ ಪೂಜೆಯನ್ನು ಮುಗಿಸಿ ದೇವರಿಗೆ ಮಾಡಿದ ನೈವೇದ್ಯವನ್ನು ಎಲ್ಲರಿಗೂ ಹಂಚಿ.
  8. ಸಂಜೆ ಸಮಯದಲ್ಲಿಯೂ ಕೂಡ ವಿಷ್ಣುವಿಗೆ ಪೂಜೆ ಮಾಡಿ.
  9. ಈ ದಿನ ತಿನ್ನುವ ಆಹಾರ ಸಾತ್ವಿಕವಾಗಿರಲಿ, ಹಣ್ಣುಗಳನ್ನು ಸೇವಿಸಬಹುದು ಆದರೆ ಅಕ್ಕಿಯನ್ನು ಬಳಸಿದ ಆಹಾರಗಳನ್ನು ಸೇವನೆ ಮಾಡಬೇಡಿ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ