AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shravana Maasa: ಮನೆಯಲ್ಲಿ ಶಿವಲಿಂಗ ಇಟ್ಟು ಪೂಜೆ ಮಾಡ್ತಾ ಇದ್ದೀರಾ? ಈ ನಿಯಮಗಳ ಬಗ್ಗೆ ನಿಮಗೆ ತಿಳಿದಿರಲಿ

ಶ್ರಾವಣ ಮಾಸದಲ್ಲಿ ಮನೆಯಲ್ಲಿ ಶಿವಲಿಂಗ ಪೂಜಿಸುವಾಗ ಕೆಲವು ನಿಯಮಗಳನ್ನು ಪಾಲಿಸುವುದು ಮುಖ್ಯ. ಶಿವಲಿಂಗದ ಗಾತ್ರ ಹೆಬ್ಬೆರಳಿಗಿಂತ ದೊಡ್ಡದಿರಬಾರದು, ಅಭಿಷೇಕ ಉತ್ತರ ದಿಕ್ಕಿನತ್ತ ಮುಖ ಮಾಡಿ ಮಾಡಬೇಕು, ಶಿವಲಿಂಗ ಯಾವಾಗಲೂ ಆರ್ದ್ರವಾಗಿರಬೇಕು, ತಾಮ್ರ ಅಥವಾ ಹಿತ್ತಾಳೆಯ ಪಾತ್ರೆಗಳನ್ನು ಬಳಸಬೇಕು, ಶಿವ ಪರಿವಾರವನ್ನು ಇಟ್ಟುಕೊಳ್ಳಬೇಕು ಮತ್ತು ತುಳಸಿ ಅರ್ಪಿಸಬಾರದು. ಈ ನಿಯಮಗಳನ್ನು ಪಾಲಿಸಿ ಶ್ರದ್ಧೆಯಿಂದ ಪೂಜೆ ಮಾಡಿ.

Shravana Maasa: ಮನೆಯಲ್ಲಿ ಶಿವಲಿಂಗ ಇಟ್ಟು ಪೂಜೆ ಮಾಡ್ತಾ ಇದ್ದೀರಾ? ಈ ನಿಯಮಗಳ ಬಗ್ಗೆ ನಿಮಗೆ ತಿಳಿದಿರಲಿ
ಶಿವನ ಆರಾಧನೆ
ಅಕ್ಷತಾ ವರ್ಕಾಡಿ
|

Updated on: Jul 22, 2025 | 12:22 PM

Share

ಶ್ರಾವಣ ಮಾಸದಲ್ಲಿ ಶಿವನ ಆರಾಧನೆಗೆ ವಿಶೇಷ ಮಹತ್ವವಿದೆ. ಸಾಕಷ್ಟು ಜನರು ಶಿವ ದೇವಾಲಯಕ್ಕೆ ಭೇಟಿ ನೀಡುವ ಬದಲಾಗಿ ಮನೆಯಲ್ಲೇ ಶಿವಲಿಂಗವಿಟ್ಟು ಪೂಜೆ ಸಲ್ಲಿಸುತ್ತಾರೆ. ಆದರೆ ಮನೆಯಲ್ಲೇ ಶಿವನನ್ನು ಪೂಜಿಸುತ್ತಿದ್ದರೆ ಕೆಲವೊಂದು ನಿಯಮಗಳನ್ನು ಅನುಸರಿಸುವುದು ಅತ್ಯಂತ ಅಗತ್ಯ. ಆ ನಿಯಮಗಳು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಶಿವಲಿಂಗವು ಹೆಬ್ಬೆರಳಿಗಿಂತ ದೊಡ್ಡದಾಗಿರಬಾರದು:

ಮನೆಯಲ್ಲಿ ನೀವು ಶಿವಲಿಂಗವಿಟ್ಟು ಪೂಜೆ ಮಾಡುತ್ತೀರಿ ಎಂದಾದರೆ ಮೊದಲು ಶಿವಲಿಂಗದ ಗಾತ್ರದ ಬಗ್ಗೆ ತಿಳಿದುಕೊಳ್ಳುವುದು ತುಂಬಾ ಅಗತ್ಯವಾಗಿರುತ್ತದೆ. ಮನೆಯಲ್ಲಿ ಪ್ರತಿಷ್ಠಾಪಿಸುವ ಶಿವಲಿಂಗದ ಗಾತ್ರವು ಹೆಬ್ಬೆರಳಿಗಿಂತ ದೊಡ್ಡದಾಗಿರಬಾರದು. ಈ ಬಗ್ಗೆ ಶಿವ ಪುರಾಣದಲ್ಲಿಯೂ ಉಲ್ಲೇಖಗಳಿವೆ.

ಈ ದಿಕ್ಕಿಗೆ ಮುಖ ಮಾಡಿ ಅಭಿಷೇಕ ಮಾಡಿ:

ಶಿವಲಿಂಗಕ್ಕೆ ಅಭಿಷೇಕ ಮಾಡುವಾಗ, ನಿಮ್ಮ ಮುಖವು ಯಾವಾಗಲೂ ಉತ್ತರ ದಿಕ್ಕಿನ ಕಡೆಗೆ ಇರಬೇಕು. ದಕ್ಷಿಣ ಅಥವಾ ಪೂರ್ವ ದಿಕ್ಕಿಗೆ ಮುಖ ಮಾಡಿ ಅಭಿಷೇಕ ಮಾಡುವುದು ಶುಭವೆಂದು ಪರಿಗಣಿಸಲಾಗುವುದಿಲ್ಲ. ಆದ್ದರಿಂದ ಯಾವಾಗಲೂ ನಿಮ್ಮ ಮುಖ ಉತ್ತರ ದಿಕ್ಕಿನ ಕಡೆಗೆ ಇರಲಿ.

ಶಿವಲಿಂಗದ ಮೇಲೆ ಸದಾ ನೀರು ಹರಿಯುತ್ತಿರಲಿ:

ನಿಮ್ಮ ಮನೆಯಲ್ಲಿ ಶಿವಲಿಂಗವನ್ನು ಸ್ಥಾಪಿಸಿದ್ದರೆ, ಅದು ಯಾವತ್ತೂ ಒಣಗಿರಬಾರದು ಎಂಬುದನ್ನು ನೆನಪಿನಲ್ಲಿಡಿ. ಪ್ರತಿದಿನ ಶಿವಲಿಂಗದ ಮೇಲೆ ನೀರನ್ನು ಅರ್ಪಿಸಬೇಕು ಮತ್ತು ಜಲ ಅಭಿಷೇಕಕ್ಕಾಗಿ ನೀವು ಅದರ ಮೇಲೆ ಜಲಧಾರಿಯನ್ನು ಹಾಕಬೇಕು. ಮನೆಯಲ್ಲಿ ಇಟ್ಟಿರುವ ಶಿವಲಿಂಗವನ್ನು ಪ್ರತಿದಿನ ಪೂಜಿಸಬೇಕು ಮತ್ತು ಅದಕ್ಕೆ ನೀರನ್ನು ಪ್ರತಿದಿನ ಅರ್ಪಿಸಬೇಕು.

ಇದನ್ನೂ ಓದಿ: ಮನೆಯಲ್ಲಿ ನಟರಾಜನ ಪ್ರತಿಮೆ ಇಡಬಾರದು ಎಂದು ಹೇಳುವುದೇಕೆ?

ಈ ಪಾತ್ರೆಗಳನ್ನು ಬಳಸಬೇಡಿ:

ನಿಮ್ಮ ಮನೆಯಲ್ಲಿ ಶಿವಲಿಂಗವನ್ನು ಸ್ಥಾಪಿಸಿದ್ದರೆ, ಪ್ಲಾಸ್ಟಿಕ್ ಅಥವಾ ಉಕ್ಕಿನ ಪಾತ್ರೆಯಿಂದ ಜಲಭಿಷೇಕ ಮಾಡಬಾರದು. ಯಾವಾಗಲೂ ತಾಮ್ರ ಅಥವಾ ಹಿತ್ತಾಳೆಯ ಪಾತ್ರೆಯಿಂದ ನೀರನ್ನು ಅರ್ಪಿಸಿ.

ಶಿವ ಕುಟುಂಬವನ್ನೂ ಇಟ್ಟುಕೊಳ್ಳಿ:

ನೀವು ಮನೆಯಲ್ಲಿ ಶಿವಲಿಂಗವನ್ನು ಸ್ಥಾಪಿಸಿದ್ದರೆ, ಅಲ್ಲಿ ಶಿವ ಪರಿವಾರವೂ ಇರುವುದು ಅತ್ಯಂತ ಅಗತ್ಯವಾಗಿರುತ್ತದೆ. ಆದ್ದರಿಂದ ನಿಮ್ಮ ದೇವರ ಕೋಣೆಯಲ್ಲಿ ಗಣೇಶ ಮತ್ತು ಮಾತಾ ಗೌರಿ ಇರುವುದು ಸಹ ಬಹಳ ಮುಖ್ಯ.

ತುಳಸಿಯನ್ನು ಅರ್ಪಿಸಬೇಡಿ:

ನೆನಪಿಡಿ, ನೀವು ಮನೆಯಲ್ಲಿ ಶಿವನನ್ನು ಪೂಜಿಸಿದರೆ, ತಪ್ಪಾಗಿ ಸಹ ಶಿವನಿಗೆ ತುಳಸಿಯನ್ನು ಅರ್ಪಿಸಬೇಡಿ, ಶಿವನ ಪೂಜೆಯಲ್ಲಿ ತುಳಸಿಯನ್ನು ಅರ್ಪಿಸುವುದನ್ನು ನಿಷೇಧಿಸಲಾಗಿದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ