AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Devaloka Apsara Rambha: ದೇವ ನರ್ತಕಿ ರಂಭೆ ಭೂಲೋಕದಲ್ಲಿ ಬಾಳೆಗಿಡವಾಗಿ ಜನಿಸಿದ್ದು ಹೇಗೆ ಮತ್ತು ಏಕೆ?

Banana tree: ಪುರಾಣ ಕತೆಯ ಮುಂದುವರಿದ ಭಾಗವಾಗಿ ಹೇಳುವುದಾದರೆ ರಂಭೆ ತನ್ನ ತಪ್ಪು ತಿಳಿದುಕೊಂಡು, ತನ್ನನ್ನು ಮನ್ನಿಸುವಂತೆ ಮಹಾವಿಷ್ಣುವಿನಲ್ಲಿ ಬೇಡಿಕೊಳ್ಳುತ್ತಾಳೆ. ಆಗ ದೇವರಿಗೆ ನೈವೇದ್ಯವಾಗಿ ಇಡುವ ಅರ್ಹತೆಯನ್ನು ರಂಭೆಗೆ ಮಹಾವಿಷ್ಣು ಪ್ರಸಾದಿಸಿದ ಎಂಬ ಮಾತು ಇದೆ. ಇನ್ನು, ರಂಭೆ ರೂಪದ ಬಾಳೆಗಿಡದ ಜೊತೆ ಮದುವೆ ಮಾಡಿಸುವುದೂ ಉಂಟು. ಮದುವೆ ಎಬುದು ನನೆಗುದಿಗೆ ಬಿದ್ದು ಯಾವ ಕಾಲವದರೂ ಕಂಕಣ ಭಾಗ್ಯ ಕೂಡಿಬಾರದಿದ್ದರೆ ಬಾಳೆಗಿಡದ ಜೊತೆ ಮದುವೆ ಮಾಡಿಸುತ್ತಾರೆ.

Devaloka Apsara Rambha: ದೇವ ನರ್ತಕಿ ರಂಭೆ ಭೂಲೋಕದಲ್ಲಿ ಬಾಳೆಗಿಡವಾಗಿ ಜನಿಸಿದ್ದು ಹೇಗೆ ಮತ್ತು ಏಕೆ?
ದೇವ ನರ್ತಕಿ ರಂಭೆ ಭೂಲೋಕದಲ್ಲಿ ಬಾಳೆಗಿಡವಾಗಿ ಜನಿಸಿದ್ದು ಹೇಗೆ ಮತ್ತು ಏಕೆ?
TV9 Web
| Edited By: |

Updated on: Feb 19, 2022 | 6:59 AM

Share

ಹಿಂದೂ ಪುರಾಣಗಳಲ್ಲಿ (Hindu mythology) ದೇವಲೋಕದ ಅಪ್ಸರೆಯರ ಬಗ್ಗೆ ನಾನಾ ಕತೆಗಳು ಚಾಲ್ತಿಯಲ್ಲಿವೆ. ರಂಭೆ-ಊರ್ವಶಿ-ಮೇನಕೆ ಬಗ್ಗೆ ಯಾರಿಗೆ ತಾನೆ ತಿಳಿದಿಲ್ಲ ಹೇಳಿ. ಅಂತಹುದರಲ್ಲಿ ಇಲ್ಲಿ ರಂಬೆಯ ಬಗ್ಗೆ ಒಂದು ಕತೆಯನ್ನು ಉದಾಹರಣೆಯಾಗಿ ತೆಗೆದುಕೊಳ್ಳೋಣ. ತನ್ಮೂಲಕ ಬಾಳೆಹಣ್ಣಿಗೂ ಅಂದರೆ ಬಾಳೆ ಗಿಡಕ್ಕೂ (banana tree) ಮತ್ತು ರಂಭೆಗೂ (Devaloka dancer Apsara rambha) ಇರುವ ಹೋಲಿಕೆ ಏನೆಂಬುದನ್ನು ತಿಳಿಯೋಣ. ಇಲ್ಲಿ ಮತ್ತೊಂದು ವಿಚಾರ ಬಾಳೆ ಹಣ್ಣು, ಗಿಡದ ಬಗ್ಗೆಯೂ ನಾನಾ ಕತೆಗಳು, ಸಂದೇಹಗಳು ಇವೆ. ಅದನ್ನೆಲ್ಲ ತಿಳಿಯುವ ಪ್ರಯತ್ನ ಇಲ್ಲಿದೆ.

ತಾಂಬೂಲದಲ್ಲಿ ಜಂಟಿ ಬಾಳೆಹಣ್ಣು ಇರಬಾರದು ಅನ್ನುತ್ತಾರೆ. ಏಕೆಂದರೆ ಅವಳಿ ಬಾಳೆಹಣ್ಣಿನಲ್ಲಿ ಎರಡು ಹಣ್ಣು ಇದ್ದರೂ ಅದು ಒಂದು ಹಣ್ಣಿನ ಲೆಕ್ಕದಲ್ಲೇ ಬರುತ್ತದೆ. ತಾಂಬೂಲದಲ್ಲಿ ಒಂದೇ ಒಂದು ಹಣ್ಣು ಇಡುವಂತಿಲ್ಲವಲ್ಲ. ಹಾಗಾಗಿ ತಾಂಬೂಲದಲ್ಲಿ ಈ ರೀತಿಯ ಜಂಟಿ ಬಾಳೆಹಣ್ಣು ಇಟ್ಟರೆ ಅದು ಒಂದು ಎಂಬ ಲೆಕ್ಕ ಹಾಗಾಗಿ ತಾಂಬೂಲದಲ್ಲಿ ಅವಳಿ ಬಾಳೆಹಣ್ಣು ಕೊಡಬಾರದು.

ಈ ಸಂಗತಿ ಪಕ್ಕಕ್ಕಿಟ್ಟರೆ, ಈ ರೀತಿಯ ಅವಳಿ ಬಾಳೆಹಣ್ಣು ದೇವರಿಗೆ ಇಡಬಾರದೇ? ಎಂಬ ಪ್ರಶ್ನೆ ಉದ್ಭವಿಸುತ್ತದೆ. ಅದಕ್ಕೆ ತಿಳಿದವರು ಈ ರೀತಿ ಉತ್ತರ ಕೊಡುತ್ತಾರೆ. ಅದು ನಿಜಕ್ಕೂ ಕುತೂಹಲಕಾರಿಯಾಗಿದೆ.

ಬಾಳೆಗಿಡ ಎಂದರೆ ಬೇರೆ ಯಾರೋ ಅಲ್ಲ… ಸಾಕ್ಷಾತ್ ದೇವ ನರ್ತಕಿ ರಂಭೆಯ ಅವತಾರ! ಶ್ರೀ ಮಹಾವಿಷ್ಣುವಿನ ಬಳಿ ರಂಭೆ ತಾನೇ ಸೌಂದರ್ಯವತಿ ಎಂದು ಅಹಂಕಾರದಿಂದ ನಡೆದುಕೊಳ್ಳುತ್ತಾಳೆ. ಆಗ ಮಹಾವಿಷ್ಣು ರಂಭೆಗೆ ಭೂಲೋಕದಲ್ಲಿ ಬಾಳೆಗಿಡವಾಗಿ ಜನಿಸು ಎಂದು ಶಪಿಸಿದ. ಹಾಗಾಗಿ ಕವಿವರ್ಯರು ಬಾಳಗಿಡ, ಬಾಳೆದಿಂಡಿನಲ್ಲಿ ಹೆಣ್ಣಿನ ರೂಪ ಕಾಣುತ್ತಾರೆ!

ಇನ್ನು, ಪುರಾಣ ಕತೆಯ ಮುಂದುವರಿದ ಭಾಗವಾಗಿ ಹೇಳುವುದಾದರೆ ರಂಭೆ ತನ್ನ ತಪ್ಪು ತಿಳಿದುಕೊಂಡು, ತನ್ನನ್ನು ಮನ್ನಿಸುವಂತೆ ಮಹಾವಿಷ್ಣುವಿನಲ್ಲಿ ಬೇಡಿಕೊಳ್ಳುತ್ತಾಳೆ. ಆಗ ದೇವರಿಗೆ ನೈವೇದ್ಯವಾಗಿ ಇಡುವ ಅರ್ಹತೆಯನ್ನು ರಂಭೆಗೆ ಮಹಾವಿಷ್ಣು ಪ್ರಸಾದಿಸಿದ ಎಂಬ ಮಾತು ಇದೆ. ಇನ್ನು, ರಂಭೆ ರೂಪದ ಬಾಳೆಗಿಡದ ಜೊತೆ ಮದುವೆ ಮಾಡಿಸುವುದೂ ಉಂಟು. ಮದುವೆ ಎಬುದು ನನೆಗುದಿಗೆ ಬಿದ್ದು ಯಾವ ಕಾಲವದರೂ ಕಂಕಣ ಭಾಗ್ಯ ಕೂಡಿಬಾರದಿದ್ದರೆ ಬಾಳೆಗಿಡದ ಜೊತೆ ಮದುವೆ ಮಾಡಿಸುತ್ತಾರೆ.

ಹಾಗಾಗಿ ಪವಿತ್ರವಾದ ಹಣ್ಣಿನಲ್ಲಿ ನಾವು ದೋಷಗಳನ್ನು ಹುಡುಕಬೇಕಾದ ಅಗತ್ಯವಿಲ್ಲ. ಅವಳಿ ಬಾಳೆಹಣ್ಣನ್ನು ಯಾವುದೇ ಅಭ್ಯಂತರವಿಲ್ಲದೆ ದೇವರಿಗೆ ಅರ್ಪಿಸಬಹುದು. ಆದರೆ ತಾಂಬೂಲದಲ್ಲಿ ಮಾತ್ರ ಜಂಟಿ ಬಾಳೆಹಣ್ಣು ಇಡಬಾರದು.

Also Read: ತಣ್ಣೀರು ಸ್ನಾನ ಒಳ್ಳೆಯದಾ? ಬಿಸಿ ನೀರಾ?; ಈ ರೀತಿಯ ಸ್ನಾನದಿಂದ ಏನೆಲ್ಲ ಉಪಯೋಗವಿದೆ ಗೊತ್ತಾ?

Also Read: ತುಂಡುಡುಗೆ ತೊಟ್ಟು ಮಿಂಚಿದ ಆಲಿಯಾ

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್