AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದಾ ಬಂಗಾರ ಧರಿಸುವುದು ಈ ಐದು ರಾಶಿಯವರಿಗೆ ಅದೃಷ್ಟವಂತೆ

ಒಬ್ಬ ವ್ಯಕ್ತಿ ಏನು ಧರಿಸಿದರೆ ಶುಭ, ಏನು ಧರಿಸಿದರೆ ಅಶುಭ ಎಂದು ಜ್ಯೋತಿಷಿಗಳು ತಿಳಿಸುತ್ತಾರೆ. ಅದೃಷ್ಟ (Luck) ಪಡೆಯಬೇಕಾದರೆ ಏನು ಮಾಡಬೇಕು ಅಂತನೂ ಅವರು ಸೂಚಿಸುತ್ತಾರೆ.

ಸದಾ ಬಂಗಾರ ಧರಿಸುವುದು ಈ ಐದು ರಾಶಿಯವರಿಗೆ ಅದೃಷ್ಟವಂತೆ
ಸಾಂದರ್ಭಿಕ ಚಿತ್ರ
TV9 Web
| Updated By: sandhya thejappa|

Updated on:Apr 24, 2022 | 2:59 PM

Share

ಹಿಂದೂ ಧರ್ಮದಲ್ಲಿ ರಾಶಿ ಭವಿಷ್ಯಕ್ಕೆ ಹೆಚ್ಚು ಒತ್ತು ಕೊಡಲಾಗುತ್ತದೆ. ಭವಿಷ್ಯ ಹೇಗಿರುತ್ತದೆ ಅಂತ ತಿಳಿಯಲು ಸದಾ ಕಾತುರರಾಗಿರುತ್ತಾರೆ. ಒಬ್ಬ ವ್ಯಕ್ತಿ ಏನು ಧರಿಸಿದರೆ ಶುಭ, ಏನು ಧರಿಸಿದರೆ ಅಶುಭ ಎಂದು ಜ್ಯೋತಿಷಿಗಳು ತಿಳಿಸುತ್ತಾರೆ. ಅದೃಷ್ಟ (Luck) ಪಡೆಯಬೇಕಾದರೆ ಏನು ಮಾಡಬೇಕು ಅಂತನೂ ಅವರು ಸೂಚಿಸುತ್ತಾರೆ. ಅವರವರ ರಾಶಿಗೆ ಅನುಗುಣವಾಗಿ (Zodiac sign) ಯಾರು ಏನು ಧರಿಸಿದರೆ ಅದೃಷ್ಟ ಎನ್ನುವುದನ್ನು ಹೇಳುತ್ತಾರೆ. ಕೆಲವು ರಾಶಿಯವರು ಚಿನ್ನ ಧರಿಸಿದರೆ ಅದೃಷ್ಟ ಸದಾ ಅವರ ಜೊತೆಗಿರುತ್ತದೆ ಎಂದು ವೈದಿಕ ಜ್ಯೋತಿಷಿಗಳಾದ ಡಾ.ಬಸವರಾಜ್ ಗುರೂಜಿ ಹೇಳಿದ್ದಾರೆ. ಹಾಗಿದ್ದರೆ ಯಾವ ರಾಶಿಯವರುಗೆ ಚಿನ್ನ ಅದೃಷ್ಟ ಇದೆ ಅಂತ ಇಲ್ಲಿ ತಿಳಿಸಲಾಗಿದೆ. ಗಮನಿಸಿ.

* ಮೇಷ: ಮೇಷ ರಾಶಿಯವರಿಗೆ (Aries) ಚಿನ್ನವನ್ನು ಧರಿಸುವುದು ಶುಭ. ವಿಶೇಷವಾಗಿ ಚಿನ್ನದ ಉಂಗುರವನ್ನು ಧರಿಸುವುದರಿಂದ ಅವರ ಧೈರ್ಯ ಮತ್ತು ಶೌರ್ಯ ಹೆಚ್ಚಾಗುತ್ತದೆ. ಅದೃಷ್ಟ ಹೆಚ್ಚಾಗುತ್ತದೆ. ಸಂಬಂಧಗಳು ಬಲವಾಗಿರುತ್ತವೆ. ಸಾಲವಿದ್ದರೂ ಕೂಡಾ ಕೆಲವೇ ದಿನಗಳಲ್ಲಿ ಸಾಲದ ಸಮಸ್ಯೆ ಪರಿಹಾರವಾಗುತ್ತದೆ.

* ಸಿಂಹ: ಸಿಂಹ ರಾಶಿಯವರಿಗೆ (Leo) ಚಿನ್ನವು ಅದೃಷ್ಟ ತರುತ್ತದೆ. ಈ ರಾಶಿಯವರು ಚಿನ್ನದ ಆಭರಣಗಳನ್ನು ಅದರಲ್ಲೂ ವಿಶೇಷವಾಗಿ ಚಿನ್ನದ ಉಂಗುರಗಳನ್ನು ಧರಿಸಬೇಕು. ಇದು ಅವರಿಗೆ ಉದ್ಯೋಗ-ವ್ಯವಹಾರದಲ್ಲಿ ಪ್ರಗತಿಯನ್ನು ನೀಡುತ್ತದೆ. ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸುತ್ತದೆ. ಹೆಚ್ಚಿನ ಪರಿಶ್ರಮವಿಲ್ಲದೆ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗುತ್ತದೆ.

* ಕನ್ಯಾ ರಾಶಿ: ಬುಧ ಅಧಿಪತಿ. ಚಿನ್ನದ ಉಂಗುರವಲ್ಲದೆ ಕನ್ಯಾ ರಾಶಿಯವರಿಗೆ (Virgo) ಚಿನ್ನದ ಸರ ಅಥವಾ ಬಳೆ ಧರಿಸುವುದು ತುಂಬಾ ಒಳ್ಳೆಯದು. ಇದರೊಂದಿಗೆ, ಜೀವನದ ಸಮಸ್ಯೆಗಳು ಒಂದೊಂದಾಗಿ ಕೊನೆಗೊಳ್ಳುತ್ತವೆ. ಮತ್ತು ಪ್ರತಿ ಕೆಲಸದಲ್ಲಿ ಉತ್ತಮ ಫಲಿತಾಂಶಗಳು ದೊರೆಯುತ್ತವೆ. ಜೀವನದಲ್ಲಿ ಸಂಪತ್ತು ಮತ್ತು ಐಶ್ವರ್ಯ ಹೆಚ್ಚಾಗುತ್ತದೆ.

* ಧನು ರಾಶಿ: ಇವರ ರಾಶ್ಯಾಧಿಪತಿ ಗುರು. ಇವರ ಧಾತು ಬಂಗಾರ ಚಿನ್ನವನ್ನು ಧರಿಸುವುದು ತುಂಬಾ ಮಂಗಳಕರ. ಇದು ಅವರಿಗೆ ಎಲ್ಲದರಲ್ಲೂ ಯಶಸ್ಸನ್ನು ನೀಡುತ್ತದೆ. ಗುರು ಗ್ರಹವು (Jupiter) ಶುಭ ಫಲಿತಾಂಶಗಳನ್ನು ನೀಡುತ್ತದೆ. ಇದರಿಂದಾಗಿ ಅವರು ಸಾಕಷ್ಟು ಹೆಸರು-ಪ್ರಸಿದ್ಧಿಯನ್ನು ಗಳಿಸುತ್ತಾರೆ. ಅಪಾರ ಸಂಪತ್ತಿನ ಒಡೆಯನಾಗುತ್ತಾರೆ. ಜೀವನದಲ್ಲಿ ಉನ್ನತ ಸ್ಥಾನಮಾನ ಮತ್ತು ಸಂತೋಷದ ಜೀವನವನ್ನು ಪಡೆಯುತ್ತಾರೆ. ಜೀವನದಲ್ಲಿ ಯಾವುದಕ್ಕೂ ಕೊರತೆ ಎದುರಾಗುವುದಿಲ್ಲ. ಸದಾ ಸುಖಿಗಳಾಗಿರುತ್ತಾರೆ.

* ಮೀನ ರಾಶಿ: ಮೀನರಾಶಿಯವರು, ಸಾಧ್ಯವಾದಷ್ಟರ ಮಟ್ಟಿಗೆ ಚಿನ್ನ ಧಾರಣೆ ಮಾಡಿರುತ್ತಾರೆ. ಶುಭ ನಿಮ್ಮ ಅರ್ಧಕ್ಕೆ ನಿಂತ ಕೆಲಸ ಕಾರ್ಯಗಳೂ ಪೂರ್ಣಗೊಳ್ಳುತ್ತವೆ. ಕೋಪ ಕಡಿಮೆಯಾಗುತ್ತದೆ. ಆಲೋಚನಾ ಲಹರಿ ಉತ್ತಮವಾಗಿರುತ್ತದೆ.

ಡಾ.ಬಸವರಾಜ್ ಗುರೂಜಿ ವೈದಿಕ ಜ್ಯೋತಿಷಿ ವಾಸ್ತುಶಾಸ್ತ್ರಜ್ಞ 9972848937

ಇದನ್ನೂ ಓದಿ

IPL 2022: ಐಪಿಎಲ್ ಸೀಸನ್ 15​ ಮುಂದೂಡ್ತಾರಾ?

ಭಾರತದಲ್ಲಿ ಸಖತ್ ಟ್ರೆಂಡಿಂಗ್​​ನಲ್ಲಿರುವ ಸ್ಮಾರ್ಟ್​​ಫೋನ್​ಗಳು ಯಾವುವು ಗೊತ್ತೇ?: ಇಲ್ಲಿದೆ ನೋಡಿ

Published On - 2:58 pm, Sun, 24 April 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!