AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡ-ಹೆಂಡತಿ ಮಧ್ಯೆ ಮನೆಯಲ್ಲಿ ಯಾವ ಸಮಯದಲ್ಲಿ ಜಗಳವಾದರೆ, ಅದು ಯಾವ ಸ್ವರೂಪದ ಪರಿಣಾಮ ಬೀರುತ್ತದೆ ಗೊತ್ತಾ?

ದಾಂಪತ್ಯ ಕಲಹದಿಂದ ಹೆಂಡತಿಯು ಊಟ ಮಾಡುವಾಗ ಕಣ್ಣೀರು ಹಾಕಿದರೆ: ಆ ಮನೆಯು ಎಷ್ಟೇ ಸಿರಿವಂತರಾದರೂ, ಆ ಮನೆಯು ದಾರಿದ್ರ್ಯದ ಮನೆಯಾಗುತ್ತದೆ. ಗಂಡನ ಉದ್ಯೋಗ ನಷ್ಟವಾಗುತ್ತೆ. ಸಂಸಾರ ಛಿದ್ರವಾಗಬಹುದು. ಅಳಲೇಬಾರದು ಎಂದಲ್ಲ ಸ್ತ್ರೀ ಕಣ್ಣೀರು ಹಾಕಿದರೆ, ಎಂದಿದ್ದರೂ ಅದು ಶಾಪವೇ..! 

ಗಂಡ-ಹೆಂಡತಿ ಮಧ್ಯೆ ಮನೆಯಲ್ಲಿ ಯಾವ ಸಮಯದಲ್ಲಿ ಜಗಳವಾದರೆ, ಅದು ಯಾವ ಸ್ವರೂಪದ ಪರಿಣಾಮ ಬೀರುತ್ತದೆ ಗೊತ್ತಾ?
ಗಂಡ-ಹೆಂಡತಿ ಮಧ್ಯೆ ಮನೆಯಲ್ಲಿ ಯಾವ ಸಮಯದಲ್ಲಿ ಜಗಳವಾದರೆ ಅದು ಎಂತಹ ಪರಿಣಾಮ ಬೀರುತ್ತದೆ ಗೊತ್ತಾ?
TV9 Web
| Edited By: ಸಾಧು ಶ್ರೀನಾಥ್​|

Updated on: Sep 07, 2022 | 6:06 AM

Share

ಗಂಡ-ಹೆಂಡತಿ ಅಂದರೆ ದಂಪತಿ ನಡುವಣ ಬಾಂಧವ್ಯ ಅಮೂಲ್ಯವಾದುದು. ಇದು ಮನೆಯೊಳಕ್ಕೂ ಮತ್ತು ಮನೆಯಾಚೆಗೂ ಹೆಚ್ಚು ಮಹತ್ವ ಪಡೆದಿರುತ್ತದೆ, ಹೆಚ್ಚು ಪರಿಣಾಮ ಬೀರುತ್ತದೆ. ಗಂಡ-ಹೆಂಡತಿ ಸಂಬಂಧ ಜನುಮಜನುಮದ್ದು ಅನ್ನುತ್ತಾರೆ. ಅಂತಹ ಸಂಬಂಧವನ್ನು ಅತ್ಯಂತ ಜತನದಿಂದ ಪೊರೆಯಬೇಕು, ಕಾಪಾಡಿಕೊಂಡು ಬರಬೇಕು. ಆದರೆ ಮನುಷ್ಯ ಮನುಷ್ಯ ನಡುವೆ ಕಲಹ ಎಂಬುದು ಮನುಷ್ಯನ ಸೃಷ್ಟಿಯೊಂದಿಗೆ ಬಂದಿದೆ ಎನ್ನಬಹುದು. ಹಾಗಿರುವಾಗ ಗಂಡ-ಹೆಂಡತಿ ನಡುವೆಯೂ ಕಲಹ, ಜಗಳ ಎಂಬ ಕ್ಷಣಿಕ ಸಂಕಟಗಳು ಅಚಾನಕ್ಕಾಗಿ ಸೃಷ್ಟಿಯಾಗಿಬಿಡುತ್ತದೆ. ಅದನ್ನು ಅಲ್ಲಿಗೇ ಮುರುಟಿ ಹಾಕಿದರೆ ಒಳಿತು, ಕ್ಷೇಮಕರ. ಇಲ್ಲವಾದರೆ ಅದು ಹೆಮ್ಮರವಾದರೆ ಬದುಕು ಗೋಳು ಗೋಳಾದೀತು. ಇಲ್ಲೊಂದಷ್ಟು ಸೂಕ್ಷ್ಮ ವಿಚಾರಗಳನ್ನು ನೀಡಲಾಗಿದೆ. ಅದು ಇದಂ ಇತ್ಥಂ ಅಂತೇನೂ ಅಲ್ಲ. ಅದಕ್ಕೆ ಯಾವುದೇ ಆಧಾರವೂ ಇಲ್ಲ. ಆದರೆ ಇಲ್ಲಿ ಗಂಡ-ಹೆಂಡತಿ ಬದುಕು ನಗುನಗುತಾ ಇರಲಿ ಎಂಬ ಸದಾಶಯದೊಂದಿಗೆ ಈ ವಿಭಿನ್ನ ಪರಿಸ್ಥಿತಿಗಳ ಬಗ್ಗೆ ಬೆಳಕು ಚೆಲ್ಲಲಾಗಿದೆ.

1. ಮನೆಯಲ್ಲಿ ಬೆಳಗ್ಗೆ ಜಗಳವಾಡಿದರೆ: ಜೀವನದಲ್ಲಿ ಜಿಗುಪ್ಸೆ, ಮನೆ ಬಿಟ್ಟು ಹೋಗೋ ಮನಸ್ಸು, ಜೀವನ ಸಾಕು ಅನ್ನೋ ಅಷ್ಟು ಬೇಸರವಾಗುತ್ತದೆ.

2. ಮಧ್ಯಾಹ್ನ ಜಗಳವಾಡಿದರೆ: ಉಗ್ರ ಕೋಪವಂತರಾಗುವರು, ವಿಚ್ಛೇದನ ಸಮಸ್ಯೆ ಉಂಟಾಗುತ್ತದೆ, ಗಂಡ ಹೆಂಡತಿ ದೂರವಾಗಬಹುದು.

3. ಸಂಜೆ ಹೊತ್ತು ಜಗಳವಾಡಿದರೆ: ಮನೆಯ ಅಭಿವೃದ್ಧಿ ಕುಂಠಿತವಾಗುತ್ತದೆ. ಮಹಾಲಕ್ಷ್ಮಿಯು ಮನೆ ಬಿಟ್ಟು ಹೋಗಲೂ ಬಹುದು, ದಾರಿದ್ರ್ಯ ಜೀವನ ಅನುಭವಿಸುವಿರಿ.

4. ರಾತ್ರಿ ಹೊತ್ತು ಜಗಳವಾಡಿದರೆ: ಸಂಸಾರದಲ್ಲಿ ವಿರಸ, ದುರಾಭ್ಯಾಸಗಳು ಜಾಸ್ತಿಯಾಗುತ್ತವೆ. ಅಶಾಂತಿಯ ವಾತಾವರಣ, ಮಕ್ಕಳು ದಾರಿ ತಪ್ಪುವರು.

ಇದರ ಅರ್ಥ ಜಗಳವಾಡಲೇಬಾರದೆಂದಲ್ಲ.. ದಂಪತಿಯನ್ನು ಲಕ್ಷ್ಮೀ ನಾರಾಯಣರಿಗೆ ಹೋಲಿಸುತ್ತಾರೆ. ಮನೆಯಲ್ಲಿ ನಾರಾಯಣ ಮುನಿದರೆ ಲಕ್ಷ್ಮಿ ಸಮಾಧಾನ ಮಾಡಬಹುದು. ಅದೇ ಲಕ್ಷ್ಮೀ ಮುನಿಸಿಕೊಂಡರೆ ಸಮಾಧಾನ ಮಾಡೋದು ತುಂಬಾ ಕಷ್ಟ. ಲಕ್ಷ್ಮೀದೇವಿಗೆ ಸ್ವಲ್ಪ ಕೋಪ ಜಾಸ್ತಿ

ಸಂಸಾರದಲ್ಲಿ ಜಗಳ ಬಂದಾಗ ಯಾರಾದರೂ ಒಬ್ಬರು ಸುಮ್ಮನೆ ಆಗ್ಬಿಡಿ, ಸೋತುಬಿಡಿ, ಏನೂ ತಪ್ಪಿಲ್ಲ. ಎಷ್ಟೋ ಸಂಸಾರಗಳು ಚಿಕ್ಕ ಚಿಕ್ಕ ವಿಚಾರಕ್ಕೆ ದೂರವಾಗಿವೆ. ಮನೆಯ ಗೃಹಿಣಿ ನೊಂದು ಏನಾದರೂ ಅಂದರೆ ಅದು ಖಂಡಿತಾ ಶಾಪವಾಗುತ್ತದೆ.

ಸೀತೆಯ ಶಾಪ ರಾವಣನ ಸಾಮ್ರಾಜ್ಯವನ್ನೇ ನಾಶ ಮಾಡುತ್ತೆ. ದ್ರೌಪದಿ ಶಾಪ ಕುರುವಂಶವನ್ನೇ ನಾಶ ಮಾಡುತ್ತೆ. ಆದ್ದರಿಂದ ಸ್ತ್ರೀಯನ್ನು ಗೌರವಿಸಿ.. ಚೆನ್ನಾಗಿ ನೋಡಿಕೊಳ್ಳಿ. ತಪ್ಪಿದ್ದರೆ ಹೇಳಿ, ತಿದ್ದಿಕೊಳ್ಳುವ ಹಾಗೆ ಮಾಡಿ.

ಇನ್ನು ಸ್ತ್ರೀಗೆ ಒಂದು ಕಿವಿಮಾತು..

ಮನೆಯ ಹೆಣ್ಣುಮಗಳು.. 1. ಬೆಳಗ್ಗೆ ಮನೆಯಲ್ಲಿ ಕಣ್ಣೀರು ಹಾಕಿದರೆ ಗಂಡನಿಗೆ ರೋಗ ಭಯ, ಅಪಘಾತ ಭಯ, ಆರೋಗ್ಯಕ್ಕೆ ಕುತ್ತು.

2. ಮಧ್ಯಾಹ್ನ ಕಣ್ಣೀರು ಹಾಕಿದರೆ: ಅತ್ತೆ ಸೊಸೆ ಜಗಳ, ಅತ್ತೆಗೆ ಪ್ರೀತಿ ಕಮ್ಮಿಯಾಗುತ್ತದೆ. ಅವಮಾನ ಅನುಭವಿಸುವಿರಿ.. ಗಂಡನಿಗೆ ಅವಮಾನವಾಗಿ, ಅಪವಾದಗಳು ಬರುತ್ತವೆ.

3. ಸಂಜೆ ಕಣ್ಣೀರು ಹಾಕಿದರೆ: ಗಂಡನ ಉದ್ಯೋಗಕ್ಕೆ ಕುತ್ತು, ಮನೆಯಲ್ಲಿ ಹಣಕಾಸಿಗೆ ದಾರಿದ್ರ್ಯ, ಸಂಸಾರ ಒಡೆದುಹೋಗಬಹುದು.

4. ರಾತ್ರಿ ಕಣ್ಣೀರು ಹಾಕಿದರೆ: ದಾಂಪತ್ಯದಲ್ಲಿ ವಿರಸ, ಸುಖಕ್ಕೆ ಕುತ್ತು, ಗಂಡನಿಗೆ ಅನಾರೋಗ್ಯ. ಮಕ್ಕಳು ದಾರಿ ತಪ್ಪುವರು.

5. ದೇವರ ಪೂಜೆ ಮಾಡುವಾಗ ಕಣ್ಣೀರು ಹಾಕಿದರೆ: ಗಂಡನಿಗೇ ಕುತ್ತು , ಮಾಂಗಲ್ಯಕ್ಕೆ ಕುತ್ತು, ದುಷ್ಟಕರ ಬೆಳವಣಿಗೆಗಳು ಆಗುತ್ತವೆ.

6. ಊಟ ಮಾಡುವಾಗ ಕಣ್ಣೀರು ಹಾಕಿದರೆ: ಆ ಮನೆಯು ಎಷ್ಟೇ ಸಿರಿವಂತರಾದರೂ, ಆ ಮನೆಯು ದಾರಿದ್ರ್ಯದ ಮನೆಯಾಗುತ್ತದೆ. ಗಂಡನ ಉದ್ಯೋಗ ನಷ್ಟವಾಗುತ್ತೆ. ಸಂಸಾರ ಛಿದ್ರವಾಗಬಹುದು. ಅಳಲೇಬಾರದು ಎಂದಲ್ಲ ಸ್ತ್ರೀ ಕಣ್ಣೀರು ಹಾಕಿದರೆ, ಎಂದಿದ್ದರೂ ಅದು ಶಾಪವೇ..! (ಸಂಗ್ರಹ ಲೇಖನ)

Follow Us
Web contact
Web contact

TV9 Kannada

Read More
ಕಾಜಿರಂಗದಲ್ಲಿ ಕಂಡಿತು ಹಾಲಿನ ಬಣ್ಣದ ಜಿಂಕೆ; ವಿಡಿಯೋ ವೈರಲ್
ಕಾಜಿರಂಗದಲ್ಲಿ ಕಂಡಿತು ಹಾಲಿನ ಬಣ್ಣದ ಜಿಂಕೆ; ವಿಡಿಯೋ ವೈರಲ್
ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ..
‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ..
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ