AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಗಣಪನಿಗೆ ಬಯಲೇ ಆಲಯ, ಅರ್ಚಕರು ಹೆಲಿಕಾಪ್ಟರಿನಲ್ಲಿ ಬಂದು ಪೂಜೆ ಸಲ್ಲಿಸುತ್ತಾರೆ! ವಿಡಿಯೋ ನೋಡಿ

dholkal ganesh idol, Dantewada chhattisgarh: ವಿನಾಯಕ ಅದಾಗಲೇ ಎಲ್ಲರ ಮನೆ-ಮನಗಳಲ್ಲಿ ಬಂದು ವಿರಾಜಮಾನನಾಗಿದ್ದಾನೆ. ಆದರೆ ಅಲ್ಲೊಬ್ಬ ಡೊಳ್ಳು ಹೊಟ್ಟೆಯ ವಿಶಾಲ ಗಣಪ ಸಾವಿರಾರು ವರ್ಷಗಳಿಂದ ನಿಸರ್ಗದ ಮಡಿಲಲ್ಲಿ ಬೆಟ್ಟ ಗುಡ್ಡಗಳ ನಡುವಣ ಪ್ರಶಾಂತ ವಾತಾವರಣದಲ್ಲಿ ಎದೆಯೊಡ್ಡಿ ಬಟಾಬಯಲಿನಲ್ಲಿ ಏಕಾಂಗಿಯಾಗಿ ವಿರಾಜಮಾನನಾಗಿದ್ದಾನೆ. ನಾಳೆ ವಿನಾಯಕನ ಜನ್ಮದಿನದಂದು ಮಂಡಪಾಲದಲ್ಲಿ ಪೂಜಿಸಲ್ಪಡುವ ದನಗಾಹಿ ಗಣಪತಿಯ ಬಗ್ಗೆ ಎಷ್ಟು ಹೇಳಿದೂ ಸಾಲದು. ಸ್ಥಳ - ಛತ್ತೀಸ್‌ಗಢದ ದಾಂತೇವಾಡದ ಬೈಲಾಡಿಲಾದ ಢೋಲ್ಕಲ್ ಬೆಟ್ಟ

ಈ ಗಣಪನಿಗೆ ಬಯಲೇ ಆಲಯ, ಅರ್ಚಕರು ಹೆಲಿಕಾಪ್ಟರಿನಲ್ಲಿ ಬಂದು ಪೂಜೆ ಸಲ್ಲಿಸುತ್ತಾರೆ! ವಿಡಿಯೋ ನೋಡಿ
ಈ ಗಣಪನಿಗೆ ಬಯಲೇ ಆಲಯ
ಸಾಧು ಶ್ರೀನಾಥ್​
|

Updated on:Sep 06, 2024 | 10:06 AM

Share

ವಿನಾಯಕ ಅದಾಗಲೇ ಎಲ್ಲರ ಮನೆ-ಮನಗಳಲ್ಲಿ ಬಂದು ವಿರಾಜಮಾನನಾಗಿದ್ದಾನೆ. ಆದರೆ ಅಲ್ಲೊಬ್ಬ ಡೊಳ್ಳು ಹೊಟ್ಟೆಯ ವಿಶಾಲ ಗಣಪ ಸಾವಿರಾರು ವರ್ಷಗಳಿಂದ ನಿಸರ್ಗದ ಮಡಿಲಲ್ಲಿ ಬೆಟ್ಟ ಗುಡ್ಡಗಳ ನಡುವಣ ಪ್ರಶಾಂತ ವಾತಾವರಣದಲ್ಲಿ ಎದೆಯೊಡ್ಡಿ ಬಟಾಬಯಲಿನಲ್ಲಿ ಏಕಾಂಗಿಯಾಗಿ ವಿರಾಜಮಾನನಾಗಿದ್ದಾನೆ. ನಾಳೆ ವಿನಾಯಕನ ಜನ್ಮದಿನದಂದು ಮಂಡಪಾಲದಲ್ಲಿ ಪೂಜಿಸಲ್ಪಡುವ ದನಗಾಹಿ ಗಣಪತಿಯ ಬಗ್ಗೆ ಎಷ್ಟು ಹೇಳಿದೂ ಸಾಲದು. ಹೌದು, ಬೆಟ್ಟಗಳ ಸಾಲಿನಲ್ಲಿ 3 ಸಾವಿರ ಅಡಿ ಎತ್ತರದಲ್ಲಿ ಏಕಶಿಲೆಯ ಮೇಲೆ ಪುಟ್ಟ ಜಾಗದಲ್ಲಿ ನೆಲೆಸಿರುವ ಆ ಗಣೇಶ ಮೂರ್ತಿಯ ಬಗ್ಗೆ ನಿಮಗೆ ಗೊತ್ತೇ!

ಈ ಗಣೇಶನ ವಿಗ್ರಹವು ಛತ್ತೀಸ್‌ಗಢದ ದಾಂತೇವಾಡದ ಬೈಲಾಡಿಲಾದ ಢೋಲ್ಕಲ್ ಬೆಟ್ಟದ ಮೇಲೆ ನೆಲೆಗೊಂಡಿದೆ. ಪುರಾಣಗಳ ಪ್ರಕಾರ, ಈ ಬೆಟ್ಟದಲ್ಲಿ ಗಣೇಶ ಮತ್ತು ಪರಶುರಾಮ ನಡುವೆ ಯುದ್ಧ ನಡೆಯಿತು ಎಂದು ಹೇಳಲಾಗುತ್ತದೆ. ಅಲ್ಲದೆ ಈ ಯುದ್ಧದಲ್ಲಿ ಪರಶುರಾಮನ ಕೊಡಲಿಯು ವಿನಾಯಕನ ಮುಖಕ್ಕೆ ಡಿಚ್ಚಿ ಹೊಡೆದಾಗ, ಆತನ ಒಂದು ಹಲ್ಲು ಮುರಿಯಿತು. ಅದಕ್ಕಾಗಿಯೇ ಬೆಟ್ಟದ ಕೆಳಗಿನ ಗ್ರಾಮಕ್ಕೆ ಫರಸ್ಪಾಲ್ ಎಂದು ಹೆಸರಿಸಲಾಯಿತು.

Also Read: Roofless Shikari Devi Temple – ಆ ದೇವಸ್ಥಾನ ಬಟಾಬಯಲಿನಲ್ಲಿದೆ, ಶಿಕಾರಿ ದೇವಿಗೆ ಆಕಾಶವೇ ಶ್ರೀರಕ್ಷೆ! ಎಲ್ಲಿದೆ ಈ ಮಂದಿರ?

ತದನಂತರ, ನಾಗವಂಶದ ರಾಜರು ಗಣೇಶನ ವಿಗ್ರಹವನ್ನು ಬೆಟ್ಟದ ಮೇಲೆ ಪ್ರತಿಷ್ಠಾಪಿಸಿದರು ಎಂದು ಹೇಳಲಾಗುತ್ತದೆ, ಈ ಘಟನೆಯು ಈ ಪ್ರಪಂಚ ಇರುವವರೆಗೂ ಶಾಸ್ವತವಾಗಿ ನೆನಪಿನಲ್ಲುಳಿಯುತ್ತದೆ. ಈ ವಿಗ್ರಹವು 11 ನೇ ಶತಮಾನಕ್ಕೆ ಸೇರಿದೆ. ಈ ಗಣಪನಿಗೆ ಬಯಲೇ ಆಹ್ಲಾದಕರ ಪ್ರಶಾಂತ ಆಲಯವಾಗಿದ್ದು, ಅರ್ಚಕರು ಹೆಲಿಕಾಪ್ಟರಿನಲ್ಲಿ ಬಂದು ಇಲ್ಲಿನ ಗಣಪನಿಗೆ ಪೂಜೆ ಸಲ್ಲಿಸುತ್ತಾರೆ! ಕೆಳಗಿನ ವಿಡಿಯೋದಲ್ಲಿ ಇದನ್ನು ನೋಡಬಹುದು.

ಗ್ರಾನೈಟ್ ಕಲ್ಲಿನಿಂದ 6 ಅಡಿ ಉದ್ದ ಮತ್ತು 2.5 ಅಡಿ ಅಗಲದ ಈ ಮೂರ್ತಿಯು ತುಂಬಾ ಕಲಾತ್ಮಕವಾಗಿದೆ. ಈ ಗಣೇಶನ ವಿಗ್ರಹದ ಬಲ ಹಣೆಯ ಮೇಲೆ ಕೊಡಲಿ, ಮೇಲಿನ ಎಡ ಹಣೆಯ ಮೇಲೆ ಮುರಿದ ಹಲ್ಲು, ಕೆಳಗಿನ ಬಲ ಹಣೆಯ ಮೇಲೆ ಅಭಯ ಮುದ್ರೆಯಿರುವ ಹಾರ ಮತ್ತು ಕೆಳಗಿನ ಎಡಗೈಯಲ್ಲಿ ಮೋದಕವಿಟ್ಟು ಪ್ರತಿಷ್ಠಾಪಿಸಲಾಗಿದೆ.

ಇದನ್ನೂ ಓದಿ: ಸ್ವಯಂಭು ಪಾದರಸದಿಂದ ಮಾಡಿದ ಶಿವಲಿಂಗಕ್ಕೆ ಪೂಜೆ ಮಾಡುವುದು ಶ್ರೇಷ್ಠ, ಇದರಿಂದ ಸಿಗುತ್ತೆ ಸಾವಿರ ಪಟ್ಟು ಪುಣ್ಯ – ಪೂಜಿಸುವುದು ಹೇಗೆ?

ಸ್ಥಳೀಯ ಗ್ರಾಮಸ್ಥರು ಈ ಏಕದಂತನನ್ನು ತಮ್ಮ ರಕ್ಷಕ ಎಂದು ಪೂಜಿಸುತ್ತಾರೆ. ಧೋಲ್ಕಲ್ ಶಿಖರದ ಬಳಿಯ ಎರಡನೇ ಶಿಖರದಲ್ಲಿ ಪಾರ್ವತಿ ದೇವಿ ಮತ್ತು ಸೂರ್ಯ ದೇವರ ವಿಗ್ರಹಗಳನ್ನು ಸ್ಥಾಪಿಸಲಾಗಿದೆ. ಸುಮಾರು 15 ವರ್ಷಗಳ ಹಿಂದೆ ಇದು ಕಳ್ಳತನವಾಗಿದೆ. ಇದುವರೆಗೂ ಕಳ್ಳತನವಾಗಿರುವ ವಿಗ್ರಹಗಳ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಬೆಟ್ಟದ ತುದಿಗೆ ಹೋಗುವ ದಾರಿಯಲ್ಲಿ ಕಾಡುಪ್ರಾಣಿಗಳ ಭಯವಿದೆ. ಆದರೆ ದೇವರ ದರ್ಶನಕ್ಕೆ ತೆರಳುವ ಭಕ್ತರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂಬುದು ಆದಿವಾಸಿಗಳ ನಂಬಿಕೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:01 am, Fri, 6 September 24

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ