AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Festivals In October 2023: ಅಕ್ಟೋಬರ್​​ನಲ್ಲಿ ಆಚರಣೆ ಮಾಡುವ ಹಬ್ಬಗಳಾವುವು? ಸಂಪೂರ್ಣ ಮಾಹಿತಿ ಇಲ್ಲಿದೆ

ಪ್ರತಿ ಹಬ್ಬವೂ ನಮ್ಮ ದೇಶದ ಶ್ರೀಮಂತ ಸಾಂಸ್ಕೃತಿಕ ಛಾಯೆಯನ್ನು ಪ್ರತಿಬಿಂಬಿಸುತ್ತದೆ. ಈ ಸಂದರ್ಭಗಳು ಜನರನ್ನು ಒಟ್ಟುಗೂಡಿಸುವಲ್ಲಿ ಮತ್ತು ತಲೆಮಾರುಗಳಿಂದ ರವಾನಿಸಲ್ಪಟ್ಟ ಸಂಪ್ರದಾಯಗಳನ್ನು ಆಚರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಈ ಬಾರಿ ಅಂದರೆ ಅಕ್ಟೋಬರ್ ತಿಂಗಳಿನಲ್ಲಿ ಆಚರಣೆ ಮಾಡುವ ಹಬ್ಬಗಳ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

Festivals In October 2023: ಅಕ್ಟೋಬರ್​​ನಲ್ಲಿ ಆಚರಣೆ ಮಾಡುವ ಹಬ್ಬಗಳಾವುವು? ಸಂಪೂರ್ಣ ಮಾಹಿತಿ ಇಲ್ಲಿದೆ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Sep 27, 2023 | 4:51 PM

Share

ಪ್ರತಿ ತಿಂಗಳೂ ಕೂಡ ಭಾರತೀಯ ಹಬ್ಬಗಳು ವೈವಿಧ್ಯಮಯವಾಗಿರುವುದನ್ನು ನಾವು ಕಾಣಬಹುದು. ಜೊತೆಗೆ ಪ್ರತಿ ಹಬ್ಬವೂ ನಮ್ಮ ದೇಶದ ಶ್ರೀಮಂತ ಸಾಂಸ್ಕೃತಿಕ ಛಾಯೆಯನ್ನು ಪ್ರತಿಬಿಂಬಿಸುತ್ತದೆ. ಈ ಸಂದರ್ಭಗಳು ಜನರನ್ನು ಒಟ್ಟುಗೂಡಿಸುವಲ್ಲಿ ಮತ್ತು ತಲೆಮಾರುಗಳಿಂದ ರವಾನಿಸಲ್ಪಟ್ಟ ಸಂಪ್ರದಾಯಗಳನ್ನು ಆಚರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಈ ಬಾರಿ ಅಂದರೆ ಅಕ್ಟೋಬರ್ ತಿಂಗಳಿನಲ್ಲಿ ಆಚರಣೆ ಮಾಡುವ ಹಬ್ಬಗಳ ಬಗ್ಗೆ ತಿಳಿಯಿರಿ.

ಅಕ್ಟೋಬರ್ 2023ರ ಹಬ್ಬಗಳ ಸಂಪೂರ್ಣ ಪಟ್ಟಿ ಇಲ್ಲಿದೆ:

ಅಕ್ಟೋಬರ್ 2: ಸಂಕಷ್ಟ ಚತುರ್ಥಿ

ಪ್ರತಿ ತಿಂಗಳ ಚತುರ್ಥಿ ತಿಥಿಯಂದು ಸಂಕಷ್ಟ ಚತುರ್ಥಿ ವ್ರತವನ್ನು ಆಚರಿಸಲಾಗುತ್ತದೆ. ಈ ದಿನ ಗಣಪತಿಯನ್ನು ಪೂಜಿಸುವುದರಿಂದ ಜೀವನದಲ್ಲಿನ ಸಕಲ ಸಂಕಷ್ಟಗಳು ದೂರಾಗುತ್ತದೆ ಎನ್ನುವ ನಂಬಿಕೆಯಿದೆ. ಈ ಕಾರಣಕ್ಕಾಗಿ ಸಂಕಷ್ಟ ಚತುರ್ಥಿ ದಿನದಂದು ಹೆಚ್ಚಿನ ಜನರು ಗಣಪತಿ ಆರಾಧನೆಯನ್ನು ಮಾಡುತ್ತಾರೆ. ಈ ಬಾರಿಯ ಸಂಕಷ್ಟ ಚತುರ್ಥಿಯನ್ನು ಅಕ್ಟೋಬರ್ 2 ರಂದು ಆಚರಣೆ ಮಾಡಲಾಗುತ್ತದೆ.

ಅಕ್ಟೋಬರ್ 4: ಚಂದ್ರ ಷಷ್ಠಿ

ಭಗವಾನ್ ಶ್ರೀ ಕೃಷ್ಣನ ಅಣ್ಣ ಬಲರಾಮ ಅವರತಾರವೆತ್ತಿ ಭೂಮಿಗೆ ಬಂದ ದಿನವನ್ನು ಹಾಲ ಷಷ್ಠಿ ಅಥವಾ ‘ಚಂದ್ರ ಷಷ್ಠಿ’ ಅಥವಾ ಬಲರಾಮ ಜಯಂತಿಯನ್ನಾಗಿ ಆಚರಿಸಲಾಗುತ್ತದೆ. ಭಾದ್ರಪದ ಮಾಸದ ಕೃಷ್ಣ ಪಕ್ಷದ ಆರನೆಯ ದಿನದಂದು ಈ ಪವಿತ್ರ ದಿನವನ್ನು ಆಚರಿಸುತ್ತಾರೆ. ದೇಶದ ಬೇರೆ ಬೇರೆ ಭಾಗದಲ್ಲಿ ಇದನ್ನು ಬೇರೆ ಬೇರೆ ಹೆಸರುಗಳಿಂದ ಈ ದಿನವನ್ನು ಆಚರಿಸಲಾಗುತ್ತದೆ.

ಅಕ್ಟೋಬರ್ 7: ಅವಿಧವಾ ನವಮಿ

ಭಾದ್ರಪದ ಮಾಸದ ಕೃಷ್ಣ ಪಕ್ಷವನ್ನು ಪಿತೃಪಕ್ಷ ಎಂದು ಕರೆಯುತ್ತಾರೆ. ಈ ಪಕ್ಷದಲ್ಲಿ ಪಿತೃ ಕಾರ್ಯಗಳನ್ನು ಮಾಡಲಾಗುತ್ತದೆ. ಇನ್ನು ಪಿತೃಪಕ್ಷದ ಒಂಭತ್ತನೇ ದಿನ ಅಂದರೆ ನವಮಿಯಂದು ಮಾಡುವ ಸಂಸ್ಕಾರವೇ ಅವಿಧವಾ ನವಮಿ ಶ್ರಾದ್ಧ. ಪತಿಗಿಂತ ಮೊದಲೇ ನಿಧನ ಹೊಂದಿದ ಸ್ತ್ರೀಯರ ಶ್ರಾದ್ಧವನ್ನು ಈ ದಿನ ಮಾಡಲಾಗುತ್ತದೆ.

ಅಕ್ಟೋಬರ್ 10: ಸರ್ವೈಕಾದಶಿ

ಹಿಂದೂ ಧಾರ್ಮಿಕ ಪಂಚಾಗ ಪ್ರಕಾರ ಸರ್ವೈಕಾದಶಿಯಂದು ಧಾರ್ಮಿಕ ನಂಬಿಕೆಗಳ ಪ್ರಕಾರ ಈ ದಿನ ವ್ರತವನ್ನು ಆಚರಿಸುವುದರಿಂದ ಮತ್ತು ಕ್ರಮಬದ್ಧವಾಗಿ ಮಹಾವಿಷ್ಣುವನ್ನು ಪೂಜಿಸುವುದರಿಂದ ವ್ಯಕ್ತಿಯ ಎಲ್ಲಾ ತೊಂದರೆಗಳು ದೂರವಾಗುತ್ತವೆ. ಇಷ್ಟಾರ್ಥ ಎಲ್ಲಾ ಕಾರ್ಯಗಳು ನೆರವೇರುತ್ತವೆ.

ಅಕ್ಟೋಬರ್ 11: ಯತಿದ್ವಾದಶಿ ಅಥವಾ ಯತಿ ಮಹಾಲಯ

ಯತಿ ಮಹಾಲಯ ಅಥವಾ ದ್ವಾದಶಿ ಶ್ರಾದ್ಧವನ್ನು ಭಾದ್ರಪದ ಮಾಸದ ಕೃಷ್ಣ ಪಕ್ಷದ ದ್ವಾದಶಿಯಂದು ಆಚರಿಸಲಾಗುತ್ತದೆ. ಯತಿ ಮಹಾಲಯವು ಮಹಾಲ್ಯ ಪಕ್ಷದ ಹನ್ನೆರಡನೇ ದಿನವಾಗಿದೆ. ಯತಿ ಮಹಾಲಯದಂದು ದೇಹವನ್ನು ತೊರೆದ ಋಷಿಗಳು ಅಥವಾ ಸಂತರಿಗೆ ಶ್ರಾದ್ಧವನ್ನು ನಡೆಸಲಾಗುತ್ತದೆ. ಈ ದಿನ ಯತಿಗಳಿಗೆ ಶ್ರಾದ್ಧವನ್ನು ನಡೆಸುವುದರಿಂದ ಇದನ್ನು ಯತಿ ಮಹಾಲ್ಯ ಎಂದು ಕರೆಯಲಾಗುತ್ತದೆ. ಈ ದಿನ ಬ್ರಾಹ್ಮಣರಿಗೆ ಅನ್ನ ಸಂತರ್ಪಣೆ ಅಥವಾ ಆಹಾರವನ್ನು ನೀಡಲಾಗುತ್ತದೆ.

ಅಕ್ಟೋಬರ್ 14: ಮಹಾಲಯ ಅಮವಾಸ್ಯೆ

ಪಿತೃ ಪಕ್ಷದ ಕೊನೆಯ ದಿನವನ್ನೇ ಮಹಾಲಯ ಅಮಾವಾಸ್ಯೆ ಎಂದು ಆಚರಿಸಲಾಗುತ್ತದೆ. ಇದನ್ನು ಸರ್ವಪಿತ್ರಿ ಅಮಾವಾಸ್ಯೆ ಅಥವಾ ಪಿತೃ ಪಕ್ಷ ಅಮಾವಾಸ್ಯೆ ಎಂದೂ ಕರೆಯಲಾಗುತ್ತದೆ ಮತ್ತು ನಿಮ್ಮ ಅಗಲಿದ ಪೂರ್ವಜರಿಗೆ ತರ್ಪಣವನ್ನು ನೀಡಲು ಸೂಕ್ತ ದಿನವಾಗಿದೆ. ಈ ಬಾರಿ ಮಹಾಲಯ ಅಮಾವಾಸ್ಯೆಯನ್ನು ಅಕ್ಟೋಬರ್ 14 ರಂದು ಆಚರಿಸಲಾಗುತ್ತದೆ.

ಅಕ್ಟೋಬರ್ 15: ನವರಾತ್ರಿ ಆರಂಭ

ಹಿಂದೂಗಳಿಗೆ ಅತ್ಯಂತ ಶುಭಕರ ದಿನಗಳಲ್ಲಿ ನವರಾತ್ರಿ ಬಹಳ ಪ್ರಾಮುಖ್ಯತೆ ವಹಿಸುತ್ತದೆ. ನವರಾತ್ರಿ ಒಂಬತ್ತು ದಿನಗಳ ಸುದೀರ್ಘ ಹಬ್ಬವಾಗಿದ್ದು ದುರ್ಗಾ ದೇವಿಯ ಒಂಬತ್ತು ಅವತಾರಗಳನ್ನು ಪೂಜಿಸಲಾಗುತ್ತದೆ. ಈ ಹಬ್ಬವನ್ನು ಭಕ್ತಿಯಿಂದ ಆಚರಿಸುವುದರಿಂದ ಸುಖ, ಶಾಂತಿ ಸಮೃದ್ಧಿ ನೆಲೆಸುತ್ತದೆ ಎಂಬ ನಂಬಿಕೆ ಇದೆ. ಈ ಬಾರಿ ಅಕ್ಟೋಬರ್ 15 ರಂದು ನವರಾತ್ರಿ ಆರಂಭವಾಗಿ ಅಕ್ಟೋಬರ್ 24 ರಂದು ಕೊನೆಗೊಳ್ಳಲಿದೆ.

ಅಕ್ಟೋಬರ್ 17: ತುಲಾ ಸಂಕ್ರಮಣ

ಹಿಂದೂಗಳು ನದಿಯನ್ನು ದೇವರಂತೆ ಪೂಜಿಸುತ್ತಾರೆ. ಹಾಗಾಗಿ ವರ್ಷಕ್ಕೊಮ್ಮೆ ಕಾವೇರಿ ಸಂಕ್ರಮಣ ಅಥವಾ ತುಲಾ ಸಂಕ್ರಮಣವನ್ನು ಆಚರಿಸಲಾಗುತ್ತದೆ. ಈ ಬಾರಿ ಅಕ್ಟೋಬರ್ 17 ರಂದು ಈ ದಿನವನ್ನು ಆಚರಣೆ ಮಾಡಲಾಗುತ್ತದೆ.

ಅಕ್ಟೋಬರ್ 19: ಲಲಿತಾ ಪಂಚಮಿ

ನವರಾತ್ರಿ ಹಬ್ಬದ 5 ನೇ ದಿನವನ್ನು ಲಲಿತಾ ಪಂಚಮಿ ಎಂದು ಆಚರಿಸಲಾಗುತ್ತದೆ. ಈ ದಿನದಂದು ಸತಿ ದೇವಿಯ ರೂಪವಾದ ಲಲಿತಾ ದೇವಿಯನ್ನು ಪೂಜಿಸಲಾಗುತ್ತದೆ. ಈ ಬಾರಿ ಲಲಿತಾ ಪಂಚಮಿಯನ್ನು ಅಕ್ಟೋಬರ್ 19 ರಂದು ಗುರುವಾರ ಆಚರಿಸಲಾಗುತ್ತದೆ.

ಅಕ್ಟೋಬರ್ 20: ಶಾರದಾ ಪ್ರತಿಷ್ಠೆ

ನವರಾತ್ರಿಯ ಆರನೇ ದಿನದಂದು ಮನೆ ಮನೆಯಲ್ಲಿ ಶಾರದೇಯ ಪ್ರತಿಷ್ಠಾಪನೆ ಮಾಡಿ ವಿದ್ಯೆ, ಬುದ್ದಿ ಕೊಡು ಎಂದು ಬೇಡಿಕೊಳ್ಳುವುದರ ಜೊತೆಗೆ ಪುಸ್ತಕವನ್ನಿಟ್ಟು ಪೂಜೆ ಮಾಡಲಾಗುತ್ತದೆ. ಈ ದಿನ ಶಾರದೆಯನ್ನು ಭಕ್ತಿಯಿಂದ ಮೆಚ್ಚಿಸುವುದರಿಂದ ವಿದ್ಯಾ ಬುದ್ದಿ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ.

ಅಕ್ಟೋಬರ್ 22: ದುರ್ಗಾಷ್ಟಮಿ ಅಥವಾ ಜೀವದಯಾಷ್ಟಮಿ

ನವರಾತ್ರಿಯ ಎಂಟನೇ ದಿನದಂದು, ದುರ್ಗಾ ದೇವಿಯ ಎಂಟನೇ ಶಕ್ತಿಯಾದ ಮಹಾಗೌರಿ ದೇವಿಯನ್ನು ಪೂಜಿಸಲಾಗುತ್ತದೆ. ಈ ದಿನ ಕೈಗೊಳ್ಳುವ ಪೂಜೆಯಿಂದ ಭಕ್ತರಿಗೆ ಬಹಳಷ್ಟು ಪುಣ್ಯ ಪ್ರಾಪ್ತಿಯಾಗುತ್ತದೆ. ಭಕ್ತರ ಬದುಕಿನಲ್ಲಿ ಬರುವ ಸಂಕಷ್ಟಗಳನ್ನು ತಾಯಿ ಗೌರಿ ಪರಿಹರಿಸಿ ತನ್ನ ಆಶೀರ್ವಾದದಿಂದ ದುಃಖಗಳನ್ನು ದೂರ ಮಾಡುತ್ತಾಳೆ ಎಂಬ ನಂಬಿಕೆ ಇದೆ. ಈ ದಿನ ಆಕೆಗೆ ಪ್ರೀಯವಾದ ತೆಂಗಿನಕಾಯಿ ಮತ್ತು ತೆಂಗಿನಕಾಯಿಯಿಂದ ಮಾಡಿದ ಪದಾರ್ಥಗಳನ್ನು ಮಾತೆ ಗೌರಿಗೆ ಅರ್ಪಿಸಲಾಗುತ್ತದೆ.

ಇದನ್ನೂ ಓದಿ:ಗೋಂದೋಲು ಆಚರಣೆ: ಬಡವರ ಹಬ್ಬಗಳು ಶ್ರೀಮಂತವಾಗಿರುತ್ತವೆ! ಇಂತಹ ಆಚರಣೆಗಳೇ ನೆಲದ ಸಾಂಸ್ಕೃತಿಕ ಶ್ರೀಮಂತಿಕೆಗೆ ಆಧಾರ

ಅಕ್ಟೋಬರ್ 23: ಮಹಾನವಮಿ, ಶಾರದಾ ವಿಸರ್ಜನೆ, ಆಯುಧ ಪೂಜೆ

ಆಯುಧ ಪೂಜೆಯು ನವರಾತ್ರಿ ಹಬ್ಬದ 9ನೇ ದಿನದಂದು ಅಂದರೆ ಮಹಾನವಮಿಯಂದು ಆಚರಣೆ ಮಾಡಲಾಗುತ್ತದೆ. ನವಮಿ ತಿಥಿಯಂದು ಆಯುಧಪೂಜೆ ಮಾಡಲಾಗುತ್ತದೆ. ಆಯುಧ ಪೂಜೆಯನ್ನು ಶಸ್ತ್ರಪೂಜೆ ಮತ್ತು ಅಸ್ತ್ರಪೂಜೆ ಎಂದೂ ಕರೆಯುತ್ತಾರೆ. ಈ ದಿನದಂದು ಶಾರದಾ ವಿಸರ್ಜನೆ ಕೂಡ ನಡೆಯುತ್ತದೆ.

ಅಕ್ಟೋಬರ್ 24: ವಿಜಯದಶಮಿ ಅಥವಾ ವಿದ್ಯಾದಶಮಿ

ವಿಜಯದಶಮಿ ನವರಾತ್ರಿಯ ಕೊನೆಯ ದಿನ. ಈ ದಿನವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ದಸರಾ ದಿನದಂದು ಶಮೀ ವೃಕ್ಷವನ್ನು ಅಥವಾ ಬನ್ನಿ ಮರವನ್ನು ಪೂಜಿಸುವ ಸಂಪ್ರದಾಯ ಬಹಳ ಹಿಂದಿನಿಂದಲೂ ಇದೆ. ಈ ಬಾರಿ ವಿಜಯದಶಮಿಯನ್ನು ಅಕ್ಟೋಬರ್ 24 ರಂದು ಆಚರಿಸಲಾಗುತ್ತದೆ.

ಅಕ್ಟೋಬರ್ 28: ಖಂಡಗ್ರಾಸ ಚಂದ್ರಗ್ರಹಣ

ಖಂಡಗ್ರಾಸ ಚಂದ್ರಗ್ರಹಣ ಅಕ್ಟೋಬರ್ 28 ರಂದು ಗೋಚರವಾಗಲಿದೆ. ಈ ಪೆನಂಬ್ರಲ್ ಗ್ರಹಣವು ಅಕ್ಟೋಬರ್ 28 ರಂದು ರಾತ್ರಿ 11 ಗಂಟೆಗೆ ಆರಂಭವಾಗಿ ಮಧ್ಯರಾತ್ರಿ 3. 56ಕ್ಕೆ ಮುಕ್ತಾಯಗೊಳ್ಳಲಿದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ