AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Ganesh Chaturthi: ಗಣೇಶ ಪೆಂಡಾಲ್​ಗಳಿಗೆ ಅನುಮತಿ ನೀಡಲು 63 ಏಕಗವಾಕ್ಷಿ ಕೇಂದ್ರಗಳನ್ನು ತೆರೆದ ಬಿಬಿಎಂಪಿ

ರಾಸಾಯನಿಕ ಬಣ್ಣ, ಥರ್ಮಾಕೋಲ್ ಮತ್ತು ಪ್ಲಾಸ್ಟರ್ ಆಫ್ ಪ್ಯಾರಿಸ್ ಬಳಸಿ ಗಣೇಶ ಮೂರ್ತಿಗಳನ್ನು ಮಾರಾಟ ಮಾಡಲು ಯತ್ನಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಸೂಚಿಸಿದೆ. ಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಬಳಸುವಂತೆ ಜನರಲ್ಲಿ ಜಾಗೃತಿ ಮೂಡಿಸುವಂತೆ ಪಾಲಿಕೆ ವಿಭಾಗೀಯ ಅಧಿಕಾರಿಗಳಿಗೆ ಸೂಚಿಸಿದೆ.

Bengaluru Ganesh Chaturthi: ಗಣೇಶ ಪೆಂಡಾಲ್​ಗಳಿಗೆ ಅನುಮತಿ ನೀಡಲು 63 ಏಕಗವಾಕ್ಷಿ ಕೇಂದ್ರಗಳನ್ನು ತೆರೆದ ಬಿಬಿಎಂಪಿ
ಗಣೇಶ ಪೆಂಡಾಲ್​ಗಳಿಗೆ ಅನುಮತಿ ನೀಡಲು 63 ಏಕಗವಾಕ್ಷಿ ಕೇಂದ್ರಗಳನ್ನು ತೆರೆದ ಬಿಬಿಎಂಪಿ
TV9 Web
| Edited By: |

Updated on:Sep 12, 2023 | 10:45 AM

Share

ಬೆಂಗಳೂರು, ಸೆಪ್ಟೆಂಬರ್ 9: ಗಣೇಶ ಹಬ್ಬದ (Ganesh Chaturthi) ಪ್ರಯುಕ್ತ ಪೆಂಡಾಲ್​ಗಳನ್ನು ಹಾಕಲು ಅನುಮತಿ ನೀಡುವುದಕ್ಕಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (BBMP) ನಗರದ ಎಲ್ಲಾ ವಿಭಾಗಗಳಲ್ಲಿ 63 ಏಕ ಗವಾಕ್ಷಿ ತೆರವು ಕೇಂದ್ರಗಳನ್ನು ಅಥವಾ ಸಿಂಗಲ್ ವಿಂಡೋ ಕ್ಲಿಯರೆನ್ಸ್​​ ಸೆಂಟರ್​ಗಳನ್ನು ಸ್ಥಾಪಿಸಿದೆ. ಕೇಂದ್ರದಲ್ಲಿಯೂ ಬಿಬಿಎಂಪಿ, ಪೊಲೀಸ್, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಅಗ್ನಿಶಾಮಕ ಇಲಾಖೆಯ ಪ್ರತಿನಿಧಿಗಳು ಇರಲಿದ್ದಾರೆ.

ಗಣೇಶ ಪೆಂಡಾಲ್​ಗಳಿಗೆ / ಮಂಟಪಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ತ್ವರಿತವಾಗಿ ತೆರವುಗೊಳಿಸಲು ವಿವಿಧ ಇಲಾಖೆಗಳ ನೋಡಲ್ ಅಧಿಕಾರಿಗಳನ್ನು ರಚಿಸುವ ಸುತ್ತೋಲೆಯನ್ನು ಬಿಬಿಎಂಪಿ ಶನಿವಾರ ಹೊರಡಿಸಿದೆ.

ಅರ್ಜಿಗಳನ್ನು ಎಲ್ಲಾ ವಿಭಾಗಗಳಲ್ಲಿನ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿಯಲ್ಲಿ ತೆಗೆದುಕೊಳ್ಳಬಹುದು ಮತ್ತು ಎಲ್ಲಾ ಸಂಬಂಧಿತ ದಾಖಲೆಗಳನ್ನು ಸಲ್ಲಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಪರಿಸರಸ್ನೇಹಿ ಗಣೇಶ

ರಾಸಾಯನಿಕ ಬಣ್ಣ, ಥರ್ಮಾಕೋಲ್ ಮತ್ತು ಪ್ಲಾಸ್ಟರ್ ಆಫ್ ಪ್ಯಾರಿಸ್ ಬಳಸಿ ಗಣೇಶ ಮೂರ್ತಿಗಳನ್ನು ಮಾರಾಟ ಮಾಡಲು ಯತ್ನಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಸೂಚಿಸಿದೆ.

ಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಬಳಸುವಂತೆ ಜನರಲ್ಲಿ ಜಾಗೃತಿ ಮೂಡಿಸುವಂತೆ ಪಾಲಿಕೆ ವಿಭಾಗೀಯ ಅಧಿಕಾರಿಗಳಿಗೆ ಸೂಚಿಸಿದೆ. ಜನರು ತಮ್ಮ ತಮ್ಮ ಮನೆಗಳಲ್ಲಿ ಬಕೆಟ್‌ಗಳಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜನೆಗೊಳಿಸಲು ಮತ್ತು ಉದ್ಯಾನಗಳಲ್ಲಿನ ನೀರನ್ನು ಬಳಸಲು ಪ್ರೋತ್ಸಾಹಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಖಾಸಗಿ ಸಾರಿಗೆ ಬಂದ್; ಬೆಂಬಲ ಸೂಚಿಸಿದ ಓಲಾ, ಉಬರ್ ಚಾಲಕರು

ಬೃಹತ್ ಗಾತ್ರದ ವಿಗ್ರಹಗಳನ್ನು ವಿಸರ್ಜಿಸಲು ಸ್ಥಳಗಳನ್ನು ಗುರುತಿಸಿ ತಾತ್ಕಾಲಿಕ ಕೊಳಗಳನ್ನು ನಿರ್ಮಿಸುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಆದೇಶಿಸಿದೆ. ವಿಗ್ರಹ ವಿಸರ್ಜನೆ ಸ್ಥಳಗಳಲ್ಲಿ ಜನರ ಸುರಕ್ಷತೆಗಾಗಿ ಪ್ರತ್ಯೇಕ ತಂಡವನ್ನು ರಚಿಸಲು ಅಧಿಕಾರಿಗಳಿಗೆ ಆದೇಶಿಸಲಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:15 pm, Sat, 9 September 23

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ