AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಗಣೇಶ ಹಬ್ಬಕ್ಕೆ ವಾ.ಕ.ರ. ಸಾರಿಗೆ ಸಂಸ್ಥೆಯಿಂದ 500ಕ್ಕೂ ಹೆಚ್ಚು ವಿಶೇಷ ಬಸ್ ವ್ಯವಸ್ಥೆ; ಇಲ್ಲಿದೆ ವಿವರ

ಗಣೇಶ ಹಬ್ಬದ ಆಚರಣೆಗಾಗಿ ದೂರದ ಸ್ಥಳಗಳಿಂದ ತಮ್ಮ ಸ್ವಂತ ಊರುಗಳಿಗೆ ಬರುವ ಹಾಗೂ ಹಬ್ಬ ಮುಗಿಸಿ ಹಿಂದಿರುಗುವ ಸಾರ್ವಜನಿಕ ಪ್ರಯಾಣಿಕರಿಗೆ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.

ಹುಬ್ಬಳ್ಳಿ: ಗಣೇಶ ಹಬ್ಬಕ್ಕೆ ವಾ.ಕ.ರ. ಸಾರಿಗೆ ಸಂಸ್ಥೆಯಿಂದ 500ಕ್ಕೂ ಹೆಚ್ಚು ವಿಶೇಷ ಬಸ್ ವ್ಯವಸ್ಥೆ; ಇಲ್ಲಿದೆ ವಿವರ
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ
ಶಿವಕುಮಾರ್ ಪತ್ತಾರ್
| Edited By: |

Updated on:Sep 12, 2023 | 10:45 AM

Share

ಹುಬ್ಬಳ್ಳಿ, ಸೆ.09: ಗಣೇಶ ಹಬ್ಬದ ಆಚರಣೆಗಾಗಿ ದೂರದ ಸ್ಥಳಗಳಿಂದ ತಮ್ಮ ಸ್ವಂತ ಊರುಗಳಿಗೆ ಬರುವ ಹಾಗೂ ಹಬ್ಬ ಮುಗಿಸಿ ಹಿಂದಿರುಗುವ ಸಾರ್ವಜನಿಕ ಪ್ರಯಾಣಿಕರಿಗೆ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (North West Karnataka Road Transport Corporation) ಯಿಂದ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್ 16 (ಶನಿವಾರ)ರಂದು ವಾರಾಂತ್ಯ, ಭಾನುವಾರ ಮತ್ತು ಸೋಮವಾರ ಸ್ವರ್ಣಗೌರಿ ವ್ರತ ಹಾಗೂ ಗಣೇಶ ಚತುರ್ಥಿ ಇದೆ. ಹಬ್ಬ ಆಚರಿಸಲು ಸೆ. 15 ಮತ್ತು 16 ರಂದು ಬೆಂಗಳೂರು, ಮಹಾರಾಷ್ಟ್ರದ ಪುಣೆ ಸೇರಿದಂತೆ ರಾಜ್ಯದ ಮತ್ತು ಅಂತರ್‌ರಾಜ್ಯದ ವಿವಿಧ ಪ್ರದೇಶಗಳಿಂದ ಹೆಚ್ಚಿನ ಪ್ರಯಾಣಿಕರು ಹಬ್ಬಕ್ಕಾಗಿ ಸ್ವಂತ ಊರುಗಳಿಗೆ ತೆರಳುವ ನಿರೀಕ್ಷೆ ಇದೆ.

ಹೀಗಾಗಿ ಹಬ್ಬಕ್ಕೆ ಬರುವವರಿಗೆ ಅನುಕಲವಾಗುವಂತೆ ಬೆಂಗಳೂರು ಮತ್ತಿತರ ಸ್ಥಳಗಳಿಂದ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಬಾಗಲಕೋಟೆ ಮತ್ತಿತರ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ಬಸ್ಸುಗಳು ಸಂಚರಿಸಲಿವೆ. ವೋಲ್ವೊ, ಸ್ಲೀಪರ್, ರಾಜಹಂಸ ಮುಂತಾದ 50 ಪ್ರತಿಷ್ಠಿತ ಐಶಾರಾಮಿ ಬಸ್ಸುಗಳು ಹಾಗೂ 200 ವೇಗದೂತ ಸಾರಿಗೆ ಸೇರಿದಂತೆ 250ಕ್ಕೂ ಹೆಚ್ಚು ಹೆಚ್ಚುವರಿ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲು ಯೋಜಿಸಲಾಗಿದೆ. ಅಲ್ಲದೇ ಸ್ಥಳೀಯ ಬಸ್ ನಿಲ್ದಾಣಗಳಿಂದ ಜಿಲ್ಲೆಯೊಳಗೆ ಹಾಗೂ ನೆರೆಯ ಜಿಲ್ಲೆಗಳಿಗೆ ಅವಶ್ಯಕತೆಗೆ ತಕ್ಕಂತೆ ಹೆಚ್ಚುವರಿ ಬಸ್ ಗಳನ್ನು ಓಡಿಸಲಾಗುತ್ತದೆ.

ಇದನ್ನೂ ಓದಿ:ಶಕ್ತಿ ಯೋಜನೆ ಅಡ್ಡ ಪರಿಣಾಮ, ಕುಂಟುತ್ತಿದೆ ವಾಯವ್ಯ ಸಾರಿಗೆ ಸಂಸ್ಥೆ ಆದಾಯ: ಸಂಬಳ ಕೊಡಲು ಆರ್ಥಿಕ ನೆರವು ಬೇಕಿದೆ- ಸರ್ಕಾರಕ್ಕೆ ಎಂಡಿ ಪತ್ರ

ಹಬ್ಬ ಮುಗಿಸಿಕೊಂಡು ಸ್ವಂತ ಊರುಗಳಿಂದ ಮರಳಿ ಬೆಂಗಳೂರು, ಮಂಗಳೂರು, ಹೈದ್ರಾಬಾದ್​, ಪುಣೆ ಇನ್ನಿತರೆ ಪ್ರಮುಖ ಸ್ಥಳಗಳಿಗೆ ತೆರಳುವ ಪ್ರಯಾಣಿಕರಿಗಾಗಿ 19ರಿಂದ‌ 24ರವರೆಗೆ ಸಂಸ್ಥೆಯ ಎಲ್ಲಾ ವಿಭಾಗಗಳ ಪ್ರಮುಖ ಬಸ್ ನಿಲ್ದಾಣಗಳಿಂದ ಜನ ದಟ್ಟಣೆಗೆ ಅನುಗುಣವಾಗಿ 250 ಕ್ಕೂ ಹೆಚ್ಚು ವಿಶೇಷ ಹೆಚ್ಚುವರಿ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.

ಹಬ್ಬದ ವಿಶೇಷ ಬಸ್ಸುಗಳಿಗೆ KSRTC Mobile App, ಮುಂಗಡ ಬುಕ್ಕಿಂಗ್ ಕೌಂಟರ್‌ಗಳು ಅಥವಾ ಸಂಸ್ಥೆಯ ವೆಬ್ ಸೈಟ್ www.ksrtc.in ಮೂಲಕ ಮುಂಗಡ ಬುಕ್ಕಿಂಗ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ಕೊನೆಯ ಕ್ಷಣದ ರಷ್ ನಿಂದ ತಪ್ಪಿಸಿಕೊಳ್ಳಲು ಕೂಡಲೆ ಮುಂಗಡ ಬುಕ್ಕಿಂಗ್ ಮಾಡಿಕೊಳ್ಳುವುದು ಸೂಕ್ತ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:42 pm, Sat, 9 September 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?