AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಮೋಕ್ಷದ ವೈಕುಂಠ ಏಕಾದಶಿ ದಿನ: ಭಗವಾನ್ ವಿಷ್ಣುವನ್ನು ಪೂಜಿಸುವುದು ಹೇಗೆ? ವಿಷ್ಣುವಿನ ಆಶೀರ್ವಾದಕ್ಕಾಗಿ ಹೀಗೆ ಮಾಡಿ

Vaikuntha Ekadashi 2022: ಏಕಾದಶಿಯಂದು ಮುಂಜಾನೆ ಸ್ನಾನ ಮಾಡಿದ ನಂತರ ಹಳದಿ ಬಟ್ಟೆಯನ್ನು ಧರಿಸಬೇಕೆಂದು ಹೇಳಲಾಗುತ್ತದೆ. ಭಗವಾನ್‌ ವಿಷ್ಣುವಿನ ನೆಚ್ಚಿನ ಬಣ್ಣ ಹಳದಿಯಾಗಿರುವುದರಿಂದ ಪೂಜೆಯಲ್ಲಿ ವಿಷ್ಣುವಿಗೆ ಹಳದಿ ಹೂವುಗಳು, ಬಟ್ಟೆಗಳು, ಹಣ್ಣುಗಳು ಇತ್ಯಾದಿಗಳನ್ನು ಅರ್ಪಿಸಬೇಕು. ಹೀಗೆ ಮಾಡುವುದರಿಂದ ವಿಷ್ಣುವಿನ ಆಶೀರ್ವಾದ ಸಿಗುತ್ತದೆ.

ಇಂದು ಮೋಕ್ಷದ ವೈಕುಂಠ ಏಕಾದಶಿ ದಿನ: ಭಗವಾನ್ ವಿಷ್ಣುವನ್ನು ಪೂಜಿಸುವುದು ಹೇಗೆ? ವಿಷ್ಣುವಿನ ಆಶೀರ್ವಾದಕ್ಕಾಗಿ ಹೀಗೆ ಮಾಡಿ
ಈ ಬಾರಿ ಮೋಕ್ಷದಾ ವೈಕುಂಠ ಏಕಾದಶಿ
TV9 Web
| Updated By: ಸಾಧು ಶ್ರೀನಾಥ್​|

Updated on:Jan 13, 2022 | 12:04 PM

Share

ಶ್ರೀಮನ್ನಾರಾಯಣ ಸಾಕ್ಷಾತ್ ವೈಕುಂಠದಿಂದ ಬಂದು ಭಕ್ತರಿಗೆ ದರ್ಶನ ಭಾಗ್ಯ ಕೊಡುವ ಪರಮ ಪುಣ್ಯ ದಿನ. ಶ್ರೀಹರಿಯನ್ನು ಪೂಜಿಸುವುದರಿಂದ ಮನುಜರ ಪಾಪಗಳು ಕಳೆಯುವ ದಿನ. ಮನುಷ್ಯ ಜೀವನದ ಪಯಣದ ಹಾದಿಯಲಿ ಸಾಧನೆಗೆ ರಹದಾರಿ ಮಾಡಿಕೊಡುವ ದಿನ. ಈ ದಿನ ಮನದಲಿ ಒಳ್ಳೆಯ ಯಾವುದೇ ಕಾರ್ಯ ಸಂಕಲ್ಪಿಸಿ ಅದೇ ದಾರಿಯಲಿ ಮುಂದುವರಿದರೆ ನಾವು ಯಶಸ್ಸು ಪಡೆಯುತ್ತೇವೆ. ಉತ್ತರ ದ್ವಾರದಿಂದ ಸ್ವಾಮಿಯ ದರುಶನ ಮಾಡಿದರೆ ಮೋಕ್ಷ ಪ್ರಾಪ್ತಿ ಎಂದು ಹೇಳುತ್ತಾರೆ … ಅದುವೇ ವೈಕುಂಠ ಏಕಾದಶಿ (Vaikuntha Ekadashi 2022). ಈ ಬಾರಿ ಜನವರಿ 13 ಗುರುವಾರದಂದು (13th January 2022) ಬಂದಿದೆ. ಜನವರಿ 12 ಬುಧವಾರ 16.50ಕ್ಕೆ ಏಕಾದಶಿ ತಿಥಿ ಆರಂಭವಾಗುತ್ತದೆ. ಜನವರಿ 13 ಗುರುವಾರ 19:30 ಕ್ಕೆ ಮುಗಿಯುತ್ತದೆ. ಏಕಾದಶಿ ಒಂದೆಡೆಯಾದರೆ, ಇನ್ನೊಂದೆಡೆ ಎರಡು ಯೋಗಗಳ ಸಂಯೋಗವು ಈ ದಿನದ ವಿಶೇಷತೆಯಿದೆ. ಏಕಾದಶಿ ದಿನದಂದು ಭಗವಾನ್‌ ವಿಷ್ಣುವನ್ನು ಪೂಜಿಸುವುದು ಹೇಗೆ? ಭಗವಾನ್‌ ವಿಷ್ಣುವಿನ ಆಶೀರ್ವಾದಕ್ಕಾಗಿ ಈ ಪರಿಹಾರ ಕ್ರಮಗಳನ್ನು ಕೈಗೊಳ್ಳಿ.

ಹಿಂದೂ ಧರ್ಮದಲ್ಲಿ ಏಕಾದಶಿ ವ್ರತಕ್ಕೆ ವಿಶೇಷ ಮಹತ್ವವಿದೆ. ಏಕಾದಶಿ ವ್ರತವನ್ನು ಆಚರಿಸುವುದರಿಂದ ಒಬ್ಬ ವ್ಯಕ್ತಿಯು ಪಾಪಗಳಿಂದ ಮುಕ್ತಿ ಹೊಂದುತ್ತಾನೆ ಮತ್ತು ಮರಣಾನಂತರ ವೈಕುಂಠವನ್ನು ಪಡೆಯುತ್ತಾನೆ ಎಂಬ ಪ್ರತೀತಿ/ ನಂಬಿಕೆಯಿದೆ. ಪ್ರತಿ ಮಾಸದಲ್ಲಿ ಎರಡು ಏಕಾದಶಿ ಉಪವಾಸಗಳಿವೆ. ಒಂದು ಏಕಾದಶಿ ಉಪವಾಸ ವ್ರತವನ್ನು ಶುಕ್ಲ ಪಕ್ಷದಲ್ಲಿ ಮತ್ತು ಎರಡನೇ ಏಕಾದಶಿ ವ್ರತವನ್ನು ಕೃಷ್ಣ ಪಕ್ಷದಲ್ಲಿ ಆಚರಿಸಲಾಗುವುದು. ಪ್ರತಿ ಏಕಾದಶಿಗೆ ತನ್ನದೇ ಆದ ಮಹತ್ವವಿದೆ. ಪೌಷ ಅಥವಾ ಆಘನ ಮಾಸದ ಶುಕ್ಲ ಪಕ್ಷದಲ್ಲಿ ಬರುವ ಏಕಾದಶಿಯನ್ನು ಮೋಕ್ಷದಾ ಏಕಾದಶಿ ಎಂದು ಕರೆಯಲಾಗುತ್ತದೆ. ಈ ವರ್ಷ ಮೋಕ್ಷದಾ ಏಕಾದಶಿ (mokshada ekadashi) ವ್ರತವನ್ನು ಜನವರಿ 13 ಗುರುವಾರ ಆಚರಿಸಲಾಗುವುದು.  ಈ ದಿನದಂದು ಕೆಲವು ಕ್ರಮಗಳನ್ನು ಕೈಗೊಳ್ಳುವುದರಿಂದ ವಿಷ್ಣುವಿನ ಕೃಪೆಯೂ ದೊರೆಯುತ್ತದೆ. ಮೋಕ್ಷದಾ ಏಕಾದಶಿಯ ದಿನದಂದು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತಿಳಿಯೋಣ.

ಇದರಿಂದ ಇಷ್ಟಾರ್ಥಗಳು ಈಡೇರುವುದು ಈ ದಿನದಂದು ಉಪವಾಸವನ್ನು ಆಚರಿಸುವುದರಿಂದ ಮತ್ತು ಉಪವಾಸದ ಕಥೆಯನ್ನು ಕೇಳುವುದರಿಂದ ಭಗವಾನ್ ವಿಷ್ಣುವು ಪ್ರಸನ್ನನಾಗುತ್ತಾನೆ ಮತ್ತು ಭಕ್ತರ ಎಲ್ಲಾ ಇಷ್ಟಾರ್ಥಗಳನ್ನು ಪೂರೈಸುತ್ತಾನೆ ಎಂಬ ನಂಬಿಕೆಯಿದೆ.

​ಈ ಬಣ್ಣದ ಬಟ್ಟೆಯನ್ನೇ ಧರಿಸಿ ಏಕಾದಶಿಯಂದು ಮುಂಜಾನೆ ಸ್ನಾನ ಮಾಡಿದ ನಂತರ ಹಳದಿ ಬಟ್ಟೆಯನ್ನು ಧರಿಸಬೇಕೆಂದು ಹೇಳಲಾಗುತ್ತದೆ. ಭಗವಾನ್‌ ವಿಷ್ಣುವಿನ ನೆಚ್ಚಿನ ಬಣ್ಣ ಹಳದಿಯಾಗಿರುವುದರಿಂದ ಪೂಜೆಯಲ್ಲಿ ವಿಷ್ಣುವಿಗೆ ಹಳದಿ ಹೂವುಗಳು, ಬಟ್ಟೆಗಳು, ಹಣ್ಣುಗಳು ಇತ್ಯಾದಿಗಳನ್ನು ಅರ್ಪಿಸಬೇಕು. ಹೀಗೆ ಮಾಡುವುದರಿಂದ ವಿಷ್ಣುವಿನ ಆಶೀರ್ವಾದ ಸಿಗುತ್ತದೆ.

​ಇವುಗಳನ್ನು ಅರ್ಪಿಸಿ ಏಕಾದಶಿಯ ದಿನದಂದು ಭಗವಾನ್ ವಿಷ್ಣುವಿಗೆ ಪಂಚಾಮೃತದಿಂದ ಅಭಿಷೇಕ ಮಾಡಿ ಮತ್ತು ತುಳಸಿ ಎಲೆಗಳನ್ನು ಅರ್ಪಿಸಿ. ಇದನ್ನು ಮಾಡುವುದರಿಂದಲೂ ಕೂಡ ಶ್ರೀ ಹರಿಯು ಶೀಘ್ರದಲ್ಲೇ ಪ್ರಸನ್ನನಾಗುತ್ತಾನೆ, ಏಕೆಂದರೆ ತುಳಸಿ ಕೂಡ ವಿಷ್ಣುವಿನ ಅತ್ಯಂತ ಪ್ರಿಯವಾದ ವಸ್ತುವಾಗಿದೆ.

ಅರಳಿ ಮರವನ್ನು ಪೂಜಿಸಿ ಏಕಾದಶಿಯಂದು ಅರಳಿ ಮರದ ಬೇರಿಗೆ ನೀರನ್ನು ಅರ್ಪಿಸಿ. ಹೀಗೆ ಮಾಡುವುದರಿಂದ ವಿಷ್ಣುವಿನ ಆಶೀರ್ವಾದ ಸಿಗುತ್ತದೆ. ಶ್ರೀಹರಿಯು ಅರಳಿ ಮರದ ಮೂಲದಲ್ಲಿ ನೆಲೆಸಿದ್ದಾನೆ ಎನ್ನುವ ನಂಬಿಕೆಯಿದೆ. ಆದ್ದರಿಂದ ಅರಳಿ ಮರಕ್ಕೆ ಸೇವೆಯನ್ನು ಸಲ್ಲಿಸಬೇಕು.

ಈ ವಸ್ತುವನ್ನು ದಾನ ಮಾಡಿ ವೈಕುಂಠ ಏಕಾದಶಿ ಅಥವಾ ಮೋಕ್ಷದಾ ಏಕಾದಶಿ ದಿನದಂದು ಹಳದಿ ವಸ್ತುಗಳನ್ನು ದಾನ ಮಾಡುವುದನ್ನು ಕೂಡ ಬಹಳ ಅತ್ಯುತ್ತಮವೆಂದು ಪರಿಗಣಿಸಲಾಗಿದೆ. ಇದು ಪುಣ್ಯ ಪ್ರಯೋಜನಗಳನ್ನು ತರುತ್ತದೆ.

​ಈ ಮಂತ್ರವನ್ನು ಪಠಿಸಿ ಶಾಸ್ತ್ರಗಳ ಪ್ರಕಾರ ಏಕಾದಶಿಯಂದು ವಿಷ್ಣು ಮಂತ್ರಗಳನ್ನು ಪಠಿಸುವುದು ಮಂಗಳಕರ. ಇದರಿಂದ ಶ್ರೀಹರಿಯ ಕೃಪೆಗೆ ಪಾತ್ರರಾಗಿ ಭಕ್ತರ ಇಷ್ಟಾರ್ಥಗಳು ನೆರವೇರುತ್ತದೆ ಎನ್ನುವ ನಂಬಿಕೆಯಿದೆ.

ಮಹಾ ವಿಷ್ಣು ಹಾಗೂ ಮಹಾಲಕ್ಷ್ಮಿಯನ್ನು ಪೂಜಿಸಿ ವೈಕುಂಠ ಏಕಾದಶಿ ಅಥವಾ ಮೋಕ್ಷದಾ ಏಕಾದಶಿ ದಿನದಂದು ಭಗವಾನ್ ವಿಷ್ಣುವಿನ ಜೊತೆಗೆ ಲಕ್ಷ್ಮೀ ದೇವಿಯನ್ನು ಪೂಜಿಸುವುದರಿಂದ ಇಬ್ಬರ ಆಶೀರ್ವಾದವು ಸಿಗುತ್ತದೆ.

​ವಿಷ್ಣುವನ್ನು ಹೀಗೆ ಪೂಜಿಸಿ ಮೋಕ್ಷದಾ ಏಕಾದಶಿಯಂದು ವಿಷ್ಣು ಚಾಲೀಸಾ ಅನ್ನು ತಪ್ಪದೇ ಪಠಿಸಬೇಕು ಮತ್ತು ವಿಷ್ಣು ಆರತಿಯನ್ನು ಮಾಡುವುದರೊಂದಿಗೆ ವಿಷ್ಣುವಿನ ಶ್ಲೋಕ ಗೀತೆಗಳನ್ನು ಪಠಿಸಬೇಕು. ಇದರಿಂದ ಕೂಡ ಭಗವಾನ್‌ ವಿಷ್ಣು ತಕ್ಷಣ ಪ್ರಸನ್ನನಾಗುತ್ತಾನೆ.

ಸಂಕ್ರಾಂತಿ ಮಹತ್ವ 2022 | ಖ್ಯಾತ ಜ್ಯೋತಿಷಿ ಡಾ ಬಸವರಾಜ ಗೂರೂಜಿ ಸಂಕ್ರಾಂತಿ ಮಹತ್ವ ತಿಳಿಸಿದ್ದಾರೆ | Tv9 Kannada

Also Read: Vaikuntha Ekadashi 2022: ವೈಕುಂಠ ಏಕಾದಶಿ ಜ.13, ಮುಕ್ಕೋಟಿ ದ್ವಾದಶಿ ಜ. 14 ರಂದು, ಏನಿದರ ಆಚಾರ-ವಿಚಾರ ತಿಳಿಯೋಣ

Published On - 6:06 am, Thu, 13 January 22

ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ