AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿ ಹನುಮಂತನ ಫೋಟೋ ಇಡುವ ಸರಿಯಾದ ದಿಕ್ಕು ಯಾವುದು?

ಮನೆಯಲ್ಲಿ ಹನುಮಂತನ ಮೂರ್ತಿ ಅಥವಾ ಚಿತ್ರ ಇಡುವುದರಿಂದ ಸಂತೋಷ, ಶಾಂತಿ ಮತ್ತು ಸಂಪತ್ತು ದೊರೆಯುತ್ತದೆ ಎಂದು ನಂಬಲಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ, ಹನುಮಂತನ ವಿವಿಧ ಭಂಗಿಗಳ ಚಿತ್ರಗಳನ್ನು ನಿರ್ದಿಷ್ಟ ದಿಕ್ಕುಗಳಲ್ಲಿ ಇಡುವುದರಿಂದ ವಿಭಿನ್ನ ಫಲಿತಾಂಶಗಳು ದೊರೆಯುತ್ತವೆ. ಉದಾಹರಣೆಗೆ, ಪಶ್ಚಿಮ ದಿಕ್ಕಿನಲ್ಲಿ ಧ್ವಜ ಹಿಡಿದ ಹನುಮಂತನ ಚಿತ್ರ ಯಶಸ್ಸನ್ನು ತರುತ್ತದೆ, ಆಗ್ನೇಯ ದಿಕ್ಕಿನಲ್ಲಿ ಇಟ್ಟ ಹನುಮಂತನ ಚಿತ್ರ ಧೈರ್ಯವನ್ನು ಹೆಚ್ಚಿಸುತ್ತದೆ ಎಂದು ನಂಬಲಾಗಿದೆ.

ಮನೆಯಲ್ಲಿ ಹನುಮಂತನ ಫೋಟೋ ಇಡುವ ಸರಿಯಾದ ದಿಕ್ಕು ಯಾವುದು?
Hanuman Murti Placement Vastu Tips For Happiness And Prosperity
ಅಕ್ಷತಾ ವರ್ಕಾಡಿ
|

Updated on:Jan 08, 2025 | 3:47 PM

Share

ಮನೆಯಲ್ಲಿ ಹನುಮಂತನ ಮೂರ್ತಿ ಮತ್ತು ಚಿತ್ರಗಳನ್ನು ಇಡುವುದರಿಂದ ಸಂತೋಷ, ಶಾಂತಿ ಮತ್ತು ಸಂಪತ್ತು ದೊರೆಯುತ್ತದೆ. ಇದಲ್ಲದೇ ಮನೆಯಲ್ಲಿನ ಎಲ್ಲಾ ರೀತಿಯ ರೋಗಗಳು, ದೋಷಗಳು ದೂರವಾಗಿ ಕುಟುಂಬ ಸದಸ್ಯರಲ್ಲಿ ಆತ್ಮವಿಶ್ವಾಸ ಹೆಚ್ಚುತ್ತದೆ ಎಂದು ನಂಬಲಾಗಿದೆ. ಆದರೆ ಮನೆಯಲ್ಲಿ ಹನುಮಂತನ ಮೂರ್ತಿ ಅಥವಾ ಚಿತ್ರ ಇಡುವ ಮೊದಲು ಕೆಲವು ವಾಸ್ತು ಸಲಹೆಗಳನ್ನು ಅನುಸರಿಸುವುದು ಅಗತ್ಯವಾಗಿದೆ.

ಗಾಳಿಯಲ್ಲಿ ಹಾರುತ್ತಿರುವ ಹನುಮಂತನ ಚಿತ್ರವನ್ನು ಮನೆಯಲ್ಲಿ ಹಾಕಬಹುದು. ಆ ಫೋಟೋದಲ್ಲಿ ರಾಮ ಹನುಮಂತನ ಹೆಗಲ ಮೇಲಿದ್ದರೆ ಚೆಂದ. ಹೀಗೆ ಮಾಡಿದರೆ ಈ ವರ್ಷ ಸಮಾಜದಲ್ಲಿ ನಿಮ್ಮ ಕೀರ್ತಿ, ಗೌರವ ಹೆಚ್ಚುತ್ತದೆ. ಜೀವನವು ಸಂತೋಷದಿಂದ ತುಂಬಿರುತ್ತದೆ ಎಂದು ನಂಬಲಾಗುತ್ತದೆ.

ಇದಲ್ಲದೇ ಕೈಯಲ್ಲಿ ಧ್ವಜವನ್ನು ಹಿಡಿದುಕೊಂಡು ಮನೆಯ ಪಶ್ಚಿಮ ದಿಕ್ಕಿನಲ್ಲಿ ನಿಂತಿರುವ ಹನುಮಂತನ ಫೋಟೋವನ್ನು ಇರಿಸಿದರೆ ನೀವು ಬಾಕಿಯಿರುವ ಕೆಲಸಗಳನ್ನು ಪೂರ್ಣಗೊಳಿಸುತ್ತೀರಿ ಮತ್ತು ಪ್ರತಿ ಕಾರ್ಯದಲ್ಲಿ ಯಶಸ್ವಿಯಾಗುತ್ತೀರಿ ಎಂದರ್ಥವನ್ನು ಸೂಚಿಸುತ್ತದೆ.

ಇದನ್ನೂ ಓದಿ: ಮಹಾಕುಂಭಕ್ಕೆ ರಸ್ತೆಯುದ್ದಕ್ಕೂ 17 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 84 ಕಂಬಗಳು; ಶಿವನ 108 ನಾಮಗಳಿಂದ ವಿಶೇಷ ವಿನ್ಯಾಸ

ಮನೆಯ ದಕ್ಷಿಣ ಅಥವಾ ಆಗ್ನೇಯ ದಿಕ್ಕಿನಲ್ಲಿ ಗಿಡುಗ ಹಿಡಿದು ನಿಂತಿರುವ ಹನುಮಂತನ ಚಿತ್ರವನ್ನಿಟ್ಟು ಪೂಜಿಸಿದರೆ ಜೀವನದಲ್ಲಿ ಕಳೆದು ಹೋದ ಆತ್ಮಸ್ಥೈರ್ಯ ಮರಳಿ ಬರುವುದಲ್ಲದೆ ಧೈರ್ಯವೂ ಬರುತ್ತದೆ ಎಂಬ ನಂಬಿಕೆಯಿದೆ. ಮನೆಯ ಈಶಾನ್ಯ ದಿಕ್ಕಿನಲ್ಲಿ ಸಂಜೀವಿನಿ ಪರ್ವತವನ್ನು ಹೊತ್ತ ಫೋಟೋವನ್ನು ಇಡುವುದರಿಂದ ಭಗವಾನ್ ಹನುಮಂತನ ಆಶೀರ್ವಾದ ಮಾತ್ರವಲ್ಲದೆ ಉತ್ತಮ ಆರೋಗ್ಯ ಮತ್ತು ದೀರ್ಘಕಾಲದ ಕಾಯಿಲೆಗಳನ್ನು ಗುಣವಾಗುತ್ತದೆ ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:45 pm, Wed, 8 January 25

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ