AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಸಂಭ್ರಮವನ್ನು ಮನೆಯಲ್ಲಿ ಆಚರಣೆ ಮಾಡುವುದು ಹೇಗೆ?

ಐದು ನೂರು ವರ್ಷಗಳ ಹೋರಾಟಕ್ಕೆ ಕೊನೆಗೂ ಪ್ರತಿಫಲ ಸಿಗುವ ಕಾಲ ಬಂದಿದೆ. ಅಯೋಧ್ಯೆಯ ಆ ಸಂಭ್ರಮವನ್ನು ನಾವು ಟಿವಿ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಿಸಬಹುದಾಗಿದ್ದು ಅಲ್ಲಿಯ ಆ ಸ್ವರ್ಣ ಘಳಿಗೆಗೆ ನಾವೆಲ್ಲರೂ ಸಾಕ್ಷಿಯಾಗಬಹುದಾಗಿದೆ. ಇನ್ನು ಇದೆಲ್ಲದರ ಜೊತೆಗೆ ರಾಮನ ಅನುಗ್ರಹ ಪಡೆಯಲು ಮನೆಯಲ್ಲಿಯೇ ಕುಳಿತು ಕೆಲವು ಆಚರಣೆಗಳನ್ನು ಮಾಡಬಹುದಾಗಿದೆ. ಈ ಮೂಲಕ ಪ್ರಭು ಶ್ರೀ ರಾಮನ ಪ್ರತಿಷ್ಠಾ ಮಹೋತ್ಸವವನ್ನು ವಿಶೇಷ ರೀತಿಯಲ್ಲಿ ಆಚರಣೆ ಮಾಡಿ ರಾಮ ಲಲ್ಲಾನ ಅನುಗ್ರಹ ಪಡೆಯೋಣ.

ರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಸಂಭ್ರಮವನ್ನು ಮನೆಯಲ್ಲಿ ಆಚರಣೆ ಮಾಡುವುದು ಹೇಗೆ?
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jan 20, 2024 | 1:09 PM

Share

ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ, ಪ್ರಾಣ ಪ್ರತಿಷ್ಠೆಗೆ ಭರದಿಂದ ಸಿದ್ದತೆಗಳು ನಡೆಯುತ್ತಿದ್ದು ಐದು ನೂರು ವರ್ಷಗಳ ಹೋರಾಟಕ್ಕೆ ಕೊನೆಗೂ ಪ್ರತಿಫಲ ಸಿಗುವ ಕಾಲ ಬಂದಿದೆ. ಅಯೋಧ್ಯೆಯ ಆ ಸಂಭ್ರಮವನ್ನು ನಾವು ಟಿವಿ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಿಸಬಹುದಾಗಿದ್ದು ಅಲ್ಲಿಯ ಆ ಸ್ವರ್ಣ ಘಳಿಗೆಗೆ ನಾವೆಲ್ಲರೂ ಸಾಕ್ಷಿಯಾಗಬಹುದಾಗಿದೆ. ಇನ್ನು ಇದೆಲ್ಲದರ ಜೊತೆಗೆ ರಾಮನ ಅನುಗ್ರಹ ಪಡೆಯಲು ಮನೆಯಲ್ಲಿಯೇ ಕುಳಿತು ಕೆಲವು ಆಚರಣೆಗಳನ್ನು ಮಾಡಬಹುದಾಗಿದೆ. ಈ ಮೂಲಕ ಪ್ರಭು ಶ್ರೀ ರಾಮನ ಪ್ರತಿಷ್ಠಾ ಮಹೋತ್ಸವವನ್ನು ವಿಶೇಷ ರೀತಿಯಲ್ಲಿ ಆಚರಣೆ ಮಾಡಿ ರಾಮ ಲಲ್ಲಾನ ಅನುಗ್ರಹ ಪಡೆಯೋಣ.

ಮನೆಯಲ್ಲಿ ಹೇಗೆ ಆಚರಣೆ ಮಾಡಬಹುದು?

ರಾಮ ತನ್ನ ಪೀಠದಲ್ಲಿ ವಿರಾಜಮಾನವಾಗಲು ಇನ್ನೇನು ಕೆಲವು ದಿನಗಳಿದ್ದು ಇಂದಿನಿಂದಲೇ ಮನೆಯ ಸ್ವಚ್ಛತೆಯಲ್ಲಿ ತೊಡಗೋಣ. ಹಬ್ಬ ಹರಿದಿನಗಳಲ್ಲಿ ಮನೆಯನ್ನು ಒಪ್ಪವಾಗಿಡುವ ಹಾಗೆಯೇ ಅಂದಿನ ಸಂಭ್ರಮಕ್ಕೆ ಸಿದ್ದತೆ ಮಾಡಿಕೊಳ್ಳೋಣ. ಮನೆಯ ಸಿಂಗಾರಕ್ಕೆ ತಳಿರು ತೋರಣಗಳನ್ನು ಕಟ್ಟುವ ಮೂಲಕ ರಾಮನ ಬರುವಿಕೆಯನ್ನು ವಿಜ್ರಂಭಿಸೋಣ. ಮುನೆಯ ಮುಂದೆ ಜಾಗ ಇರುವವರು, ಆ ದಿನ ಅಂಗಳ ತೊಳೆದು ರಂಗೋಲಿ ಹಾಕಿ ಸ್ವಾಗತಕ್ಕೆ ತಯಾರಿ ಮಾಡಿಕೊಳ್ಳೋಣ. ಏಕೆಂದರೆ ರಾಮ ಅಯೋಧ್ಯೆಗೆ ಮಾತ್ರವಲ್ಲ ಪ್ರತಿ ಮನೆ ಮನೆಗೂ ಬರುತ್ತಿದ್ದಾನೆ. ಆ ಸಂಭ್ರಮ ಪ್ರತಿ ಮನೆಯಲ್ಲಿಯೂ ಕಾಣಬೇಕು.

ದೀಪದ ಬೆಳಕಿನಲ್ಲಿ ಮನೆ ಕಂಗೊಳಿಸಲಿ;

ಮನೆಯಲ್ಲಿ ರಾಮನ ಮೂರ್ತಿ ಅಥವಾ ಫೋಟೋ ಇಟ್ಟು ಪೂಜೆ ಮಾಡುವವರು ದೇವರ ಮನೆಯನ್ನು ಸ್ವಚ್ಛ ಮಾಡಿ, ರಾಮನಿಗೆ ಪ್ರೀಯವಾದ ತುಳಸಿ ಮತ್ತು ಬಿಳಿ ಹೂವುಗಳಿಂದ ದೇವರನ್ನು ಅಲಂಕಾರ ಮಾಡಿ. ಇನ್ನು ತುಪ್ಪದ ದೀಪ ಹಚ್ಚಿ, ಧೂಪದ್ರವ್ಯದ ಬೆಳಕಿನಲ್ಲಿ ಮನೆ ಕಂಗೊಳಿಸುವಂತೆ ಮಾಡಿ. ನೈವೇದ್ಯಕ್ಕೆ ಪಂಚಾಮೃತವನ್ನು ಅರ್ಪಿಸಬಹುದು ಅಥವಾ ನಿಮ್ಮ ಅಗತ್ಯಕ್ಕೆ ತಕ್ಕಂತೆ ಪ್ರಸಾದಗಳನ್ನು ಮಾಡಿ ಹಂಚಬಹುದು. ಎಲ್ಲಕ್ಕಿಂತ ಪಂಚಾಮೃತ ಶ್ರೇಷ್ಠವಾಗಿರುವುದರಿಂದ ನೈವೇದ್ಯಕ್ಕೆ ಅದನ್ನೇ ಇಡಬಹುದು. ಇನ್ನು ಬಿಡುವಿನ ಸಮಯದಲ್ಲಿ ರಾಮ ರಕ್ಷಾ ಸ್ತೋತ್ರವನ್ನು ಪಠಣ ಮಾಡಿ. ಇಲ್ಲವಾದಲ್ಲಿ ರಾಮನ ಸರಳವಾದ ಮಂತ್ರವನ್ನು ಪಠಿಸಿ. ನಿಮ್ಮ ಜೊತೆಯಲ್ಲಿ ಮನೆಯವರೂ ಕೂಡ ರಾಮನ ಸ್ತೋತ್ರ ಪಠಣ ಹಾಗೂ ಭಜನೆ ಮಾಡುವುದಕ್ಕೆ ಪ್ರೇರೇಪಿಸಿ. ಚಿಕ್ಕ ಮಕ್ಕಳಿರುವ ಮನೆಗಳಲ್ಲಿ ರಾಮನ ಕಥೆ ಹೇಳುವ ಮೂಲಕ ಅವರಿಗೂ ರಾಮನ ಚರಿತ್ರೆಯ ಪರಿಚಯ ಮಾಡಿಕೊಡಿ.

ಇದನ್ನೂ ಓದಿ: ಕೂರ್ಮ ದ್ವಾದಶಿಯನ್ನು ಯಾವಾಗ ಆಚರಿಸಲಾಗುತ್ತದೆ? ಈ ದಿನದ ಆಚರಣೆ ಹೇಗೆ?

ಮನೆಯ ಬಳಿ ದೇವಸ್ಥಾನ ಇರುವವರು ಅಲ್ಲಿಗೆ ಹೋಗಿ ರಾಮನ ಪ್ರತಿಷ್ಠೆಯ ಸಂಭ್ರಮವನ್ನು ಆಚರಣೆ ಮಾಡಿ ಈಗಾಗಲೇ ಸರಕಾರದ ಕೆಲವು ನಿಯಮಾವಳಿ ಬಿಡುಗಡೆ ಮಾಡಿದ್ದೂ ಅದೇ ರೀತಿಯಲ್ಲಿ ನೀವು ಆಚರಣೆ ಮಾಡಬಹುದು. ಏನೇ ಇರಲಿ ಶತಮಾನಗಳಿಂದ ಮಾಡಿಕೊಂಡು ಬಂದ ಹೋರಾಟಕ್ಕೆ ಪ್ರತಿಫಲ ಸಿಗುತ್ತಿದೆ. ರಾಮ ತನ್ನ ಮೂಲ ಸ್ಥಾನಕ್ಕೆ ಮರಳುವ ಮೂಲಕ ನಮ್ಮೆಲ್ಲರ ಆಸೆ ನೆರೆವೇರುತ್ತಿದೆ ಹಾಗಾಗಿ ನಿಮಗೆ ಬೇಕಾದ ರೀತಿಯಲ್ಲಿ ಮತ್ತು ದೇವರ ಅನುಗ್ರಹ ನಿಮ್ಮ ಕುಟುಂಬದ ಮೇಲಿರುವಂತೆ ಪೂಜೆ- ಪುನಸ್ಕಾರಗಳನ್ನು ಮಾಡುವ ಮೂಲಕ ಆಚರಿಸಿ. ರಾಮನ ಆಶೀರ್ವಾದ ನಮ್ಮೆಲ್ಲರ ಮೇಲಿರಲಿ.

ಸೂಚನೆ: ಮೇಲೆ ಹೇಳಿರುವುದು ನಿಮ್ಮ ಅಗತ್ಯಕ್ಕೆ ಬಿಟ್ಟಿದ್ದಾಗಿರುವುದರಿಂದ. ಆಚರಣೆಯಲ್ಲಿ ಬದಲಾವಣೆ ಮಾಡಿಕೊಳ್ಳಬಹುದಾಗಿದೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?