AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರ್ಯಗ್ರಹಣ ಸಂಭವಿಸುವ ದಿನವೇ ಶನಿ ಅಮಾವಾಸ್ಯೆ; ಈ ದಿನದ ಮಹತ್ವವೇನು? ಶನಿ ದೋಷದಿಂದ ಮುಕ್ತಿ ಪಡೆಯಲು ಇಲ್ಲಿದೆ ಸೂತ್ರ

ಶನಿವಾರವನ್ನು ಭಗವಾನ್ ಶನಿ ದೇವರಿಗೆ ಅರ್ಪಿಸಲಾಗಿದೆ. ಹಾಗೂ ಹಿಂದೂ ಧರ್ಮಗ್ರಂಥಗಳಲ್ಲಿ ಅಮವಾಸ್ಯೆಯ ತಿಥಿಯನ್ನು ಪೂರ್ವಜರಿಗೆ ಸಮರ್ಪಿಸಲಾಗಿದೆ. ಪೂರ್ವಜರಿಗೆ ಸಂಬಂಧಿಸಿದ ಯಾವುದೇ ಕೆಲಸವನ್ನು ಮಾಡಲು ಈ ದಿನಾಂಕವನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಇದರೊಂದಿಗೆ ಪೂಜೆ, ಸ್ನಾನ, ದಾನ ಇತ್ಯಾದಿಗಳ ವಿಶೇಷ ಮಹತ್ವವಿದೆ.

ಸೂರ್ಯಗ್ರಹಣ ಸಂಭವಿಸುವ ದಿನವೇ ಶನಿ ಅಮಾವಾಸ್ಯೆ; ಈ ದಿನದ ಮಹತ್ವವೇನು? ಶನಿ ದೋಷದಿಂದ ಮುಕ್ತಿ ಪಡೆಯಲು ಇಲ್ಲಿದೆ ಸೂತ್ರ
ಶನಿ
TV9 Web
| Edited By: |

Updated on: Dec 04, 2021 | 7:28 AM

Share

ಶನಿ ಸೂರ್ಯ ದೇವನ ಪುತ್ರ. ಆದ್ರೆ ಗ್ರಂಥಗಳ ಪ್ರಕಾರ ಇವರಿಬ್ಬರದ್ದು ಹೊಂದಾಣಿಕೆಯಾಗದ ಸಂಬಂಧ. ಶನಿ ಅಮಾವಾಸ್ಯೆಯು ವರ್ಷದ ಕೊನೆಯ ಸೂರ್ಯಗ್ರಹಣದಂದೇ ಬರುತ್ತದೆ. ಕಾರ್ತಿಕ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯಂದು ಸೂರ್ಯ ಗ್ರಹಣ ಇದೆ. ವಿಶೇಷ ಎಂದರೆ ಈ ಬಾರಿ ಅಮಾವಾಸ್ಯೆ ಶನಿವಾಸ ಬಂದಿರುವುದರಿಂದ ಇದು ಶನಿ ಅಮಾವಾಸ್ಯೆ ಆಗಿದೆ. ಶನಿವಾರವನ್ನು ಭಗವಾನ್ ಶನಿ ದೇವರಿಗೆ ಅರ್ಪಿಸಲಾಗಿದೆ. ಹಾಗೂ ಹಿಂದೂ ಧರ್ಮಗ್ರಂಥಗಳಲ್ಲಿ ಅಮವಾಸ್ಯೆಯ ತಿಥಿಯನ್ನು ಪೂರ್ವಜರಿಗೆ ಸಮರ್ಪಿಸಲಾಗಿದೆ. ಪೂರ್ವಜರಿಗೆ ಸಂಬಂಧಿಸಿದ ಯಾವುದೇ ಕೆಲಸವನ್ನು ಮಾಡಲು ಈ ದಿನಾಂಕವನ್ನು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಇದರೊಂದಿಗೆ ಪೂಜೆ, ಸ್ನಾನ, ದಾನ ಇತ್ಯಾದಿಗಳ ವಿಶೇಷ ಮಹತ್ವವಿದೆ.

ತರ್ಪಣ ಧಾರ್ಮಿಕ ನಂಬಿಕೆಯ ಪ್ರಕಾರ ಅಮವಾಸ್ಯೆಯ ದಿನದಂದು ನದಿ ಸ್ನಾನ ಮಾಡಿ ದಾನ ಇತ್ಯಾದಿಗಳಿಂದ ಪಾಪಗಳು ನಿವಾರಣೆಯಾಗಿ ಮುಕ್ತಿ ದೊರೆಯುತ್ತದೆ. ಪೂರ್ವಜರ ಆತ್ಮತೃಪ್ತಿಗಾಗಿ ಅಮವಾಸ್ಯೆ ತಿಥಿಯಂದು ತರ್ಪಣ, ಪಿಂಡದಾನ ಮತ್ತು ಶ್ರಾದ್ಧ ಆಚರಣೆಗಳನ್ನು ಸಹ ಮಾಡಲಾಗುತ್ತದೆ. ಜಾತಕದಲ್ಲಿದ್ದರೆ, ಪಿತ್ರಾ ದೋಷ ನಿವಾರಣೆಗೆ ಈ ದಿನವನ್ನು ಮಂಗಳಕರವೆಂದು ಪರಿಗಣಿಸಲಾಗಿದೆ. ಈ ಅಮಾವಾಸ್ಯೆಯಂದು ಮಧ್ಯಾಹ್ನ ಸುಮಾರು 12 ಗಂಟೆಗೆ ಪೂರ್ವಜರಿಗೆ ಧೂಪ-ಧ್ಯಾನವನ್ನು ಮಾಡಬೇಕು. ಇದಕ್ಕಾಗಿ ಹಸುವಿನ ಸಗಣಿ ಸುಟ್ಟು ಹೊಗೆ ಬರುವುದು ನಿಂತಾಗ ಸುಟ್ಟ ಸಗಣಿಗೆ ಬೆಲ್ಲ-ತುಪ್ಪ ಹಾಕಿ ಧೂಪ ಹಾಕಬೇಕು. ಅಗತ್ಯವಿರುವ ಜನರಿಗೆ ಸಾಮರ್ಥ್ಯಕ್ಕೆ ಅನುಗುಣವಾಗಿ ದಾನ ಮಾಡಿ.

ದಾನ ಪಂಚಾಂಗದಲ್ಲಿ ಅಮಾವಾಸ್ಯೆ ದಿನಕ್ಕೆ ವಿಶೇಷ ಮಹತ್ವವಿದೆ. ಈ ದಿನ ಬಡವರಿಗೆ ದಾನ ಮಾಡುವುದರಿಂದ ವಿಶೇಷ ಪುಣ್ಯ ಪ್ರಾಪ್ತಿಯಾಗುತ್ತದೆ. ಶನಿಯನ್ನು ಬಡವರ ನಾರಾಯಣ ಎಂದೂ ಕರೆಯುತ್ತಾರೆ. ಆದ್ದರಿಂದ ಶನಿಯು ಬಡವರ ಸೇವೆಯಿಂದ ಸಂತೋಷಗೊಳ್ಳುತ್ತಾನೆ. ಹೀಗಾಗಿ ಈ ದಿನ ಬಡವರ ಸೇವೆ ಮಾಡಿ

ಶನಿದೇವನ ಆರಾಧನೆ ಮಾಡಿ ಅಮಾವಾಸ್ಯೆ ಮತ್ತು ಶನಿವಾರದ ಸಂಯೋಜನೆಯಿಂದಾಗಿ ಇದನ್ನು ಶನಿಶ್ಚರಿ ಅಮಾವಾಸ್ಯೆ ಎಂದು ಕರೆಯಲಾಗುವುದು. ಈ ದಿನದಂದು ಶನಿದೇವನ ವಿಶೇಷ ಪೂಜೆಯನ್ನು ಮಾಡುವುದರಿಂದ ಶನಿ ಸಾಡೆ ಸತಿ ಮತ್ತು ತೊಂದರೆಗಳಿಂದ ಮುಕ್ತಿ ಪಡೆಯಬಹುದು. ಅಮಾವಾಸ್ಯೆಯಂದು ಸಾಸಿವೆ ಎಣ್ಣೆಯನ್ನು ದಾನ ಮಾಡಿ. ಓಂ ಶನಿಶ್ಚರಾಯ ನಮಃ ಎಂಬ ಮಂತ್ರವನ್ನು ಕನಿಷ್ಠ 108 ಬಾರಿ ಜಪಿಸಿ. ಅರಳಿ ಮರದ ಕೆಳಗೆ ಸಾಸಿವೆ ಎಣ್ಣೆಯ ದೀಪವನ್ನು ಬೆಳಗಿಸಿ. ಕಪ್ಪು ಎಳ್ಳು, ಕರಿಬೇವು, ಕಪ್ಪು ಬಟ್ಟೆ ಮತ್ತು ಕಪ್ಪು ಕಂಬಳಿ ಇತ್ಯಾದಿಗಳನ್ನು ಸಾಮರ್ಥ್ಯಕ್ಕೆ ಅನುಗುಣವಾಗಿ ಅಗತ್ಯವಿರುವವರಿಗೆ ದಾನ ಮಾಡಿ.

ಹನುಮಾನ್ ಪೂಜೆ ಮಾಡಿ ಭಗವಾನ್ ಭೋಲೇನಾಥನನ್ನು ಮತ್ತು ಹನುಮಾನ್‌ ದೇವನನ್ನು ಪೂಜಿಸುವುದರಿಂದ ಶನಿಗೆ ಸಂಬಂಧಿಸಿದ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ ಎನ್ನುವ ನಂಬಿಕೆಗಳಿವೆ. ಶಿವ ಮತ್ತು ಹನುಮಂತನ ಕೃಪೆಯುಳ್ಳವರ ಮೇಲೆ ಶನಿಯು ತನ್ನ ಕೆಟ್ಟ ದೃಷ್ಟಿಯನ್ನು ಹಾಕಲಾರ. ಹೀಗಾಗಿ ಶನಿವಾರದಂದು ಹನುಮಾನ್ ಪೂಜೆಗೂ ವಿಶೇಷ ಮಹತ್ವವಿದೆ.

ಇದನ್ನೂ ಓದಿ: Shani Mantra: ಶನಿಯ ಈ ಮಂತ್ರಗಳನ್ನು ಪಠಿಸಿದರೆ ಎಲ್ಲಾ ಶನಿ ದೋಷಗಳು ದೂರವಾಗುತ್ತವೆ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ