AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Goravanahalli Lakshmi Temple: ಗೊರವನಹಳ್ಳಿಯಲ್ಲಿ ಮಹಾಲಕ್ಷ್ಮೀ ದೇವಿ ನೆಲೆಸಿದ್ದು ಹೇಗೆ? ಆಕೆಯ ಮಹಿಮೆ ಕಂಡ ಜನ ಚಿನ್ನಾಭರಣಗಳನ್ನು ಅರ್ಪಿಸುತ್ತಾರೆ

ಅನಾದಿ ಕಾಲದಿಂದಲೂ ತನ್ನ ಭಕ್ತರ ಕಷ್ಟಗಳನ್ನು ನಿವಾರಿಸುತ್ತಾ ಬಂದಿರೋ ಭಾಗ್ಯಲಕ್ಷ್ಮಿ, ಗೊರವನ ಹಳ್ಳಿಯಲ್ಲಿ ನೆಲೆಸುವ ಮೂಲಕ ಗೊರವನಹಳ್ಳಿಯನ್ನು ಪುಣ್ಯ ಭೂಮಿಯನ್ನಾಗಿ ಮಾಡಿದ ಮಹಾತಾಯಿ. ಗೊರವನ ಹಳ್ಳಿ ಮಹಾಲಕ್ಷ್ಮಿ ಅಂದ್ರೆ ಸಾಕು ಭಕ್ತಿ ಭಾವ ಉಕ್ಕಿ ಹರಿಯುತ್ತೆ.

Goravanahalli Lakshmi Temple: ಗೊರವನಹಳ್ಳಿಯಲ್ಲಿ ಮಹಾಲಕ್ಷ್ಮೀ ದೇವಿ ನೆಲೆಸಿದ್ದು ಹೇಗೆ? ಆಕೆಯ ಮಹಿಮೆ ಕಂಡ ಜನ ಚಿನ್ನಾಭರಣಗಳನ್ನು ಅರ್ಪಿಸುತ್ತಾರೆ
ಗೊರವನಹಳ್ಳಿಯಲ್ಲಿ ಮಹಾಲಕ್ಷ್ಮೀ ದೇವಿ
TV9 Web
| Updated By: ಆಯೇಷಾ ಬಾನು|

Updated on: May 24, 2022 | 7:00 AM

Share

ಕೇಳಿದ್ದನ್ನು ಕರುಣಿಸೋ ಧನಲಕ್ಷ್ಮಿ. ಸಂತಾನವನ್ನು ಕರುಣಿಸುವ ಸಂತಾನಲಕ್ಷ್ಮಿ ಈ ಗೊರವನಹಳ್ಳಿ ಶ್ರೀಲಕ್ಷ್ಮಿ ಮಹಾಲಕ್ಷ್ಮಿ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿರುವ ಗೊರವನಹಳ್ಳಿ ಲಕ್ಷ್ಮಿ ದೇವಸ್ಥಾನವು ಧಾರ್ಮಿಕ ಶ್ರದ್ದಾ ಕೇಂದ್ರವಾಗಿದೆ. ಈ ಗ್ರಾಮವು ತನ್ನಲ್ಲಿ ಇರುವ ಲಕ್ಷ್ಮಿ ದೇವಸ್ಥಾನದಿಂದಾಗಿ ಚಿರಪರಿಚಿತವಾಗಿದೆ. ಲಕ್ಷ್ಮಿ ಎಂದ ಕೂಡಲೇ ನೆನಪಿಗೆ ಬರುವುದು ಕೊಲ್ಹಾಪುರ ಲಕ್ಷ್ಮಿ. ಆದರೆ, ಗೊರವನಹಳ್ಳಿ ಕರ್ನಾಟಕದ ಕೊಲ್ಹಾಪುರವಾಗಿ ಬೆಳೆಯುತ್ತಿದೆ. ಲಕ್ಷ್ಮಿಗೆ ಮೀಸಲಾದ ಕರ್ನಾಟಕದ ಏಕೈಕ ಜನಪ್ರಿಯ ಕ್ಷೇತ್ರವೆನ್ನುವ ಹಿರಿಮೆಗೆ ಗೊರವನಹಳ್ಳಿ ಪಾತ್ರವಾಗಿದೆ.

ಅನಾದಿ ಕಾಲದಿಂದಲೂ ತನ್ನ ಭಕ್ತರ ಕಷ್ಟಗಳನ್ನು ನಿವಾರಿಸುತ್ತಾ ಬಂದಿರೋ ಭಾಗ್ಯಲಕ್ಷ್ಮಿ, ಗೊರವನ ಹಳ್ಳಿಯಲ್ಲಿ ನೆಲೆಸುವ ಮೂಲಕ ಗೊರವನಹಳ್ಳಿಯನ್ನು ಪುಣ್ಯ ಭೂಮಿಯನ್ನಾಗಿ ಮಾಡಿದ ಮಹಾತಾಯಿ. ಗೊರವನ ಹಳ್ಳಿ ಮಹಾಲಕ್ಷ್ಮಿ ಅಂದ್ರೆ ಸಾಕು ಭಕ್ತಿ ಭಾವ ಉಕ್ಕಿ ಹರಿಯುತ್ತೆ. ಅಮ್ಮಾ ತಾಯಿ. ನನ್ನ ಸಂಕಷ್ಟ ದೂರ ಮಾಡಮ್ಮ ಅಂತ ಬೇಡಿಕೊಂಡರೆ ಸಾಕು. ಈ ಮಹಾತಾಯಿ ಅವರನ್ನು ಉದ್ಧರಿಸ್ತಾಳೆ. ಎಲ್ಲರ ಸಂಕಷ್ಟಗಳನ್ನು ನಿವಾರಿಸ್ತಾಳೆ. ಕಲಿಯುಗದಲ್ಲೂ ಕಾಣಿಸಿಕೊಳ್ಳೋ ಈ ಕರುಣಾಮಯಿ, ಕಂಗಾಲದವರಿಗೆ ಕರುಣೆ ತೋರಿ ಕೃಪೆ ನೀಡುತ್ತಾಳೆ. ಇದೇ ಕಾರಣಕ್ಕೆ ಲಕ್ಷಾಂತರ ಮಂದಿ ಈ ಗೊರವನಹಳ್ಳಿಗೆ ಬಂದು ಮಹಾಲಕ್ಷ್ಮಿಯ ಪಾದಕ್ಕೆ ಬಿದ್ದು ಧನ್ಯರಾಗ್ತಾರೆ. ಈ ದೇವಸ್ಥಾನದಲ್ಲಿ ಪ್ರತಿ ಮಂಗಳವಾರ, ಶುಕ್ರವಾರ ಹಾಗು ಭಾನುವಾರಗಳಂದು ವಿಶೇಷ ಪೂಜೆ ಇರುತ್ತದೆ. ದೇವಾಲಯದ ವತಿಯಿಂದ ಇಲ್ಲಿ ಪ್ರತಿದಿನ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿದೆ. ದೇವಸ್ಥಾನದವರು ಇಲ್ಲಿ ಒಂದು ಕಲ್ಯಾಣ ಮಂಟಪವನ್ನು ನಿರ್ಮಿಸಿದ್ದಾರೆ. ಸಾರ್ವಜನಿಕರು ಅಗತ್ಯ ಹಣವನ್ನು ನೀಡಿ ಇದರ ಉಪಯೋಗ ಪಡೆದುಕೊಳ್ಳಬಹುದು. ಇದನ್ನೂ ಓದಿ: Common Superstitions: ನದಿಯಲ್ಲಿ ನಾಣ್ಯ ಹಾಕುವುದು, ಬಾಗಿಲಿಗೆ ನಿಂಬೆಕಾಯಿ- ಮೆಣಸಿನಕಾಯಿ ಕಟ್ಟುವುದು ಏಕೆ ಗೊತ್ತಾ!?

ಗೊರವನಹಳ್ಳಿಯಲ್ಲಿ ಮಹಾಲಕ್ಷ್ಮಿ ತಾಯಿ ನೆಲೆಸಿದ ಹಿಂದಿದೆ ರೋಚಕ ಕಥೆ ಮಹಾಲಕ್ಷ್ಮಿ ಈ ಗೊರವನಹಳ್ಳಿಯಲ್ಲಿ ಬಂದು ನೆಲೆಸಿದ್ದರ ಹಿಂದೆ ಒಂದು ರೋಚಕ ಕಥೆ ಇದೆ. ತುಮಕೂರಿನ ಕೊರಟಗೆರೆ ತಾಲೂಕಿನ ಗೊರವನಹಳ್ಳಿಯಲ್ಲಿ ಅಬ್ಬಯ ಅನ್ನೋರಿಗೆ ಒಂದು ಹೆಣ್ಣಿನ ಅಶರೀರವಾಣಿಯೊಂದು ಕೇಳಿಸಿತ್ತು. ನಾನು ನಿಮ್ಮ ಮನೆಗೆ ಬರುತ್ತೀನಿ. ಕರ್ಕೊಂಡು ಹೋಗು ಅಂತ, ಆ ಅಶರೀರವಾಣಿ ಹೇಳಿತ್ತು. ಆ ಆಸರೀರವಾಣಿ ಪದೇ ಪದೇ ಕೇಳಿಸ್ತಾ ಇತ್ತು. ಇದರಿಂದ ವಿಚಲಿತನಾದ ಅಬ್ಬಯ್ಯ, ತನಗಾದ ಅನುವವನ್ನು ತನ್ನ ತಾಯಿಗೆ ಹೇಳಿದರು. ಇನ್ನೊಮ್ಮೆ ಆ ಅಶರೀರವಾಣಿ ಕೇಳಿಸಿದರೆ, ನೀನು ದೆವ್ವವಾದ್ರೆ, ಅಲ್ಲೇ ಇರು. ದೇವರಾದ್ರೆ ಬಾ ಅಂತ ಹೇಳು ಅಂತ, ಅಬ್ಬಯ್ಯನ ತಾಯಿ ಹೇಳಿದರು. ತಾಯಿಯ ಮಾತಿಗೆ ಒಪ್ಪಿಕೊಂಡ ಅಬ್ಬಯ್ಯ ತನ್ನ ಕೆಲಸವನ್ನು ಮುಂದುವರೆಸಿದ. ಮತ್ತೆ ಅದೇ ಆಶರೀರವಾಣಿ ಕೇಳಿಸ್ತು ಅನ್ನಯ್ಯನಿಗೆ. ತಾಯಿ ಹೇಳಿದಂತೆ, ದೆವ್ವವಾದ್ರೆ ಬರಬೇಡ. ದೇವರಾದ್ರೆ ಬಾ ಅಂತ ಹೇಳಿದ. ಮಹಾಲಕ್ಷ್ಮಿ ಕೊಳದಿಂದ ಎದ್ದು ಬಂದು ಅಬ್ಬಯ್ಯನ ಮನೆ ಸೇರಿದಳು. ಅಂದಿನಿಂದ ಗೊರವನಹಳ್ಳಿ ಪವಿತ್ರ ಪುಣ್ಯ ಕ್ಷೇತ್ರವಾಗಿ ಪರಿವರ್ತನೆಯಾಯಿತು.

ಆಧ್ಯಾತ್ಮಕ್ಕೆ ಸಂಬಂಧಿಸಿ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

1925ರ ನಂತರದಲ್ಲಿ ಮಹಾಲಕ್ಷ್ಮಿಯ ದೇಗುಲ ಜೀರ್ಣೋದ್ಧಾರವಾಯಿತು. ಗ್ರಾಮಸ್ಥರ ಮನವೊಲಿಸಿ ಕಮಲಮ್ಮನವರು ದೇಗುಲದ ನಿರ್ಮಾಣ ಮಾಡಿದರು. ಇದರಿಂದಾಗಿ ಮಹಾಲಕ್ಷ್ಮಿ ಸಂತುಷ್ಠಳಾದಳು. ಬೇಡಿ ಬಂದ ಲಕ್ಷಾಂತರ ಮಂದಿ ಭಕ್ತರನ್ನು ಅನುಗ್ರಹಿಸುವ ಮೂಲಕ, ಎಲ್ಲೆಡೆ ಮನೆ ಮಾತಾದಳು. ಇದೇ ಕಾರಣಕ್ಕೆ, ಲಕ್ಷಾಂತರ ಮಂದಿ ಈ ಮಹಾಮಾತೆಯನ್ನು ನೋಡೋಕೆ, ಗೊರವನಹಳ್ಳಿಗೆ ಬರ್ತಾ ಇದ್ದಾರೆ. ಬಂದ ಭಕ್ತರು ಮಹಾಲಕ್ಷ್ಮಿಗೆ ತಮ್ಮ ಕೈಲಾದ ಕಾಣಿಕೆಯನ್ನು ನೀಡಿ ಹೋಗ್ತಾರೆ. ಚಿನ್ನಾಭರಣಗಳನ್ನು ದೇವಿಗೆ ಅರ್ಪಿಸಿ ಹೋಗ್ತಾರೆ. ಗ್ರಾಮದ ಕಮಲಮ್ಮ ಎಂಬುವವರು ಈ ದೇವಾಲಯವನ್ನು ನಿರ್ಮಿಸಿದರು ಹಾಗು ಅದರ ಉಸ್ತುವಾರಿ ವಹಿಸಿಕೊಂಡಿದ್ದರು. ಅವರ ಮರಣಾ ನಂತರ ಅವರ ಪುತ್ರರಾದ ಪ್ರಸನ್ನರವರು ಆಡಳಿತ ನೋಡಿಕೊಳ್ಳುತ್ತಿದ್ದಾರೆ.

ಗೊರವನಹಳ್ಳಿಗೆ ಹೋಗುವ ಮಾರ್ಗ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಿಂದ ಗೊರವನಹಳ್ಳಿ 10 ಕಿ.ಮೀ ದೂರದಲ್ಲಿದೆ. ಬೆಂಗಳೂರಿನಿಂದ ಗೊರವನಹಳ್ಳಿಗೆ ನೇರವಾಗಿ ಬಸ್ಸಿದೆ. ತುಮಕೂರಿಗೆ ಹೋಗಿ(ಬೆಂಗಳೂರಿನಿಂದ ತುಮಕೂರಿಗೆ 67 ಕಿಮಿ) ಅಲ್ಲಿಂದ ಕೊರಟಗೆರೆ ಮೂಲಕವೂ ತೆರಳಬಹುದು. ತುಮಕೂರು ಹಾಗೂ ಕೊರಟಗೆರೆ ನಡುವೆ 25 ಕಿಮಿ ದೂರವಿದೆ. ಗೊರವನಹಳ್ಳಿಯ ವಸತಿಗೃಹಗಳಲ್ಲೇ ಕಳೆಯಬಹುದು. ಗೊರವನಹಳ್ಳಿ ಪಕ್ಕದಲ್ಲಿಯೇ ಕಣ್ತುಂಬಲಿಕ್ಕೆ ತೀತಾ ಜಲಾಶಯವಿದೆ. ಜಯಮಂಗಲಿ ನದಿಯಿದೆ. ದೇವರಾಯನದುರ್ಗ(ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ), ವೀರಾಪುರ(ಶ್ರೀನಿವಾಸ) ದೇವಾಲಯಗಳಿವೆ. ಸಮೀಪದಲ್ಲಿ ಸಿದ್ಧಗಂಗೆಯಿದೆ. ಶಾಂತಲೆಯನ್ನು ನೆನಪಿಸುವ ಶಿವಗಂಗೆಯಿದೆ. ಸಿದ್ದರು ಬದುಕಿದ ಸಿದ್ಧರ ಬೆಟ್ಟವಿದೆ.

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ