AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hanuman Jayanti 2021: ಹನುಮ ಜಯಂತಿಯ ವಿಶೇಷತೆ, ಪೂಜೆಯ ಸಮಯ, ಪಠಿಸುವ ಮಂತ್ರ ಇಲ್ಲಿದೆ ಮಾಹಿತಿ

Hanuman Jayanti Celebration 2021: ಈ ವರ್ಷ ಏಪ್ರಿಲ್​ 27ರಂದು ಅಂದರೆ ಮಂಗಳವಾರ ಹನುಮ ಜಯಂತಿಯನ್ನು ಆಚರಿಸಲಾಗುತ್ತಿದೆ. ಹನುಮನಿಗೆ ವಿಶೇಷ ವಿಧಿ-ವಿಧಾನಗಳ ಮೂಲಕ ಪೂಜಾ ಕೈಗೊಳ್ಳಲಾಗುತ್ತದೆ.

Hanuman Jayanti 2021: ಹನುಮ ಜಯಂತಿಯ ವಿಶೇಷತೆ, ಪೂಜೆಯ ಸಮಯ, ಪಠಿಸುವ ಮಂತ್ರ ಇಲ್ಲಿದೆ ಮಾಹಿತಿ
ಹನುಮ ಜಯಂತಿ
shruti hegde
|

Updated on:Apr 26, 2021 | 6:00 PM

Share

ಹಿಂದೂ ದೇವಾನು ದೇವತೆಗಳಲ್ಲಿ ಹನುಮನನ್ನು ಅತ್ಯಂತ ಶಕ್ತಿಸಾಲಿ ಎಂದು ಪೂಜಿಸುತ್ತಾರೆ. ಈ ವರ್ಷ ಏಪ್ರಿಲ್​ 27ರಂದು ಅಂದರೆ ಮಂಗಳವಾರ ಹನುಮ ಜಯಂತಿಯನ್ನು ಆಚರಿಸಲಾಗುತ್ತಿದೆ. ಹನುಮನಿಗೆ ವಿಶೇಷ ವಿಧಿ -ವಿಧಾನಗಳ ಮೂಲಕ ಆಂಜನೇಯ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆಯನ್ನೂ ಸಲ್ಲಿಸುತ್ತಾರೆ. ಋತು, ಮಾಸಗಳಿಗೆ ಅನುಗುಣವಾಗಿ ಹನುಮ ಜಯಂತಿ ಆಚರಿಸಲಾಗುತ್ತದೆ.

ಹನುಮನಿಗೆ ವಾಯುಪುತ್ರ, ಕಪಿವೀರ, ಅಂಜನೇಯ, ಅಂಜನಿ ಪುತ್ರ, ಭಜರಂಗಬಲಿ ಎಂಬೆಲ್ಲಾ ಹೆಸುರುಗಳಿಂದ ಕರೆಯುತ್ತಾರೆ. ಜಾತಿ, ಮತ, ಪಂಥಗಳ ಬೇಧವಿಲ್ಲದ ಆಂಜನೇಯನಿಗೆ ತುಳಸಿ ಮಾಲೆ ಬಲು ಪ್ರಿಯ. ಹಾಗಾಗಿ ಹನುಮ ಜಯಂತಿಯ ಪ್ರಯುಕ್ತ ಭಕ್ತರು ತುಳಸಿ ಮಾಲೆ ಮಾಡಿ ಪೂಜೆ ಕೈಗೊಳ್ಳುತ್ತಾರೆ. ಈ ವರ್ಷ ಎಲ್ಲಡೆ ಕೊವಿಡ್ ಸಾಂಕ್ರಾಮಿಕ ಆವರಿಸಿರುವುದರಿಂದ ದೇವಸ್ಥಾನಗಳಿಗೆ ಭೇಟಿ ನೀಡಲಾಗುತ್ತಿಲ್ಲ ಎಂಬುದು ಆಂಜನೇಯನ ಭಕ್ತರಿಗುಂಟಾದ ನಿರಾಸೆಯ ಸಂಗತಿ. ಹಾಗಾಗಿ ಮನೆಯಲ್ಲಿಯೇ ಹನುಮನಿಗೆ ವಿಶೇಷ ಪೂಜೆ ಸಲ್ಲಿಸಲು ಭಕ್ತರು ಸಿದ್ಧತೆ ನಡೆಸಿಕೊಳ್ಳುತ್ತಿದ್ದಾರೆ.

ಕೆಂಪು, ಹಳದಿ ಹೂವುಗಳ ಮೂಲಕ ವಿಶೇಷ ಪೂಜೆ ಹನುಮನಿಗೆ ಕೆಂಪು ಬುಂದಿಯನ್ನು ನೈವೇದ್ಯವಾಗಿ ಅರ್ಪಿಸಿತ್ತಾರೆ. ಈ ಮೂಲಕ ಭಕ್ತಿಯಿಂದ ಬೇಡಿಕೊಂಡು ವಿಶೇಷ ಪೂಜೆ ಕೈಗೊಳ್ಳಲಾಗುತ್ತದೆ. ಕೆಂಪು ಮತ್ತು ಹಳದಿ ಬಣ್ಣವೆಂದರೆ ಆಂಜನೇಯನಿಗೆ ಇಷ್ಟ ಎಂದು ಹೇಳಲಾಗಿದೆ. ಹಾಗಾಗಿ ಈ ಬಣ್ಣದ ಹೂಗಳನ್ನು ಹೆಚ್ಚು ಸಮರ್ಪಿಸುವ ಮೂಲಕ ಭಕ್ತರು ಆಂಜನೇಯನ ಪ್ರಾರ್ಥನೆಯಲ್ಲಿ ತೊಡಗಿಕೊಳ್ಳುತ್ತಾರೆ.

ಹನುಮನಿಗೆ ತುಳಸಿ ಮಾಲೆ ವಿಶೇಷ ಹನುಮನಿಗೆ ತುಳಸಿ ಮಾಲೆ ಅತ್ಯಂತ ಪ್ರಿಯ ಎಂದು ಹೇಳಲಾಗಿದೆ. ಪೂಜಾ ವಿಶೇಷದಲ್ಲಿ ಮಹಾವೀರ ಆಂಜನೇಯನಿಗೆ ತುಳಸಿ ಮಾಲೆ ಸಮರ್ಪಿಸಿ ಪೂಜೆ ಕೈಗೊಳ್ಳಲಾಗುತ್ತದೆ. ಇದರಿಂದ ಸುಖ ಸಮೃದ್ಧಿ ದೊರೆಯುತ್ತದೆ ಎಂಬುದು ಭಕ್ತರ ನಂಬಿಕೆ. ವಿಶೇಷವಾಗಿ ತುಪ್ಪದಲ್ಲಿ ಅಥವಾ ಸಾಸಿವೆ ಎಣ್ಣೆಯ ದೀಪ ಬೆಳಗುವ ಮೂಲಕ ಪೂಜೆ ನೆರವೇರುತ್ತದೆ.

ಹನುಮ ಜಯಂತಿ ಆಚರಣೆಯ ದಿನಾಂಕ ಮತ್ತು ಸಮಯ ಈ ವರ್ಷ ಏಪ್ರಿಲ್​ 27ರಂದು ಹನುಮಜಯಂತಿಯನ್ನು ಆಚರಿಸಲಾಗುತ್ತದೆ. ಹಿಂದಿನ ದಿನ ಅಂದರೆ ಇಂದು ಏಪ್ರಿಲ್​ 26ನೇ ತಾರೀಕು ಪೂರ್ಣಿಮಾ ತಿಥಿ 12:44 ರಿಂದ ಪ್ರಾರಂಭಗೊಂಡ ಆಚರಣೆಯನ್ನು ಏಪ್ರಿಲ್​ 27ನೇ ತಾರೀಕು 9 ಗಂಟೆಯವರೆಗೆ ಆಚರಿಸಲಾಗುತ್ತದೆ.

ಆಂಜನೇಯನ ಭಕ್ತರೆಲ್ಲಾ ಹನುಮಾನ್​ ಚಾಲೀಸ್​ ಪದ್ಯವನ್ನು ಓದುತ್ತಾರೆ. ಹನುಮನಿಗಾಗಿಯೇ ರಚಿಸಲಾದ ತುಳಸಿ ದಾಸರ ಪದ್ಯವನ್ನು ಪೂಜೆ ಸಮಯದಲ್ಲಿ ಪಠಿಸುತ್ತಾರೆ. ಕೇವಲ ಹನುಮಜನಂತಿಯೊಂದೇ ಅಲ್ಲದೇ ಕಷ್ಟದ ಕಾಲದಲ್ಲಿ ಧೈರ್ಯ, ಸಾಮರ್ಥ್ಯಕ್ಕೆ ಹೆಸರಾದ ಹನುಮಂತನನ್ನು ನೆನೆದರೆ ಧೈರ್ಯದಿಂದ ಮುನ್ನುಗ್ಗಬಹುದು ಎಂಬ ನಂಬಿಕೆಯಿಂದ ಹನುಮಾನ್ ಚಾಲೀಸ್​ ಪದ್ಯ ಪಠಿಸುವ ಮೂಲಕ ಹನುಮನನ್ನು ನೆನೆಯುತ್ತಾರೆ. ಹನುಮ ಜಯಂತಿಯ ದಿನದಂದು ಶ್ರೀರಾಮ ಮತ್ತು ಮಾತೆ ಸೀತೆಗೂ ಪೂಜೆ ಸಲ್ಲಿಸಲಾಗುತ್ತದೆ. ಶ್ರೀರಾಮ ರಕ್ಷಾ ಮಂತ್ರವನ್ನೂ ಪಠಿಸಲಾಗುತ್ತದೆ. ಬ್ರಹ್ಮಚರ್ಯ ವ್ರತವನ್ನು ಪಾಲಿಸಲಾಗುತ್ತದೆ.

ಇದನ್ನೂ ಓದಿ: ಲಕ್ಷ ಲಕ್ಷ ಜನ ಧರಿಸುವ ಹನುಮ ಮಾಲೆಯ ರೋಚಕ ಇತಿಹಾಸ!

Published On - 5:57 pm, Mon, 26 April 21

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​