AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sri Guru Raghavendra Swamiji: ಗುರುವಾರದಂದು ಗುರುರಾಯರ ಪೂಜೆ ಹೇಗೆ ಮಾಡಬೇಕು?

ಹಲವೆಡೆ ಗುರುವಾರದಂದು ಗುರು ರಾಯರನ್ನು ಪೂಜಿಸುತ್ತಾರೆ. ಅದರಲ್ಲೂ 6 ಗುರುವಾರಗಳು ಗುರುರಾಯರನ್ನ ಪೂಜಿಸಿ ಕೊನೆಗೆ 7ನೇ ಗುರುವಾರ ರಾಯರಿಗೆ ಅಂತಿಮ ಪೂಜೆಯನ್ನು ಮಾಡುತ್ತಾರೆ.

Sri Guru Raghavendra Swamiji: ಗುರುವಾರದಂದು ಗುರುರಾಯರ ಪೂಜೆ ಹೇಗೆ ಮಾಡಬೇಕು?
ಗುರುವಾರದಂದು ಗುರುರಾಯರ ಪೂಜೆ ಹೇಗೆ ಮಾಡಬೇಕು?
TV9 Web
| Edited By: |

Updated on: Sep 23, 2021 | 7:21 AM

Share

ಗುರುವಾರ ಬಂತಮ್ಮ ಗುರುರಾಯರ ನೆನೆಯಮ್ಮ||ಗುರುವಾರ|| ಸ್ಮರಣೆ ಮಾತ್ರದಲಿ ಕ್ಲೇಶ ಕಳೆದು ಸದ್ಗತಿಯ ಕೊಡುವನಮ್ಮ ವಾರ ಬಂತಮ್ಮ ಗುರುವಾರ ಬಂತಮ್ಮ ರಾಯರ ನೆನೆಯಮ್ಮ ಗುರುರಾಯರ ನೆನೆಯಮ್ಮ ಎಂದು ಡಾ. ರಾಜ್ ಕುಮಾರ್ ರಾಯರ ಬಗ್ಗೆ ಹಾಡಿ ಹೊಗಳಿದ್ದಾರೆ. ಗುರುರಾಯರ ಪೂಜೆಗೆ ಗುರುವಾರವೇ ಶ್ರೇಷ್ಠ ದಿನವೆಂದು ಹೇಳಲಾಗುತ್ತೆ. ಗುರುವಾರದಂದು ಭಗವಾನ್ ವಿಷ್ಣು(Lord Vishnu) ಮತ್ತು ಶ್ರೀ ಗುರು ರಾಘವೇಂದ್ರರನ್ನು(Sri Guru Raghavendra Swamiji) ಪೂಜಿಸಲಾಗುತ್ತೆ. ನಾವು ನಿಮಗೆ ಇವತ್ತು ಶ್ರೀ ಗುರು ರಾಘವೇಂದ್ರರನ್ನು ಗುರುವಾರದಂದು ಪೂಜಿಸುವುದೇಗೆ ಎಂಬ ಬಗ್ಗೆ ತಿಳಿಸಿಕೊಡುತ್ತೇವೆ.

ಹಲವೆಡೆ ಗುರುವಾರದಂದು ಗುರು ರಾಯರನ್ನು ಪೂಜಿಸುತ್ತಾರೆ. ಅದರಲ್ಲೂ 6 ಗುರುವಾರಗಳು ಗುರುರಾಯರನ್ನ ಪೂಜಿಸಿ ಕೊನೆಗೆ 7ನೇ ಗುರುವಾರ ರಾಯರಿಗೆ ಅಂತಿಮ ಪೂಜೆಯನ್ನು ಮಾಡುತ್ತಾರೆ. ಇನ್ನು ಗುರುವಾರದ ಶುಭ ದಿನದಂದು ಗುರುರಾಯರನ್ನು ಪೂಜಿಸುವುದರಿಂದ ಕುಟುಂಬದಲ್ಲಿ ಸುಖ, ಶಾಂತಿ, ನೆಮ್ಮದಿ, ಆರೋಗ್ಯ ಲಭಿಸುತ್ತದೆ ಎಂದು ನಂಬಲಾಗಿದೆ.

ಗುರುವಾರ ಗುರುರಾಯರನ್ನು ಪೂಜಿಸುವುದು ಹೇಗೆ? ಮೊದಲಿಗೆ ಬೆಳಗ್ಗೆ ಎದ್ದು ಸ್ನಾನ ಮಾಡಿ ಪೂಜಾ ಸ್ಥಳವನ್ನು ಸ್ವಚ್ಛಗೊಳಿಸಿ ರಂಗೋಲಿ ಹಾಕಬೇಕು. ಬಳಿಕ ರಂಗೋಲಿಯ ಮೇಲೆ ಮಣೆಯನ್ನು ಅಥವಾ ಟೇಬಲ್ ಇಟ್ಟು ಅದರ ಮೇಲೆ ರಾಘವೇಂದ್ರ ಸ್ವಾಮಿಯ ಫೋಟೋ ಅಥವಾ ವಿಗ್ರಹವನ್ನಿಡಬೇಕು. ನಂತರ ಗುರುರಾಯರ ವಿಗ್ರಹವನ್ನು ಸ್ವಚ್ಛಗೊಳಿಸಿ ಶ್ರೀಗಂಧ ಮತ್ತು ಕುಂಕುಮವನ್ನು ಇಡಬೇಕು.

ರಾಯರ ವಿಗ್ರಹಕ್ಕೆ ತುಳಸಿ, ಹೂವಿನ ಹಾರವನ್ನು ಹಾಕಬೇಕು. ರಾಯರ ಪೂಜೆಯಲ್ಲಿ ತುಳಸಿ ಬಳಸುವುದು ಶ್ರೇಷ್ಠ ಎನ್ನಲಾಗುತ್ತೆ. ರಾಯರ ಪೂಜೆಗೆ ಹಣ್ಣುಗಳು, ತೆಂಗಿನಕಾಯಿ, ವೀಳ್ಯದೆಲೆ ಅರ್ಪಿಸಬೇಕು. ರಾಯರನ್ನು ಪೂಜಿಸುವ ಮೊದಲು ಗಣೇಶನನ್ನು ಪೂಜಿಸಬೇಕು. ಬಳಿಕ ರಾಯರಿಗೆ ಧೂಪ-ದೀಪ ಬೆಳಗಿ ನೈವೇದ್ಯವಿಟ್ಟು 11 ಪ್ರದಕ್ಷಿಣೆ ಹಾಕಬೇಕು. ಪ್ರದಕ್ಷಿಣೆ ಹಾಕುತ್ತ ಈ ಮಂತ್ರವನ್ನು ಜಪಿಸಬೇಕು. “ಪೂಜ್ಯಾಯಾ ಶ್ರೀ ರಾಘವೇಂದ್ರಾಯ ಸತ್ಯಧರ್ಮ ರಥಾಯಚ ಭಜತಾಂ ಕಲ್ಪವೃಕ್ಷಯಾ ನಮತಾಂ ಶ್ರೀ ಕಾಮಧೇನುವೇ”

ಇದನ್ನೂ ಓದಿ: Lord Ganesha: ಬುಧವಾರದಂದು ಗಣೇಶನನ್ನು ಪೂಜಿಸಿದರೆ ನಿಮಗೆ ಈ ಫಲ ಸಿಗುತ್ತೆ, ಗಣಪನ ಈ ಕೃಪೆಗೆ ಪಾತ್ರರಾಗ್ತೀರಿ

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್