ವಿಷ್ಣುವನ್ನು ಹರಿ ಎಂದು ಏಕೆ ಕರೆಯುತ್ತಾರೆ? ಗುರುವಾರ ಪೂಜಿಸಲು ಇಲ್ಲಿವೆ ಕಾರಣಗಳು

ವಿಷ್ಣು ಹಾಲಿನ ಸಾಗರದಲ್ಲಿ ಹಾವಿನ ಮೇಲೆ ಮಲಗಿರುವ ಚಿತ್ರಗಳನ್ನು ನೀವು ನೋಡಿರಬಹುದು. ಹಾಲಿನ ಸಾಗರವು ಸಂತೋಷ ಮತ್ತು ದುಃಖದ ಅವಶೇಷಗಳನ್ನು ಸಂಕೇತಿಸುತ್ತದೆ.

ವಿಷ್ಣುವನ್ನು ಹರಿ ಎಂದು ಏಕೆ ಕರೆಯುತ್ತಾರೆ? ಗುರುವಾರ ಪೂಜಿಸಲು ಇಲ್ಲಿವೆ ಕಾರಣಗಳು
ವಿಷ್ಣು ದೇವರು
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 22, 2021 | 9:53 PM

ಪುರಾಣಗಳಲ್ಲಿ ಪ್ರತಿ ವಾರವನ್ನು ಯಾವುದಾದರೂ ದೇವತೆಗೆ ಸಮರ್ಪಿಸಲಾಗಿದೆ. ಸೋಮವಾರ ಶಿವನಿಗೆ, ಮಂಗಳವಾರ ಹನುಮನಿಗೆ ಮತ್ತು ಬುಧವಾರ ಅಯ್ಯಪ್ಪನಿಗೆ ಸಮರ್ಪಿಸಲಾಗಿದೆ. ಗುರುವಾರ ಶಿರಡಿ ಸಾಯಿಯನ್ನು ಪೂಜಿಸುತ್ತೇವೆ. ಇದರ ಜತೆಗೆ ಗುರುವಾರ ನಾವು ವಿಷ್ಣು ದೇವರನ್ನು ಕೂಡ ಪೂಜಿಸುತ್ತೇವೆ. ಹಿಂದೂ ಪುರಾಣದ ಪ್ರಕಾರ, ಗುರುವಾರ ವಿಷ್ಣುವನ್ನು ಪೂಜಿಸುವುದರಿಂದ ಜೀವನದ ಎಲ್ಲಾ ಸಮಸ್ಯೆಗಳು ದೂರವಾಗುತ್ತದೆ ಎನ್ನುವ ನಂಬಿಕೆ ಭಕ್ತರದ್ದು. ಅಲ್ಲದೆ ವಿಷ್ಣುವನ್ನು ಹರಿ ಎಂಬ ಹೆಸರಿನಿಂದ ಕರೆಯಲಾಗುತ್ತದೆ. ವಿಷ್ಣುವನ್ನು ಹರಿ ಎಂದು ಏಕೆ ಕರೆಯಲಾಗುತ್ತದೆ ಮತ್ತು ಗುರುವಾರ ವಿಷ್ಣುವನ್ನು ಏಕೆ ಪೂಜಿಸಲಾಗುತ್ತದೆ ಎಂಬುದಕ್ಕೆ ಇಲ್ಲಿದೆ ವಿವರ.

ವಿಷ್ಣುವನ್ನು ಹರಿ ಎಂದು ಏಕೆ ಕರೆಯುತ್ತಾರೆ? ಹರಿ ಹರತಿ ಪಾಪಾನಿ ಎಂದರೆ ಹರಿ ಎಂದು ಕರೆದರೆ ನಮ್ಮ ಜೀವನದ ಎಲ್ಲಾ ಪಾಪಗಳು ಕಳೆದು ಹೋಗುತ್ತದೆ ಎನ್ನುವ ನಂಬಿಕೆ ಭಕ್ತರಲ್ಲಿದೆ. ಹರಿ ಎಂದರೆ ಕಷ್ಟಗಳನ್ನು ನಾಶ ಮಾಡುವವನು ಎಂಬರ್ಥವಿದೆ. ವಿಷ್ಣುವನ್ನು ಆರಾಧಿಸುವ ಭಕ್ತನ ಎಲ್ಲಾ ಪಾಪಗಳನ್ನು ವಿಷ್ಣು ತೆಗೆದುಹಾಕುತ್ತಾನೆ ಎಂದು ಪುರಾಣಗಳಲ್ಲಿ ಹೇಳಲಾಗಿದೆ. ಎಷ್ಟೇ ದೊಡ್ಡ ಸಮಸ್ಯೆಗಳಿದ್ದರೂ ಹರಿ ಪರಿಹರಿಸುತ್ತಾನೆ. ಅದಕ್ಕಾಗಿಯೇ ಅವನನ್ನು ಭಕ್ತಿಪೂರ್ವಕವಾಗಿ ಹರಿ, ಶ್ರೀಹರಿ ಎಂದು ಕರೆಯಲಾಗುತ್ತದೆ.

ವಿಷ್ಣುವನ್ನು ಗುರುವಾರ ಪೂಜಿಸೋದೇಕೆ? ಪುರಾಣಗಳ ಪ್ರಕಾರ, ಪಕ್ಷಿಗಳಲ್ಲಿ ದೊಡ್ಡದು ಗರುಡ. ಇದು ವಿಷ್ಣುವಿನ ವಾಹನ ಕೂಡ ಹೌದು. ಗರುಡ ಕಠಿಣ ತಪಸ್ಸಿನ ಮೂಲಕ ವಿಷ್ಣುವಿನ ಗಮನ ಸೆಳೆದಿತ್ತು. ಗರುಡ ಪಕ್ಷಿಯ ತಪಸ್ಸಿನಿಂದ ಸಂತಸಗೊಂಡ ವಿಷ್ಣು ಅದನ್ನು ತನ್ನ ವಾಹನನ್ನಾಗಿ ಮಾಡಿಕೊಂಡನು. ಗುರು ಎಂದರೆ ಭಾರ ಎಂಬ ಅರ್ಥವಿದೆ. ಪಕ್ಷಿಗಳಲ್ಲೇ ದೊಡ್ಡದಾದ ಪಕ್ಷಿ ಗರುಡ. ಗರುಡ ಎಂದರೆ ಕಠಿಣ ಯಶಸ್ಸನ್ನು ಸಾಧಿಸುವವನು. ಈ ಕಾರಣಕ್ಕಾಗಿಯೇ ವಿಷ್ಣುವನ್ನು ಗುರುವಾರ ಪೂಜಿಸಲಾಗುತ್ತದೆ.

ವಿಷ್ಣು ಹಾವಿನ ಮೇಲೆ ಏಕೆ ಮಲಗುತ್ತಾನೆ? ವಿಷ್ಣು ಹಾಲಿನ ಸಾಗರದಲ್ಲಿ ಹಾವಿನ ಮೇಲೆ ಮಲಗಿರುವ ಚಿತ್ರಗಳನ್ನು ನೀವು ನೋಡಿರಬಹುದು. ಹಾಲಿನ ಸಾಗರವು ದುಃಖದ ಲೇಪವೂ ಇಲ್ಲದ ಸಂತೋಷವನ್ನು ಸಂಕೇತಿಸುತ್ತದೆ. ಈ ರೂಪವು ಮಾನವರು ಸಂತೋಷ ಮತ್ತು ಅತೃಪ್ತಿ ಎರಡರಲ್ಲೂ ಒಂದೇ ರೀತಿಯಲ್ಲಿ ಬದುಕಬೇಕು ಎಂದು ಸೂಚಿಸುತ್ತದೆ.

ಇದನ್ನೂ ಓದಿ: ಶಿವನಿಗೆ ಬಿಲ್ವಪತ್ರೆ ಶ್ರೇಷ್ಠವೇಕೆ? ಈ ಮರ ಹುಟ್ಟಿದ್ದು ಹೇಗೆ? ಇಲ್ಲಿದೆ ಪುರಾಣದ ಕಥೆ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ