AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈಲಾಸಕ್ಕೆ ಬಂದ ವಿಷ್ಣುವಿಗೆ ಪರಶಿವನಿಂದಲೇ ನಾಮಕರಣ, ತಿಮ್ಮಪ್ಪನಿಗೆ ಗೋವಿಂದ ಗೋವಿಂದ ಎನ್ನಲು ಕಾರಣವೇನು?

ಕೈಲಾಸಕ್ಕೆ ಬಂದಂತ ವಿಷ್ಣುವಿಗೆ ಪರಶಿವನೆ ಗೋವಿಂದ ಎಂದು ನಾಮಕರಣ ಮಾಡಿದರು. ಹೀಗಾಗಿ ತಿರುಪತಿ ತಿಮ್ಮಪ್ಪನ ಪಾದಕ್ಕೆ ಬಿದ್ದು ಇಡೀ ಜಗತ್ತು, ದೇವಾನುದೇವತೆಗಳು ಗೋವಿಂದ ಗೋವಿಂದ ಎಂದು ಕೊಂಡಾಡುತ್ತಿದ್ದಾರೆ. ಇದು ಗೋವಿಂದ ನಾಮದ ಹಿನ್ನೆಲೆ.

ಕೈಲಾಸಕ್ಕೆ ಬಂದ ವಿಷ್ಣುವಿಗೆ ಪರಶಿವನಿಂದಲೇ ನಾಮಕರಣ, ತಿಮ್ಮಪ್ಪನಿಗೆ ಗೋವಿಂದ ಗೋವಿಂದ ಎನ್ನಲು ಕಾರಣವೇನು?
ಗೋವಿಂದ
TV9 Web
| Edited By: |

Updated on: Jan 26, 2022 | 6:30 AM

Share

ಶಿವನು ಅಭಿಷೇಕಪ್ರಿಯ, ವಿಷ್ಣು ಅಲಂಕಾರ ಪ್ರಿಯ, ಒಮ್ಮೆ ಶಿವನು ಮತ್ತು ವಿಷ್ಣು ಚರ್ಚಿಸುವಾಗ, ವಿಷ್ಣು ಶಿವನನ್ನ ಕೇಳುತ್ತಾರಂತೆ, ಪರಮೇಶ್ವರ ಅತಲ, ಸುತಲ, ಪಾತಾಳ, ಬ್ರಹ್ಮಾಂಡ, ದೇವಲೋಕ, ಇಂದ್ರಲೋಕ ಎಲ್ಲಾನು ನೋಡಿದ್ದೇನೆ, ಆದರೆ ನೀವು ಇರುವಂತಹ ಕೈಲಾಸವನ್ನು ನಾನು ನೋಡಿಲ್ಲ ಒಮ್ಮೆ ನೋಡಬೇಕು ಎಂಬ ಆಸೆ ಇದೆ ಎಂದು ಕೇಳಲು, ಪರಶಿವನು ಅದರಲ್ಲಿ ಏನಿದೆ ನಾಳೆಯೇ ಬಂದು ಕೈಲಾಸವನ್ನು ನೋಡಬಹುದು ಎಂದು ಆಹ್ವಾನಿಸುತ್ತಾರೆ. ಆಗ ಶಿವನು ಕೈಲಾಸಕ್ಕೆ ಬಂದು ಬೃಂಗಿಯನ್ನು ಕರೆದು ನೋಡಪ್ಪ ನಾಳೆ ವಿಷ್ಣುವು ಕೈಲಾಸಗೆ ಬರುತ್ತಾರೆ. ಆದುದರಿಂದ ಕೈಲಾಸವನ್ನು ಸ್ವಚ್ಛವಾಗಿ ಇಡಬೇಕಾದ ಕಾರ್ಯ ನಿನ್ನದು ಎಂದು ಹೇಳುತ್ತಾರೆ.

ಆಗ ಬೃಂಗಿಯು ಕೈಲಾಸವನ್ನು ಸ್ವಚ್ಛ ಮಾಡುವುದು ಹೇಗೆ. ಎಲ್ಲೆಲ್ಲಿ ನೋಡಿದರು ಬುದ್ಧಿಗಳು, ಬೆಟ್ಟಗುಡ್ಡಗಳು ಇದನ್ನು ಹೇಗೆ ಸ್ವಚ್ಛ ಮಾಡುವುದು ಎಂದು ದಿಗ್ಬ್ರಾಂತಿ ಗೆ ಒಳಗಾಗುತ್ತಾರೆ, ಇದು ನನ್ನ ಕೈಯಲ್ಲಿ ಸಾಧ್ಯವಾಗದ ಕೆಲಸವೆಂದು ಅವರು ದುಃಖ ಪಡುತ್ತಾರೆ.

“ಆಗ ಗೋಮಾತೆ ಕಾಮಧೇನು ಸಗಣಿಯನ್ನು” ಹಾಕಿ ಹೋಗುವುದನ್ನು ಕಾಣುತ್ತಾರೆ. ಇದನ್ನು ನೋಡಿದ ಅವರಿಗೆ ಒಂದು ಆಲೋಚನೆ ಬರುತ್ತದೆ, ಕೈಲಾಸದಲ್ಲಿ ಇರುವಂತಹ ಹೆಣ್ಣು ಮಕ್ಕಳನ್ನು ಕರೆದು, ಸಗಣಿಯನ್ನು ಶೇಖರಿಸಿ ಅದನ್ನು ಕೈಲಾಸವನ್ನು ಸಾರಿಸಿ ಗುಡಿಸಿ ರಂಗೋಲಿ ಇಂದ ಅಲಂಕರಿಸಿ, ಹೆಬ್ಬಾಗಿಲಿನಲ್ಲಿ ತಳಿರು ತೋರಣದಿಂದ ಸಿಂಗಾರ ಗೊಳಿಸುತ್ತಾರೆ. ಆಗ ಮರುದಿನ ವೈಕುಂಠ ವಾಸಿಯಾದ ವಿಷ್ಣುವು ಕೈಲಾಸಕ್ಕೆ ಬರುವಂತಹ ವೇಳೆಯಲ್ಲಿ, ಅಷ್ಟೈಶ್ವರ್ಯ ವನ್ನು ಅಲಂಕಾರ ಮಾಡಿಕೊಂಡು, ಸುಗಂಧ ದ್ರವ್ಯಗಳಿಂದ ಶಂಕು, ಚಕ್ರ ಗದ, ಪುಷ್ಪ, ಹಸ್ತಗಳಿಂದ ವಿರಾಜಿಸುತ್ತ, ಗರುಡ ರೂಢನಾಗಿ ಕೈಲಾಸಕ್ಕೆ ಬರುತ್ತಾರೆ.

ಪರಶಿವನು ಮತ್ತು ಆತನ ಸಂಗಡಿಗರು ಎಲ್ಲರೂ ಬಂದು ವಿಷ್ಣುವನ್ನು ಭವ್ಯ ದಿಂದ ಸ್ವಾಗತಿಸುವಾಗ ವಿಷ್ಣುವು ಕೇಳುತ್ತಾರಂತೆ ಎಲ್ಲಿಂದ ಬರುತ್ತಿದೆ ಈ ವಾಸನೆ, ಇಷ್ಟೊಂದು ಸುಗಂಧವಾದ ಪರಿಮಳ ಎಂದು ತನ್ನನ್ನು ತಾನೇ ಮರೆತು ಆ ಪರಿಮಳವನ್ನು ಸೇವಿಸುತ್ತಾ ನಿಂತಿರಲು ಆಗ ಪರಶಿವನು ಬೃಂಗಿ ಯನ್ನು ಕರೆದು ಇದರ ವಿಚಾರವನ್ನು ಕೇಳಿದಾಗ, ಬೃಂಗಿ ಯು ಗೋವು – ವಿಂದಾ (ವಿಂದಾ ಅಂದರೆ ಸಂಸ್ಕೃತದಲ್ಲಿ ಸಗಣಿ ಎಂದು ಅರ್ಥ) ದಿಂದ ಬರುತ್ತಿರುವಂತಹ ಸುಗಂಧ ಪರಿಮಳ ಎಂದು ಹರ – ಹರಿಗೆ ಹೇಳಲು ಅಲ್ಲಿ ನೆರೆದಿದ್ದ ಜನಗಳು ಜೋರು ಧ್ವನಿಯಲ್ಲಿ ಗೋವಿಂದಾ – ಗೋವಿಂದಾ – ಗೋವಿಂದ ಎನ್ನಲು ವೈಕುಂಠ ಪತಿ ಆದ ಶ್ರೀ ಮನ್ ನಾರಾಯಣನು ಸಂತೋಷಭರಿತನಾಗಿ ಇದೇ ವೈಕುಂಟ, ಇದೇ ಕೈಲಾಸ ಎಂದು ಅಲ್ಲಿದ್ದ ಜನಗಳಿಗೆ ಆಶೀರ್ವಾದ ಮಾಡುತ್ತಾರೆ. ಇದನ್ನು ಕಂಡ ಪರಶಿವನು ಇನ್ನು ಮುಂದೆ ಕಲಿಯುಗದಲ್ಲಿ ನಿನ್ನನ್ನು ಗೋವಿಂದ – ಗೋವಿಂದ ಎಂದು ಯಾರು ಕರೆಯುತ್ತಾರೆ ಅವರಿಗೆ ಮುಕ್ತಿ ಸಿಗಲಿ ಎಂದು ಹರಿಸುತ್ತಾರೆ.

ಕೈಲಾಸಕ್ಕೆ ಬಂದಂತ ವಿಷ್ಣುವಿಗೆ ಪರಶಿವನೆ ಗೋವಿಂದ ಎಂದು ನಾಮಕರಣ ಮಾಡಿದರು. ಹೀಗಾಗಿ ತಿರುಪತಿ ತಿಮ್ಮಪ್ಪನ ಪಾದಕ್ಕೆ ಬಿದ್ದು ಇಡೀ ಜಗತ್ತು, ದೇವಾನುದೇವತೆಗಳು ಗೋವಿಂದ ಗೋವಿಂದ ಎಂದು ಕೊಂಡಾಡುತ್ತಿದ್ದಾರೆ. ಇದು ಗೋವಿಂದ ನಾಮದ ಹಿನ್ನೆಲೆ.

ಮಾಹಿತಿ: ವೇ!!ಶ್ರೀ!! ಕುಮಾರಸ್ವಾಮಿ, ಶ್ರೀ ಜ್ಯೋತಿಷ್ಯ ಸಲಹಾ ಕೇಂದ್ರ

ಇದನ್ನೂ ಓದಿ: Temple Tour: ಸಾಕ್ಷಾತ್ ಪರಶಿವನೇ ಭೂಮಿಗೆ ಕಾಲಿಟ್ಟ ಪೌರಾಣಿಕ ಕ್ಷೇತ್ರ

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಇಂದು ಈ ರಾಶಿಯವರಿಗೆ ಮೂರು ಗ್ರಹಗಳ ಶುಭಫಲ
ಇಂದು ಈ ರಾಶಿಯವರಿಗೆ ಮೂರು ಗ್ರಹಗಳ ಶುಭಫಲ