AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕೆ ಭರ್ಜರಿ ತಯಾರಿ, ಖರೀದಿ ಜೋರು; ಹೂ, ಹಣ್ಣು ತುಸು ದುಬಾರಿ

ಗೌರಿ ಗಣೇಶ ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದೆ. ಗಲ್ಲಿ ಗಲ್ಲಿಯಲ್ಲೂ ಗಜವದನನ ಪ್ರತಿಷ್ಠಾಪಿಸಲು ಗಂಡು ಮಕ್ಕಳು ಸಜ್ಜಾಗಿದ್ದರೆ, ಅತ್ತ ಗೌರಿ ಹಬ್ಬ ಆಚರಿಸಲು ಹೆಂಗಳೆಯರು ಸಿದ್ಧರಾಗಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ಹಬ್ಬದ ತಯಾರಿ ಜೋರಾಗಿದ್ದು, ಕೆಆರ್ ಮಾರ್ಕೆಟ್​​ನಲ್ಲಿ ಹಬ್ಬದ ಸಾಮಾಗ್ರಿಗಳ ಖರೀದಿ ಜೋರಾಗಿ ನಡೆದಿದೆ. ಇತ್ತ ಗೌರಿ ಗಣೇಶನ ಅಂದ ಚಂದದ ಮೂರ್ತಿಗಳಿಗೂ ಬೇಡಿಕೆ ಹೆಚ್ಚಾಗಿದ್ದು, ಹಬ್ಬದ ಖುಷಿಗೆ ಕೊಂಚ ಬೆಲೆಯೇರಿಕೆ ಬಿಸಿಯೂ ತಟ್ಟಿದೆ.

ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕೆ ಭರ್ಜರಿ ತಯಾರಿ, ಖರೀದಿ ಜೋರು; ಹೂ, ಹಣ್ಣು ತುಸು ದುಬಾರಿ
ಗೌರಿ ಗಣೇಶ ಮೂರ್ತಿಗಳ ಖರೀದಿಸುತ್ತಿರುವ ಮಹಿಳೆಯರು
ಶಾಂತಮೂರ್ತಿ
| Updated By: Ganapathi Sharma|

Updated on: Sep 06, 2024 | 7:40 AM

Share

ಬೆಂಗಳೂರು, ಸೆಪ್ಟೆಂಬರ್ 6: ಬೆಂಗಳೂರು ನಗರವಾಸಿಗಳು ಗೌರಿ ಗಣೇಶ ಹಬ್ಬ ಸ್ವಾಗತಿಸಲು ತುದಿಗಾಲಿನಲ್ಲಿ ನಿಂತಿದ್ದಾರೆ. ಭಾದ್ರಪದ ಶುಕ್ಲ ಚೌತಿಯಂದು ಬರುವ ಗೌರಿ-ಗಣೇಶನನ್ನ ಸ್ವಾಗತಿಸಲು ಸಿಟಿ ಮಂದಿ ಸಜ್ಜಾಗಿದ್ದು, ಗುರುವಾರವೇ ಕೆಆರ್ ಮಾರ್ಕೆಟ್​​ನಲ್ಲಿ ಖರೀದಿ ಜೋರಾಗಿತ್ತು. ಹೂವು, ಹಣ್ಣು, ಗರಿಕೆ, ಎಕ್ಕದ ಹಾರದ ಜೊತೆಗೆ ಹಬ್ಬಕ್ಕೆ ಬೇಕಾದ ವಸ್ತುಗಳ ಖರೀದಿಯಲ್ಲಿ ಗ್ರಾಹಕರು ವ್ಯಸ್ತರಾಗಿದ್ದರು. ಇತ್ತ ಪ್ರತಿ ಬಾರಿಯಂತೆ ಈ ಸಲ ಕೂಡ ಹೂ, ಹಣ್ಣುಗಳ ಬೆಲೆ ಕೊಂಚ ಏರಿಕೆಯಾಗಿದೆ. ಇದು ಗ್ರಾಹಕರಿಗೆ ಸ್ವಲ್ಪಮಟ್ಟಿಗೆ ಬಿಸಿ ಮುಟ್ಟಿಸಿತ್ತು.

ಆದರೆ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಕೊಂಚ ದರ ತಗ್ಗಿದ್ದು ಗ್ರಾಹಕರಿಗೆ ನೆಮ್ಮದಿ ಮೂಡಿಸಿತ್ತು.

ಹೂ, ಹಣ್ಣುಗಳ ದರ ವಿವರ

ಕನಕಾಂಬರ ಕೆಜಿಗೆ – 3000 ರೂ. ಮಲ್ಲಿಗೆ – ಕೆಜಿಗೆ 600 ರೂ. ಗುಲಾಬಿ- ಕೆಜಿಗೆ 250 ರೂ. ಸೇವಂತಿಗೆ – ಕೆಜಿಗೆ 180 ರೂ. ಸುಗಂಧರಾಜ-ಕೆಜಿಗೆ 240 ರೂ.

ಹಣ್ಣುಗಳ ದರ

  • ಸೇಬು- ಕೆಜಿಗೆ 120 ರಿಂದ 200ರೂ.
  • ದಾಳಿಂಬೆ- ಕೆಜಿಗೆ 160 ರೂ.
  • ಏಲಕ್ಕಿ ಬಾಳೆ – ಕೆಜಿಗೆ 120 ರೂ.
  • ಸೀತಾಫಲ- ಕೆಜಿಗೆ 100 ರೂ.
  • ಸಪೋಟ- ಕೆಜಿಗೆ 100 ರೂ.
  • ದ್ರಾಕ್ಷಿ- ಕೆಜಿಗೆ 120- 200 ರೂ.
  • ಅನಾನಸ್- ಎರಡಕ್ಕೆ 100-120 ರೂ.

ಹಬ್ಬದ ಸಾಮಾಗ್ರಿಗಳ ದರ

  • ಬಾಳೆಕಂದು- ಜೋಡಿಗೆ 60 ರೂ.
  • ಮಾವಿನ ತೋರಣ- 20 ರೂ.
  • ಗರಿಕೆ-ಕಟ್ಟಿಗೆ 30 ರೂ.
  • ಬಿಲ್ವಪತ್ರೆ- 20ರೂ.
  • ಎಕ್ಕದಹಾರ- 50 ರಿಂದ 60 ರೂ.

ಇನ್ನು ಒಂದೆಡೆ ಹಬ್ಬದ ಸಾಮಾಗ್ರಿಗಳ ಖರೀದಿಯಾದರೆ, ಮತ್ತೊಂದೆಡೆ ಮಾರ್ಕೆಟ್​​ಗೆ ಎಂಟ್ರಿಕೊಟ್ಟಿರುವ ಬಣ್ಣ ಬಣ್ಣದ ಗಣಪ, ಪರಿಸರ ಸ್ನೇಹಿ ಗಣಪ, ಮುದ್ದುಮುಖದ ಗೌರಿ ವಿಗ್ರಹಗಳಿಗೂ ಬೇಡಿಕೆ ಸೃಷ್ಟಿಯಾಗಿದೆ.

Huge preparations for Ganesh Chaturthi festival in Bangalore, Flowers and fruits are a bit expensive, Kannada news

ಗೌರಿ ಗಣೇಶನ ಮೂರ್ತಿಗಳನ್ನು ಖರೀದಿಸುವವರ ಸಂಖ್ಯೆ ಕೂಡ ಹೆಚ್ಚಾಗಿತ್ತು. ಮುಂಬೈ, ಪುಣೆ ಸೇರಿದಂತೆ ಹಲವೆಡೆಯಿಂದ ಬಂದ ಗಣಪನ ಮೂರ್ತಿಗಳು ಮಾರಾಟವಾಗಿದ್ದಕ್ಕೆ ವ್ಯಾಪಾರಿಗಳು ಖುಷಿಯಾಗಿದ್ದಾರೆ.

ಇದನ್ನೂ ಓದಿ: ಮಾನವ ಮುಖದ ಗಣೇಶನ ವಿಗ್ರಹ ಹೊಂದಿರುವ ದೇವಾಲಯವಿದು

ಒಟ್ಟಿನಲ್ಲಿ ಗೌರಿ ಗಣೇಶ ಹಬ್ಬಕ್ಕೆ ನಗರವಾಸಿಗಳು ಸಜ್ಜಾಗಿದ್ದು, ವಾರಾಂತ್ಯದಲ್ಲೇ ಹಬ್ಬ ಬಂದಿರುವುದು ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ