AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hanuman Jayanti 2025: ಇಂದು ಹನುಮ ಜಯಂತಿ; ಮನೆಯಲ್ಲೇ ಹನುಮಂತನನ್ನು ಪೂಜಿಸುವ ಸರಳ ವಿಧಾನ ಇಲ್ಲಿದೆ

ಈ ವರ್ಷದ ಹನುಮ ಜಯಂತಿಯಂದು ಮನೆಯಲ್ಲಿಯೇ ಸರಳ ಪೂಜೆ ಮಾಡುವ ವಿಧಾನವನ್ನು ಈ ಲೇಖನ ವಿವರಿಸುತ್ತದೆ. ಬ್ರಹ್ಮ ಮುಹೂರ್ತದಲ್ಲಿ ಎದ್ದು, ಕೆಂಪು ಬಟ್ಟೆ ಧರಿಸಿ, ಶುದ್ಧವಾದ ಸ್ಥಳದಲ್ಲಿ ಪೂಜೆ ನಡೆಸಬೇಕು. ಹನುಮಂತನ ವಿಗ್ರಹ/ಚಿತ್ರ, ರಾಮ-ಸೀತಾ ಚಿತ್ರ, ಹೂವುಗಳು, ಸಿಂಧೂರ, ಧೂಪ, ದೀಪ, ಮತ್ತು ನೈವೇದ್ಯವನ್ನು ಅರ್ಪಿಸಬೇಕು. ಹನುಮಾನ್ ಚಾಲೀಸಾ ಪಠಣವು ಶುಭಕರ. ಈ ಸರಳ ವಿಧಾನದಿಂದ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ಬರುತ್ತದೆ ಎಂದು ನಂಬಲಾಗಿದೆ.

Hanuman Jayanti 2025: ಇಂದು ಹನುಮ ಜಯಂತಿ; ಮನೆಯಲ್ಲೇ ಹನುಮಂತನನ್ನು ಪೂಜಿಸುವ ಸರಳ ವಿಧಾನ ಇಲ್ಲಿದೆ
Hanuman Jayanti
ಅಕ್ಷತಾ ವರ್ಕಾಡಿ
|

Updated on:Apr 12, 2025 | 7:41 AM

Share

ಈ ವರ್ಷ ಏಪ್ರಿಲ್ 12 ಅಂದರೆ ಇಂದು ಹನುಮ ಜಯಂತಿಯನ್ನು ಆಚರಿಸಲಾಗುವುದು. ಈ ದಿನ ಹನುಮಂತನನ್ನು ಶ್ರದ್ಧಾ ಭಕ್ತಿಯಿಂದ ಪೂಜಿಸುವುದರಿಂದ, ಜೀವನದ ಸಮಸ್ಯೆಗಳು ದೂರವಾಗುತ್ತವೆ, ಮನೆಗೆ ಸಂತೋಷ ಮತ್ತು ಸಮೃದ್ಧಿ ಬರುತ್ತದೆ ಮತ್ತು ಮಾನಸಿಕ ಮತ್ತು ದೈಹಿಕ ಶಕ್ತಿ ಸಿಗುತ್ತದೆ ಎಂದು ನಂಬಲಾಗಿದೆ. ನೀವು ದೇವಾಲಯಗಳಿವೆ ಹೋಗಿಯೇ ಹನುಮಂತನನ್ನು ಪೂಜಿಸಬೇಕಿಲ್ಲ. ಮನೆಯಲ್ಲೂ ಈ ಸುಲಭ ವಿಧಾನವನ್ನು ಅನುಸರಿಸುವ ಮೂಲಕ ಪೂಜಿಸಬಹುದು.

ಹನುಮ ಜಯಂತಿಯ ಪೂಜಾ ವಿಧಿ ವಿಧಾನ:

ಹನುಮ ಜಯಂತಿಯಂದು ಬ್ರಹ್ಮ ಮುಹೂರ್ತದಲ್ಲಿ ಏಳುವುದು ಶುಭವೆಂದು ಪರಿಗಣಿಸಲಾಗಿದೆ. ಕೆಂಪು ಅಥವಾ ಕಿತ್ತಳೆ ಬಣ್ಣದ ಶುಭ್ರವಾದ ಬಟ್ಟೆಗಳನ್ನು ಧರಿಸಿ. ನೀವು ಮನೆಯಲ್ಲಿ ಪೂಜೆ ಮಾಡುತ್ತಿದ್ದರೆ, ದೇವಾಲಯ ಅಥವಾ ಮನೆಯಲ್ಲಿರುವ ಸ್ವಚ್ಛವಾದ ಸ್ಥಳವನ್ನು ಗಂಗಾ ನೀರಿನಿಂದ ಶುದ್ಧೀಕರಿಸಿ. ನಂತರ ಒಂದು ಸ್ಟ್ಯಾಂಡ್ ಮೇಲೆ ಕೆಂಪು ಬಟ್ಟೆಯನ್ನು ಹರಡಿ ಮತ್ತು ಹನುಮಂತನ ವಿಗ್ರಹ ಅಥವಾ ಚಿತ್ರವನ್ನು ಪ್ರತಿಷ್ಠಾಪಿಸಿ. ಶ್ರೀರಾಮ ಮತ್ತು ಸೀತಾ ಮಾತೆಯ ಚಿತ್ರವನ್ನೂ ಇಟ್ಟುಕೊಳ್ಳಿ. ಸಿಂಧೂರ, ಮಲ್ಲಿಗೆ ಎಣ್ಣೆ, ಕೆಂಪು ಹೂವುಗಳು, ಹಾರ, ಪವಿತ್ರ ದಾರ, ಕಲಶ, ಧೂಪ, ದೀಪ, ಕರ್ಪೂರ, ತೆಂಗಿನಕಾಯಿ, ಬೆಲ್ಲ, ಕಡಲೆ ಹಿಟ್ಟು ಲಡ್ಡು ಅಥವಾ ಬೂಂದಿ ಲಡ್ಡು, ಬಾಳೆಹಣ್ಣು, ಒಣ ಹಣ್ಣುಗಳು, ಪಂಚಾಮೃತ (ಹಾಲು, ಮೊಸರು, ತುಪ್ಪ, ಜೇನುತುಪ್ಪ ಮತ್ತು ಸಕ್ಕರೆಯ ಮಿಶ್ರಣ), ಗಂಗಾಜಲ, ತುಳಸಿ ಎಲೆಗಳು ಇತ್ಯಾದಿ. ಗಂಗಾಜಲ, ಅಕ್ಕಿ ಮತ್ತು ಹೂವುಗಳನ್ನು ಕೈಯಲ್ಲಿ ಹಿಡಿದು ಪೂಜಿಸುವ ಪ್ರತಿಜ್ಞೆ ಮಾಡಿ.

ಇದನ್ನೂ ಓದಿ: ವರ್ಷದಲ್ಲಿ ಎರಡು ಬಾರಿ ಹನುಮ ಜಯಂತಿಯನ್ನು ಆಚರಿಸಲು ಕಾರಣವೇನು?

ಇದನ್ನೂ ಓದಿ
Image
ಭಾನುವಾರ ಈ ವಸ್ತು ಖರೀದಿಸುವ ವ್ಯಕ್ತಿ ಶ್ರೀಮಂತನಾಗುತ್ತಾನೆ
Image
ಪತ್ನಿಯನ್ನು ಹಿಂಸಿಸುವ ಪತಿಗೆ ಏನು ಶಿಕ್ಷೆ? ಗರುಡ ಪುರಾಣದ ಹೇಳುವುದೇನು?
Image
ಮದುವೆಗೂ ಮುನ್ನ ಗ್ರಹ ಶಾಂತಿ ಪೂಜೆ ಮಾಡಿಸುವುದೇಕೆ? ಏನಿದರ ಮಹತ್ವ?
Image
ಊಟ ಮಾಡಿದ ನಂತರ ಬಾಳೆ ಎಲೆಯನ್ನು ಒಳಮುಖವಾಗಿ ಮಡಚುವುದೇಕೆ?

ನಿಮ್ಮ ಮನಸ್ಸಿನಲ್ಲಿ ನಿಮ್ಮ ಆಸೆಗಳನ್ನು ಪುನರಾವರ್ತಿಸಿ. ನಂತರ ಮೊದಲು ರಾಮ ಮತ್ತು ಸೀತಾ ಮಾತೆಯನ್ನು ಪೂಜಿಸಿ. ಅವರಿಗೆ ಹೂವುಗಳು ಮತ್ತು ಕಾಣಿಕೆಗಳನ್ನು ಅರ್ಪಿಸಿ. ಹನುಮಂತನ ಮೂರ್ತಿಯನ್ನು ಗಂಗಾ ನೀರಿನಿಂದ ಶುದ್ಧಗೊಳಿಸಿ. ಹೊಸ ಬಟ್ಟೆ ಮತ್ತು ಪವಿತ್ರ ದಾರವನ್ನು ಉಡಿಸಿ, ಕೆಂಪು ಹೂವುಗಳು ಮತ್ತು ಹಾರವನ್ನು ಅರ್ಪಿಸಿ. ಬೆಲ್ಲ, ಬೇಳೆ ಹಿಟ್ಟಿನ ಲಡ್ಡು ಅಥವಾ ಬೂಂದಿ ಲಡ್ಡು, ಬಾಳೆಹಣ್ಣು, ಒಣ ಹಣ್ಣುಗಳು ಮತ್ತು ಪಂಚಾಮೃತವನ್ನು ನೀಡಿ. ಧೂಪ ಮತ್ತು ಮಲ್ಲಿಗೆ ಎಣ್ಣೆಯ ದೀಪವನ್ನು ಹಚ್ಚಿ. ಹನುಮಂತನ ಆರತಿ ಮಾಡಿ. ಹನುಮಾನ್ ಚಾಲೀಸಾ ಪಠಿಸುವುದು ಬಹಳ ಶುಭವೆಂದು ಪರಿಗಣಿಸಲಾಗಿದೆ. ಪೂಜೆಯ ಸಮಯದಲ್ಲಿ ಮಾಡಿದ ಯಾವುದೇ ತಪ್ಪುಗಳಿಗೆ ಕ್ಷಮೆ ಕೇಳಿ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:25 am, Fri, 11 April 25

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!