AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿ ತುಳಸಿ ಗಿಡವಿದ್ದರೆ, ನವರಾತ್ರಿಯ ಸಮಯದಲ್ಲಿ ಈ ವಿಷಯಗಳನ್ನು ನೆನಪಿನಲ್ಲಿಡಿ!

ತುಳಸಿ ಗಿಡವನ್ನು ಲಕ್ಷ್ಮೀ ದೇವಿಯ ರೂಪವೆಂದು ಹೇಳಲಾಗುತ್ತದೆ. ನಿಮ್ಮ ಮನೆಯಲ್ಲಿ ತುಳಸಿ ಗಿಡವಿದ್ದರೆ, ನವರಾತ್ರಿಯ ಸಮಯದಲ್ಲಿ ಕೆಲವು ವಿಷಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ನವದುರ್ಗೆಯ ಪೂಜೆಯ ಜೊತೆಗೆ ನೀವು ತುಳಸಿಯನ್ನು ಹೇಗೆ ಪೂಜಿಸಬೇಕು? ಯಾವ ವಿಷಯಗಳನ್ನು ನೆನಪಿಟ್ಟುಕೊಳ್ಳಬೇಕು? ವಿವರವಾದ ಮಾಹಿತಿ ಇಲ್ಲಿದೆ.

ಮನೆಯಲ್ಲಿ ತುಳಸಿ ಗಿಡವಿದ್ದರೆ, ನವರಾತ್ರಿಯ ಸಮಯದಲ್ಲಿ ಈ ವಿಷಯಗಳನ್ನು ನೆನಪಿನಲ್ಲಿಡಿ!
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 10, 2024 | 4:42 PM

Share

ತುಳಸಿ ಗಿಡವನ್ನು ಲಕ್ಷ್ಮೀ ದೇವಿಯ ರೂಪವೆಂದು ಹೇಳಲಾಗುತ್ತದೆ. ಸಾಮಾನ್ಯವಾಗಿ ಪ್ರತಿಯೊಬ್ಬ ಹಿಂದೂ ಧರ್ಮಿಯರ ಮನೆಯಲ್ಲಿ ತುಳಸಿ ಗಿಡವನ್ನು ಪೂಜೆ ಮಾಡುತ್ತಾರೆ. ಅದೇ ರೀತಿ ಈ ನವರಾತ್ರಿಯ ಸಮಯದಲ್ಲಿ ತುಳಸಿ ಗಿಡವನ್ನು ಸಹ ಪೂಜಿಸಲಾಗುತ್ತದೆ. ನವದುರ್ಗೆಯ ಪೂಜೆಯ ಜೊತೆಗೆ ನೀವು ತುಳಸಿಯನ್ನು ಹೇಗೆ ಪೂಜಿಸಬೇಕು? ಯಾವ ವಿಷಯಗಳನ್ನು ನೆನಪಿಟ್ಟುಕೊಳ್ಳಬೇಕು? ವಿವರವಾದ ಮಾಹಿತಿ ಇಲ್ಲಿದೆ.

ನವರಾತ್ರಿಯ ಸಮಯದಲ್ಲಿ ತುಳಸಿಯನ್ನು ಪೂಜಿಸುವುದು ಹೇಗೆ?

ಈ ಸಮಯದಲ್ಲಿ ತುಳಸಿ ಗಿಡವಿರುವ ಸ್ಥಳವನ್ನು ಸ್ವಚ್ಛ ಮಾಡಿ, ದುರ್ಗಾ ದೇವಿಯ ಮುಂದೆ ದೀಪ ಹಚ್ಚುವುದರ ಜೊತೆಗೆ ತುಳಸಿ ಗಿಡದ ಬಳಿಯೂ ಒಂದು ದೀಪವನ್ನು ಹಚ್ಚಿಡಿ. ಮನೆಯಲ್ಲಿ ತುಳಸಿ ಗಿಡವಿಲ್ಲದಿದ್ದರೆ, ನವರಾತ್ರಿಯ ಸಮಯದಲ್ಲಿ ನೀವು ಗಿಡವನ್ನು ಖರೀದಿಸಿ ಮನೆಗೆ ತಂದು ಪೂಜಿಸುವುದರಿಂದ ವಾಸ್ತುವಿಗೆ ಸಂಬಂಧಿಸಿದ ದೋಷಗಳು ಪರಿಹಾರವಾಗುತ್ತದೆ. ಮನೆಯಲ್ಲಿ ಸಂತೋಷ, ಸಂಪತ್ತು ಮತ್ತು ಸಮೃದ್ಧಿಯನ್ನು ತರುತ್ತದೆ.

ಇದನ್ನೂ ಓದಿ: ಹೆಬ್ಬೆರಳು ಹೀಗಿದ್ದರೆ ಎಂದಿಗೂ ಹಣದ ಕೊರತೆ ಬರುವುದಿಲ್ಲವಂತೆ!

ತುಳಸಿ ಪೂಜೆಯ ಪ್ರಯೋಜನಗಳೇನು?

ನವರಾತ್ರಿಯ ಸಮಯದಲ್ಲಿ ತುಳಸಿಯ ಮುಂದೆ ದೀಪ ಹಚ್ಚಿಡುವುದರಿಂದ ಮನೆಯಲ್ಲಿ ನಕಾರಾತ್ಮಕ ಶಕ್ತಿ ಇರುವುದಿಲ್ಲ. ಜೊತೆಗೆ ಲಕ್ಷ್ಮೀ ದೇವಿ ಮತ್ತು ವಿಷ್ಣುವಿನ ಆಶೀರ್ವಾದ ಸಿಗುತ್ತದೆ. ಆದ್ದರಿಂದ ಪ್ರತಿದಿನ ತುಳಸಿಗೆ ಧೂಪದ್ರವ್ಯ ದೀಪವನ್ನು ಮರೆಯದೆ ಹಚ್ಚಬೇಕು.

ನವರಾತ್ರಿ ಸಮಯದಲ್ಲಿ ತುಳಸಿ ಪೂಜೆ ಮಾಡುವುದರಿಂದ, ಮನೆಯಲ್ಲಿ ಯಾವುದಕ್ಕೂ ಬಡತನ ಇರುವುದಿಲ್ಲ, ಆರೋಗ್ಯ ಚೆನ್ನಾಗಿರುತ್ತದೆ. ಇದರೊಂದಿಗೆ, ನವರಾತ್ರಿಯ ಸಮಯದಲ್ಲಿ ಎಲೆಗಳನ್ನು ಮುರಿಯಬೇಡಿ ಆದರೆ ಬಿದ್ದ ಎಲೆಗಳನ್ನು ಬಳಸಬಹುದು.

ನವರಾತ್ರಿಯ ಸಮಯದಲ್ಲಿ ಗುರುವಾರದಂದು, ತುಳಸಿ ಗಿಡಕ್ಕೆ ನೀರು ಮತ್ತು ಹಸಿ ಹಾಲನ್ನು ಅರ್ಪಿಸಬೇಕು. ಇದನ್ನು ಮಾಡುವುದರಿಂದ ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ಇರುತ್ತದೆ. ಜೊತೆಗೆ ಕುಟುಂಬದಲ್ಲಿದ್ದ ಭಿನ್ನಾಭಿಪ್ರಾಯ ದೂರವಾಗುತ್ತದೆ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಪ್ರತಿದಿನ ಸಂಜೆ ತುಳಸಿ ಗಿಡದ ಮುಂದೆ ದೀಪ ಹಚ್ಚಿಡಿ, ಇದರಿಂದ ದುಷ್ಟ ಶಕ್ತಿಗಳು ಎಂದಿಗೂ ಮನೆಯೊಳಗೆ ಪ್ರವೇಶಿಸುವುದಿಲ್ಲ.

ಮನೆಯಲ್ಲಿರುವ ಜನರು ಮತ್ತೆ ಮತ್ತೆ ಅನಾರೋಗ್ಯಕ್ಕೆ ಒಳಗಾಗುತ್ತಿದ್ದರೆ, ತುಳಸಿಯ ಮುಂದೆ ದೀಪ ಹಚ್ಚಿಡಿ. ಇದರಿಂದ ಎಲ್ಲಾ ರೀತಿಯ ಆರೋಗ್ಯ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ