Sign In

By signing in or creating an account, you agree with Associated Broadcasting Company's Terms & Conditions and Privacy Policy.

Holi 2024: ಹೋಳಿ ಹಬ್ಬದಂದು ಈ ದೇವರನ್ನು ಪೂಜಿಸಿ; ಜೀವನದಲ್ಲಿ ಸದಾ ಸಂತೋಷ ನೆಲೆಸಿರುತ್ತದೆ

ಈ ವರ್ಷ ಮಾರ್ಚ್​​​​ 25ರಂದು ಹೋಳಿ ಹಬ್ಬವನ್ನು ಆಚರಿಸಲಾಗುತ್ತದೆ. ರಾಧಾ-ಕೃಷ್ಣನ ಆರಾಧನೆ ಇಲ್ಲದೆ ಹೋಳಿ ಹಬ್ಬವನ್ನು ಅಪೂರ್ಣವೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಈ ವಿಶೇಷ ದಿನದಂದು ರಾಧಾ-ಕೃಷ್ಣನ ಜೊತೆಗೆ ಯಾವೆಲ್ಲಾ ದೇವರುಗಳನ್ನು ಪೂಜಿಸುವುದರಿಂದ ನಿಮ್ಮ ಜೀವನದಲ್ಲಿ ಸದಾ ಸಂತೋಷ ನೆಲೆಸಿರುತ್ತದೆ ಎಂಬುದನ್ನು ತಿಳಿದುಕೊಳ್ಳಿ.

Holi 2024: ಹೋಳಿ ಹಬ್ಬದಂದು ಈ ದೇವರನ್ನು ಪೂಜಿಸಿ; ಜೀವನದಲ್ಲಿ ಸದಾ ಸಂತೋಷ ನೆಲೆಸಿರುತ್ತದೆ
Holi 2024Image Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on: Mar 12, 2024 | 1:00 PM

ಹೋಳಿ ಹಬ್ಬ ಸಮೀಪಿಸುತ್ತಿದೆ. ಈ ಬಣ್ಣಗಳ ಹಬ್ಬವನ್ನು ಭಾರತದ ವಿವಿಧ ಭಾಗಗಳಲ್ಲಿ ವಿವಿಧ ರೀತಿಯಲ್ಲಿ ಆಚರಿಸಲಾಗುತ್ತದೆ. ಇತರ ಹಬ್ಬಗಳಂತೆಯೇ ಹೋಳಿಯೂ ಸಹ ದೇವತೆಗಳಿಗೆ ಸಮರ್ಪಿತವಾಗಿದೆ.ಹೋಳಿ ಹಬ್ಬದಂದು ಈ ದೇವತೆಗಳನ್ನು ಪೂಜಿಸುವುದರಿಂದ ವಿಶೇಷ ಫಲ ನಿಮ್ಮದಾಗುತ್ತದೆ ಎಂಬ ನಂಬಿಕೆಯಿದೆ. ಈ ವರ್ಷ ಮಾರ್ಚ್​​​​ 25ರಂದು ಹೋಳಿ ಹಬ್ಬವನ್ನು ಆಚರಿಸಲಾಗುತ್ತದೆ. ಆದ್ದರಿಂದ ಈ ವಿಶೇಷ ದಿನದಲ್ಲಿ ಈ ದೇವರುಗಳನ್ನು ಪೂಜಿಸುವುದರಿಂದ ನಿಮ್ಮ ಜೀವನದಲ್ಲಿ ಸದಾ ಸಂತೋಷ ನೆಲೆಸಿರುತ್ತದೆ.

ಶಿವನ ಆರಾಧನೆ:

ಹೋಳಿ ಹಬ್ಬದ ಪ್ರಯುಕ್ತ ಕಾಶಿಯ ಪುರಾತನ ದೇಗುಲದಲ್ಲಿ ಭಕ್ತರು ಬಣ್ಣ ಮತ್ತು ಭಸ್ಮದೊಂದಿಗೆ ಹೋಳಿ ಆಚರಿಸುತ್ತಾರೆ. ಈ ಸಂಪ್ರದಾಯವನ್ನು ‘ಮಸಣ ಹೋಳಿ’ ಎಂದೂ ಕರೆಯುತ್ತಾರೆ. ಶಿವನೇ ಇಲ್ಲಿ ಹೋಳಿ ಆಡಲು ಬರುತ್ತಾನೆ ಎಂಬ ನಂಬಿಕೆ ಇದೆ. ಅದಕ್ಕಾಗಿಯೇ ಹೋಳಿಯಂದು ಶಿವನನ್ನು ಪೂಜಿಸುವುದರಿಂದ ಮನೆಯಲ್ಲಿನ ಎಲ್ಲಾ ಸಮಸ್ಯೆಗಳು ದೂರವಾಗಿ ಸಂತೋಷ, ಸಂಪತ್ತು ನೆಲೆಸುತ್ತದೆ ಎಂಬ ನಂಬಿಕೆ ಇದೆ.

ಹನುಮಂತನನ್ನು ಪೂಜಿಸಿ:

ಹೋಳಿ ಹಬ್ಬದಂದು ಹನುಮಂತನನ್ನು ಪೂಜಿಸುವುದು ವಿಶೇಷ ಎಂದು ನಂಬಲಾಗಿದೆ. ಹೋಳಿ ಹಬ್ಬದಂದು ಹನುಮಂತನನ್ನು ಪೂಜಿಸುವುದು ಭಕ್ತರ ಜೀವನದಲ್ಲಿ ಸಂತೋಷವನ್ನು ತರುತ್ತದೆ ಎಂದು ನಂಬಲಾಗಿದೆ.

ವಿಷ್ಣು ಪೂಜೆ:

ಹೋಳಿ ಹಬ್ಬವು ಕೆಡುಕಿನ ಮೇಲೆ ಒಳಿತಿನ ವಿಜಯವನ್ನು ಸಂಕೇತಿಸುತ್ತದೆ. ಹೋಳಿಗೆ ಒಂದು ದಿನ ಮೊದಲು ಹೋಲಿಕಾವನ್ನು ಸುಡಲಾಗುತ್ತದೆ. ಪುರಾಣಗಳ ಪ್ರಕಾರ, ಹೋಳಿ ಹಬ್ಬವು ವಿಷ್ಣುವಿನ ನರಸಿಂಹ ಅವತಾರದೊಂದಿಗೆ ಸಂಬಂಧಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಹೋಳಿಯಂದು ವಿಷ್ಣುವನ್ನು ಪೂಜಿಸುವುದು ಬಹಳ ಫಲಪ್ರದವೆಂದು ಪರಿಗಣಿಸಲಾಗಿದೆ.

ಇದನ್ನೂ ಓದಿ: ಹೋಳಿ ಹಬ್ಬದಂದು ಈ 5 ವಸ್ತುಗಳನ್ನು ಮನೆಗೆ ತನ್ನಿ, ಅದೃಷ್ಟವೇ ಬದಲಾಗುತ್ತೆ!

ಲಕ್ಷ್ಮಿ ದೇವಿ:

ಹೋಳಿ ಹಬ್ಬದಂದು ಲಕ್ಷ್ಮಿ ದೇವಿಯ ಆರಾಧನೆಗೂ ವಿಶೇಷ ಮಹತ್ವವಿದೆ. ಹೋಳಿ ಹಬ್ಬದಂದು ಲಕ್ಷ್ಮಿ ದೇವಿಯನ್ನು ಪೂಜಿಸುವುದರಿಂದ ಮನೆಯಲ್ಲಿ ಸಂತೋಷ ನೆಲೆಸಿ, ಆರ್ಥಿಕ ಸ್ಥಿತಿಯೂ ಸುಧಾರಣೆಯಾಗುತ್ತದೆ ಎಂಬ ನಂಬಿಕೆಯಿದೆ.

ರಾಧಾ-ಕೃಷ್ಣ:

ರಾಧಾ-ಕೃಷ್ಣನ ಆರಾಧನೆ ಇಲ್ಲದೆ ಹೋಳಿ ಹಬ್ಬವನ್ನು ಅಪೂರ್ಣವೆಂದು ಪರಿಗಣಿಸಲಾಗುತ್ತದೆ. ಹೋಳಿ ಸಂದರ್ಭದಲ್ಲಿ, ಮಥುರಾ-ಬೃಂದಾವನದಲ್ಲಿ ಹೋಳಿಯನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಇಲ್ಲಿ ಹೋಳಿಯನ್ನು ಕಣ್ತುಂಬಿಕೊಳ್ಳಲು ಹೊರದೇಶಗಳಿಂದಲೂ ಜನರು ಮಥುರಾ ತಲುಪುತ್ತಾರೆ. ಹೋಳಿಯಂದು ರಾಧಾ-ಕೃಷ್ಣರನ್ನು ಪೂಜಿಸುವುದರಿಂದ ಮನೆಯಲ್ಲಿ ಶಾಂತಿ ಮತ್ತು ನೆಮ್ಮದಿ ಸಿಗುತ್ತದೆ ಎಂದು ನಂಬಲಾಗಿದೆ. ಇದಲ್ಲದೆ, ಕುಟುಂಬದಲ್ಲಿ ಪ್ರೀತಿ ಹೆಚ್ಚಾಗುತ್ತದೆ. ದಾಂಪತ್ಯ ಜೀವನದಲ್ಲೂ ಸುಖವಿದೆ. ಇಂತಹ ಪರಿಸ್ಥಿತಿಯಲ್ಲಿ ಹೋಳಿಯಂದು ಶ್ರೀ ರಾಧಾ ಕೃಷ್ಣನನ್ನು ಖಂಡಿತ ಪೂಜಿಸಿ. ಇದು ಜೀವನದಲ್ಲಿ ಪ್ರೀತಿಯನ್ನು ತರುವುದು ಮಾತ್ರವಲ್ಲದೆ ಪ್ರೀತಿಯ ಸಂಬಂಧವನ್ನು ಗಟ್ಟಿಯಾಗಿ ಇಡುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ
ಜೀಪ್​ ಅಡ್ಡಗಟ್ಟಿದ ಹುಲಿರಾಯ: ಆತಂಕದಿಂದ ಚಿರಾಡಿದ ಪ್ರವಾಸಿಗರು!
ಜೀಪ್​ ಅಡ್ಡಗಟ್ಟಿದ ಹುಲಿರಾಯ: ಆತಂಕದಿಂದ ಚಿರಾಡಿದ ಪ್ರವಾಸಿಗರು!
ಕಾರಿನ ಮೇಲೆ ಕಾಡಾನೆ ದಾಳಿ ಯತ್ನ, ಎದೆ ಝಲ್​ ಎನ್ನಿಸುವ ವಿಡಿಯೋ ವೈರಲ್
ಕಾರಿನ ಮೇಲೆ ಕಾಡಾನೆ ದಾಳಿ ಯತ್ನ, ಎದೆ ಝಲ್​ ಎನ್ನಿಸುವ ವಿಡಿಯೋ ವೈರಲ್
ಮದುವೆ ಯಾಕಾಗಬೇಕು? ರವಿಚಂದ್ರನ್ ಮಾತಿಗೆ ಚಪ್ಪಾಳೆಯ ಸುರಿಮಳೆ
ಮದುವೆ ಯಾಕಾಗಬೇಕು? ರವಿಚಂದ್ರನ್ ಮಾತಿಗೆ ಚಪ್ಪಾಳೆಯ ಸುರಿಮಳೆ