AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hanuman Jayanti 2024: ಹನುಮಾನ್ ಜಯಂತಿಯಂದು ಈ ಮಂತ್ರ ಪಠಿಸಿ! ಎಲ್ಲಾ ತೊಂದರೆಗಳು ನಿವಾರಣೆಯಾಗುತ್ತೆ

ಹನುಮಾನ್ ಜಯಂತಿಯಂದು ಆತನ ಆಶೀರ್ವಾದ ಪಡೆಯಲು ಪೂಜೆ ಮಾಡುವ ಸಂದರ್ಭದಲ್ಲಿ ಕೆಲವು ವಿಶೇಷ ಮಂತ್ರಗಳನ್ನು ಪಠಿಸಿ. ಇದರಿಂದ ರಾಮ ಭಕ್ತ ಹನುಮಂತನ ಅನುಗ್ರಹ ದೊರೆಯುವುದಲ್ಲದೆ, ಮನೆಯಲ್ಲಿ ಯಾವುದೇ ರೀತಿಯ ತೊಂದರೆ ಇರುವುದಿಲ್ಲ. ಶಾಂತಿ, ಜೊತೆಗೆ ಸಂತೋಷ, ಯಶಸ್ಸು, ಸಂಪತ್ತು, ಉತ್ತಮ ಆರೋಗ್ಯ ಮತ್ತು ದುಷ್ಟ ಶಕ್ತಿಗಳಿಂದ ಸರ್ವತೋಮುಖ ರಕ್ಷಣೆ ಸಿಗುತ್ತದೆ.

Hanuman Jayanti 2024: ಹನುಮಾನ್ ಜಯಂತಿಯಂದು ಈ ಮಂತ್ರ ಪಠಿಸಿ! ಎಲ್ಲಾ ತೊಂದರೆಗಳು ನಿವಾರಣೆಯಾಗುತ್ತೆ
Hanuman Jayanti 2024
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 22, 2024 | 6:31 PM

Share

ಹನುಮಾನ್ ಜಯಂತಿಯಂದು ಆತನ ಆಶೀರ್ವಾದ ಪಡೆಯಲು ಪೂಜೆ ಮಾಡುವ ಸಂದರ್ಭದಲ್ಲಿ ಕೆಲವು ವಿಶೇಷ ಮಂತ್ರಗಳನ್ನು ಪಠಿಸಿ. ಇದರಿಂದ ರಾಮ ಭಕ್ತ ಹನುಮಂತನ ಅನುಗ್ರಹ ದೊರೆಯುವುದಲ್ಲದೆ, ಮನೆಯಲ್ಲಿ ಯಾವುದೇ ರೀತಿಯ ತೊಂದರೆ ಇರುವುದಿಲ್ಲ. ಶಾಂತಿ, ಜೊತೆಗೆ ಸಂತೋಷ, ಯಶಸ್ಸು, ಸಂಪತ್ತು, ಉತ್ತಮ ಆರೋಗ್ಯ ಮತ್ತು ದುಷ್ಟ ಶಕ್ತಿಗಳಿಂದ ಸರ್ವತೋಮುಖ ರಕ್ಷಣೆ ಸಿಗುತ್ತದೆ. ಹನುಮಾನ್ ಜಯಂತಿಯ ಬೆಳಿಗ್ಗೆ ಬೇಗ ಎದ್ದು, ಸ್ನಾನ ಮಾಡಿ ನಿಮ್ಮ ಮನೆಯ ದೇವರಿಗೆ ಅಥವಾ ದೇವಸ್ಥಾನಕ್ಕೆ ಹೋಗಿ ನಿಮ್ಮ ಆಚರಣೆಗಳ ಪ್ರಕಾರ ಪೂಜೆ ಮಾಡಿ ಮತ್ತು ಹನುಮಾನ್ ಚಾಲೀಸಾವನ್ನು ಪಠಿಸಿ. ಜೊತೆಗೆ ಕೆಲವು ಮಂತ್ರಗಳನ್ನು ಪಠಿಸಿ. ಇದರಿಂದ ನಿಮ್ಮ ಸಮಸ್ಯೆಗಳಿಂದ ಮುಕ್ತಿ ದೊರೆಯುತ್ತದೆ.

-ಓಂ ಹನುಮತೇ ನಮಃ।

ಕಾರ್ಯ ಸಿದ್ಧಿಗಾಗಿ ಹನುಮಾನ್ ಮೂಲ ಮಂತ್ರ​ವನ್ನು ಪಠಿಸಿ. ಜೊತೆಗೆ ನಿಮ್ಮ ಜೀವನದಲ್ಲಿರುವ ಅಡೆತಡೆಗಳು ಮತ್ತು ಸಮಸ್ಯೆಗಳ ನಿವಾರಣೆಗೆ ಇದು ಅತ್ಯುತ್ತಮ ಮಂತ್ರವಾಗಿದೆ.

-ಓಂ ಆಂ ಭ್ರೀಂ ಹನುಮತೇ ಶ್ರೀ ರಾಮ ದೂತಾಯ ನಮಃ।

ಹನುಮಂತನ ಬೀಜ ಮಂತ್ರವು ಅವನ ಆಶೀರ್ವಾದ ಪಡೆಯಲು ಅತ್ಯಂತ ಶಕ್ತಿಯುತ ಮಾರ್ಗವಾಗಿದೆ. ಇದು ನಿಮ್ಮ ಎಲ್ಲಾ ರೀತಿಯ ಸಮಸ್ಯೆಗಳಿಗೂ ಪರಿಹಾರ ಕೊಡುತ್ತದೆ.

-ಓಂ ಆಂಜನೇಯಾಯ ವಿದ್ಮಹೇ ವಾಯುಪುತ್ರಾಯ ಧೀಮಹಿ| ತನ್ನೋ ಹನುಮತ್‌ ಪ್ರಚೋದಯಾತ್‌||

ಹನುಮಂತನು ಶಕ್ತಿ, ತ್ರಾಣ, ಬುದ್ಧಿವಂತಿಕೆ, ನಿಷ್ಠೆ ಮತ್ತು ಅಚಲ ಭಕ್ತಿಯ ಸಾಕಾರರೂಪ. ಆದ್ದರಿಂದ ಹನುಮಂತನ ಈ ಗಾಯತ್ರಿ ಮಂತ್ರವು ಅವನಂತಹ ಗುಣಗಳನ್ನು ಬೆಳೆಸಿಕೊಳ್ಳಲು ಬಯಸುವವರಿಗೆ ಒಳ್ಳೆಯ ಮಂತ್ರವಾಗಿದೆ.

-ಓಂ ಶ್ರೀ ವಜ್ರದೇಹಾಯ ರಾಮಭಕ್ತಾಯ ವಾಯುಪುತ್ರಾಯ ನಮೋಸ್ತುತೇ।

ಈ ಆಂಜನೇಯ ಮಂತ್ರವು ಹೊಸ ಉದ್ಯೋಗ, ಜೀವನದಲ್ಲಿನ ಯಶಸ್ಸನ್ನು ಪಡೆಯಲು ಶಕ್ತಿಯುತ ಮಂತ್ರವಾಗಿದೆ. ಪ್ರತಿದಿನ ಈ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಪ್ರಸ್ತುತ ಉದ್ಯೋಗದಲ್ಲಿ ಅಥವಾ ಹೊಸ ಉದ್ಯೋಗವನ್ನು ಪಡೆಯುವಲ್ಲಿ ಯಾವುದೇ ಅಡೆತಡೆಗಳು ಬರುವುದಿಲ್ಲ.

ಇದನ್ನೂ ಓದಿ: ಚೈತ್ರ ಹುಣ್ಣಿಮೆಯ ಪೂಜೆ ಹೇಗೆ ಮಾಡಬೇಕು? ಇಲ್ಲಿದೆ ಸರಳ ಪೂಜಾ ವಿಧಾನ

-ಮನೋಜವಂ ಮಾರೂತತುಲ್ಯವೇಗಂ ಜಿತೇಂದ್ರಿಂ ಬುದ್ಧಿಮತಾಂ ವರಿಷ್ಟಂ| ವಾತಾತ್ಮಜಂ ವಾನರಯೂಥಮುಖ್ಯಂ ಶ್ರೀರಾಮದೂತಂ ಶರಣಂ ಪ್ರಪಧ್ಯೆ||

ಇದು ಶ್ರೀರಾಮನ ಪ್ರೀತಿಯ ಭಕ್ತನಾದ ಹನುಮಂತನನ್ನು ಹೊಗಳಿ ನಮಸ್ಕರಿಸುವ ಮಂತ್ರವಾಗಿದೆ. ಇದನ್ನುಪ್ರತಿನಿತ್ಯ ಪಠಣ ಮಾಡುವುದರಿಂದ ಎಲ್ಲಾ ರೀತಿಯಲ್ಲಿಯೂ ಶುಭಫಲಗಳು ಪ್ರಾಪ್ತಿಯಾಗುತ್ತದೆ.

-ಓಂ ಏಂ ಹ್ರೀಂ ಹನುಮತೇ ರಾಮದೂತೇ ಲಂಕವಿದ್ಮಂಸನೇ ಅಂಜನೀ ಗರ್ಭ ಸಂಭೂತಾಯ ಶಾಕಿನಿ ಢಾಕಿನಿ ವಿಧ್ವಂಸನಾಯ ಕಿಲಕಿಲೀ ಬುಬುಕರೇನ ವಿಭೀಷಣ ಹನುಮದ್‌ ದೇವಾಯ ಓಂ ಹ್ರಿಂ ಹ್ರೀಂ ಹಂ ಫಟ್‌ ಸ್ವಾಹಾ||

ಯಾವಾಗಲೂ ನನ್ನನ್ನು ರಕ್ಷಿಸು ಎಂದು ಕೇಳಿಕೊಳ್ಳುವ ಮಂತ್ರ ಇದಾಗಿದೆ. ಯಾವುದೇ ರೀತಿಯ ಕಷ್ಟ ಬಂದರೂ ಕೂಡ ಈ ಮಂತ್ರ ಪಠಣ ಮಾಡುವುದರಿಂದ ಪರಿಹಾರ ಸಿಗುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ