AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Guru Purnima 2023: ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ: ಗುರುಪೂರ್ಣಿಮೆ ಮಹತ್ವ, ಆಚರಣೆ ಹೇಗೆ?

ಹಿಂದೂ ಧರ್ಮದಲ್ಲಿ ಗುರು ಪೂರ್ಣಿಮೆಗೆ ವಿಶೇಷ ಮಹತ್ವವಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ, ಆಷಾಢ ಮಾಸದ ಶುಕ್ಲ ಪಕ್ಷದ ಹುಣ್ಣಿಮೆಯ ದಿನದಂದು ಗುರು ಪೂರ್ಣಿಮಾ ಹಬ್ಬವನ್ನು ಆಚರಿಸಲಾಗುತ್ತದೆ. ಇನ್ನು ಮಹತ್ವ, ಆಚರಣೆ ಹೇಗೆ? ಗುರು ಪೂರ್ಣಿಮೆಯ ಪೂಜಾ ಸಮಯದ ವಿವರ ಈ ಕೆಳಗಿನಂತಿದೆ.

Guru Purnima 2023: ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ: ಗುರುಪೂರ್ಣಿಮೆ ಮಹತ್ವ, ಆಚರಣೆ ಹೇಗೆ?
ಗುರು ಪೂರ್ಣಿಮಾ 2023
Rakesh Nayak Manchi
| Edited By: |

Updated on:Jul 03, 2023 | 6:58 AM

Share

ಗುರುಗಳ ಆಶೀರ್ವಾದ ಪಡೆದು ಧನ್ಯರಾಗುವ ಗುರು ಪೂರ್ಣಿಮೆಯನ್ನು  (Guru Purnima 2023) ಸಂಭ್ರಮದಿಂದ ಆಚರಿಸಲಾಗುತ್ತದೆ. ಆಷಾಢ ಮಾಸದ ಹುಣ್ಣಿಮೆಯಂದು ಆಚರಿಸುವ ಈ ಹಬ್ಬವನ್ನು ಹಿಂದೂ ಧರ್ಮದಲ್ಲಿ ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ. ಈ ದಿನದಂದು ಗುರುವನ್ನು ಪೂಜಿಸುವುದರಿಂದ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ಉಂಟಾಗುತ್ತದೆ ಎಂಬುದು ನಂಬಿಕೆಯಾಗಿದೆ. ಅದಾಗ್ಯೂ, ಈ ಬಾರಿ ಎರಡು ದಿನಗಳ ಕಾಲ ಗುರು ಪೂರ್ಣಿಮಾ ಹಬ್ಬ ಇರಲಿದೆ. ಆದರೆ ಯಾವ ದಿನದಂದು ಆಚರಿಸಿದರೆ ಉತ್ತಮ ಎಂಬುದು ಹಲವರಲ್ಲಿ ಗೊಂದಲ ಉಂಟಾಗಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ, ಆಷಾಢ ಮಾಸದ ಶುಕ್ಲ ಪಕ್ಷದ ಹುಣ್ಣಿಮೆಯ ದಿನದಂದು ಗುರು ಪೂರ್ಣಿಮಾ ಹಬ್ಬವನ್ನು ಆಚರಿಸಲಾಗುತ್ತದೆ. ಈ ದಿನವನ್ನು ವ್ಯಾಸ ಪೂರ್ಣಿಮೆ ಎಂದೂ ಕರೆಯುತ್ತಾರೆ. ಏಕೆಂದರೆ ಮಹಾಭಾರತ ಮಹಾಕಾವ್ಯವನ್ನು ರಚಿಸಿದ ಮಹರ್ಷಿ ವೇದವ್ಯಾಸರು ಈ ದಿನ ಜನಿಸಿದ್ದರು. ಈ ಬಾರಿ ಜುಲೈ 2 ಮತ್ತು ಜುಲೈ 3 ರಂದು ಗುರು ಪೂರ್ಣಿಮಾ ಹಬ್ಬ ಬಂದಿದೆ.

ಗುರು ಪೂರ್ಣಿಮೆಯ ಪೂಜಾ ಸಮಯ

ಹಿಂದೂ ಪಂಚಾಂಗದ ಪ್ರಕಾರ, ಆಷಾಢ ಶುಕ್ಲ ಪಕ್ಷದ ಹುಣ್ಣಿಮೆಯ ದಿನಾಂಕವು ಜುಲೈ 02 ರಂದು ರಾತ್ರಿ 08:21 ಕ್ಕೆ ಪ್ರಾರಂಭವಾಗುತ್ತದೆ ಮತ್ತು ಹುಣ್ಣಿಮೆಯ ದಿನಾಂಕವು ಜುಲೈ 03 ರಂದು ಸಂಜೆ 05:08 ಕ್ಕೆ ಕೊನೆಗೊಳ್ಳುತ್ತದೆ. ಉದಯ ತಿಥಿಯ ಪ್ರಕಾರ, ಗುರು ಪೂರ್ಣಿಮಾ ಹಬ್ಬವನ್ನು ಜುಲೈ 03 ರ ಸೋಮವಾರದಂದು ಸಂಭ್ರಮದಿಂದ ಆಚರಿಸಲಾಗುತ್ತದೆ.

ಇದನ್ನೂ ಓದಿ: ಜೀವನದಲ್ಲಿ ನೀವು ಈ ರಹಸ್ಯಗಳನ್ನು ಇತರರೊಂದಿಗೆ ಹಂಚಿಕೊಂಡರೆ ಅಡೆತಡೆಗಳು, ಅಡ್ಡಿ ಆತಂಕಕಗಳು ಗ್ಯಾರಂಟಿ!

ಗುರು ಪೂರ್ಣಿಮೆಯ ಮೂಲ ಕಥೆ

ಗುರು ಪೂರ್ಣಿಮೆಯ ಹಿಂದಿನ ಕಥೆಯು ಹಿಂದೂ ಪುರಾಣಗಳಲ್ಲಿ ಶ್ರೇಷ್ಠ ಗುರುಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟ ಋಷಿ ವ್ಯಾಸರ ಜನ್ಮದೊಂದಿಗೆ ಸಂಬಂಧಿಸಿದೆ. ದಂತಕಥೆಗಳ ಪ್ರಕಾರ, ವ್ಯಾಸರು ಈ ಶುಭ ದಿನದಂದು ಜನಿಸಿದರು. ಅವರು ಪವಿತ್ರ ಹಿಂದೂ ಮಹಾಕಾವ್ಯವಾದ ಮಹಾಭಾರತ ಕಾವ್ಯ ರಚಿಸಿದ್ದಾರೆ. ಗುರು ಪೂರ್ಣಿಮೆಯು ವ್ಯಾಸರ ಬುದ್ಧಿವಂತಿಕೆ, ಆಧ್ಯಾತ್ಮಿಕ ಮತ್ತು ಸಾಹಿತ್ಯಿಕ ಜ್ಞಾನಕ್ಕೆ ಅವರು ನೀಡಿದ ಕೊಡುಗೆಗಳನ್ನು ಗೌರವಿಸುವ ದಿನವಾಗಿದೆ. ಜ್ಞಾನವನ್ನು ನೀಡುವ ಮತ್ತು ತಮ್ಮ ಶಿಷ್ಯರನ್ನು ಜ್ಞಾನದ ಹಾದಿಯಲ್ಲಿ ಮಾರ್ಗದರ್ಶನ ಮಾಡುವ ಎಲ್ಲಾ ಗುರುಗಳು ಮತ್ತು ಶಿಕ್ಷಕರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸುವ ಸಮಯವೂ ಇದು.

ಬೌದ್ಧ, ಜೈನ ಧರ್ಮಗಳಲ್ಲೂ ಗುರು ಪೂರ್ಣಿಮೆ ಆಚರಣೆ

ಸನಾತನ ಧರ್ಮದಲ್ಲಿ (ಹಿಂದೂ) ಆಚರಿಸುವಂತೆ ಬೌದ್ಧ ಮತ್ತು ಜೈನ ಧರ್ಮಗಳಲ್ಲೂ ಗುರು ಪೂರ್ಣಿಮೆಯನ್ನು ಹಬ್ಬವಾಗಿ ಆಚರಿಸಲಾಗುತ್ತದೆ. ಈ ದಿನದಂದು ಬೌದ್ಧ ಧರ್ಮದ ಅನುಯಾಯಿಗಳು ಗೌತಮ ಬುದ್ಧನನ್ನು ಪೂಜಿಸಿದರೆ, ಜೈನ ಧರ್ಮದ ಅನುಯಾಯಿಗಳು ಮಹಾವೀರನನ್ನು ಗುರು ಎಂದು ಪೂಜಿಸುತ್ತಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:42 pm, Sat, 1 July 23

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?