AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Phalguna Amavasya 2025: ಫಾಲ್ಗುಣ ಅಮಾವಾಸ್ಯೆ ಯಾವಾಗ? ಪಿತೃ ದೋಷದಿಂದ ಮುಕ್ತಿ ಪಡೆಯಲು ಈ ಪರಿಹಾರ ಮಾಡಿ

ಫಾಲ್ಗುಣ ಅಮವಾಸ್ಯೆ ಪಿತೃ ತರ್ಪಣಕ್ಕೆ ಅತ್ಯಂತ ಶುಭ ದಿನ. ಈ ವರ್ಷ ಫಾಲ್ಗುಣ ಅಮವಾಸ್ಯೆ ಗುರುವಾರ, ಫೆಬ್ರವರಿ 27 ರಂದು ಬಂದಿದೆ. ಈ ದಿನ ಗಂಗಾ ಸ್ನಾನ, ದಾನ ಮತ್ತು ಪೂರ್ವಜರ ಪೂಜೆಗಳನ್ನು ಮಾಡುವುದರಿಂದ ಸಮೃದ್ಧಿ ಮತ್ತು ಸಂತೋಷ ದೊರೆಯುತ್ತದೆ ಎಂಬ ನಂಬಿಕೆ ಇದೆ. ಆದ್ದರಿಂದ ಶುಭ ಮುಹೂರ್ತ ಯಾವಾಗ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

Phalguna Amavasya 2025: ಫಾಲ್ಗುಣ ಅಮಾವಾಸ್ಯೆ ಯಾವಾಗ? ಪಿತೃ ದೋಷದಿಂದ ಮುಕ್ತಿ ಪಡೆಯಲು ಈ ಪರಿಹಾರ ಮಾಡಿ
Phalguna Amavasya 2025
ಅಕ್ಷತಾ ವರ್ಕಾಡಿ
|

Updated on:Feb 13, 2025 | 7:42 AM

Share

ಪೂರ್ವಜರ ಶ್ರಾದ್ಧ ಕಾರ್ಯಗಳನ್ನು ನಿರ್ವಹಿಸಲು ಅಮಾವಾಸ್ಯೆ ಅತ್ಯುತ್ತಮ ತಿಥಿ ಎಂದು ಪರಿಗಣಿಸಲಾಗಿದೆ. ಈ ವರ್ಷ ಫಾಲ್ಗುಣ ಅಮವಾಸ್ಯೆ ಗುರುವಾರ, ಫೆಬ್ರವರಿ 27 ರಂದು ಬಂದಿದೆ. ಈ ದಿನ ಗಂಗಾನದಿಯಲ್ಲಿ ಸ್ನಾನ ಮಾಡಿ ದಾನ ಮಾಡುವವರಿಗೆ ಪೂರ್ವಜರ ಆಶೀರ್ವಾದ ಸಿಗುತ್ತದೆ ಮತ್ತು ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ಸದಾ ನೆಲೆಸಿರುತ್ತದೆ ಎಂದು ನಂಬಲಾಗಿದೆ.

ಫಾಲ್ಗುಣ ಅಮವಾಸ್ಯೆಯ ಸಮಯ:

ಫಾಲ್ಗುಣ ಅಮಾವಾಸ್ಯೆ ಫೆಬ್ರವರಿ 27 ರಂದು ಬೆಳಿಗ್ಗೆ 8.54 ಕ್ಕೆ ಪ್ರಾರಂಭವಾಗಿ ಫೆಬ್ರವರಿ 28 ರಂದು ಬೆಳಿಗ್ಗೆ 6.14 ಕ್ಕೆ ಕೊನೆಗೊಳ್ಳುತ್ತದೆ.

ಇದನ್ನೂ ಓದಿ: ಫಾಲ್ಗುಣ ಮಾಸದಲ್ಲಿ ಪ್ರದೋಷ ವ್ರತ ಯಾವಾಗ? ದಿನಾಂಕ ಮತ್ತು ಶುಭ ಸಮಯ ತಿಳಿಯಿರಿ

ಫಾಲ್ಗುಣ ಅಮವಾಸ್ಯೆಯಂದು ಈ ಪರಿಹಾರಗಳನ್ನು ಮಾಡಿ:

  • ಫಾಲ್ಗುಣ ಅಮವಾಸ್ಯೆಯಂದು, ನೀರಿನಲ್ಲಿ ಕಪ್ಪು ಎಳ್ಳನ್ನು ಸೇರಿಸಿ ಸ್ನಾನ ಮಾಡಿ. ತರ್ಪಣದಲ್ಲಿ ಎಳ್ಳು ಮತ್ತು ಕುಶವನ್ನು ಸಹ ಬಳಸಿ. ಇದು ಪೂರ್ವಜರನ್ನು ಮೆಚ್ಚಿಸುತ್ತದೆ. ಇದರಿಂದ ಕುಟುಂಬ ಸದಸ್ಯರು ಸಂತೋಷ ಮತ್ತು ಸಮೃದ್ಧಿಯಿಂದ ಆಶೀರ್ವದಿಸಲ್ಪಡುತ್ತಾರೆ ಎಂದು ನಂಬಲಾಗಿದೆ.
  • ಫಾಲ್ಗುಣ ಅಮವಾಸ್ಯೆಯಂದು ಬೆಳಿಗ್ಗೆ ಅರಳಿ ಮರಕ್ಕೆ ನೀರು ಅರ್ಪಿಸಿ ಮತ್ತು ಸಂಜೆ ಶುದ್ಧ ಹಸುವಿನ ತುಪ್ಪದ ದೀಪವನ್ನು ಬೆಳಗಿಸಿ. ಪಿತೃ ಸೂಕ್ತಂ ಪಠಿಸಿ. ಇದು ಪೂರ್ವಜರ ಆತ್ಮಗಳನ್ನು ತೃಪ್ತಿಪಡಿಸುತ್ತದೆ.
  • ಫಾಲ್ಗುಣ ಅಮವಾಸ್ಯೆಯಂದು, ಹಸುವಿನ ಸೆಗಣಿಯಿಂದ ಮಾಡಿದ ಬೆರಣಿ ಸುಟ್ಟು ಅದರ ಮೇಲೆ ತುಪ್ಪ-ಬೆಲ್ಲದ ಧೂಪವನ್ನು ಅರ್ಪಿಸಿ ‘ಪಿತೃ ದೇವತಾಭ್ಯೋ ಅರ್ಪಣಮಸ್ತು’ ಎಂದು ಹೇಳಿ. ಅಲ್ಲದೆ, ಪೂರ್ವಜರನ್ನು ಸ್ಮರಿಸಿ, ಹಸುವಿಗೆ ಹಸಿರು ಮೇವನ್ನು ತಿನ್ನಿಸಿ. ಹೀಗೆ ಮಾಡುವುದರಿಂದ, ಪೂರ್ವಜರು ಸಂತುಷ್ಟರಾಗುತ್ತಾರೆ ಮತ್ತು ಕುಟುಂಬದದಲ್ಲಿ ಸಂತೋಷ ಮತ್ತು ಸಮೃದ್ಧಿ ಸದಾ ನೆಲೆಸಿರುತ್ತದೆ ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:41 am, Thu, 13 February 25

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ