AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganesh Chaturthi 2025: ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸುವ ಮೊದಲು ತಿಳಿದುಕೊಳ್ಳಬೇಕಾದ ಪ್ರಮುಖ ನಿಯಮಗಳಿವು

ಗಣೇಶ ಚತುರ್ಥಿ ಹಬ್ಬದ ಆಚರಣೆ ಶುಭ ಮುಹೂರ್ತ, ಗಣೇಶನ ಮೂರ್ತಿಯನ್ನು ಸ್ಥಾಪಿಸುವ ನಿಯಮಗಳು, ಪೂಜೆಯಲ್ಲಿ ಬಳಸುವ ವಸ್ತುಗಳು ಮತ್ತು ಪ್ರಸಾದಗಳ ಬಗ್ಗೆ ಇಲ್ಲಿ ವಿವರಿಸಲಾಗಿದೆ. ಗಣಪತಿ ವಿಗ್ರಹವನ್ನು ಸ್ಥಾಪಿಸುವ ಮೊದಲು ಮತ್ತು ಸಮಯದಲ್ಲಿ ಕೆಲವು ವಿಶೇಷ ನಿಯಮಗಳನ್ನು ಪಾಲಿಸುವುದು ಬಹಳ ಮುಖ್ಯ. ನಿಮ್ಮ ಪೂಜೆ ಪರಿಪೂರ್ಣವಾಗಬೇಕೆಂದು ನೀವು ಬಯಸಿದರೆ, ಈ ಕೆಲವು ಪ್ರಮುಖ ನಿಯಮಗಳನ್ನು ತಿಳಿದುಕೊಳ್ಳಿ.

Ganesh Chaturthi 2025: ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸುವ ಮೊದಲು ತಿಳಿದುಕೊಳ್ಳಬೇಕಾದ ಪ್ರಮುಖ ನಿಯಮಗಳಿವು
ಗಣೇಶ ಚತುರ್ಥಿ
ಅಕ್ಷತಾ ವರ್ಕಾಡಿ
|

Updated on: Aug 21, 2025 | 10:36 AM

Share

ಗಣೇಶ ಚತುರ್ಥಿ ಹಬ್ಬವನ್ನು ದೇಶಾದ್ಯಂತ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಪಂಚಾಂಗದ ಪ್ರಕಾರ, ಈ ವರ್ಷ ಗಣೇಶ ಚತುರ್ಥಿ ಬುಧವಾರ, ಆಗಸ್ಟ್ 27 ರಂದು ಬಂದಿದ್ದು,ಈ ಹಬ್ಬವು 10 ದಿನಗಳ ಕಾಲ ನಡೆಯಲಿದೆ. ಈ ಸಮಯದಲ್ಲಿ, ಭಕ್ತರು ತಮ್ಮ ಮನೆಗಳಲ್ಲಿ ಗಣಪತಿಯ ಮೂರ್ತಿಯನ್ನು ಸ್ಥಾಪಿಸುತ್ತಾರೆ. ಗಣಪತಿಯನ್ನು ಜ್ಞಾನ, ಸಮೃದ್ಧಿ ಮತ್ತು ಅದೃಷ್ಟದ ದೇವರು ಎಂದು ಪರಿಗಣಿಸಲಾಗುತ್ತದೆ. ಆದರೆ ಗಣಪತಿ ವಿಗ್ರಹವನ್ನು ಸ್ಥಾಪಿಸುವ ಮೊದಲು ಮತ್ತು ಸಮಯದಲ್ಲಿ ಕೆಲವು ವಿಶೇಷ ನಿಯಮಗಳನ್ನು ಪಾಲಿಸುವುದು ಬಹಳ ಮುಖ್ಯ. ಈ ನಿಯಮಗಳನ್ನು ಎಚ್ಚರಿಕೆಯಿಂದ ಪಾಲಿಸದಿದ್ದರೆ, ಪೂಜೆಯ ಪೂರ್ಣ ಪ್ರಯೋಜನ ಸಿಗುವುದಿಲ್ಲ. ನಿಮ್ಮ ಪೂಜೆ ಪರಿಪೂರ್ಣವಾಗಬೇಕೆಂದು ನೀವು ಬಯಸಿದರೆ, ಈ ಕೆಲವು ಪ್ರಮುಖ ನಿಯಮಗಳನ್ನು ತಿಳಿದುಕೊಳ್ಳಿ.

ಗಣೇಶ ಚತುರ್ಥಿ ಶುಭ ಸಮಯ ದ್ರಿಕ್ ಪಂಚಾಂಗದ ಪ್ರಕಾರ, ಗಣೇಶ ಚತುರ್ಥಿ ಆಗಸ್ಟ್ 26 ರಂದು ಮಧ್ಯಾಹ್ನ 01:54 ಕ್ಕೆ ಪ್ರಾರಂಭವಾಗಿ ಆಗಸ್ಟ್ 27 ರಂದು ಮಧ್ಯಾಹ್ನ 03:44 ಕ್ಕೆ ಇರುತ್ತದೆ. ಗಣೇಶನನ್ನು ಪ್ರತಿಷ್ಠಾಪಿಸಲು ಮತ್ತು ಪೂಜಿಸಲು ಅತ್ಯಂತ ಶುಭ ದಿನ ಆಗಸ್ಟ್ 27 . ಈ ದಿನ, ಗಣೇಶನನ್ನು ಬೆಳಿಗ್ಗೆ ಅಥವಾ ಮಧ್ಯಾಹ್ನ ಶುಭ ಸಮಯದಲ್ಲಿ ಪೂಜಿಸಬಹುದು.

ಗಣೇಶನನ್ನು ಪ್ರತಿಷ್ಠಾಪಿಸುವ ಮೊದಲು ತಿಳಿದುಕೊಳ್ಳಬೇಕಾದ ಪ್ರಮುಖ ನಿಯಮಗಳು:

ಗಣಪತಿ ಸೊಂಡಿಲು:

ಎಡಕ್ಕೆ ಸೊಂಡಿಲು ಇರುವ ಗಣಪತಿ ಮೂರ್ತಿಯನ್ನು ಖರೀದಿಸಿ. ಅಂತಹ ಮೂರ್ತಿಯನ್ನು ಪೂಜಿಸುವುದರಿಂದ ಶುಭ ಫಲಿತಾಂಶಗಳು ದೊರೆಯುತ್ತವೆ. ಬಲಕ್ಕೆ ಸೊಂಡಿಲು ಇರುವ ಗಣೇಶನ ಮೂರ್ತಿಯನ್ನು ದಕ್ಷಿಣಾಭಿಮುಖಿ ಗಣೇಶ ಅಥವಾ ಬಲಮುರಿ ಗಣೇಶ ಎಂದು ಕರೆಯಲಾಗುತ್ತದೆ. ಇದು ಅಪರೂಪ ಮತ್ತು ಹೆಚ್ಚು ಶಕ್ತಿಯುತವೆಂದು ಪರಿಗಣಿಸಲಾಗಿದೆ, ಆದರೆ ಪೂಜಿಸಲು ಕಠಿಣವಾಗಿದೆ ಎಂದು ಹೇಳಲಾಗುತ್ತದೆ. ಆದ್ದರಿಂದ, ನೀವು ಈ ಮೂರ್ತಿಯನ್ನು ನಿಮ್ಮ ಮನೆಯಲ್ಲಿ ಸ್ಥಾಪಿಸಿದರೆ, ನೀವು ಪೂಜೆಗೆ ಕೆಲವು ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸಬೇಕು.

ಸ್ವಚ್ಛತೆಯ ಬಗ್ಗೆ ಕಾಳಜಿ ವಹಿಸಿ:

ಗಣೇಶ ಮೂರ್ತಿಯನ್ನು ಇಡುವ ಮೊದಲು, ಪೂಜಾ ಸ್ಥಳವನ್ನು ಚೆನ್ನಾಗಿ ಸ್ವಚ್ಛಗೊಳಿಸಿ ಮತ್ತು ಅಲ್ಲಿ ಗಂಗಾ ಜಲವನ್ನು ಸಿಂಪಡಿಸಿ.

ಪೀಠ ಅಥವಾ ಆಸನ:

ವಿಗ್ರಹವನ್ನು ನೇರವಾಗಿ ನೆಲದ ಮೇಲೆ ಇಡಬೇಡಿ. ವಿಗ್ರಹವನ್ನು ಕೆಂಪು ಅಥವಾ ಹಳದಿ ಬಟ್ಟೆಯಿಂದ ಮುಚ್ಚಿದ ಶುದ್ಧ ಪೀಠ ಅಥವಾ ದರ್ಭಾಸನದ ಮೇಲೆ ಇರಿಸಿ.

ಮಣ್ಣಿನ ವಿಗ್ರಹ:

ಶಾಸ್ತ್ರಗಳ ಪ್ರಕಾರ, ಮಣ್ಣಿನಿಂದ ಮಾಡಿದ ವಿಗ್ರಹವನ್ನು ಪೂಜಿಸುವುದು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ.

ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮುಹೂರ್ತ:

ಗಣೇಶ ಮೂರ್ತಿಯನ್ನು ಚತುರ್ಥಿ ತಿಥಿಯಂದು ಮಾತ್ರ ಪ್ರತಿಷ್ಠಾಪಿಸಿ. ರಾತ್ರಿಯಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವುದು ಶುಭವಲ್ಲ.

ದಿಕ್ಕು ಮತ್ತು ಗಾತ್ರ :

ಗಣೇಶನ ಮೂರ್ತಿಯನ್ನು ಯಾವಾಗಲೂ ಈಶಾನ್ಯ ದಿಕ್ಕಿನಲ್ಲಿ ಇಡಬೇಕು. ಈ ದಿಕ್ಕನ್ನು ಪೂಜೆಗೆ ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ವಿಗ್ರಹದ ಗಾತ್ರ ತುಂಬಾ ದೊಡ್ಡದಾಗಿರಬಾರದು. ಮನೆಯಲ್ಲಿ ಪೂಜೆಗೆ, ಸುಲಭವಾಗಿ ಮುಳುಗಿಸಬಹುದಾದ ಸಣ್ಣ ವಿಗ್ರಹವನ್ನು ಉತ್ತಮವೆಂದು ಪರಿಗಣಿಸಲಾಗುತ್ತದೆ.

ಇದನ್ನೂ ಓದಿ: ಸೆ. 07 ಎರಡನೇ ಚಂದ್ರಗ್ರಹಣ; ಈ ಎರಡು ರಾಶಿಯವರು ಅತ್ಯಂತ ಜಾಗರೂಕರಾಗಿರಿ

ಅಭಿಷೇಕ, ಪ್ರಾಣ ಪ್ರತಿಷ್ಠೆ:

ಮೂರ್ತಿಯನ್ನು ಪ್ರತಿಷ್ಠಾಪಿಸಿದ ನಂತರ ಅಭಿಷೇಕವನ್ನು ಮಾಡಿ. ಇದರ ನಂತರ, “ಪ್ರಾಣ ಪ್ರತಿಷ್ಠಾ” ಎಂಬ ಮಂತ್ರವನ್ನು ಪಠಿಸುವ ಮೂಲಕ ವಿಗ್ರಹಕ್ಕೆ ಪ್ರಾಣವನ್ನು ತುಂಬಿಸಿ. ಇದಲ್ಲದೇ ಗಣೇಶನ ಪೂಜೆಯಲ್ಲಿ ಸಿಂಧೂರ ಮತ್ತು ದರ್ಭ ಹುಲ್ಲು ಅರ್ಪಿಸುವುದು ಬಹಳ ಶುಭವೆಂದು ಪರಿಗಣಿಸಲಾಗಿದೆ.

ಮೋದಕಗಳ ಅರ್ಪಣೆ:

ಗಣೇಶನಿಗೆ ಮೋದಕ ಎಂದರೆ ತುಂಬಾ ಇಷ್ಟ. ಆದ್ದರಿಂದ ಹಬ್ಬದಂದು ಕಡ್ಡಾಯವಾಗಿ ಗಣೇಶನಿಗೆ ಮೋದಕ ಅರ್ಪಿಸಬೇಕು.ಇದಲ್ಲದೇ ಪ್ರತಿಷ್ಠಾಪನೆಯ ನಂತರ, ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಗಣೇಶನಿಗೆ ಆರತಿ ಮಾಡುವುದು, ಪೂಜೆ ಸಲ್ಲಿಸುವುದು ಮತ್ತು ನೈವೇದ್ಯಗಳನ್ನು ಅರ್ಪಿಸುವುದು ಅವಶ್ಯಕ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ