ಸದಾ ಬಂಗಾರ ಧರಿಸುವುದು ಈ ಐದು ರಾಶಿಯವರಿಗೆ ಅದೃಷ್ಟವಂತೆ

ಒಬ್ಬ ವ್ಯಕ್ತಿ ಏನು ಧರಿಸಿದರೆ ಶುಭ, ಏನು ಧರಿಸಿದರೆ ಅಶುಭ ಎಂದು ಜ್ಯೋತಿಷಿಗಳು ತಿಳಿಸುತ್ತಾರೆ. ಅದೃಷ್ಟ (Luck) ಪಡೆಯಬೇಕಾದರೆ ಏನು ಮಾಡಬೇಕು ಅಂತನೂ ಅವರು ಸೂಚಿಸುತ್ತಾರೆ.

ಸದಾ ಬಂಗಾರ ಧರಿಸುವುದು ಈ ಐದು ರಾಶಿಯವರಿಗೆ ಅದೃಷ್ಟವಂತೆ
ಸಾಂದರ್ಭಿಕ ಚಿತ್ರ
Follow us
| Updated By: sandhya thejappa

Updated on:Apr 24, 2022 | 2:59 PM

ಹಿಂದೂ ಧರ್ಮದಲ್ಲಿ ರಾಶಿ ಭವಿಷ್ಯಕ್ಕೆ ಹೆಚ್ಚು ಒತ್ತು ಕೊಡಲಾಗುತ್ತದೆ. ಭವಿಷ್ಯ ಹೇಗಿರುತ್ತದೆ ಅಂತ ತಿಳಿಯಲು ಸದಾ ಕಾತುರರಾಗಿರುತ್ತಾರೆ. ಒಬ್ಬ ವ್ಯಕ್ತಿ ಏನು ಧರಿಸಿದರೆ ಶುಭ, ಏನು ಧರಿಸಿದರೆ ಅಶುಭ ಎಂದು ಜ್ಯೋತಿಷಿಗಳು ತಿಳಿಸುತ್ತಾರೆ. ಅದೃಷ್ಟ (Luck) ಪಡೆಯಬೇಕಾದರೆ ಏನು ಮಾಡಬೇಕು ಅಂತನೂ ಅವರು ಸೂಚಿಸುತ್ತಾರೆ. ಅವರವರ ರಾಶಿಗೆ ಅನುಗುಣವಾಗಿ (Zodiac sign) ಯಾರು ಏನು ಧರಿಸಿದರೆ ಅದೃಷ್ಟ ಎನ್ನುವುದನ್ನು ಹೇಳುತ್ತಾರೆ. ಕೆಲವು ರಾಶಿಯವರು ಚಿನ್ನ ಧರಿಸಿದರೆ ಅದೃಷ್ಟ ಸದಾ ಅವರ ಜೊತೆಗಿರುತ್ತದೆ ಎಂದು ವೈದಿಕ ಜ್ಯೋತಿಷಿಗಳಾದ ಡಾ.ಬಸವರಾಜ್ ಗುರೂಜಿ ಹೇಳಿದ್ದಾರೆ. ಹಾಗಿದ್ದರೆ ಯಾವ ರಾಶಿಯವರುಗೆ ಚಿನ್ನ ಅದೃಷ್ಟ ಇದೆ ಅಂತ ಇಲ್ಲಿ ತಿಳಿಸಲಾಗಿದೆ. ಗಮನಿಸಿ.

* ಮೇಷ: ಮೇಷ ರಾಶಿಯವರಿಗೆ (Aries) ಚಿನ್ನವನ್ನು ಧರಿಸುವುದು ಶುಭ. ವಿಶೇಷವಾಗಿ ಚಿನ್ನದ ಉಂಗುರವನ್ನು ಧರಿಸುವುದರಿಂದ ಅವರ ಧೈರ್ಯ ಮತ್ತು ಶೌರ್ಯ ಹೆಚ್ಚಾಗುತ್ತದೆ. ಅದೃಷ್ಟ ಹೆಚ್ಚಾಗುತ್ತದೆ. ಸಂಬಂಧಗಳು ಬಲವಾಗಿರುತ್ತವೆ. ಸಾಲವಿದ್ದರೂ ಕೂಡಾ ಕೆಲವೇ ದಿನಗಳಲ್ಲಿ ಸಾಲದ ಸಮಸ್ಯೆ ಪರಿಹಾರವಾಗುತ್ತದೆ.

* ಸಿಂಹ: ಸಿಂಹ ರಾಶಿಯವರಿಗೆ (Leo) ಚಿನ್ನವು ಅದೃಷ್ಟ ತರುತ್ತದೆ. ಈ ರಾಶಿಯವರು ಚಿನ್ನದ ಆಭರಣಗಳನ್ನು ಅದರಲ್ಲೂ ವಿಶೇಷವಾಗಿ ಚಿನ್ನದ ಉಂಗುರಗಳನ್ನು ಧರಿಸಬೇಕು. ಇದು ಅವರಿಗೆ ಉದ್ಯೋಗ-ವ್ಯವಹಾರದಲ್ಲಿ ಪ್ರಗತಿಯನ್ನು ನೀಡುತ್ತದೆ. ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸುತ್ತದೆ. ಹೆಚ್ಚಿನ ಪರಿಶ್ರಮವಿಲ್ಲದೆ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗುತ್ತದೆ.

* ಕನ್ಯಾ ರಾಶಿ: ಬುಧ ಅಧಿಪತಿ. ಚಿನ್ನದ ಉಂಗುರವಲ್ಲದೆ ಕನ್ಯಾ ರಾಶಿಯವರಿಗೆ (Virgo) ಚಿನ್ನದ ಸರ ಅಥವಾ ಬಳೆ ಧರಿಸುವುದು ತುಂಬಾ ಒಳ್ಳೆಯದು. ಇದರೊಂದಿಗೆ, ಜೀವನದ ಸಮಸ್ಯೆಗಳು ಒಂದೊಂದಾಗಿ ಕೊನೆಗೊಳ್ಳುತ್ತವೆ. ಮತ್ತು ಪ್ರತಿ ಕೆಲಸದಲ್ಲಿ ಉತ್ತಮ ಫಲಿತಾಂಶಗಳು ದೊರೆಯುತ್ತವೆ. ಜೀವನದಲ್ಲಿ ಸಂಪತ್ತು ಮತ್ತು ಐಶ್ವರ್ಯ ಹೆಚ್ಚಾಗುತ್ತದೆ.

* ಧನು ರಾಶಿ: ಇವರ ರಾಶ್ಯಾಧಿಪತಿ ಗುರು. ಇವರ ಧಾತು ಬಂಗಾರ ಚಿನ್ನವನ್ನು ಧರಿಸುವುದು ತುಂಬಾ ಮಂಗಳಕರ. ಇದು ಅವರಿಗೆ ಎಲ್ಲದರಲ್ಲೂ ಯಶಸ್ಸನ್ನು ನೀಡುತ್ತದೆ. ಗುರು ಗ್ರಹವು (Jupiter) ಶುಭ ಫಲಿತಾಂಶಗಳನ್ನು ನೀಡುತ್ತದೆ. ಇದರಿಂದಾಗಿ ಅವರು ಸಾಕಷ್ಟು ಹೆಸರು-ಪ್ರಸಿದ್ಧಿಯನ್ನು ಗಳಿಸುತ್ತಾರೆ. ಅಪಾರ ಸಂಪತ್ತಿನ ಒಡೆಯನಾಗುತ್ತಾರೆ. ಜೀವನದಲ್ಲಿ ಉನ್ನತ ಸ್ಥಾನಮಾನ ಮತ್ತು ಸಂತೋಷದ ಜೀವನವನ್ನು ಪಡೆಯುತ್ತಾರೆ. ಜೀವನದಲ್ಲಿ ಯಾವುದಕ್ಕೂ ಕೊರತೆ ಎದುರಾಗುವುದಿಲ್ಲ. ಸದಾ ಸುಖಿಗಳಾಗಿರುತ್ತಾರೆ.

* ಮೀನ ರಾಶಿ: ಮೀನರಾಶಿಯವರು, ಸಾಧ್ಯವಾದಷ್ಟರ ಮಟ್ಟಿಗೆ ಚಿನ್ನ ಧಾರಣೆ ಮಾಡಿರುತ್ತಾರೆ. ಶುಭ ನಿಮ್ಮ ಅರ್ಧಕ್ಕೆ ನಿಂತ ಕೆಲಸ ಕಾರ್ಯಗಳೂ ಪೂರ್ಣಗೊಳ್ಳುತ್ತವೆ. ಕೋಪ ಕಡಿಮೆಯಾಗುತ್ತದೆ. ಆಲೋಚನಾ ಲಹರಿ ಉತ್ತಮವಾಗಿರುತ್ತದೆ.

ಡಾ.ಬಸವರಾಜ್ ಗುರೂಜಿ ವೈದಿಕ ಜ್ಯೋತಿಷಿ ವಾಸ್ತುಶಾಸ್ತ್ರಜ್ಞ 9972848937

ಇದನ್ನೂ ಓದಿ

IPL 2022: ಐಪಿಎಲ್ ಸೀಸನ್ 15​ ಮುಂದೂಡ್ತಾರಾ?

ಭಾರತದಲ್ಲಿ ಸಖತ್ ಟ್ರೆಂಡಿಂಗ್​​ನಲ್ಲಿರುವ ಸ್ಮಾರ್ಟ್​​ಫೋನ್​ಗಳು ಯಾವುವು ಗೊತ್ತೇ?: ಇಲ್ಲಿದೆ ನೋಡಿ

Published On - 2:58 pm, Sun, 24 April 22

ತಾಜಾ ಸುದ್ದಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ