AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈಲಾಸಕ್ಕೆ ಬಂದ ವಿಷ್ಣುವಿಗೆ ಪರಶಿವನಿಂದಲೇ ನಾಮಕರಣ, ತಿಮ್ಮಪ್ಪನಿಗೆ ಗೋವಿಂದ ಗೋವಿಂದ ಎನ್ನಲು ಕಾರಣವೇನು?

ಕೈಲಾಸಕ್ಕೆ ಬಂದಂತ ವಿಷ್ಣುವಿಗೆ ಪರಶಿವನೆ ಗೋವಿಂದ ಎಂದು ನಾಮಕರಣ ಮಾಡಿದರು. ಹೀಗಾಗಿ ತಿರುಪತಿ ತಿಮ್ಮಪ್ಪನ ಪಾದಕ್ಕೆ ಬಿದ್ದು ಇಡೀ ಜಗತ್ತು, ದೇವಾನುದೇವತೆಗಳು ಗೋವಿಂದ ಗೋವಿಂದ ಎಂದು ಕೊಂಡಾಡುತ್ತಿದ್ದಾರೆ. ಇದು ಗೋವಿಂದ ನಾಮದ ಹಿನ್ನೆಲೆ.

ಕೈಲಾಸಕ್ಕೆ ಬಂದ ವಿಷ್ಣುವಿಗೆ ಪರಶಿವನಿಂದಲೇ ನಾಮಕರಣ, ತಿಮ್ಮಪ್ಪನಿಗೆ ಗೋವಿಂದ ಗೋವಿಂದ ಎನ್ನಲು ಕಾರಣವೇನು?
ಗೋವಿಂದ
TV9 Web
| Edited By: ಆಯೇಷಾ ಬಾನು|

Updated on: Jan 26, 2022 | 6:30 AM

Share

ಶಿವನು ಅಭಿಷೇಕಪ್ರಿಯ, ವಿಷ್ಣು ಅಲಂಕಾರ ಪ್ರಿಯ, ಒಮ್ಮೆ ಶಿವನು ಮತ್ತು ವಿಷ್ಣು ಚರ್ಚಿಸುವಾಗ, ವಿಷ್ಣು ಶಿವನನ್ನ ಕೇಳುತ್ತಾರಂತೆ, ಪರಮೇಶ್ವರ ಅತಲ, ಸುತಲ, ಪಾತಾಳ, ಬ್ರಹ್ಮಾಂಡ, ದೇವಲೋಕ, ಇಂದ್ರಲೋಕ ಎಲ್ಲಾನು ನೋಡಿದ್ದೇನೆ, ಆದರೆ ನೀವು ಇರುವಂತಹ ಕೈಲಾಸವನ್ನು ನಾನು ನೋಡಿಲ್ಲ ಒಮ್ಮೆ ನೋಡಬೇಕು ಎಂಬ ಆಸೆ ಇದೆ ಎಂದು ಕೇಳಲು, ಪರಶಿವನು ಅದರಲ್ಲಿ ಏನಿದೆ ನಾಳೆಯೇ ಬಂದು ಕೈಲಾಸವನ್ನು ನೋಡಬಹುದು ಎಂದು ಆಹ್ವಾನಿಸುತ್ತಾರೆ. ಆಗ ಶಿವನು ಕೈಲಾಸಕ್ಕೆ ಬಂದು ಬೃಂಗಿಯನ್ನು ಕರೆದು ನೋಡಪ್ಪ ನಾಳೆ ವಿಷ್ಣುವು ಕೈಲಾಸಗೆ ಬರುತ್ತಾರೆ. ಆದುದರಿಂದ ಕೈಲಾಸವನ್ನು ಸ್ವಚ್ಛವಾಗಿ ಇಡಬೇಕಾದ ಕಾರ್ಯ ನಿನ್ನದು ಎಂದು ಹೇಳುತ್ತಾರೆ.

ಆಗ ಬೃಂಗಿಯು ಕೈಲಾಸವನ್ನು ಸ್ವಚ್ಛ ಮಾಡುವುದು ಹೇಗೆ. ಎಲ್ಲೆಲ್ಲಿ ನೋಡಿದರು ಬುದ್ಧಿಗಳು, ಬೆಟ್ಟಗುಡ್ಡಗಳು ಇದನ್ನು ಹೇಗೆ ಸ್ವಚ್ಛ ಮಾಡುವುದು ಎಂದು ದಿಗ್ಬ್ರಾಂತಿ ಗೆ ಒಳಗಾಗುತ್ತಾರೆ, ಇದು ನನ್ನ ಕೈಯಲ್ಲಿ ಸಾಧ್ಯವಾಗದ ಕೆಲಸವೆಂದು ಅವರು ದುಃಖ ಪಡುತ್ತಾರೆ.

“ಆಗ ಗೋಮಾತೆ ಕಾಮಧೇನು ಸಗಣಿಯನ್ನು” ಹಾಕಿ ಹೋಗುವುದನ್ನು ಕಾಣುತ್ತಾರೆ. ಇದನ್ನು ನೋಡಿದ ಅವರಿಗೆ ಒಂದು ಆಲೋಚನೆ ಬರುತ್ತದೆ, ಕೈಲಾಸದಲ್ಲಿ ಇರುವಂತಹ ಹೆಣ್ಣು ಮಕ್ಕಳನ್ನು ಕರೆದು, ಸಗಣಿಯನ್ನು ಶೇಖರಿಸಿ ಅದನ್ನು ಕೈಲಾಸವನ್ನು ಸಾರಿಸಿ ಗುಡಿಸಿ ರಂಗೋಲಿ ಇಂದ ಅಲಂಕರಿಸಿ, ಹೆಬ್ಬಾಗಿಲಿನಲ್ಲಿ ತಳಿರು ತೋರಣದಿಂದ ಸಿಂಗಾರ ಗೊಳಿಸುತ್ತಾರೆ. ಆಗ ಮರುದಿನ ವೈಕುಂಠ ವಾಸಿಯಾದ ವಿಷ್ಣುವು ಕೈಲಾಸಕ್ಕೆ ಬರುವಂತಹ ವೇಳೆಯಲ್ಲಿ, ಅಷ್ಟೈಶ್ವರ್ಯ ವನ್ನು ಅಲಂಕಾರ ಮಾಡಿಕೊಂಡು, ಸುಗಂಧ ದ್ರವ್ಯಗಳಿಂದ ಶಂಕು, ಚಕ್ರ ಗದ, ಪುಷ್ಪ, ಹಸ್ತಗಳಿಂದ ವಿರಾಜಿಸುತ್ತ, ಗರುಡ ರೂಢನಾಗಿ ಕೈಲಾಸಕ್ಕೆ ಬರುತ್ತಾರೆ.

ಪರಶಿವನು ಮತ್ತು ಆತನ ಸಂಗಡಿಗರು ಎಲ್ಲರೂ ಬಂದು ವಿಷ್ಣುವನ್ನು ಭವ್ಯ ದಿಂದ ಸ್ವಾಗತಿಸುವಾಗ ವಿಷ್ಣುವು ಕೇಳುತ್ತಾರಂತೆ ಎಲ್ಲಿಂದ ಬರುತ್ತಿದೆ ಈ ವಾಸನೆ, ಇಷ್ಟೊಂದು ಸುಗಂಧವಾದ ಪರಿಮಳ ಎಂದು ತನ್ನನ್ನು ತಾನೇ ಮರೆತು ಆ ಪರಿಮಳವನ್ನು ಸೇವಿಸುತ್ತಾ ನಿಂತಿರಲು ಆಗ ಪರಶಿವನು ಬೃಂಗಿ ಯನ್ನು ಕರೆದು ಇದರ ವಿಚಾರವನ್ನು ಕೇಳಿದಾಗ, ಬೃಂಗಿ ಯು ಗೋವು – ವಿಂದಾ (ವಿಂದಾ ಅಂದರೆ ಸಂಸ್ಕೃತದಲ್ಲಿ ಸಗಣಿ ಎಂದು ಅರ್ಥ) ದಿಂದ ಬರುತ್ತಿರುವಂತಹ ಸುಗಂಧ ಪರಿಮಳ ಎಂದು ಹರ – ಹರಿಗೆ ಹೇಳಲು ಅಲ್ಲಿ ನೆರೆದಿದ್ದ ಜನಗಳು ಜೋರು ಧ್ವನಿಯಲ್ಲಿ ಗೋವಿಂದಾ – ಗೋವಿಂದಾ – ಗೋವಿಂದ ಎನ್ನಲು ವೈಕುಂಠ ಪತಿ ಆದ ಶ್ರೀ ಮನ್ ನಾರಾಯಣನು ಸಂತೋಷಭರಿತನಾಗಿ ಇದೇ ವೈಕುಂಟ, ಇದೇ ಕೈಲಾಸ ಎಂದು ಅಲ್ಲಿದ್ದ ಜನಗಳಿಗೆ ಆಶೀರ್ವಾದ ಮಾಡುತ್ತಾರೆ. ಇದನ್ನು ಕಂಡ ಪರಶಿವನು ಇನ್ನು ಮುಂದೆ ಕಲಿಯುಗದಲ್ಲಿ ನಿನ್ನನ್ನು ಗೋವಿಂದ – ಗೋವಿಂದ ಎಂದು ಯಾರು ಕರೆಯುತ್ತಾರೆ ಅವರಿಗೆ ಮುಕ್ತಿ ಸಿಗಲಿ ಎಂದು ಹರಿಸುತ್ತಾರೆ.

ಕೈಲಾಸಕ್ಕೆ ಬಂದಂತ ವಿಷ್ಣುವಿಗೆ ಪರಶಿವನೆ ಗೋವಿಂದ ಎಂದು ನಾಮಕರಣ ಮಾಡಿದರು. ಹೀಗಾಗಿ ತಿರುಪತಿ ತಿಮ್ಮಪ್ಪನ ಪಾದಕ್ಕೆ ಬಿದ್ದು ಇಡೀ ಜಗತ್ತು, ದೇವಾನುದೇವತೆಗಳು ಗೋವಿಂದ ಗೋವಿಂದ ಎಂದು ಕೊಂಡಾಡುತ್ತಿದ್ದಾರೆ. ಇದು ಗೋವಿಂದ ನಾಮದ ಹಿನ್ನೆಲೆ.

ಮಾಹಿತಿ: ವೇ!!ಶ್ರೀ!! ಕುಮಾರಸ್ವಾಮಿ, ಶ್ರೀ ಜ್ಯೋತಿಷ್ಯ ಸಲಹಾ ಕೇಂದ್ರ

ಇದನ್ನೂ ಓದಿ: Temple Tour: ಸಾಕ್ಷಾತ್ ಪರಶಿವನೇ ಭೂಮಿಗೆ ಕಾಲಿಟ್ಟ ಪೌರಾಣಿಕ ಕ್ಷೇತ್ರ

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ