AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪಿಒಪಿ ಗಣೇಶ ಮೂರ್ತಿ ಮಾರಾಟಕ್ಕೆ ಅವಕಾಶ ನೀಡುವಂತೆ ಗ್ರಾಹಕರಿಂದ ಪ್ರತಿಭಟನೆ

ಗಣೇಶ ಹಬ್ಬಕ್ಕೆ ಇನ್ನೊಂದು ತಿಂಗಳಷ್ಟೇ ಬಾಕಿ ಇದೆ. ಈಗಲೇ ಗಣೇಶನ ವಿಗ್ರಹಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಗ್ರಾಹಕರು ಮುಂಗಡವಾಗಿ ಕಾಯ್ದಿರಿಸುತ್ತಿದ್ದಾರೆ. ಈ ಪೈಕಿ ಕೆಲವರು ಪಿಒಪಿ ಗಣೇಶ ಮೂರ್ತಿಗಾಗಿ ಬೇಡಿಕೆ ಇಡುತ್ತಿದ್ದ, ಮಾರಾಟಕ್ಕೆ ಅವಕಾಶ ನೀಡುವಂತೆ ಗ್ರಾಹಕರು ಬೆಂಗಳೂರಿನ ಕುಂಬಳಗೋಡಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರು: ಪಿಒಪಿ ಗಣೇಶ ಮೂರ್ತಿ ಮಾರಾಟಕ್ಕೆ ಅವಕಾಶ ನೀಡುವಂತೆ ಗ್ರಾಹಕರಿಂದ ಪ್ರತಿಭಟನೆ
ಪಿಒಪಿ ಗಣೇಶ ವಿಗ್ರಹಗಳ ಮಾರಾಟಕ್ಕೆ ಅವಕಾಶ ನೀಡುವಂತೆ ಆಗ್ರಹಿಸಿ ಕುಂಬಳಗೋಡಿನಲ್ಲಿ ಪ್ರತಿಭಟನೆ
Poornima Agali Nagaraj
| Edited By: |

Updated on:Sep 12, 2023 | 10:47 AM

Share

ಬೆಂಗಳೂರು, ಆಗಸ್ಟ್ 20: ಗಣೇಶ ಚತುರ್ಥಿ (Ganesha Chaturthi) ಹಬ್ಬಕ್ಕೆ 28 ದಿವಸಗಳಷ್ಟೇ ಬಾಕಿ ಇರುವಾಗಲೇ ಗಣಪನ ವಿಗ್ರಹಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗುತ್ತಿದೆ. ಒಂದಷ್ಟು ಮಂದಿ ಪರಿಸರ ಸ್ನೇಹಿ ವಿಗ್ರಹಕ್ಕಾಗಿ ಮೊರೆ ಹೋಗುತ್ತಿದ್ದು, ಇನ್ನೊಂದಷ್ಟು ಮಂದಿ ಪಿಒಪಿ ಗಣೇಶನ ವಿಗ್ರಹಕ್ಕಾಗಿ ಕಾಯುತ್ತಿದ್ದಾರೆ. ಆದರೆ, ಪಿಒಪಿ ಗಣೇಶ ವಿಗ್ರಹಗಳ (POP Ganesha Idol) ಮಾರಾಟಕ್ಕೆ ನಿಷೇಧ ಹೇರಿದ ಹಿನ್ನೆಲೆ ಆಕ್ರೋಶಗೊಂಡಿರುವ ಗ್ರಾಹಕರು ನಗರದ ಕುಂಬಳಗೋಡಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಇಂದು ಭಾನುವಾರ ರಜಾ ದಿನ ಆಗಿದ್ದರಿಂದ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾಕಷ್ಟು ಗ್ರಾಹಕರು ಪಿಒಪಿ ಗಣೇಶ ಮೂರ್ತಿಯನ್ನು ಮುಂಗಡವಾಗಿ ಕಾಯ್ದಿರಿಸಲು ಗೋಡೌನ್​ ಬಳಿ ಆಗಮಿಸಿದ್ದಾರೆ. ಆದರೆ, ಪಿಒಪಿ ಗಣೇಶ ವಿಗ್ರಹಗಳನ್ನು ಮರಾಟ ಮಾಡಬಾರದು ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯು ನಿನ್ನೆಯೇ ಕುಂಬಳಗೋಡಿನ ಗಣಪತಿ ಗೋಡೌನ್ ಮುಚ್ಚಿಸಿದ್ದರು. ಇದರಿಂದ ಆಕ್ರೋಶಗೊಂಡ ಗ್ರಾಹಕರು, ಪಿಒಪಿ ಗಣೇಶ ಮೂರ್ತಿ ಮಾರಾಟಕ್ಕೆ ಅವಕಾಶ ನೀಡುವಂತೆ ಆಗ್ರಹಿಸಿ ಗೋಡೌನ್ ಮುಂದೆ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: Vibhuvana Sankashti Chaturthi 2023: ವಿಭುವನ ಸಂಕಷ್ಟ ಚತುರ್ಥಿ ಯಾವಾಗ? ಸಮಯ, ಆಚರಣೆಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ಮಹಾರಾಷ್ಟ್ರದ ಬಾಂಬೆಯಲ್ಲಿ ಪಿಒಪಿ ಗಣೇಶ ವಿಗ್ರಹಗಳನ್ನು ಮಾರಲು ಅವಕಾಶ ನೀಡಲಾಗಿದೆ. ಅಲ್ಲಿಂದಲೇ 25 ಸಾವಿರಕ್ಕೂ ಹೆಚ್ಚು ಗಣೇಶ ಮೂರ್ತಿಗಳು ಬರುತ್ತಿವೆ. ಈ ವಿಗ್ರಹಗಳು ಒಂದು ವಾರದಲ್ಲಿ ಬೆಂಗಳೂರಿಗೆ ಬರುತ್ತವೆ. ಅವುಗಳನ್ನ ಮಾಲಿನ್ಯ ನಿಯಂತ್ರಣ ಮಂಡಳಿಗೆ ತಡೆಯಲು ಆಗುತ್ತಾ? ಒಂದು ವೇಳೆ ಆ ವಿಗ್ರಹಗಳನ್ನು ತಡೆಯಲು ಅವಕಾಶ ನೀಡದಿದ್ದರೆ ನಾವು ಕೂಡ ಬಾಂಬೆಯಿಂದಲೇ ಮೂರ್ತಿಗಳನ್ನು ತರುತ್ತೇವೆ ಅಂತ ಗ್ರಾಹಕರು ಹೇಳುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:14 pm, Sun, 20 August 23

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್