Ganesh Chaturthi 2023: ಗಣೇಶ ಚತುರ್ಥಿಯಂದು ಯಾವ ಮಂತ್ರ ಪಠಣ ಮಾಡಬೇಕು? ಅದರಿಂದ ಸಿಗುವ ಫಲಾಫಲಗಳೇನು?

ಭಗವಂತ ಗಣೇಶನು ಬುದ್ಧಿವಂತಿಕೆ ಮತ್ತು ಜ್ಞಾನದ ಅರಿವನ್ನು ಹೆಚ್ಚಿಸುತ್ತಾನೆ, ಮತ್ತು ಅವನ ಪೂಜಿಸುವುದರಿಂದ ಜೀವನದಲ್ಲಿ ಯಾವುದೇ ಅಡೆತಡೆಗಳು ಬಂದರೂ ಸುಲಭವಾಗಿ ಅದನ್ನು ತೊಡೆದು ಹಾಕಲು ಸಹಾಯ ಮಾಡುತ್ತಾನೆ ಎಂದು ನಂಬಲಾಗಿದೆ. ಎಲ್ಲ ವರ್ಷದಂತೆ ಈ ವರ್ಷವೂ ಹಬ್ಬ ಆಚರಣೆ ಮಾಡುವಾಗ ಕೆಲವು ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಬೇಕಾದದ್ದು ಸಾಮಾನ್ಯ. ಜೊತೆಗೆ ಯಾವ ಮಂತ್ರ ಪಠಣ ಮಾಡಬೇಕು? ಅದರ ಫಲಾಫಲಗಳೇನು? ಎಂಬುದನ್ನು ಕೂಡ ತಿಳಿದುಕೊಳ್ಳಬೇಕಾಗಿದೆ.

Ganesh Chaturthi 2023: ಗಣೇಶ ಚತುರ್ಥಿಯಂದು ಯಾವ ಮಂತ್ರ ಪಠಣ ಮಾಡಬೇಕು? ಅದರಿಂದ ಸಿಗುವ ಫಲಾಫಲಗಳೇನು?
Ganesh Chaturthi 2023Image Credit source: Pinterest
Follow us
| Updated By: ಅಕ್ಷತಾ ವರ್ಕಾಡಿ

Updated on:Sep 19, 2023 | 9:59 AM

ಹಿಂದೂ ಧರ್ಮದಲ್ಲಿ ಯಾವುದೇ ದೇವರನ್ನು ಪೂಜಿಸುವ ಮೊದಲು ಗಣೇಶನನ್ನು ಪೂಜಿಸಲಾಗುತ್ತದೆ, ಭಗವಂತ ಗಣೇಶನು ಬುದ್ಧಿವಂತಿಕೆ ಮತ್ತು ಜ್ಞಾನದ ಅರಿವನ್ನು ಹೆಚ್ಚಿಸುತ್ತಾನೆ, ಮತ್ತು ಅವನ ಪೂಜಿಸುವುದರಿಂದ ಜೀವನದಲ್ಲಿ ಯಾವುದೇ ಅಡೆತಡೆಗಳು ಬಂದರೂ ಸುಲಭವಾಗಿ ಅದನ್ನು ತೊಡೆದು ಹಾಕಲು ಸಹಾಯ ಮಾಡುತ್ತಾನೆ ಎಂದು ನಂಬಲಾಗಿದೆ. ಎಲ್ಲ ವರ್ಷದಂತೆ ಈ ವರ್ಷವೂ ಹಬ್ಬ ಆಚರಣೆ ಮಾಡುವಾಗ ಕೆಲವು ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಬೇಕಾದದ್ದು ಸಾಮಾನ್ಯ. ಜೊತೆಗೆ ಯಾವ ಮಂತ್ರ ಪಠಣ ಮಾಡಬೇಕು? ಅದರ ಫಲಾಫಲಗಳೇನು? ಎಂಬುದನ್ನು ಕೂಡ ತಿಳಿದುಕೊಳ್ಳಬೇಕಾಗಿದೆ.

  • “ವಕ್ರತುಂಡ ಮಹಾಕಾಯ ಸೂರ್ಯ ಕೋಟಿ ಸಮಪ್ರಭ ನಿರ್ವಿಘ್ನಂ ಕುರೂ ಮೇ ದೇವ ಸರ್ವಕಾರ್ಯೇಷು ಸರ್ವದಾ”

ಈ ಮಂತ್ರವನ್ನು ಪಠಿಸುವುದು ತುಂಬಾ ಪ್ರಯೋಜನಕಾರಿಯಾಗಿದೆ ಏಕೆಂದರೆ ಇದು ಜೀವನದಲ್ಲಿ ಬರುವ ಅಡೆತಡೆಗಳನ್ನು ತೊಡೆದು ಹಾಕುವಲ್ಲಿ ಸಹಾಯ ಮಾಡುವ ಅತ್ಯಂತ ಪರಿಣಾಮಕಾರಿ ಮಂತ್ರವಾಗಿದೆ. ಈ ಮಂತ್ರದ ನಿಯಮಿತವಾದ ಪಠಣವು ಎಲ್ಲಾ ರೀತಿಯ ಒಳ್ಳೆಯ ಅವಕಾಶಗಳನ್ನು ನಿಮಗೆ ನೀಡುತ್ತದೆ. ಗಣೇಶನನ್ನು ಬುದ್ಧಿವಂತಿಕೆ ಮತ್ತು ಜ್ಞಾನದ ಅಧಿಪತಿ ಎಂದು ಕರೆಯಲಾಗುತ್ತದೆ. ಆದ್ದರಿಂದ ಈ ಮಂತ್ರವನ್ನು ಭಕ್ತಿಯಿಂದ ಪಠಿಸುವುದರಿಂದ ಸಾಧಕನಿಗೆ ಸಾಕಷ್ಟು ಜ್ಞಾನವನ್ನು ಒದಗಿಸುತ್ತದೆ.

  • “ಏಕದಂತಾಯ ವಿದ್ಮಹೇ ವಕ್ರತುಂಡಾಯ ಧೀಮಹಿ ತನ್ನೋ ದಂತಿ ಪ್ರಚೋದಯಾತ್‌”

ಗಣೇಶ ಗಾಯತ್ರಿ ಮಂತ್ರವನ್ನು ಶುದ್ಧ ಮನಸ್ಸಿನಿಂದ ಪಠಿಸುವುದರಿಂದ ಸಮಸ್ಯೆ ಕಡಿಮೆಯಾಗುತ್ತದೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ನಿಯಮಿತವಾಗಿ ಈ ಮಂತ್ರವನ್ನು ಪಠಿಸಲು ಶಿಫಾರಸು ಮಾಡಲಾಗಿದೆ. ಏಕೆಂದರೆ ಇದು ಅವರ ಮನಸ್ಸನ್ನು ಶಾಂತಗೊಳಿಸುತ್ತದೆ ಮತ್ತು ಅವರ ದೇಹವನ್ನು ಆರೋಗ್ಯವಾಗಿಡುತ್ತದೆ. ಜೊತೆಗೆ ಎಲ್ಲಾ ರೀತಿಯಲ್ಲಿಯೂ ನೆಮ್ಮದಿ ಮತ್ತು ಶಾಂತತೆಯನ್ನು ನೀಡುತ್ತದೆ. ಗಣೇಶ ಗಾಯತ್ರಿ ಮಂತ್ರವನ್ನು ಸಂಪತ್ತನ್ನು ಪಡೆಯಲು ವ್ಯಾಪಕವಾಗಿ ಬಳಸಲಾಗುತ್ತದೆ.

  • ”ಓಂ ಗಂ ಗಣಪತಯೇ ನಮಃ”

ಹೊಸ ಉದ್ಯಮವನ್ನು ಪ್ರಾರಂಭಿಸುವ ಮೊದಲು, ಈ ಮಂತ್ರವನ್ನು ಭಕ್ತಿಯಿಂದ ಪಠಿಸಲು ಹೆಚ್ಚು ಶಿಫಾರಸು ಮಾಡಲಾಗುತ್ತದೆ. ಏಕೆಂದರೆ ಇದು ಯಾವುದೇ ರೀತಿಯ ನಕಾರಾತ್ಮಕ ಶಕ್ತಿಯನ್ನಾದರೂ ದೂರ ಮಾಡಿ ಸಕಾರಾತ್ಮಕ ಶಕ್ತಿಯನ್ನು ಬರಮಾಡಿಕೊಳ್ಳಲು ನಿಮ್ಮ ಮನಸ್ಸನ್ನು ಸಿದ್ಧಗೊಳಿಸುತ್ತದೆ. ಯಾವುದೇ ವೃತ್ತಿಪರ ಕೆಲಸವನ್ನು ಮಾಡುವಾಗ ಈ ಮಂತ್ರದ ನಿರಂತರ ಪಠಣವು ತುಂಬಾ ಪ್ರಯೋಜನಕಾರಿಯಾಗಿದೆ ಏಕೆಂದರೆ ಇದು ವೈಫಲ್ಯಕ್ಕೆ ಕಾರಣವಾಗುವ ಎಲ್ಲಾ ದುಷ್ಟ ಶಕ್ತಿಗಳನ್ನು ದೂರ ಮಾಡುತ್ತದೆ ಎಂದು ನಂಬಲಾಗಿದೆ.

ಇದನ್ನೂ ಓದಿ: ಈ ಶುಭ ಸಂದೇಶಗಳನ್ನು ಕಳುಹಿಸುವ ಮೂಲಕ ಗಣೇಶ ಚತುರ್ಥಿಯಂದು ನಿಮ್ಮ ಪ್ರೀತಿಪಾತ್ರರಿಗೆ ಶುಭ ಹಾರೈಸಿ

  • “ಓಂ ಶ್ರೀಂ ಹ್ರೀಂ ಕ್ಲೀಂ ಗ್ಲೌಂ ಗಂ ಗಣಪತಯೇ ವರ ವರದ ಸರ್ವಜನಂ ಮೇ ವಶಮಾನಯ ಸ್ವಾಹಾ”

ಅತ್ಯಂತ ಪರಿಣಾಮಕಾರಿ ಮಂತ್ರಗಳಲ್ಲಿ ಒಂದಾದ ಗಣೇಶ ಮೂಲ ಮಂತ್ರವು ತುಂಬಾ ಶಕ್ತಿಯುತವಾಗಿದೆ ಮತ್ತು ಅದನ್ನು ಪಠಿಸುವುದರಿಂದ ಧನಾತ್ಮಕ ಶಕ್ತಿಯನ್ನು ಸೃಷ್ಟಿಸುತ್ತದೆ. ಪದಗಳನ್ನು ಉಚ್ಚರಿಸುವ ರೀತಿ ಮತ್ತು ಪಠಿಸಿದಾಗ ಅದು ಧ್ವನಿಸುವ ರೀತಿ, ನಿಮ್ಮಲ್ಲಿ ಸಂಚಲವನ್ನು ಉಂಟುಮಾಡುತ್ತದೆ. ಗಣೇಶನ ಮೂಲ ಮಂತ್ರವನ್ನು ಪೂಜೆ ಮತ್ತು ಯಜ್ಞಗಳ ಸಮಯದಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಈ ಮಂತ್ರವನ್ನು ಸಂಪೂರ್ಣ ನಂಬಿಕೆ ಮತ್ತು ಭಕ್ತಿಯಿಂದ ಪಠಿಸಿದಾಗ, ಪ್ರದರ್ಶಕನಿಗೆ (ಭಕ್ತನಿಗೆ) ಯಶಸ್ಸು ಮತ್ತು ಸಮೃದ್ಧಿ ಪ್ರಾಪ್ತವಾಗುತ್ತದೆ.

  • “ಓಂ ವಿಘ್ನವಿನಾಶಕಾಯ ನಮಃ”

ಒಬ್ಬ ವ್ಯಕ್ತಿಯು ತನ್ನ ಸಾಮಾಜಿಕ ಜೀವನದಲ್ಲಿ, ಕೆಲಸದಲ್ಲಿ ಅಥವಾ ಪರಸ್ಪರ ಸಂಬಂಧಗಳೊಂದಿಗೆ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ, ಈ ಮಂತ್ರವನ್ನು ಪಠಿಸುವ ಮೂಲಕ ಅದನ್ನು ಪರಿಹರಿಸಿಕೊಳ್ಳಬಹುದು. ಈ ಮಂತ್ರವನ್ನು ಪಠಿಸುವುದರಿಂದ ಪ್ರಬುದ್ಧತೆ ಹೆಚ್ಚಾಗುವುದಲ್ಲದೇ, ತಿಳುವಳಿಕೆಯನ್ನು ಪಡೆಯುತ್ತಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:15 am, Sun, 17 September 23

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್