AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ganesh Chaturthi 2025: ಗಣೇಶ ಪೂಜೆಯಲ್ಲಿ 21 ಎಲೆಗಳನ್ನು ಏಕೆ ಅರ್ಪಿಸಲಾಗುತ್ತದೆ? ಇದರ ವಿಶೇಷತೆ ಏನು?

ಗಣೇಶ ಚತುರ್ಥಿಯಲ್ಲಿ 21 ಬಗೆಯ ಎಲೆಗಳನ್ನು ಅರ್ಪಿಸುವುದು ಏಕವಿಂಶತಿ ಪತ್ರ ಪೂಜೆ ಎಂದು ಕರೆಯಲ್ಪಡುತ್ತದೆ. ಪ್ರತಿ ಎಲೆಯೂ ವಿಶೇಷ ಶಕ್ತಿ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಹೊಂದಿದೆ. ಬನ್ನಿ ಎಲೆ ವಿಜಯಕ್ಕೆ, ಬಿಲ್ವಪತ್ರೆ ಶುದ್ಧತೆಗೆ, ತುಳಸಿ ಎಲೆ ವಿಶೇಷ ಶುಭಕ್ಕೆ ಸಂಕೇತ. ಈ ಪೂಜೆಯಿಂದ ಗಣಪತಿಯ ಪ್ರಸಾದ ಮತ್ತು ಜೀವನದಲ್ಲಿ ಸಮೃದ್ಧಿ ದೊರೆಯುತ್ತದೆ ಎಂಬ ನಂಬಿಕೆ ಇದೆ.

Ganesh Chaturthi 2025: ಗಣೇಶ ಪೂಜೆಯಲ್ಲಿ 21 ಎಲೆಗಳನ್ನು ಏಕೆ ಅರ್ಪಿಸಲಾಗುತ್ತದೆ? ಇದರ ವಿಶೇಷತೆ ಏನು?
ಗಣೇಶ ಪೂಜೆ
ಅಕ್ಷತಾ ವರ್ಕಾಡಿ
|

Updated on: Aug 24, 2025 | 7:02 AM

Share

ದೇಶಾದ್ಯಂತ ಗಣೇಶ ಚತುರ್ಥಿಯನ್ನು ಬಹಳ ವಿಜೃಂಭಣೆಯಿಂದ ಮತ್ತು ಭಕ್ತಿಯಿಂದ ಆಚರಿಸಲಾಗುತ್ತದೆ. ಗಣೇಶನ ಮಣ್ಣಿನ ಮೂರ್ತಿಯನ್ನು ಪ್ರತಿಷ್ಠಾಪಿಸಿ 10 ದಿನಗಳ ಕಾಲ ಪೂಜಿಸಿ ಕೆರೆಯಲ್ಲಿ ವಿಸರ್ಜಿಸಲಾಗುತ್ತದೆ. ಇದರೊಂದಿಗೆ ಗಣೇಶನಿಗೆ 21 ಬಗೆಯ ಎಲೆಗಳು, 21 ಬಗೆಯ ಹೂವುಗಳು ಮತ್ತು 21 ಬಗೆಯ ಮೋದಕಗಳನ್ನು ಅರ್ಪಿಸಲಾಗುತ್ತದೆ. ಇದನ್ನು ಪತ್ರ ಪೂಜೆ, ಏಕವಿಂಶತಿ ಪತ್ರ ಪೂಜೆ ಎಂದೂ ಕರೆಯುತ್ತಾರೆ. ಆದರೆ ಇದು ಏಕೆ ವಿಶೇಷ ಎಂದು ತಿಳಿದಿದೆಯೇ? ಉತ್ತರವನ್ನು ಇಲ್ಲಿ ತಿಳಿದುಕೊಳ್ಳಿ.

ಶಾಸ್ತ್ರಗಳ ಪ್ರಕಾರ, ಈ ಎಲೆಗಳು ವಿಭಿನ್ನ ಧಾರ್ಮಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಹೊಂದಿವೆ. 21 ಎಲೆಗಳನ್ನು ಅರ್ಪಿಸುವುದರಿಂದ ವಿಘ್ನಹರ್ತ ಗಣಪತಿಯು ಬೇಗನೆ ಪ್ರಸನ್ನನಾಗುತ್ತಾನೆ ಮತ್ತು ಭಕ್ತರ ಜೀವನದಿಂದ ತೊಂದರೆಗಳನ್ನು ನಿವಾರಿಸುತ್ತಾನೆ ಮತ್ತು ಸಂತೋಷ ಮತ್ತು ಸಮೃದ್ಧಿಯನ್ನು ನೀಡುತ್ತಾನೆ ಎಂದು ನಂಬಲಾಗಿದೆ.

ಇದನ್ನೂ ಓದಿ: ಸೆ. 07 ಎರಡನೇ ಚಂದ್ರಗ್ರಹಣ; ಈ ಎರಡು ರಾಶಿಯವರು ಅತ್ಯಂತ ಜಾಗರೂಕರಾಗಿರಿ

21 ಎಲೆಗಳನ್ನು ಅರ್ಪಿಸುವ ಸಂಪ್ರದಾಯವು ಕೇವಲ ಧಾರ್ಮಿಕವಲ್ಲ, ಅದರಲ್ಲಿ ಆಳವಾದ ಆಧ್ಯಾತ್ಮಿಕ ರಹಸ್ಯವೂ ಅಡಗಿದೆ. ಪ್ರತಿಯೊಂದು ಎಲೆಯೂ ವಿಶೇಷ ಶಕ್ತಿ, ಗುಣ ಮತ್ತು ಆಶೀರ್ವಾದದ ಸಂಕೇತವಾಗಿದೆ. ಅದರಂತೆ ಗರಿಕೆ ಸಮೃದ್ಧಿಯ ಸಂಕೇತದಂತೆ, ಬನ್ನಿ ಎಲೆ ವಿಜಯದ ಸಂಕೇತ, ಬಿಲ್ವಾಪತ್ರೆ ಶುದ್ಧತೆಯ ಸಂಕೇತ ಮತ್ತು ಧಾತುರಾ ಉಗ್ರ ಶಕ್ತಿಗಳನ್ನು ಶಾಂತಗೊಳಿಸುವ ಸಂಕೇತವಾಗಿದೆ. ವಿಶೇಷವೆಂದರೆ ತುಳಸಿ ಎಲೆಗಳನ್ನು ಸಾಮಾನ್ಯ ದಿನಗಳಲ್ಲಿ ಗಣಪತಿಗೆ ಅರ್ಪಿಸುವುದಿಲ್ಲ, ಆದರೆ ಗಣೇಶ ಚತುರ್ಥಿಯಂದು ಇದನ್ನು ಶುಭವೆಂದು ಪರಿಗಣಿಸಲಾಗುತ್ತದೆ. ಈ ಎಲೆಗಳಿಂದ ಪೂಜಿಸುವುದರಿಂದ ಜೀವನದಲ್ಲಿನ ಅಡೆತಡೆಗಳು ನಿವಾರಣೆಯಾಗಿ ಸಂತೋಷ ಮತ್ತು ಸಮೃದ್ಧಿ ದೊರೆಯುತ್ತದೆ ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್