AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿದಿನ ಹಸುವಿಗೆ ಆಹಾರ ನೀಡುವುದರಿಂದ ಆಗುವ ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಪ್ರಯೋಜನ

ಹಿಂದೂ ಧರ್ಮದಲ್ಲಿ ಹಸುವನ್ನು ಪವಿತ್ರವೆಂದು ಪರಿಗಣಿಸಲಾಗುತ್ತದೆ. ಜ್ಯೋತಿಷ್ಯದಲ್ಲಿ, ಹಸು ಬೃಹಸ್ಪತಿ ಗ್ರಹವನ್ನು ಸಂಕೇತಿಸುತ್ತದೆ. ಹಸುವಿಗೆ ಆಹಾರವನ್ನು ಅರ್ಪಿಸಿದರೆ ಗುರುವಿನ ಪ್ರಭಾವವನ್ನು ಬಲಪಡಿಸುತ್ತದೆ. ಹಸುಗಳಿಗೆ ಆಹಾರ ನೀಡುವುದು ಆಧ್ಯಾತ್ಮಿಕವಾಗಿ ಪುಣ್ಯಕರವಲ್ಲದೆ, ಸಾಮಾಜಿಕವಾಗಿ ಮತ್ತು ಪರಿಸರದ ದೃಷ್ಟಿಯಿಂದಲೂ ಪ್ರಯೋಜನಕಾರಿಯಾಗಿದೆ. ಇದರಿಂದ ಮನಸ್ಸಿಗೆ ಶಾಂತಿ, ಕುಟುಂಬದಲ್ಲಿ ಸಂತೋಷ ಮತ್ತು ಜೀವನದಲ್ಲಿ ಸಮೃದ್ಧಿ ಲಭಿಸುವುದು ಎಂದು ನಂಬಲಾಗಿದೆ.

ಪ್ರತಿದಿನ ಹಸುವಿಗೆ ಆಹಾರ ನೀಡುವುದರಿಂದ ಆಗುವ ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಪ್ರಯೋಜನ
Feeding Cows In Hinduism
ಅಕ್ಷತಾ ವರ್ಕಾಡಿ
|

Updated on: May 03, 2025 | 7:39 AM

Share

ಹಿಂದೂ ಧರ್ಮದಲ್ಲಿ, ಹಸುವನ್ನು ದೇವರ ರೂಪವಾಗಿ ಪೂಜಿಸಲಾಗುತ್ತದೆ. ಹಸುಗಳಿಗೆ ಆಹಾರ ನೀಡುವುದು ಕೇವಲ ಸಂಪ್ರದಾಯವಲ್ಲ. ಇದರ ಹಿಂದೆ ಆಳವಾದ ಧಾರ್ಮಿಕ, ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಕಾರಣಗಳಿವೆ. ಶತಮಾನಗಳಿಂದ ನಡೆದುಕೊಂಡು ಬಂದಿರುವ ಈ ಸಂಪ್ರದಾಯವು ಪ್ರಾಚೀನ ಕಾಲದಂತೆಯೇ ಇಂದಿಗೂ ಅಷ್ಟೇ ಪರಿಣಾಮಕಾರಿಯಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಹಸುವಿಗೆ ಆಹಾರ ನೀಡುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಹಸುವಿಗೆ ಆಹಾರ ನೀಡುವ ಆಧ್ಯಾತ್ಮಿಕ ಮಹತ್ವ:

ಹಸುವಿನಲ್ಲಿ ಮುಕೋಟಿ ದೇವರುಗಳು ನೆಲೆಸಿದ್ದಾರೆ ಎಂದು ನಂಬಲಾಗಿದೆ. ಇದಲ್ಲದೇ ಹಸುವನ್ನು ಭೂಮಿಯ ತಾಯಿಯ ಸಂಕೇತವಾಗಿಯೂ ನೋಡಲಾಗುತ್ತದೆ. ಬೌದ್ಧ ಧರ್ಮದಲ್ಲಿಯೂ ಸಹ, ಗೋವುಗಳನ್ನು ಪವಿತ್ರವೆಂದು ಪರಿಗಣಿಸಲಾಗುತ್ತದೆ ಮತ್ತು ಪೂಜಿಸಲಾಗುತ್ತದೆ. ಆದ್ದರಿಂದ, ಹಸುವಿಗೆ ಆಹಾರ ನೀಡುವುದರಿಂದ ಮೂರು ಕೋಟಿ ದೇವರುಗಳಿಗೆ ಆಹಾರ ನೀಡಿದಂತೆ, ನೀವು ಒಂದೇ ಬಾರಿಗೆ ಎಲ್ಲಾ ದೇವರುಗಳ ಆಶೀರ್ವಾದವನ್ನು ಪಡೆಯುತ್ತೀರಿ. ಹಸುವಿಗೆ ಆಹಾರ ನೀಡುವ ವ್ಯಕ್ತಿಗೆ ದೇವರ ಆಶೀರ್ವಾದ ಸಿಗುತ್ತದೆ ಎಂದು ಶಾಸ್ತ್ರಗಳಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಹಸುವಿಗೆ ಬೆಲ್ಲ ಅರ್ಪಿಸುವುದು ಯಜ್ಞ ಅಥವಾ ದಾನ ಮಾಡುವಷ್ಟು ಪುಣ್ಯಕರವೆಂದು ಪರಿಗಣಿಸಲಾಗುತ್ತದೆ. ಶನಿ ಮತ್ತು ಪಿತೃ ದೋಷಗಳಿಂದ ಬಳಲುತ್ತಿರುವವರು ನಿಯಮಿತವಾಗಿ ಹಸುಗಳಿಗೆ ಆಹಾರ, ಮೇವು ಅಥವಾ ಬೆಲ್ಲವನ್ನು ನೀಡಬೇಕು ಎಂದು ಜ್ಯೋತಿಷಿಗಳು ಹೇಳುತ್ತಾರೆ. ಹೀಗೆ ಮಾಡುವುದರಿಂದ ಜಾತಕದಲ್ಲಿನ ದೋಷಗಳು ಕಡಿಮೆಯಾಗುವುದಲ್ಲದೆ, ಜೀವನದಲ್ಲಿ ಅದೃಷ್ಟ, ಸಂತೋಷ ಮತ್ತು ಸಮೃದ್ಧಿಯೂ ಹೆಚ್ಚಾಗುತ್ತದೆ ಎಂದು ನಂಬಲಾಗಿದೆ.

ವೈಜ್ಞಾನಿಕ ದೃಷ್ಟಿಕೋನದ ಪ್ರಯೋಜನಗಳು:

ಹಸುವಿಗೆ ಆಹಾರ ನೀಡುವುದರ ಹಿಂದೆ ಧಾರ್ಮಿಕ ಮತ್ತು ವೈಜ್ಞಾನಿಕ ಅಂಶಗಳಿವೆ. ನಾವು ಹಸುಗಳಿಗೆ ಆಹಾರ ನೀಡಿದಾಗ, ಅದು ಮಾನವೀಯತೆಯನ್ನು ಪ್ರತಿನಿಧಿಸುವುದಲ್ಲದೆ, ಪರಿಸರ ಸಮತೋಲನಕ್ಕೂ ಸಹಾಯ ಮಾಡುತ್ತದೆ. ಈ ಸಂಪ್ರದಾಯವು ಸಮಾಜದಲ್ಲಿ ಗೋಸಾಕಣೆ ಮತ್ತು ಗೋ ರಕ್ಷಣೆಯನ್ನು ಉತ್ತೇಜಿಸುತ್ತದೆ. ಗೋ ರಕ್ಷಣೆಯು ಸಾವಯವ ಕೃಷಿ, ನೈಸರ್ಗಿಕ ಗೊಬ್ಬರ ಮತ್ತು ಪರಿಸರ ಸಂರಕ್ಷಣೆಯನ್ನು ಒಂದು ರೀತಿಯಲ್ಲಿ ಉತ್ತೇಜಿಸುತ್ತದೆ. ಹಸುಗಳು ಆರೋಗ್ಯಕರವಾಗಿ ಮತ್ತು ಸುರಕ್ಷಿತವಾಗಿದ್ದಾಗ, ಅವುಗಳ ಉತ್ಪನ್ನಗಳಾದ ಹಾಲು, ಸಗಣಿ, ಗೋಮೂತ್ರ ಇತ್ಯಾದಿಗಳು ಸಮಾಜಕ್ಕೆ ಪ್ರಯೋಜನವನ್ನು ನೀಡುತ್ತವೆ. ಈ ದೃಷ್ಟಿಕೋನದಿಂದ, ಹಸುವಿಗೆ ಆಹಾರ ನೀಡುವುದು ಸಾಮಾಜಿಕ ಮತ್ತು ಪರಿಸರ ಜವಾಬ್ದಾರಿಯ ಸಂಕೇತವಾಗುತ್ತದೆ.

ಇದನ್ನೂ ಓದಿ
Image
ಜುಲೈ 3 ರಿಂದ ಅಮರನಾಥ ಯಾತ್ರೆ ಆರಂಭ; ನೋಂದಣಿ ಸೇರಿದಂತೆ ಸಂಪೂರ್ಣ ವಿವರ
Image
ಐದು ವರ್ಷಗಳ ನಂತರ ಕೈಲಾಸ ಮಾನಸ ಸರೋವರ ಯಾತ್ರೆ ಪುನರಾರಂಭ
Image
ದೇವಾಲಯ ನಿರ್ಮಾಣವಾಗುತ್ತಿದ್ದಾಗಲೇ ಕೊಳಕ್ಕೆ ಹಾರಿದ ಶಿಲ್ಪಿ,ಇಂದಿಗೂ ಅಪೂರ್ಣ!
Image
ಅಯೋಧ್ಯೆ ರಾಮಮಂದಿರದ ಮುಖ್ಯ ಅರ್ಚಕರಿಗೆ ಸಿಗುವ ಸಂಬಳ, ಸೌಲಭ್ಯ ಏನೇನು?

ಇದನ್ನೂ ಓದಿ: ವಿವಾಹಿತ ಮಹಿಳೆಯರು ಈ ದಿನ ತಪ್ಪಿಯೂ ತಲೆ ಸ್ನಾನ ಮಾಡಬಾರದು!

ಹಸುವಿಗೆ ಆಹಾರ ನೀಡುವುದರಿಂದ ಮನಸ್ಸಿನ ಶಾಂತಿಯನ್ನು ನೀಡುತ್ತದೆ. ಹಸುಗಳಿಗೆ ನಿಯಮಿತವಾಗಿ ಮೇವು ನೀಡುವ ಮನೆಗಳಲ್ಲಿ, ವಾತಾವರಣವು ಸಕಾರಾತ್ಮಕ ಮತ್ತು ಶಾಂತಿಯುತವಾಗಿರುತ್ತದೆ. ಅಂತಹ ಕುಟುಂಬಗಳಲ್ಲಿ ಪರಸ್ಪರ ಸಹಕಾರದ ಭಾವನೆ ಬೆಳೆಯುತ್ತದೆ. ಮನೆಯಲ್ಲಿನ ಒತ್ತಡ ಕಡಿಮೆಯಾಗುತ್ತದೆ. ಇದರಿಂದ ನಿಮ್ಮ ಜೀವನದಲ್ಲಿ ಸಕಾರಾತ್ಮಕ ಶಕ್ತಿ ಹರಿಯುತ್ತದೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ