AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gajakesari Rajayoga: ಜುಲೈ ಮೊದಲ ವಾರದಿಂದ ‘ಗಜಕೇಸರಿ ರಾಜಯೋಗ’; ಈ 4 ರಾಶಿಯವರಿಗೆ ಮುಟ್ಟಿದ್ದೆಲ್ಲಾ ಚಿನ್ನ, ಕೈತುಂಬಾ ಹಣ!

ಜುಲೈ ಮೊದಲ ವಾರದಲ್ಲಿ ರೂಪುಗೊಳ್ಳುತ್ತಿರುವ ಶಕ್ತಿಶಾಲಿ 'ಗಜಕೇಸರಿ ರಾಜಯೋಗ' 12 ರಾಶಿಗಳ ಮೇಲೆ ಪ್ರಭಾವ ಬೀರಲಿದೆ. ವಿಶೇಷವಾಗಿ ಕರ್ಕಾಟಕ, ಮೇಷ, ಮೀನ ಮತ್ತು ತುಲಾ ರಾಶಿಯವರಿಗೆ ಇದು ಸುವರ್ಣ ಕಾಲ. ಈ ಅದೃಷ್ಟದ ರಾಶಿಗಳಿಗೆ ಮುಟ್ಟಿದ್ದೆಲ್ಲಾ ಚಿನ್ನವಾಗಲಿದ್ದು, ಅಪಾರ ಧನಲಾಭ, ವೃತ್ತಿಯಲ್ಲಿ ಯಶಸ್ಸು, ಕುಟುಂಬದಲ್ಲಿ ಸಂತೋಷ ಮತ್ತು ಸಾಮಾಜಿಕ ಗೌರವ ಲಭಿಸಲಿದೆ. ನಿಮ್ಮ ಆರ್ಥಿಕ ಸ್ಥಿತಿ ಭದ್ರವಾಗಿ, ಜೀವನದಲ್ಲಿ ನೆಮ್ಮದಿ ಪ್ರಾಪ್ತಿಯಾಗಲಿದೆ.

Gajakesari Rajayoga: ಜುಲೈ ಮೊದಲ ವಾರದಿಂದ 'ಗಜಕೇಸರಿ ರಾಜಯೋಗ'; ಈ 4 ರಾಶಿಯವರಿಗೆ ಮುಟ್ಟಿದ್ದೆಲ್ಲಾ ಚಿನ್ನ, ಕೈತುಂಬಾ ಹಣ!
ಗಜಕೇಸರಿ ರಾಜಯೋಗ
ಅಕ್ಷತಾ ವರ್ಕಾಡಿ
|

Updated on: Jun 30, 2026 | 10:29 AM

Share

ಮುಖ್ಯಾಂಶಗಳು

  • ಜುಲೈ ಮೊದಲ ವಾರದಲ್ಲಿ ರೂಪುಗೊಳ್ಳುತ್ತಿರುವ ಶಕ್ತಿಶಾಲಿ 'ಗಜಕೇಸರಿ ರಾಜಯೋಗ'
  • ಕರ್ಕಾಟಕ, ಮೇಷ, ಮೀನ ಮತ್ತು ತುಲಾ ರಾಶಿಯವರಿಗೆ ಇದು ಸುವರ್ಣ ಕಾಲ
  • ಈ ಅದೃಷ್ಟದ ರಾಶಿಗಳಿಗೆ ಮುಟ್ಟಿದ್ದೆಲ್ಲಾ ಚಿನ್ನವಾಗಲಿದ್ದು, ಅಪಾರ ಧನಲಾಭ

ಜ್ಯೋತಿಷ್ಯ ಶಾಸ್ತ್ರದಲ್ಲಿ ರಾಜಯೋಗಗಳಿಗೆ ವಿಶೇಷ ಮಹತ್ವವಿದೆ. ಗ್ರಹಗಳ ಸ್ಥಾನ ಬದಲಾವಣೆಯಿಂದಾಗಿ ಕಾಲಕಾಲಕ್ಕೆ ಹಲವು ಅಪರೂಪದ ಯೋಗಗಳು ಸೃಷ್ಟಿಯಾಗುತ್ತವೆ. ಅವುಗಳಲ್ಲಿ ಅತ್ಯಂತ ಶಕ್ತಿಶಾಲಿ ಮತ್ತು ಶುಭ ಫಲ ನೀಡುವ ಯೋಗವೆಂದರೆ ಅದುವೇ ‘ಗಜಕೇಸರಿ ರಾಜಯೋಗ’. ಜುಲೈ ತಿಂಗಳ ಮೊದಲ ವಾರದಲ್ಲಿ ಈ ಮಹಾ ರಾಜಯೋಗವು ರೂಪುಗೊಳ್ಳುತ್ತಿದ್ದು, ಇದರ ಪ್ರಭಾವ ಎಲ್ಲಾ 12 ರಾಶಿಗಳ ಮೇಲಿರಲಿದೆ. ಆದರೆ, ವಿಶೇಷವಾಗಿ 4 ರಾಶಿಯವರಿಗೆ ಈ ಸಮಯವು ಅತ್ಯಂತ ಅದೃಷ್ಟಶಾಲಿಯಾಗಿದ್ದು, ಅವರು “ಮುಟ್ಟಿದ್ದೆಲ್ಲಾ ಚಿನ್ನ”ವಾಗುವಂತಹ ಸುವರ್ಣ ಕಾಲ ಆರಂಭವಾಗಲಿದೆ ಎಂದು ಜ್ಯೋತಿಷ್ಯ ಶಾಸ್ತ್ರಜ್ಞರು ಹೇಳುತ್ತಾರೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ಇಲ್ಲಿ ತಿಳಿಯೋಣ.

ಕರ್ಕಾಟಕ ರಾಶಿ:

ಕರ್ಕಾಟಕ ರಾಶಿಯವರಿಗೆ ಗಜಕೇಸರಿ ರಾಜಯೋಗವು ಅಭೂತಪೂರ್ವ ಯಶಸ್ಸನ್ನು ತಂದುಕೊಡಲಿದೆ. ಈ ಸಮಯದಲ್ಲಿ ನೀವು ಕೈಹಾಕುವ ಪ್ರತಿಯೊಂದು ಕೆಲಸದಲ್ಲೂ ಜಯ ಕಾಯಂ. ನಿಮ್ಮ ಆದಾಯವು ದ್ವಿಗುಣಗೊಳ್ಳಲಿದ್ದು, ಧನಲಾಭದ ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ. ಕುಟುಂಬದಲ್ಲಿ ಮತ್ತು ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗಲಿದೆ. ಕೋರ್ಟ್-ಕಚೇರಿ ಪ್ರಕರಣಗಳಲ್ಲಿ ನಿಮಗೆ ಸಾಫಲ್ಯ ಸಿಗಲಿದೆ. ಮನೆಯ ಒಳಗೆ ಮತ್ತು ಹೊರಗೆ ಸದಾ ಸಂತೋಷದ ವಾತಾವರಣವಿರಲಿದೆ.

ಮೇಷ ರಾಶಿ:

ಮೇಷ ರಾಶಿಯ ಜನರಿಗೆ ಈ ರಾಜಯೋಗವು ಅತ್ಯಂತ ಅನುಕೂಲಕರ ಮತ್ತು ಶುಭ ಫಲಿತಾಂಶಗಳನ್ನು ನೀಡಲಿದೆ. ದೀರ್ಘಕಾಲದ ಸಮಸ್ಯೆಗಳಿಂದ ಮುಕ್ತಿ ಸಿಗುವ ಸಮಯ ಇದಾಗಿದೆ. ಹಳೆಯ ಆರೋಗ್ಯ ಸಮಸ್ಯೆಗಳು ದೂರವಾಗಿ ನೆಮ್ಮದಿ ಸಿಗಲಿದೆ. ಪವಿತ್ರ ತೀರ್ಥಯಾತ್ರೆಗಳಿಗೆ ಹೋಗುವ ಸುವರ್ಣಾವಕಾಶ ಒದಗಿಬರಲಿದೆ. ಮನೆಯಲ್ಲಿ ಮದುವೆ, ಮುಂಜಿ ಮುಂತಾದ ಶುಭ ಕಾರ್ಯಗಳು ನೆರವೇರಲಿವೆ. ಆರ್ಥಿಕವಾಗಿ ದೊಡ್ಡ ಲಾಭವಾಗಲಿದ್ದು, ಸಮಾಜದಲ್ಲಿ ವಿಶೇಷ ಗೌರವ ಲಭಿಸಲಿದೆ.

ಇದನ್ನೂ ಓದಿ: ಶುಕ್ರ-ಕೇತು ಸಂಯೋಗ; ಈ 4 ರಾಶಿಯವರು ಜುಲೈನಲ್ಲಿ ಅತ್ಯಂತ ಜಾಗರೂಕರಾಗಿರಿ

ಮೀನ ರಾಶಿ:

ಮೀನ ರಾಶಿಯವರಿಗೆ ಈ ಅವಧಿಯು ಅತ್ಯುತ್ತಮ ದಿನಗಳನ್ನು ಉಡುಗೊರೆಯಾಗಿ ನೀಡಲಿದೆ. ನೀವು ಬಹಳ ದಿನಗಳಿಂದ ಯೋಜಿಸುತ್ತಿದ್ದ ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳ್ಳಲಿವೆ. ಮದುವೆಗಾಗಿ ಕಾಯುತ್ತಿರುವ ಯುವಕ-ಯುವತಿಯರಿಗೆ ಕಳಸ ಕೂಡಿಬರಲಿದ್ದು, ಯಶಸ್ಸು ಸಿಗಲಿದೆ. ಕುಟುಂಬದಲ್ಲಿ ಸಂತಸ ಮೂಡಲಿದೆ. ಹಠಾತ್ ಧನಲಾಭ ಅಥವಾ ಲಾಟರಿ ಹೊಡೆಯುವಂತಹ ಯೋಗವಿದ್ದು, ಆರ್ಥಿಕ ಸ್ಥಿತಿ ಭದ್ರವಾಗಲಿದೆ. ಆರೋಗ್ಯ ಮತ್ತು ಹಣದ ವಿಷಯದಲ್ಲಿ ಅದೃಷ್ಟ ನಿಮ್ಮ ಬೆನ್ನಿಗಿರಲಿದೆ.

ತುಲಾ ರಾಶಿ:

ತುಲಾ ರಾಶಿಯಲ್ಲಿ ಜನಿಸಿದವರಿಗೆ ಇದು ಅತ್ಯಂತ ಸುವರ್ಣ ಸಮಯ ಎನ್ನಬಹುದು. ನೀವು ಎಂದಿಗೂ ಮಾಡಲು ಸಾಧ್ಯವಿಲ್ಲ ಎಂದುಕೊಂಡಿದ್ದ ಕಠಿಣ ಕೆಲಸಗಳೂ ಈ ಸಮಯದಲ್ಲಿ ಸುಲಭವಾಗಿ ಪೂರ್ಣಗೊಳ್ಳಲಿವೆ. ಅಂದುಕೊಂಡ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಮುಗಿಸಿ ಸೈ ಎನಿಸಿಕೊಳ್ಳುತ್ತೀರಿ. ಸಮಾಜದಲ್ಲಿ ನಿಮಗೊಂದು ವಿಶೇಷ ಸ್ಥಾನಮಾನ ಸಿಗಲಿದೆ. ವೈವಾಹಿಕ ಜೀವನವು ಅತ್ಯಂತ ಸುಖಮಯವಾಗಿರಲಿದೆ. ಜೀವನಸಂಗಾತಿಯ ಕಡೆಯಿಂದ ನಿಮಗೆ ಭರಪೂರ ಅದೃಷ್ಟ ಮತ್ತು ಆರ್ಥಿಕ ಸಹಾಯ ದೊರೆಯುವ ಸಾಧ್ಯತೆ ಇದೆ.

ಗಮನಿಸಿ: ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಂಪೂರ್ಣವಾಗಿ ಜ್ಯೋತಿಷ್ಯ ಶಾಸ್ತ್ರದ ನಂಬಿಕೆಗಳು ಮತ್ತು ಜ್ಯೋತಿಷಿಗಳ ಅಭಿಪ್ರಾಯಗಳನ್ನು ಆಧರಿಸಿದೆ.

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?