AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈಲಾಸಕ್ಕೆ ಬಂದ ವಿಷ್ಣುವಿಗೆ ಪರಶಿವನಿಂದಲೇ ನಾಮಕರಣ, ತಿಮ್ಮಪ್ಪನಿಗೆ ಗೋವಿಂದ ಗೋವಿಂದ ಎನ್ನಲು ಕಾರಣವೇನು?

ಕೈಲಾಸಕ್ಕೆ ಬಂದಂತ ವಿಷ್ಣುವಿಗೆ ಪರಶಿವನೆ ಗೋವಿಂದ ಎಂದು ನಾಮಕರಣ ಮಾಡಿದರು. ಹೀಗಾಗಿ ತಿರುಪತಿ ತಿಮ್ಮಪ್ಪನ ಪಾದಕ್ಕೆ ಬಿದ್ದು ಇಡೀ ಜಗತ್ತು, ದೇವಾನುದೇವತೆಗಳು ಗೋವಿಂದ ಗೋವಿಂದ ಎಂದು ಕೊಂಡಾಡುತ್ತಿದ್ದಾರೆ. ಇದು ಗೋವಿಂದ ನಾಮದ ಹಿನ್ನೆಲೆ.

ಕೈಲಾಸಕ್ಕೆ ಬಂದ ವಿಷ್ಣುವಿಗೆ ಪರಶಿವನಿಂದಲೇ ನಾಮಕರಣ, ತಿಮ್ಮಪ್ಪನಿಗೆ ಗೋವಿಂದ ಗೋವಿಂದ ಎನ್ನಲು ಕಾರಣವೇನು?
ಗೋವಿಂದ
TV9 Web
| Edited By: |

Updated on: Jan 26, 2022 | 6:30 AM

Share

ಶಿವನು ಅಭಿಷೇಕಪ್ರಿಯ, ವಿಷ್ಣು ಅಲಂಕಾರ ಪ್ರಿಯ, ಒಮ್ಮೆ ಶಿವನು ಮತ್ತು ವಿಷ್ಣು ಚರ್ಚಿಸುವಾಗ, ವಿಷ್ಣು ಶಿವನನ್ನ ಕೇಳುತ್ತಾರಂತೆ, ಪರಮೇಶ್ವರ ಅತಲ, ಸುತಲ, ಪಾತಾಳ, ಬ್ರಹ್ಮಾಂಡ, ದೇವಲೋಕ, ಇಂದ್ರಲೋಕ ಎಲ್ಲಾನು ನೋಡಿದ್ದೇನೆ, ಆದರೆ ನೀವು ಇರುವಂತಹ ಕೈಲಾಸವನ್ನು ನಾನು ನೋಡಿಲ್ಲ ಒಮ್ಮೆ ನೋಡಬೇಕು ಎಂಬ ಆಸೆ ಇದೆ ಎಂದು ಕೇಳಲು, ಪರಶಿವನು ಅದರಲ್ಲಿ ಏನಿದೆ ನಾಳೆಯೇ ಬಂದು ಕೈಲಾಸವನ್ನು ನೋಡಬಹುದು ಎಂದು ಆಹ್ವಾನಿಸುತ್ತಾರೆ. ಆಗ ಶಿವನು ಕೈಲಾಸಕ್ಕೆ ಬಂದು ಬೃಂಗಿಯನ್ನು ಕರೆದು ನೋಡಪ್ಪ ನಾಳೆ ವಿಷ್ಣುವು ಕೈಲಾಸಗೆ ಬರುತ್ತಾರೆ. ಆದುದರಿಂದ ಕೈಲಾಸವನ್ನು ಸ್ವಚ್ಛವಾಗಿ ಇಡಬೇಕಾದ ಕಾರ್ಯ ನಿನ್ನದು ಎಂದು ಹೇಳುತ್ತಾರೆ.

ಆಗ ಬೃಂಗಿಯು ಕೈಲಾಸವನ್ನು ಸ್ವಚ್ಛ ಮಾಡುವುದು ಹೇಗೆ. ಎಲ್ಲೆಲ್ಲಿ ನೋಡಿದರು ಬುದ್ಧಿಗಳು, ಬೆಟ್ಟಗುಡ್ಡಗಳು ಇದನ್ನು ಹೇಗೆ ಸ್ವಚ್ಛ ಮಾಡುವುದು ಎಂದು ದಿಗ್ಬ್ರಾಂತಿ ಗೆ ಒಳಗಾಗುತ್ತಾರೆ, ಇದು ನನ್ನ ಕೈಯಲ್ಲಿ ಸಾಧ್ಯವಾಗದ ಕೆಲಸವೆಂದು ಅವರು ದುಃಖ ಪಡುತ್ತಾರೆ.

“ಆಗ ಗೋಮಾತೆ ಕಾಮಧೇನು ಸಗಣಿಯನ್ನು” ಹಾಕಿ ಹೋಗುವುದನ್ನು ಕಾಣುತ್ತಾರೆ. ಇದನ್ನು ನೋಡಿದ ಅವರಿಗೆ ಒಂದು ಆಲೋಚನೆ ಬರುತ್ತದೆ, ಕೈಲಾಸದಲ್ಲಿ ಇರುವಂತಹ ಹೆಣ್ಣು ಮಕ್ಕಳನ್ನು ಕರೆದು, ಸಗಣಿಯನ್ನು ಶೇಖರಿಸಿ ಅದನ್ನು ಕೈಲಾಸವನ್ನು ಸಾರಿಸಿ ಗುಡಿಸಿ ರಂಗೋಲಿ ಇಂದ ಅಲಂಕರಿಸಿ, ಹೆಬ್ಬಾಗಿಲಿನಲ್ಲಿ ತಳಿರು ತೋರಣದಿಂದ ಸಿಂಗಾರ ಗೊಳಿಸುತ್ತಾರೆ. ಆಗ ಮರುದಿನ ವೈಕುಂಠ ವಾಸಿಯಾದ ವಿಷ್ಣುವು ಕೈಲಾಸಕ್ಕೆ ಬರುವಂತಹ ವೇಳೆಯಲ್ಲಿ, ಅಷ್ಟೈಶ್ವರ್ಯ ವನ್ನು ಅಲಂಕಾರ ಮಾಡಿಕೊಂಡು, ಸುಗಂಧ ದ್ರವ್ಯಗಳಿಂದ ಶಂಕು, ಚಕ್ರ ಗದ, ಪುಷ್ಪ, ಹಸ್ತಗಳಿಂದ ವಿರಾಜಿಸುತ್ತ, ಗರುಡ ರೂಢನಾಗಿ ಕೈಲಾಸಕ್ಕೆ ಬರುತ್ತಾರೆ.

ಪರಶಿವನು ಮತ್ತು ಆತನ ಸಂಗಡಿಗರು ಎಲ್ಲರೂ ಬಂದು ವಿಷ್ಣುವನ್ನು ಭವ್ಯ ದಿಂದ ಸ್ವಾಗತಿಸುವಾಗ ವಿಷ್ಣುವು ಕೇಳುತ್ತಾರಂತೆ ಎಲ್ಲಿಂದ ಬರುತ್ತಿದೆ ಈ ವಾಸನೆ, ಇಷ್ಟೊಂದು ಸುಗಂಧವಾದ ಪರಿಮಳ ಎಂದು ತನ್ನನ್ನು ತಾನೇ ಮರೆತು ಆ ಪರಿಮಳವನ್ನು ಸೇವಿಸುತ್ತಾ ನಿಂತಿರಲು ಆಗ ಪರಶಿವನು ಬೃಂಗಿ ಯನ್ನು ಕರೆದು ಇದರ ವಿಚಾರವನ್ನು ಕೇಳಿದಾಗ, ಬೃಂಗಿ ಯು ಗೋವು – ವಿಂದಾ (ವಿಂದಾ ಅಂದರೆ ಸಂಸ್ಕೃತದಲ್ಲಿ ಸಗಣಿ ಎಂದು ಅರ್ಥ) ದಿಂದ ಬರುತ್ತಿರುವಂತಹ ಸುಗಂಧ ಪರಿಮಳ ಎಂದು ಹರ – ಹರಿಗೆ ಹೇಳಲು ಅಲ್ಲಿ ನೆರೆದಿದ್ದ ಜನಗಳು ಜೋರು ಧ್ವನಿಯಲ್ಲಿ ಗೋವಿಂದಾ – ಗೋವಿಂದಾ – ಗೋವಿಂದ ಎನ್ನಲು ವೈಕುಂಠ ಪತಿ ಆದ ಶ್ರೀ ಮನ್ ನಾರಾಯಣನು ಸಂತೋಷಭರಿತನಾಗಿ ಇದೇ ವೈಕುಂಟ, ಇದೇ ಕೈಲಾಸ ಎಂದು ಅಲ್ಲಿದ್ದ ಜನಗಳಿಗೆ ಆಶೀರ್ವಾದ ಮಾಡುತ್ತಾರೆ. ಇದನ್ನು ಕಂಡ ಪರಶಿವನು ಇನ್ನು ಮುಂದೆ ಕಲಿಯುಗದಲ್ಲಿ ನಿನ್ನನ್ನು ಗೋವಿಂದ – ಗೋವಿಂದ ಎಂದು ಯಾರು ಕರೆಯುತ್ತಾರೆ ಅವರಿಗೆ ಮುಕ್ತಿ ಸಿಗಲಿ ಎಂದು ಹರಿಸುತ್ತಾರೆ.

ಕೈಲಾಸಕ್ಕೆ ಬಂದಂತ ವಿಷ್ಣುವಿಗೆ ಪರಶಿವನೆ ಗೋವಿಂದ ಎಂದು ನಾಮಕರಣ ಮಾಡಿದರು. ಹೀಗಾಗಿ ತಿರುಪತಿ ತಿಮ್ಮಪ್ಪನ ಪಾದಕ್ಕೆ ಬಿದ್ದು ಇಡೀ ಜಗತ್ತು, ದೇವಾನುದೇವತೆಗಳು ಗೋವಿಂದ ಗೋವಿಂದ ಎಂದು ಕೊಂಡಾಡುತ್ತಿದ್ದಾರೆ. ಇದು ಗೋವಿಂದ ನಾಮದ ಹಿನ್ನೆಲೆ.

ಮಾಹಿತಿ: ವೇ!!ಶ್ರೀ!! ಕುಮಾರಸ್ವಾಮಿ, ಶ್ರೀ ಜ್ಯೋತಿಷ್ಯ ಸಲಹಾ ಕೇಂದ್ರ

ಇದನ್ನೂ ಓದಿ: Temple Tour: ಸಾಕ್ಷಾತ್ ಪರಶಿವನೇ ಭೂಮಿಗೆ ಕಾಲಿಟ್ಟ ಪೌರಾಣಿಕ ಕ್ಷೇತ್ರ

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!