AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Holi 2024: ಹೋಳಿ ದಿನ ಬಿಳಿ ಬಟ್ಟೆಗಳನ್ನು ಏಕೆ ಧರಿಸಬೇಕು? ಇಲ್ಲಿದೆ ಸೂಕ್ತ ಕಾರಣ

 ಇನ್ನೇನು ಹೋಳಿ ಹಬ್ಬಕ್ಕೆ ಕೆಲವೇ ದಿನಗಳು ಉಳಿದಿವೆ. ಬಣ್ಣಗಳ ಈ ಹಬ್ಬವನ್ನು ಮಕ್ಕಳಿಂದ ಹಿಡಿದು ವಯಸ್ಕರ ವರೆಗೆ ಎಲ್ಲರೂ ಇಷ್ಟಪಡುತ್ತಾರೆ. ಹೋಳಿಯಲ್ಲಿ ಬಣ್ಣಗಳೊಂದಿಗೆ ಆಡಲು ಬಿಳಿ ಬಣ್ಣದ ಬಟ್ಟೆಗಳನ್ನು ಧರಿಸಲಾಗುತ್ತದೆ, ಹಾಗಾದರೆ ಓಕುಳಿ ಆಡುವಾಗ ಏಕೆ ಬಿಳಿ ಬಣ್ಣದ ಬಟ್ಟೆಗಳನ್ನೇ ತೊಡಬೇಕು? ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

Holi 2024: ಹೋಳಿ ದಿನ ಬಿಳಿ ಬಟ್ಟೆಗಳನ್ನು ಏಕೆ ಧರಿಸಬೇಕು? ಇಲ್ಲಿದೆ ಸೂಕ್ತ ಕಾರಣ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on:Mar 20, 2024 | 10:14 AM

Share

ಭಾರತದ ದೊಡ್ಡ ಹಬ್ಬಗಳಲ್ಲಿ ಹೋಳಿಯೂ ಒಂದಾಗಿದೆ. ಇನ್ನೇನು ಹೋಳಿ ಹಬ್ಬಕ್ಕೆ ಕೆಲವೇ ದಿನಗಳು ಉಳಿದಿವೆ. ಬಣ್ಣಗಳ ಈ ಹಬ್ಬವನ್ನು ಮಕ್ಕಳಿಂದ ಹಿಡಿದು ವಯಸ್ಕರ ವರೆಗೆ ಎಲ್ಲರೂ ಇಷ್ಟಪಡುತ್ತಾರೆ. ಈ ಓಕುಳಿ ಹಬ್ಬವು ಬಣ್ಣ, ಸಂತೋಷ, ಉತ್ಸಾಹಗಳಿಂದ ಕೂಡಿರುತ್ತದೆ. ಅಲ್ಲದೆ ಹೋಳಿ ಹಬ್ಬವನ್ನು ಪರಸ್ಪರ ಪ್ರೀತಿ ಹಂಚುವ ಹಬ್ಬವೆಂದು ಪರಿಗಣಿಸಲಾಗುತ್ತದೆ. ಹೋಳಿ ವಿವಿಧ ಬಣ್ಣಗಳ ಹಬ್ಬವಾಗಿದ್ದರೂ ಕೂಡ ಓಕುಳಿ ಆಡುವಾಗ ಬಿಳಿ ಬಟ್ಟೆಗಳನ್ನು ಧರಿಸುವ ಸಂಪ್ರದಾಯವಿದೆ. ಆದರೆ ಈ ದಿನ ಇದೇ ಬಣ್ಣದ ಬಟ್ಟೆ ಧರಿಸಬೇಕು ಎಂಬುದರ ಹಿಂದೆ ಕೆಲವು ಕಾರಣಗಳಿವೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಹೋಳಿ ಹಬ್ಬದಂದು ನಾವು ಬಿಳಿ ಬಟ್ಟೆಗಳನ್ನು ಏಕೆ ಧರಿಸಬೇಕು?

ಹೋಳಿ ಅಥವಾ ಓಕುಳಿ ಆಡುವಾಗ ಬಿಳಿ ಬಣ್ಣದ ಬಟ್ಟೆಗಳನ್ನು ಧರಿಸಲು ಮುಖ್ಯ ಕಾರಣವೆಂದರೆ ಬಿಳಿ ಬಟ್ಟೆಗಳ ಮೇಲೆ ಯಾವುದೇ ಬಣ್ಣ ಬಿದ್ದರು ಕೂಡ ತುಂಬಾ ಸುಂದರವಾಗಿ ಕಾಣುತ್ತದೆ. ಅದು ಬಿಳಿಯ ಬಣ್ಣದ ಜೊತೆಗೆ ಬಹುಬೇಗ ಹೊಂದಿಕೊಳ್ಳುತ್ತದೆ. ಇದು ಎಲ್ಲಾ ಬಣ್ಣಗಳಲ್ಲಿಯೂ ಆಗುವುದಿಲ್ಲ. ಇದರಿಂದಾಗಿ ನಿಮ್ಮ ಬಟ್ಟೆಯ ಜೊತೆಗೆ ನೀವು ಕೂಡ ಸುಂದರವಾಗಿ ಕಾಣುತ್ತೀರಿ. ಅದೂ ಅಲ್ಲದೆ ನೀವು ಎಷ್ಟು ಹೋಳಿ ಆಡಿದ್ದೀರಾ ಎಂದು ಕೂಡ ಈ ಬಣ್ಣ ಹೇಳುತ್ತವೆ. ಏಕೆಂದರೆ ಜಾಸ್ತಿ ಓಕುಳಿ ಆಡಿದ್ದರೆ ಬಿಳಿ ಬಟ್ಟೆಗಳು ಸಂಪೂರ್ಣವಾಗಿ ವಿಭಿನ್ನ ಬಣ್ಣಗಳಿಂದ ಕೂಡಿರುತ್ತವೆ.

ತಂಪಿನ ಭಾವನೆಯನ್ನು ನೀಡುತ್ತದೆ

ಹೋಳಿ ಹಬ್ಬವು ಬೇಸಿಗೆ ಕಾಲದಲ್ಲಿ ಬರುವುದರಿಂದ ಬಿಳಿ ಬಣ್ಣದ ಬಟ್ಟೆಗಳು ಪರಿಸರದಿಂದ ಕಡಿಮೆ ಶಾಖವನ್ನು ಹೀರಿಕೊಳ್ಳುತ್ತದೆ, ಹಾಗಾಗಿ ಹೆಚ್ಚು ಬಿಸಿಯ ಅನುಭವ ಆಗುವುದಿಲ್ಲ. ಈ ಹಬ್ಬದಂದು ದಿನ ಪೂರ್ತಿ ಬಿಸಿಲಿನಲ್ಲಿ ಬಣ್ಣಗಳೊಂದಿಗೆ ಆಟವಾಡಿದರೂ ಕೂಡ ನಿಮಗೆ ಶಾಖದ ಅನುಭವ ಆಗುವುದಿಲ್ಲ. ಹಾಗಾಗಿ ಹಿಂದಿನಿಂದಲೂ ಬಿಳಿ ಬಣ್ಣದ ಬಟ್ಟೆಯನ್ನು ಹೋಳಿ ಹಬ್ಬದ ದಿನ ತಪ್ಪದೆ ಧರಿಸುವುದು ಸೂಕ್ತ ಎನ್ನಲಾಗುತ್ತದೆ.

ಇದನ್ನೂ ಓದಿ: ಈ ವಸ್ತುಗಳನ್ನು ಮಲಗುವ ಕೋಣೆಯಲ್ಲಿ ಇಟ್ಟುಕೊಳ್ಳಬೇಡಿ!

ಶಾಂತಿಯ ಸಂಕೇತ

ಹೋಳಿ ಪ್ರೀತಿ ಹಂಚುವ ಹಬ್ಬವಾಗಿದೆ. ಹೋಳಿಯ ದಿನ ಜನರು ಪರಸ್ಪರ ದ್ವೇಷವನ್ನು ಮರೆತು ಪ್ರೀತಿಯಿಂದ, ಸಂತೋಷ ಹಂಚುತ್ತಾ ಈ ಹಬ್ಬವನ್ನು ಒಟ್ಟಿಗೆ ಆಚರಿಸುತ್ತಾರೆ. ಅಲ್ಲದೆ ಬಿಳಿ ಬಣ್ಣವನ್ನು ಶಾಂತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಈ ಕಾರಣಕ್ಕಾಗಿ, ಜನರು ಹೋಳಿ ಆಡುವಾಗ ಬಿಳಿ ಬಟ್ಟೆಗಳನ್ನು ಧರಿಸುತ್ತಾರೆ.

ಹೋಳಿ ಹಬ್ಬದಂದು ಬಿಳಿ ಬಟ್ಟೆಗಳನ್ನು ಧರಿಸುವುದರ ಹಿಂದೆ ಮತ್ತೊಂದು ಕಾರಣವಿದೆ. ಬಿಳಿ ಬಣ್ಣವನ್ನು ಸಕಾರಾತ್ಮಕ ಶಕ್ತಿಯನ್ನು ಬೇಗ ಸೆಳೆಯುವ ಮತ್ತು ಶಾಂತಿಯ ಸಂದೇಶವನ್ನು ನೀಡುವ ಬಣ್ಣವೆಂದು ಪರಿಗಣಿಸಲಾಗುತ್ತದೆ. ಜೊತೆಗೆ ಹೋಳಿ ಹಬ್ಬವು ಕೂಡ ಶಾಂತಿಯ ಸಂದೇಶವನ್ನು ನೀಡುವುದರಿಂದ ಈ ಹಬ್ಬದಲ್ಲಿ ತಪ್ಪದೆ ಬಿಳಿ ಬಣ್ಣದ ಬಟ್ಟೆಗಳನ್ನು ಧರಿಸುವ ಪ್ರವೃತ್ತಿ ಇದೆ. ಬಿಳಿ ಬಣ್ಣದ ಬಟ್ಟೆಗಳನ್ನು ಧರಿಸುವುದು, ಸಂಪ್ರದಾಯದ ಹೊರತಾಗಿ ನಿಮ್ಮ ಆರೋಗ್ಯದ ದೃಷ್ಟಿಯಿಂದಲೂ ಕೂಡ ತುಂಬಾ ಒಳ್ಳೆಯ ಆಯ್ಕೆಯಾಗಿದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:52 am, Wed, 20 March 24

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ