AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವರಾತ್ರಿ 2021 ಐದನೇ ದಿನ: ಯಾರು ಈ ಸ್ಕಂದಮಾತಾ? ಇಲ್ಲಿದೆ ಮಂತ್ರ

Navratri 2021: ಪಾತಾಳಲೋಕದಲ್ಲಿರುವ ತಾರಕಾಸುರ ಎಂಬ ರಾಕ್ಷಸನನ್ನು ವಧೆ ಮಾಡಲು, ದೇವಿ ಸ್ಕಂದನಿಗೆ ಜನ್ಮ ಕೊಡ್ತಾಳೆ. ಆದ್ದರಿಂದ ಈಕೆಯನ್ನು ಸ್ಕಂದಮಾತಾ ಅಂತಾ ಕರೆಯಲಾಗುತ್ತೆ. ಸ್ಕಂದಮಾತೆಯ ರೂಪ ಅತ್ಯಂತ ವಿಶಿಷ್ಟ. ಈ ದೇವಿ ಸಿಂಹದ ಮೇಲೆ ಕುಳಿತಿರುತ್ತಾಳೆ. ಶ್ವೇತವರ್ಣಳಾಗಿ ಸುಂದರವಾಗಿ ಕಾಣುತ್ತಾಳೆ.

ನವರಾತ್ರಿ 2021 ಐದನೇ ದಿನ: ಯಾರು ಈ ಸ್ಕಂದಮಾತಾ? ಇಲ್ಲಿದೆ ಮಂತ್ರ
ಸ್ಕಂದಮಾತಾ
TV9 Web
| Edited By: |

Updated on: Oct 11, 2021 | 6:39 AM

Share

ನವರಾತ್ರಿಯ ಒಂಬತ್ತು ದಿನವೂ ದುರ್ಗೆಯ ಆರಾಧನೆಗೆ ಪ್ರಶಸ್ತ. ಈ ವೇಳೆ ನವದುರ್ಗೆಯರನ್ನು ಆರಾಧಿಸೋದು ವಿಶೇಷ. ನವರಾತ್ರಿಯ ಐದನೇ ದಿನ ಕರುಣೆ ತುಂಬಿದ ಸ್ಕಂದಮಾತಾ ದೇವಿಯ ಆರಾಧನೆಗೆ ಮೀಸಲು. ಧರ್ಮಗ್ರಂಥಗಳ ಪ್ರಕಾರ ಮೂರ್ಖನಅದರೂ ಈಕೆಯ ಕೃಪೆಯಿಂದ ಬುದ್ಧವಂತನಾಗುತ್ತಾನೆ. ನವದುರ್ಗೆಯರಲ್ಲಿ ಸ್ಕಂದಮಾತೆಯದ್ದು ಐದನೇ ರೂಪ. ಪುರಾಣದ ಪ್ರಕಾರ, ದುರ್ಗೆಗೆ ಸ್ಕಂದಮಾತಾ ಎಂದು ಹೆಸರು ಬರಲು ಒಂದು ಕಾರಣವಿದೆ.

ಅದೇನಂದ್ರೆ, ಪಾತಾಳಲೋಕದಲ್ಲಿರುವ ತಾರಕಾಸುರ ಎಂಬ ರಾಕ್ಷಸನನ್ನು ವಧೆ ಮಾಡಲು, ದೇವಿ ಸ್ಕಂದನಿಗೆ ಜನ್ಮ ಕೊಡ್ತಾಳೆ. ಆದ್ದರಿಂದ ಈಕೆಯನ್ನು ಸ್ಕಂದಮಾತಾ ಅಂತಾ ಕರೆಯಲಾಗುತ್ತೆ. ಸ್ಕಂದಮಾತೆಯ ರೂಪ ಅತ್ಯಂತ ವಿಶಿಷ್ಟ. ಈ ದೇವಿ ಸಿಂಹದ ಮೇಲೆ ಕುಳಿತಿರುತ್ತಾಳೆ. ಶ್ವೇತವರ್ಣಳಾಗಿ ಸುಂದರವಾಗಿ ಕಾಣುತ್ತಾಳೆ. ನಾಲ್ಕು ಭುಜಗಳನ್ನು ಹೊಂದಿದ್ದು, ಎರಡು ಕೈಗಳಲ್ಲಿ ಕಮಲಗಳನ್ನು ಹಿಡಿದಿರುತ್ತಾಳೆ. ಇನ್ನು ತಾಯಿಯ ಬಲ ತೊಡೆಯ ಮೇಲೆ ತಾನು ಜನ್ಮ ನೀಡಿದ ಸ್ಕಂದನನ್ನು ಕೂರಿಸಿಕೊಂಡಿರ್ತಾಳೆ. ಸ್ಕಂದಮಾತೆಯದ್ದು ಕರುಣೆ ತುಂಬಿದ ತಾಯಿಯ ರೂಪವಾಗಿದೆ. ಮಾತೃ ಹೃದಯಿ ಆಗಿರುವ ಸ್ಕಂದಮಾತೆಯನ್ನು ಆರಾಧಿಸಲು ವಿಶೇಷ ಮಂತ್ರವಿದೆ. ಈ ಮಂತ್ರವನ್ನು ಜಪಿಸಿದ್ರೆ ಶೀಘ್ರ ಫಲಗಳನ್ನು ಪಡೆಯಬಹುದು ಅನ್ನೋ ನಂಬಿಕೆ ಇದೆ.

ಸ್ಕಂದಮಾತಾ ಮಂತ್ರ ಸಿಂಹಾಸನಗತಾ ನಿತ್ಯಂ ಪದ್ಮಾಶ್ರಿತಕರದ್ವಯಾ ಶುಭದಾಸ್ತು ಸದಾ ದೇವೀ ಸ್ಕಂದಮಾತಾ ಯಶಸ್ವಿನೀ

ಸ್ಕಂದಮಾತಾ ಪೂಜಾ ವಿಧಾನ ಬೆಳಗ್ಗೆ ಸ್ನಾನ ಮಾಡಿದ ನಂತರ ಶುದ್ಧವಾದ ಬಟ್ಟೆಗಳನ್ನು ಧರಿಸಿ ಸ್ಕಂದಮಾತೆಯ ವಿಗ್ರಹವನ್ನು ಪೂಜೆಗೆ ಸ್ಥಾಪಿಸಿ ಪೂಜಿಸಬೇಕು. ಗಂಗಾಜಲದಿಂದ ತಾಯಿಯ ವಿಗ್ರಹವನ್ನು ಶುದ್ಧೀಕರಿಸಿ. ಬಳಿಕ ಹೂವುಗಳನ್ನು ಅರ್ಪಿಸಿ ಸಿಹಿತಿಂಡಿಗಳು ಮತ್ತು 5 ವಿಧದ ಹಣ್ಣುಗಳನ್ನು ಅರ್ಪಿಸಬೇಕು. ಕಲಶವನ್ನು ನೀರಿನಿಂದ ತುಂಬಿಸಿ ಮತ್ತು ಅದರಲ್ಲಿ ಕೆಲವು ನಾಣ್ಯಗಳನ್ನು ಹಾಕಿ ಇದರ ನಂತರ ಪೂಜೆಯಲ್ಲಿ ಪ್ರತಿಜ್ಞೆಯನ್ನು ತೆಗೆದುಕೊಂಡು ಅರಿಶಿನ ಕುಂಕುಮವನ್ನು ಸ್ಕಂದಮಾತೆಗೆ ಅನ್ವಯಿಸಿ ತಾಯಿಗೆ ಆರತಿ ಮಾಡಿ ಮಂತ್ರವನ್ನು ಪಠಿಸಬೇಕು. ನವರಾತ್ರಿಯ ಐದನೇ ದಿನ ಪುರಾಣದ ಪ್ರಕಾರ ಅತ್ಯಂತ ಮಹತ್ವದ್ದು ಎಂದು ಉಲ್ಲೇಖವಿದೆ. ಈ ದಿನ ವಿಶೇಷವಾಗಿ ಸ್ಕಂದಮಾತೆಯನ್ನು ಪೂಜಿಸಿದ್ರೆ ಆದಿಶಕ್ತಿಯ ಸಂಪೂರ್ಣ ಆಶೀರ್ವಾದ ಪ್ರಾಪ್ತಿಯಾಗುತ್ತೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ಸ್ಕಂದಮಾತೆಯ ಆರಾಧನೆಯಿಂದ ಏನೆಲ್ಲ ಫಲಗಳು ಪ್ರಾಪ್ತಿಯಾಗುತ್ವೆ.

ಸ್ಕಂದಮಾತಾ ಪೂಜಾ ಫಲಗಳು -ಈಕೆ ತಪ್ಪಿತಸ್ಥರ ಪಾಲಿನ ಕ್ಷಮಯಾಧರಿತ್ರಿ. -ಸುಖ, ಪರಮಶಾಂತಿಯನ್ನು ನೀಡ್ತಾಳೆ. -ಸ್ಕಂದಮಾತಾ ಪೂಜೆಯಿಂದ ಮೋಕ್ಷ ಪ್ರಾಪ್ತಿ. -ಸ್ಕಂದಮಾತಾ ಆರಾಧನೆಯಿಂದ ಸಾತ್ವಿಕ ಕಳೆ ಬರುತ್ತೆ. -ಸ್ಕಂದಮಾತಾ ಸ್ಮರಣೆಯಿಂದ ಸ್ಕಂದನನ್ನು ಪೂಜಿಸಿದ ಪುಣ್ಯಪ್ರಾಪ್ತಿ.

ಇದನ್ನೂ ಓದಿ: ನವರಾತ್ರಿ 2021 ನಾಲ್ಕನೇ ದಿನ: ಕೂಷ್ಮಾಂಡ ದೇವಿಯ ಆರಾಧನೆ ಹೇಗೆ?

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು