Sign In

By signing in or creating an account, you agree with Associated Broadcasting Company's Terms & Conditions and Privacy Policy.

Hindu Puja: ಮನೆಯಲ್ಲಿ ದೇವರಿಗೆ ಒಂದು ಅಗರಬತ್ತಿ ಏಕೆ ಹಚ್ಚಬಾರದು?

ಪೂಜೆಯಲ್ಲಿ ಅಗರಬತ್ತಿ ಬಳಕೆ ವಾಡಿಕೆ. ಆದರೆ ಒಂದೇ ಅಗರಬತ್ತಿ ಹಚ್ಚುವುದು ಅಶುಭ. ಇದು ಮನೆಯಲ್ಲಿ ಕಲಹಕ್ಕೆ ಕಾರಣವಾಗಬಹುದು. ಜೋಡಿ ಅಗರಬತ್ತಿ ಬಳಸುವುದು ಧನಾತ್ಮಕತೆ ಮತ್ತು ಮಾನಸಿಕ ಶಾಂತಿಗೆ ಒಳ್ಳೆಯದು ಎಂದು ಜ್ಯೋತಿಷಿ ಬಸವರಾಜ ಗುರೂಜಿಯವರು ಹೇಳುತ್ತಾರೆ. ಒಂಟಿ ಅಗರಬತ್ತಿಯನ್ನು ಏಕೆ ಹಚ್ಚಬಾರದು ಇದಕ್ಕೆ ಕಾರಣವೇನು ಎಂಬುದನ್ನು ವಿಡಿಯೋದಲ್ಲಿ ವಿವರಿಸಲಾಗಿದೆ.

Hindu Puja: ಮನೆಯಲ್ಲಿ ದೇವರಿಗೆ ಒಂದು ಅಗರಬತ್ತಿ ಏಕೆ ಹಚ್ಚಬಾರದು?
Single Incense StickImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on: Mar 21, 2025 | 10:13 AM

ಹಿಂದೂ ಧರ್ಮದಲ್ಲಿ ಪೂಜೆಯ ಸಮಯದಲ್ಲಿ ಅಗರಬತ್ತಿ ಬಳಸುವುದು ವಾಡಿಕೆ. ಅಗರಬತ್ತಿ ಇಲ್ಲದೆ ಪೂಜೆಯು ಸಂಪನ್ನವಾಗದು ಎಂಬುದು ಸಾಕಷ್ಟು ಜನರ ನಂಬಿಕೆ. ಅಗರಬತ್ತಿಯ ಸುವಾಸನೆಯು ಪರಿಸರವನ್ನು ಶುದ್ಧೀಕರಿಸುತ್ತದೆ ಮತ್ತು ಧನಾತ್ಮಕ ಶಕ್ತಿಯನ್ನು ವೃದ್ಧಿಸುತ್ತದೆ ಎಂದು ನಂಬಲಾಗಿದೆ. ಆದಾಗ್ಯೂ, ಅಗರಬತ್ತಿ ಹಚ್ಚುವಾಗ ಸಾಕಷ್ಟು ಜನರು ಒಂದು ಅಗರ ಬತ್ತಿ ಹಚ್ಚಿಡುತ್ತಾರೆ. ಆದರೆ ಈ ಅಭ್ಯಾಸ ಶುಭವೇ ಅಥವಾ ಅಶುಭವೇ? ಈ ಕುರಿತು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿಯವರು ನೀಡಿರುವ ಮಾಹಿತಿ ಇಲ್ಲಿದೆ.

ಅಗರಬತ್ತಿ ಹಚ್ಚುವಾಗ ಒಂದು ಬತ್ತಿ ಹಚ್ಚಿಡುವುದನ್ನು ತಪ್ಪಿಸಬೇಕು. ಇದು ಮನೆಯಲ್ಲಿ ಕಲಹ ಮತ್ತು ನಕಾರಾತ್ಮಕತೆಯನ್ನು ಉಂಟುಮಾಡಬಹುದು ಎಂದು ಬಸವರಾಜ ಗುರೂಜಿಯವರು ಎಚ್ಚರಿಸುತ್ತಾರೆ. ಒಂಟಿ ಅಗರಬತ್ತಿಯನ್ನು ಏಕೆ ಹಚ್ಚಬಾರದು ಇದಕ್ಕೆ ಕಾರಣವೇನು ಎಂಬುದನ್ನು ಈ ವಿಡಿಯೋದಲ್ಲಿ ವಿವರವಾಗಿ ವಿವರಿಸಲಾಗಿದೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ
Image
ಮನೆಯಿಂದಲೇ ಕೆಲಸ ಮಾಡುತ್ತಿದ್ದೀರಾ? ಹಾಗಿದ್ರೆ ಈ ವಾಸ್ತು ಸಲಹೆ ಅನುಸರಿಸಿ
Image
ಈ ಮೂರು ರಾಶಿಯವರಿಗೆ ಗಜಕೇಸರಿ ಯೋಗ; ಅದೃಷ್ಟ ಖುಲಾಯಿಸಲಿದೆ
Image
ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುವಾಗ ಈ ವಿಷ್ಯ ನೆನಪಿಟ್ಟುಕೊಳ್ಳಿ
Image
ನರಸಿಂಹ ದ್ವಾದಶಿ ಯಾವಾಗ? ದಿನಾಂಕ, ಶುಭ ಸಮಯ ಮತ್ತು ಪೂಜಾ ವಿಧಾನ ತಿಳಿಯಿರಿ

ಇದನ್ನೂ ಓದಿ: ಮನೆಯಲ್ಲಿ ಶನಿ ದೇವರ ದಿಕ್ಕು ಯಾವುದು ಮತ್ತು ಆ ದಿಕ್ಕಿನಲ್ಲಿ ಏನು ಇಡಬಾರದು?

ಇನ್ಮುಂದೆ ಪೂಜೆಯ ಸಮಯದಲ್ಲಿ ಅಗರಬತ್ತಿ ಬಳಸುವಾ ಎರಡು ಅಗರಬತ್ತಿ ಬಳಸಿ ಜೋಡಿ ಅಗರಬತ್ತಿ ಬಳಸುವುದರಿಂದ ಧನಾತ್ಮಕತೆ ಮತ್ತು ಮಾನಸಿಕ ಶಾಂತಿ ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ. ಆದರೆ ಇಂದಿನ ದಿನಗಳಲ್ಲಿ ಅಗರಬತ್ತಿಗಳಿಗೆ ಕೂಡ ಸುವಾಸನೆ ಭರಿಸಲು ರಾಸಾಯನಿಕಗಳನ್ನು ಅಳವಡಿಸುವ ಕಾರಣದಿಂದಾಗಿ ಇದರ ಹೊಗೆಯು ಆರೋಗ್ಯಕ್ಕೆ ಹಾನಿ ಉಂಟು ಮಾಡುವುದು. ಈ ಬಗ್ಗೆ ಎಚ್ಚರ ವಹಿಸಿದರೆ ಒಳ್ಳೆಯದು. ಆದ್ದರಿಂದ ಆದಷ್ಟು ಪರಿಸರ ಸ್ನೇಹಿ ನೈಸರ್ಗಿಕ ಅಗರಬತ್ತಿಗಳನ್ನು ಬಳಸಿ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು
ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು
Live: ಆರ್​ಎಸ್​ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ ಪತ್ರಿಕಾಗೋಷ್ಠಿ ಲೈವ್
Live: ಆರ್​ಎಸ್​ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ ಪತ್ರಿಕಾಗೋಷ್ಠಿ ಲೈವ್
ಪರೀಕ್ಷೆ ಇಲ್ಲದಿರುವುದನ್ನು ಸಚಿವರಿಂದ ಖಚಿತಪಡಿಸಿಕೊಂಡಿದ್ದೆವು: ವಾಟಾಳ್
ಪರೀಕ್ಷೆ ಇಲ್ಲದಿರುವುದನ್ನು ಸಚಿವರಿಂದ ಖಚಿತಪಡಿಸಿಕೊಂಡಿದ್ದೆವು: ವಾಟಾಳ್
ಹನಿ ಟ್ರ್ಯಾಪ್ ಆರೋಪ ವಿಷಯದಲ್ಲಿ ಸಿಎಂ, ಹೆಚ್​ಎಂ ಪ್ರತಿಕ್ರಿಯೆ ನೀಡಿಲ್ಲ
ಹನಿ ಟ್ರ್ಯಾಪ್ ಆರೋಪ ವಿಷಯದಲ್ಲಿ ಸಿಎಂ, ಹೆಚ್​ಎಂ ಪ್ರತಿಕ್ರಿಯೆ ನೀಡಿಲ್ಲ
VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್
VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್
ಬೆಂಗಳೂರಲ್ಲಿ ಕರ್ನಾಟಕ ಬಂದ್​ಗೆ ಮಿಶ್ರ ಪ್ರತಿಕ್ರಿಯೆ
ಬೆಂಗಳೂರಲ್ಲಿ ಕರ್ನಾಟಕ ಬಂದ್​ಗೆ ಮಿಶ್ರ ಪ್ರತಿಕ್ರಿಯೆ
ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು
ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ