AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hindu Wedding Rituals: ಮದುವೆ ಸಮಯದಲ್ಲಿ ಅಲಂಕೃತ ತೆಂಗಿನಕಾಯಿ ಬಳಸುವುದು ಶುಭವೇ?

ಹಿಂದೂ ಧರ್ಮದ ಮದುವೆಗಳಲ್ಲಿ ನವದಂಪತಿಗಳ ಕೈಯಲ್ಲಿ ತೆಂಗಿನಕಾಯಿ ಇಡುವುದು ಪುರಾತನ ಸಂಪ್ರದಾಯ. ಸಾಮಾನ್ಯವಾಗಿ ತೆಂಗಿನಕಾಯಿಯ ಮೇಲೆ ಅರಿಶಿನ ಮತ್ತು ಕುಂಕುಮವನ್ನು ಹಚ್ಚಿ ಸಣ್ಣ ಹೂವಿನ ಹಾರದಿಂದ ಅಲಂಕರಿಸಿರುತ್ತಾರೆ. ಇತ್ತೀಚಿನ ದಿನಗಳಲ್ಲಿ ಫ್ಯಾಶನ್​​​ ಹೆಸರಿನಲ್ಲಿ ಸಂಪ್ರದಾಯ ಬದಲಾಗುತ್ತಿದೆ. ಆದರೆ ಅತಿಯಾದ ಅಲಂಕಾರ ಸರಿಯೇ? ಈ ರೀತಿಯ ಅಲಂಕಾರದಲ್ಲಿ ಹೆಚ್ಚು ಒತ್ತು ನೀಡಬೇಕೇ? ಎಂಬ ಹತ್ತು ಹಲವು ಪ್ರಶ್ನೆಗಳಿಗೆ ಉತ್ತರವನ್ನು ಇಲ್ಲಿ ತಿಳಿದುಕೊಳ್ಳಿ.

Hindu Wedding Rituals: ಮದುವೆ ಸಮಯದಲ್ಲಿ ಅಲಂಕೃತ ತೆಂಗಿನಕಾಯಿ ಬಳಸುವುದು ಶುಭವೇ?
Hindu Wedding Coconut
ಅಕ್ಷತಾ ವರ್ಕಾಡಿ
|

Updated on:Jul 09, 2025 | 11:25 AM

Share

ಹಿಂದೂ ಧರ್ಮದ ಮದುವೆಗಳಲ್ಲಿ, ನವಜೋಡಿಯ ಕೈಯಲ್ಲಿ ತೆಂಗಿನಕಾಯಿ ಇರುವುದನ್ನು ನೀವು ಗಮನಿಸಿರುತ್ತೀರಿ. ಆದರೆ ಇತ್ತೀಚಿನ ದಿನಗಳಲ್ಲಿ ಇದು ಸಂಪ್ರದಾಯಕ್ಕಿಂತ ಫ್ಯಾಶನ್​ ಆಗಿ ಬದಲಾಗುತ್ತಿದೆ. ತೆಂಗಿನ ಕಾಯಿಯನ್ನು ಬಳಸುವ ಬದಲಾಗಿ ತೆಂಗಿನ ಕಾಯಿಯನ್ನೇ ಹೋಲುವ ರೀತಿಯಲ್ಲಿ ಅಲಂಕೃತಗೊಳಿಸಿದ ವಸ್ತುಗಳನ್ನು ಬಳಸಲಾಗುತ್ತದೆ.ಇನ್ನೂ ಕೆಲವರು ತೆಂಗಿನಕಾಯಿಯನ್ನೇ ಬಗೆಬಗೆಯಾಗಿ ಮಣಿ, ಹೂವುಗಳಿಂದ ಅಲಂಕರಿಸುತ್ತಾರೆ. ಆದರೆ ಈ ರೀತಿ ಬಳಸುವುದು ಎಷ್ಟು ಸರಿ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ತೆಂಗಿನಕಾಯಿಯನ್ನು ತ್ರಿಮೂರ್ತಿಗಳ (ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ) ಸಂಕೇತವೆಂದು ಪರಿಗಣಿಸುವ ಸಂಪ್ರದಾಯ ಇದೆ. ತೆಂಗಿನಕಾಯಿಯ ಮೇಲಿನ ಮೂರು ಕಣ್ಣುಗಳನ್ನು ಈ ತ್ರಿಮೂರ್ತಿಗಳ ರೂಪವೆಂದು ಪರಿಗಣಿಸಲಾಗುತ್ತದೆ. ಇದು ಮದುವೆಗೆ ದೇವರು ಸಾಕ್ಷಿಯಾಗಿದ್ದಾನೆ ಮತ್ತು ದೇವರುಗಳ ಆಶೀರ್ವಾದವು ಹೊಸ ದಂಪತಿಗಳ ಮೇಲೆ ಇರುತ್ತದೆ ಎಂದು ಸೂಚಿಸುತ್ತದೆ. ಇದಲ್ಲದೇ ತೆಂಗಿನಕಾಯಿಯನ್ನು ಸಂಪತ್ತು ಮತ್ತು ಸಮೃದ್ಧಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ವಧು-ವರರ ಕೈಯಲ್ಲಿ ತೆಂಗಿನಕಾಯಿ ಇಡುವುದು ಅವರ ಜೀವನದಲ್ಲಿ ಸಮೃದ್ಧಿ ಮತ್ತು ಸಂಪತ್ತು ಯಾವಾಗಲೂ ಇರಲಿ ಎಂಬ ಹಾರೈಕೆಯಾಗಿದೆ.

ಇದನ್ನೂ ಓದಿ: ಮನೆಯಲ್ಲಿ ಮನಿ ಪ್ಲಾಂಟ್ ಈ ದಿಕ್ಕಿನಲ್ಲಿಡಿ; ಕೆಲವೇ ದಿನಗಳಲ್ಲಿ ಬದಲಾವಣೆ ಕಾಣುವಿರಿ

ಇದನ್ನೂ ಓದಿ
Image
ಈ ದೇವಾಲಯಕ್ಕೆ ಗಂಡ ಹೆಂಡತಿ ಒಟ್ಟಿಗೆ ಹೋಗುವಂತಿಲ್ಲ, ಯಾಕೆ ಗೊತ್ತಾ?
Image
ಈ ಪ್ರಾಣಿಗಳು ನಿಮ್ಮ ಕನಸಿನಲ್ಲಿ ಪದೇ ಪದೇ ಕಾಣಿಸಿಕೊಂಡರೆ ಅದೃಷ್ಟದ ಸೂಚನೆ
Image
ಕೇದಾರನಾಥ ಯಾತ್ರೆಯ ಸಮಯದಲ್ಲಿ ಈ ವಸ್ತುಗಳನ್ನು ತೆಗೆದುಕೊಂಡು ಹೋಗಲೇಬಾರದು
Image
ವಾರದಲ್ಲಿ ಈ ಎರಡು ದಿನ ಬಟ್ಟೆ ಒಗೆಯಲೇಬೇಡಿ; ಕಷ್ಟಗಳು ತಪ್ಪಿದಲ್ಲ!

ಅತಿಯಾದ ಅಲಂಕಾರ ಒಳ್ಳೆಯದೇ?

ಸಾಮಾನ್ಯ ಪದ್ಧತಿಯೆಂದರೆ ತಾಜಾ ತೆಂಗಿನಕಾಯಿಯ ಮೇಲೆ ಅರಿಶಿನ ಮತ್ತು ಕುಂಕುಮವನ್ನು ಹಚ್ಚಿ ಸಣ್ಣ ಹೂವಿನ ಹಾರದಿಂದ ಸುತ್ತುವುದು. ಆದರೆ ಇತ್ತೀಚಿನ ದಿನಗಳಲ್ಲಿ ಮದುವೆ ಸಮಾರಂಭಗಳಲ್ಲಿ ಎಲ್ಲವೂ ಸುಂದರವಾಗಿ ಕಾಣಬೇಕೆಂದು ಬಯಸುವವರು ತೆಂಗಿನಕಾಯಿಯನ್ನು ಹೂವುಗಳು, ರಿಬ್ಬನ್‌ಗಳು, ಸಣ್ಣ ಕನ್ನಡಿಗಳು ಅಥವಾ ಮಿನುಗುಗಳಿಂದ ಅಲಂಕರಿಸುತ್ತಾರೆ. ಆದಾಗ್ಯೂ, ಕೆಲವು ನಂಬಿಕೆಗಳ ಪ್ರಕಾರ ತೆಂಗಿನಕಾಯಿಯ ನೈಸರ್ಗಿಕ ಸ್ವರೂಪವನ್ನು ಬದಲಾಯಿಸಬಾರದು ಮತ್ತು ಯಾವುದೇ ಅಲಂಕಾರವಿಲ್ಲದೆ ಅದು ಶುಭಕರ ಎಂದು ಹೇಳಲಾಗುತ್ತದೆ. ತೆಂಗಿನಕಾಯಿ ದೈವತ್ವದ ಸಂಕೇತವಾಗಿರುವುದರಿಂದ, ಅದನ್ನು ಕೃತಕ ಅಲಂಕಾರಗಳಿಂದ ಮುಚ್ಚುವುದು ಸೂಕ್ತವಲ್ಲ ಎಂದು ನಂಬಲಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:17 am, Wed, 9 July 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!